Homeಕರ್ನಾಟಕಒಂದೇ ಕ್ಷೇತ್ರದ ಈ ಮೂರು ಅಭ್ಯರ್ಥಿಗಳ ಆಸ್ತಿ 2000 ಕೋಟಿಗೂ ಹೆಚ್ಚು. ಆ ಕ್ಷೇತ್ರ ಯಾವುದು...

ಒಂದೇ ಕ್ಷೇತ್ರದ ಈ ಮೂರು ಅಭ್ಯರ್ಥಿಗಳ ಆಸ್ತಿ 2000 ಕೋಟಿಗೂ ಹೆಚ್ಚು. ಆ ಕ್ಷೇತ್ರ ಯಾವುದು ಗೊತ್ತೇ?

ಹೆಚ್ಚು ಆಸ್ತಿ ಅಥವಾ ಹಣ ಇದ್ದವರು ಚುನಾವಣೆಗೆ ಸ್ಪರ್ಧಿಸಬಾರದು ಎಂಬ ಯಾವ ಕಾನೂನೂ ಇಲ್ಲ. ಆದರೆ, ಚುನಾವಣೆಗೆ ಮುಂಚೆ ಅಧಿಕೃತವಾಗಿ ಮತ್ತು ನೀತಿ ಸಂಹಿತೆ ಜಾರಿಗೆ ಬಂದ ಮೇಲೆ ಅನಧಿಕೃತವಾಗಿ ಇಂತಹವರು ಕೋಟಿಗಟ್ಟಲೆ ಹಣ ಚೆಲ್ಲಿ ಚುನಾವಣೆ ನಡೆಸುತ್ತಾರೆ.

- Advertisement -
- Advertisement -

ನಿನ್ನೆ ತಾನೇ ಹೊಸಕೋಟೆಯ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರ ಆಸ್ತಿಯ ವಿವರ ಹೊರಬಿದ್ದಿತ್ತು. ಕರ್ನಾಟಕದ ಪ್ರಜ್ಞಾವಂತ ಮತದಾರರನ್ನು ಅದು ಬೆಚ್ಚಿ ಬೀಳಿಸಿತ್ತು. ಏಕೆಂದರೆ ನಾಗರಾಜ್ ಮತ್ತು ಅವರ ಪತ್ನಿ ಶಾಂತಾ ಅವರ ಒಟ್ಟು ಆಸ್ತಿ 1201.50 ಕೋಟಿಗಳಾಗಿತ್ತು. ಅಷ್ಟೇ ಅಲ್ಲದೇ, ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಕಡೆಗೆ ಮುಖ ಮಾಡಿ ಸರ್ಕಾರ ಬೀಳಲು ಕಾರಣವಾದ 5 ದಿನಗಳಲ್ಲಿ ಅವರ ವಿವಿಧ ಬ್ಯಾಂಕ್ ಖಾತೆಗಳಿಗೆ 48 ಕೋಟಿ ರೂ ಹಣ ಬಂದಿತ್ತು. ಇದು ವಿವರವಾಗಿ ಎಲ್ಲಾ ಕಡೆ ವರದಿಯಾಗಿತ್ತು.

ಇದೀಗ ಅದೇ ರೀತಿಯ ಇನ್ನೊಂದು ಸುದ್ದಿ ಬಂದಿದೆ.

ಕ್ಷೇತ್ರದ ಮೂರೂ ಪ್ರಮುಖ ಅಭ್ಯರ್ಥಿಗಳ ಆಸ್ತಿಯ ಮೌಲ್ಯ ತಲಾ ನೂರು ಕೋಟಿಗೂ ಹೆಚ್ಚಿರುವ ವರ್ತಮಾನ ಬಹಿರಂಗವಾಗಿದೆ. ಅಷ್ಟೇ ಅಲ್ಲ ಮೂರು ಅಭ್ಯರ್ಥಿಗಳ ಒಟ್ಟು ಆಸ್ತಿ 2000 ಕೋಟಿಗೂ ಹೆಚ್ಚು  ಅದು ಹೊಸಕೋಟೆ ಕ್ಷೇತ್ರ. ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರ ಆಸ್ತಿಯ ಪ್ರಮಾಣ ಮೇಲಿನಂತಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿಯವರದ್ದೂ ಕಡಿಮೆಯೇನಿಲ್ಲ. ಅವರು ಮತ್ತು ಅವರ ಪತಿ ಬೈರತಿ ಸುರೇಶ್‌ರವರ ಆಸ್ತಿ 424 ಕೋಟಿ ರೂ ಮತ್ತು 407 ಕೋಟಿ ರೂ. ಆಗಿದೆ. ಅಂದರೆ ಒಟ್ಟು 831 ಕೋಟಿ ರೂ.ಗಳ ಆಸ್ತಿ ಅವರದ್ದಾಗಿದೆ.

ಇದನ್ನೂ ಓದಿ: ಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ಹಾಲಿ ಹೆಬ್ಬಾಳ ಕ್ಷೇತ್ರದ ಶಾಸಕರಾಗಿರುವ ಬೈರತಿ ಸುರೇಶ್ ಅದಕ್ಕೆ ಮುಂಚೆ ವಿಧಾನಪರಿಷತ್ ಸದಸ್ಯರಾಗಿದ್ದರು. ಅದೂ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಪಕ್ಷೇತರರಾಗಿ ನಿಂತು ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಶಾಸಕರ ಮತಗಳನ್ನು ಕೊಂಡು ಎಂಎಲ್‌ಸಿ ಆದರು ಎಂಬ ಆರೋಪ ಅವರ ಮೇಲಿತ್ತು. ಸಿದ್ದರಾಮಯ್ಯನವರಿಗೆ ಆಪ್ತರಾಗಿರುವ ಬೈರತಿ ಸುರೇಶ್ ರಾಜ್ಯದಲ್ಲಿ ಅತಿ ಹೆಚ್ಚು ಆಸ್ತಿ ಘೋಷಿಸಿಕೊಂಡಿರುವ ಶಾಸಕರಲ್ಲಿ ಒಬ್ಬರಾಗಿದ್ದಾರೆ.

ಇನ್ನು ಮೂರನೆಯ ಅಭ್ಯರ್ಥಿ ಶರತ್ ಬಚ್ಚೇಗೌಡ. ಕಳೆದ ಸಾರಿ ಬಿಜೆಪಿ ಅಭ್ಯರ್ಥಿಯಾಗಿ ನಿಂತು ಸೋತಿದ್ದ ಅವರು ಈಗ ಪಕ್ಷೇತರ ಅಭ್ಯರ್ಥಿ. ಜೆಡಿಎಸ್ ಅವರ ಉಮೇದುವಾರಿಕೆಯನ್ನು ಬೆಂಬಲಿಸಿದೆ. ಅವರು ಮತ್ತು ಅವರ ಪತ್ನಿ ಪ್ರತಿಭಾ ಅವರ ಒಟ್ಟು ಆಸ್ತಿ ಮೌಲ್ಯ 138 ಕೋಟಿ ರೂ.ಗಳಾಗಿದೆ.

ಬೆಂಗಳೂರಿನ ಸುತ್ತಮುತ್ತಲಿರುವ ಶಾಸಕ ಸ್ಥಾನದ ಅಭ್ಯರ್ಥಿಗಳು ಇಷ್ಟೊಂದು ಪ್ರಮಾಣದ ಆಸ್ತಿ ಗಳಿಸಲು ಕಾರಣವಿದೆ. ರಾಜಕೀಯ ಬಲದಿಂದ ಹೆಚ್ಚೆಚ್ಚು ಭೂ ವ್ಯವಹಾರವನ್ನು ಇವರುಗಳು ಮಾಡುತ್ತಾರೆ. ಕಳೆದ 30 ವರ್ಷಗಳಿಂದ ಬೆಂಗಳೂರು ಹಾಗೂ ಸುತ್ತಮುತ್ತಲಲ್ಲಿ ಭೂಮಿಯ ಬೆಲೆ ಏರುತ್ತಲೇ ಹೋಗಿದೆ. ಹೀಗಾಗಿ ಅದಕ್ಕೆ ತಕ್ಕಂತೆ ಇವರುಗಳ ಆಸ್ತಿಯೂ ಹೆಚ್ಚುತ್ತಿದೆ.

ಈಗ ನೂರಾರು ಕೋಟಿ ರೂ.ಗಳ ಆಸ್ತಿ ಹೊಂದಿರುವ ಮೂವರು ಅಭ್ಯರ್ಥಿಗಳ ಜಿದ್ದಾಜಿದ್ದಿ ಹೊಸಕೋಟೆಯಲ್ಲಿ ನಡೆಯುತ್ತಿದೆ. ಹಾಗಾಗಿಯೇ ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಆದರೆ, ಯಾವ ರೀತಿಯಲ್ಲಿಯೂ ಮೌಲ್ಯಗಳ ಸ್ಪರ್ಧೆ ಇಲ್ಲಿದೆ ಎಂದು ಹೇಳಲಾಗದು. ಮೂವರು ಅಭ್ಯರ್ಥಿಗಳು ಅಥವಾ ಅವರ ಕುಟುಂಬ ಒಂದಲ್ಲಾ ಒಂದು ರೀತಿಯಲ್ಲಿ ಪಕ್ಷಾಂತರ ಅಥವಾ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರೇ ಆಗಿದ್ದಾರೆ. ಆ ಪಕ್ಷಾಂತರಕ್ಕೆ ವೈಯಕ್ತಿಕ ಹಿತಾಸಕ್ತಿಯಲ್ಲದೇ ಬೇರಾವ ಸೈದ್ಧಾಂತಿಕ ಕಾರಣಗಳೂ ಇರಲಿಲ್ಲ.

ಹೆಚ್ಚು ಆಸ್ತಿ ಅಥವಾ ಹಣ ಇದ್ದವರು ಚುನಾವಣೆಗೆ ಸ್ಪರ್ಧಿಸಬಾರದು ಎಂಬ ಯಾವ ಕಾನೂನೂ ಇಲ್ಲ. ಆದರೆ, ಚುನಾವಣೆಗೆ ಮುಂಚೆ ಅಧಿಕೃತವಾಗಿ ಮತ್ತು ನೀತಿ ಸಂಹಿತೆ ಜಾರಿಗೆ ಬಂದ ಮೇಲೆ ಅನಧಿಕೃತವಾಗಿ ಇಂತಹವರು ಕೋಟಿಗಟ್ಟಲೆ ಹಣ ಚೆಲ್ಲಿ ಚುನಾವಣೆ ನಡೆಸುತ್ತಾರೆ. ಆಗ ಪ್ರಜಾಪ್ರಭುತ್ವವೂ ಬೀದಿಯಲ್ಲಿ ಚೆಲ್ಲಾಡಿ ಹೋಗುತ್ತದೆ. ಅಂತಹ ದುರಂತಕ್ಕೆ ಸಾಕ್ಷಿಯಾಗಿರುವುದು ಹೊಸಕೋಟೆ ಮಾತ್ರವಲ್ಲ. ಬೆಂಗಳೂರಿನ ಯಶವಂತಪುರ ಕ್ಷೇತ್ರ, ಬೆಳಗಾವಿ ಜಿಲ್ಲೆಯ ಗೋಕಾಕ್ ಕ್ಷೇತ್ರದ ಅಭ್ಯರ್ಥಿಗಳ ಆಸ್ತಿ ವಿವರಗಳು ಹೊರಬಿದ್ದಾಗ ಅದಕ್ಕೆ ಇನ್ನಷ್ಟು ಸಾಕ್ಷಿ ದೊರೆಯಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿವೇಶನ ಮಾಡಿ ಹಂಚುವುದು, ಮಾರುವುದನ್ನು ನೆಲದೊಡೆಯರ ಹಿಡಿತಕ್ಕೆ ಬಿಡದೆ ಆಳ್ವಕೆ ತಾನೇ ಹಿಡಿತದಲ್ಲಿಟ್ಟು ಕೊಳ್ಳುವಲ್ಲಿ ಸೋತ ಪರಿಣಾಮ!

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...