Homeಕರ್ನಾಟಕಒಂದೇ ಕ್ಷೇತ್ರದ ಈ ಮೂರು ಅಭ್ಯರ್ಥಿಗಳ ಆಸ್ತಿ 2000 ಕೋಟಿಗೂ ಹೆಚ್ಚು. ಆ ಕ್ಷೇತ್ರ ಯಾವುದು...

ಒಂದೇ ಕ್ಷೇತ್ರದ ಈ ಮೂರು ಅಭ್ಯರ್ಥಿಗಳ ಆಸ್ತಿ 2000 ಕೋಟಿಗೂ ಹೆಚ್ಚು. ಆ ಕ್ಷೇತ್ರ ಯಾವುದು ಗೊತ್ತೇ?

ಹೆಚ್ಚು ಆಸ್ತಿ ಅಥವಾ ಹಣ ಇದ್ದವರು ಚುನಾವಣೆಗೆ ಸ್ಪರ್ಧಿಸಬಾರದು ಎಂಬ ಯಾವ ಕಾನೂನೂ ಇಲ್ಲ. ಆದರೆ, ಚುನಾವಣೆಗೆ ಮುಂಚೆ ಅಧಿಕೃತವಾಗಿ ಮತ್ತು ನೀತಿ ಸಂಹಿತೆ ಜಾರಿಗೆ ಬಂದ ಮೇಲೆ ಅನಧಿಕೃತವಾಗಿ ಇಂತಹವರು ಕೋಟಿಗಟ್ಟಲೆ ಹಣ ಚೆಲ್ಲಿ ಚುನಾವಣೆ ನಡೆಸುತ್ತಾರೆ.

- Advertisement -
- Advertisement -

ನಿನ್ನೆ ತಾನೇ ಹೊಸಕೋಟೆಯ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರ ಆಸ್ತಿಯ ವಿವರ ಹೊರಬಿದ್ದಿತ್ತು. ಕರ್ನಾಟಕದ ಪ್ರಜ್ಞಾವಂತ ಮತದಾರರನ್ನು ಅದು ಬೆಚ್ಚಿ ಬೀಳಿಸಿತ್ತು. ಏಕೆಂದರೆ ನಾಗರಾಜ್ ಮತ್ತು ಅವರ ಪತ್ನಿ ಶಾಂತಾ ಅವರ ಒಟ್ಟು ಆಸ್ತಿ 1201.50 ಕೋಟಿಗಳಾಗಿತ್ತು. ಅಷ್ಟೇ ಅಲ್ಲದೇ, ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಕಡೆಗೆ ಮುಖ ಮಾಡಿ ಸರ್ಕಾರ ಬೀಳಲು ಕಾರಣವಾದ 5 ದಿನಗಳಲ್ಲಿ ಅವರ ವಿವಿಧ ಬ್ಯಾಂಕ್ ಖಾತೆಗಳಿಗೆ 48 ಕೋಟಿ ರೂ ಹಣ ಬಂದಿತ್ತು. ಇದು ವಿವರವಾಗಿ ಎಲ್ಲಾ ಕಡೆ ವರದಿಯಾಗಿತ್ತು.

ಇದೀಗ ಅದೇ ರೀತಿಯ ಇನ್ನೊಂದು ಸುದ್ದಿ ಬಂದಿದೆ.

ಕ್ಷೇತ್ರದ ಮೂರೂ ಪ್ರಮುಖ ಅಭ್ಯರ್ಥಿಗಳ ಆಸ್ತಿಯ ಮೌಲ್ಯ ತಲಾ ನೂರು ಕೋಟಿಗೂ ಹೆಚ್ಚಿರುವ ವರ್ತಮಾನ ಬಹಿರಂಗವಾಗಿದೆ. ಅಷ್ಟೇ ಅಲ್ಲ ಮೂರು ಅಭ್ಯರ್ಥಿಗಳ ಒಟ್ಟು ಆಸ್ತಿ 2000 ಕೋಟಿಗೂ ಹೆಚ್ಚು  ಅದು ಹೊಸಕೋಟೆ ಕ್ಷೇತ್ರ. ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರ ಆಸ್ತಿಯ ಪ್ರಮಾಣ ಮೇಲಿನಂತಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿಯವರದ್ದೂ ಕಡಿಮೆಯೇನಿಲ್ಲ. ಅವರು ಮತ್ತು ಅವರ ಪತಿ ಬೈರತಿ ಸುರೇಶ್‌ರವರ ಆಸ್ತಿ 424 ಕೋಟಿ ರೂ ಮತ್ತು 407 ಕೋಟಿ ರೂ. ಆಗಿದೆ. ಅಂದರೆ ಒಟ್ಟು 831 ಕೋಟಿ ರೂ.ಗಳ ಆಸ್ತಿ ಅವರದ್ದಾಗಿದೆ.

ಇದನ್ನೂ ಓದಿ: ಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ಹಾಲಿ ಹೆಬ್ಬಾಳ ಕ್ಷೇತ್ರದ ಶಾಸಕರಾಗಿರುವ ಬೈರತಿ ಸುರೇಶ್ ಅದಕ್ಕೆ ಮುಂಚೆ ವಿಧಾನಪರಿಷತ್ ಸದಸ್ಯರಾಗಿದ್ದರು. ಅದೂ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಪಕ್ಷೇತರರಾಗಿ ನಿಂತು ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಶಾಸಕರ ಮತಗಳನ್ನು ಕೊಂಡು ಎಂಎಲ್‌ಸಿ ಆದರು ಎಂಬ ಆರೋಪ ಅವರ ಮೇಲಿತ್ತು. ಸಿದ್ದರಾಮಯ್ಯನವರಿಗೆ ಆಪ್ತರಾಗಿರುವ ಬೈರತಿ ಸುರೇಶ್ ರಾಜ್ಯದಲ್ಲಿ ಅತಿ ಹೆಚ್ಚು ಆಸ್ತಿ ಘೋಷಿಸಿಕೊಂಡಿರುವ ಶಾಸಕರಲ್ಲಿ ಒಬ್ಬರಾಗಿದ್ದಾರೆ.

ಇನ್ನು ಮೂರನೆಯ ಅಭ್ಯರ್ಥಿ ಶರತ್ ಬಚ್ಚೇಗೌಡ. ಕಳೆದ ಸಾರಿ ಬಿಜೆಪಿ ಅಭ್ಯರ್ಥಿಯಾಗಿ ನಿಂತು ಸೋತಿದ್ದ ಅವರು ಈಗ ಪಕ್ಷೇತರ ಅಭ್ಯರ್ಥಿ. ಜೆಡಿಎಸ್ ಅವರ ಉಮೇದುವಾರಿಕೆಯನ್ನು ಬೆಂಬಲಿಸಿದೆ. ಅವರು ಮತ್ತು ಅವರ ಪತ್ನಿ ಪ್ರತಿಭಾ ಅವರ ಒಟ್ಟು ಆಸ್ತಿ ಮೌಲ್ಯ 138 ಕೋಟಿ ರೂ.ಗಳಾಗಿದೆ.

ಬೆಂಗಳೂರಿನ ಸುತ್ತಮುತ್ತಲಿರುವ ಶಾಸಕ ಸ್ಥಾನದ ಅಭ್ಯರ್ಥಿಗಳು ಇಷ್ಟೊಂದು ಪ್ರಮಾಣದ ಆಸ್ತಿ ಗಳಿಸಲು ಕಾರಣವಿದೆ. ರಾಜಕೀಯ ಬಲದಿಂದ ಹೆಚ್ಚೆಚ್ಚು ಭೂ ವ್ಯವಹಾರವನ್ನು ಇವರುಗಳು ಮಾಡುತ್ತಾರೆ. ಕಳೆದ 30 ವರ್ಷಗಳಿಂದ ಬೆಂಗಳೂರು ಹಾಗೂ ಸುತ್ತಮುತ್ತಲಲ್ಲಿ ಭೂಮಿಯ ಬೆಲೆ ಏರುತ್ತಲೇ ಹೋಗಿದೆ. ಹೀಗಾಗಿ ಅದಕ್ಕೆ ತಕ್ಕಂತೆ ಇವರುಗಳ ಆಸ್ತಿಯೂ ಹೆಚ್ಚುತ್ತಿದೆ.

ಈಗ ನೂರಾರು ಕೋಟಿ ರೂ.ಗಳ ಆಸ್ತಿ ಹೊಂದಿರುವ ಮೂವರು ಅಭ್ಯರ್ಥಿಗಳ ಜಿದ್ದಾಜಿದ್ದಿ ಹೊಸಕೋಟೆಯಲ್ಲಿ ನಡೆಯುತ್ತಿದೆ. ಹಾಗಾಗಿಯೇ ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಆದರೆ, ಯಾವ ರೀತಿಯಲ್ಲಿಯೂ ಮೌಲ್ಯಗಳ ಸ್ಪರ್ಧೆ ಇಲ್ಲಿದೆ ಎಂದು ಹೇಳಲಾಗದು. ಮೂವರು ಅಭ್ಯರ್ಥಿಗಳು ಅಥವಾ ಅವರ ಕುಟುಂಬ ಒಂದಲ್ಲಾ ಒಂದು ರೀತಿಯಲ್ಲಿ ಪಕ್ಷಾಂತರ ಅಥವಾ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರೇ ಆಗಿದ್ದಾರೆ. ಆ ಪಕ್ಷಾಂತರಕ್ಕೆ ವೈಯಕ್ತಿಕ ಹಿತಾಸಕ್ತಿಯಲ್ಲದೇ ಬೇರಾವ ಸೈದ್ಧಾಂತಿಕ ಕಾರಣಗಳೂ ಇರಲಿಲ್ಲ.

ಹೆಚ್ಚು ಆಸ್ತಿ ಅಥವಾ ಹಣ ಇದ್ದವರು ಚುನಾವಣೆಗೆ ಸ್ಪರ್ಧಿಸಬಾರದು ಎಂಬ ಯಾವ ಕಾನೂನೂ ಇಲ್ಲ. ಆದರೆ, ಚುನಾವಣೆಗೆ ಮುಂಚೆ ಅಧಿಕೃತವಾಗಿ ಮತ್ತು ನೀತಿ ಸಂಹಿತೆ ಜಾರಿಗೆ ಬಂದ ಮೇಲೆ ಅನಧಿಕೃತವಾಗಿ ಇಂತಹವರು ಕೋಟಿಗಟ್ಟಲೆ ಹಣ ಚೆಲ್ಲಿ ಚುನಾವಣೆ ನಡೆಸುತ್ತಾರೆ. ಆಗ ಪ್ರಜಾಪ್ರಭುತ್ವವೂ ಬೀದಿಯಲ್ಲಿ ಚೆಲ್ಲಾಡಿ ಹೋಗುತ್ತದೆ. ಅಂತಹ ದುರಂತಕ್ಕೆ ಸಾಕ್ಷಿಯಾಗಿರುವುದು ಹೊಸಕೋಟೆ ಮಾತ್ರವಲ್ಲ. ಬೆಂಗಳೂರಿನ ಯಶವಂತಪುರ ಕ್ಷೇತ್ರ, ಬೆಳಗಾವಿ ಜಿಲ್ಲೆಯ ಗೋಕಾಕ್ ಕ್ಷೇತ್ರದ ಅಭ್ಯರ್ಥಿಗಳ ಆಸ್ತಿ ವಿವರಗಳು ಹೊರಬಿದ್ದಾಗ ಅದಕ್ಕೆ ಇನ್ನಷ್ಟು ಸಾಕ್ಷಿ ದೊರೆಯಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿವೇಶನ ಮಾಡಿ ಹಂಚುವುದು, ಮಾರುವುದನ್ನು ನೆಲದೊಡೆಯರ ಹಿಡಿತಕ್ಕೆ ಬಿಡದೆ ಆಳ್ವಕೆ ತಾನೇ ಹಿಡಿತದಲ್ಲಿಟ್ಟು ಕೊಳ್ಳುವಲ್ಲಿ ಸೋತ ಪರಿಣಾಮ!

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...