Homeಕರ್ನಾಟಕಒಂದೇ ಕ್ಷೇತ್ರದ ಈ ಮೂರು ಅಭ್ಯರ್ಥಿಗಳ ಆಸ್ತಿ 2000 ಕೋಟಿಗೂ ಹೆಚ್ಚು. ಆ ಕ್ಷೇತ್ರ ಯಾವುದು...

ಒಂದೇ ಕ್ಷೇತ್ರದ ಈ ಮೂರು ಅಭ್ಯರ್ಥಿಗಳ ಆಸ್ತಿ 2000 ಕೋಟಿಗೂ ಹೆಚ್ಚು. ಆ ಕ್ಷೇತ್ರ ಯಾವುದು ಗೊತ್ತೇ?

ಹೆಚ್ಚು ಆಸ್ತಿ ಅಥವಾ ಹಣ ಇದ್ದವರು ಚುನಾವಣೆಗೆ ಸ್ಪರ್ಧಿಸಬಾರದು ಎಂಬ ಯಾವ ಕಾನೂನೂ ಇಲ್ಲ. ಆದರೆ, ಚುನಾವಣೆಗೆ ಮುಂಚೆ ಅಧಿಕೃತವಾಗಿ ಮತ್ತು ನೀತಿ ಸಂಹಿತೆ ಜಾರಿಗೆ ಬಂದ ಮೇಲೆ ಅನಧಿಕೃತವಾಗಿ ಇಂತಹವರು ಕೋಟಿಗಟ್ಟಲೆ ಹಣ ಚೆಲ್ಲಿ ಚುನಾವಣೆ ನಡೆಸುತ್ತಾರೆ.

- Advertisement -
- Advertisement -

ನಿನ್ನೆ ತಾನೇ ಹೊಸಕೋಟೆಯ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರ ಆಸ್ತಿಯ ವಿವರ ಹೊರಬಿದ್ದಿತ್ತು. ಕರ್ನಾಟಕದ ಪ್ರಜ್ಞಾವಂತ ಮತದಾರರನ್ನು ಅದು ಬೆಚ್ಚಿ ಬೀಳಿಸಿತ್ತು. ಏಕೆಂದರೆ ನಾಗರಾಜ್ ಮತ್ತು ಅವರ ಪತ್ನಿ ಶಾಂತಾ ಅವರ ಒಟ್ಟು ಆಸ್ತಿ 1201.50 ಕೋಟಿಗಳಾಗಿತ್ತು. ಅಷ್ಟೇ ಅಲ್ಲದೇ, ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಕಡೆಗೆ ಮುಖ ಮಾಡಿ ಸರ್ಕಾರ ಬೀಳಲು ಕಾರಣವಾದ 5 ದಿನಗಳಲ್ಲಿ ಅವರ ವಿವಿಧ ಬ್ಯಾಂಕ್ ಖಾತೆಗಳಿಗೆ 48 ಕೋಟಿ ರೂ ಹಣ ಬಂದಿತ್ತು. ಇದು ವಿವರವಾಗಿ ಎಲ್ಲಾ ಕಡೆ ವರದಿಯಾಗಿತ್ತು.

ಇದೀಗ ಅದೇ ರೀತಿಯ ಇನ್ನೊಂದು ಸುದ್ದಿ ಬಂದಿದೆ.

ಕ್ಷೇತ್ರದ ಮೂರೂ ಪ್ರಮುಖ ಅಭ್ಯರ್ಥಿಗಳ ಆಸ್ತಿಯ ಮೌಲ್ಯ ತಲಾ ನೂರು ಕೋಟಿಗೂ ಹೆಚ್ಚಿರುವ ವರ್ತಮಾನ ಬಹಿರಂಗವಾಗಿದೆ. ಅಷ್ಟೇ ಅಲ್ಲ ಮೂರು ಅಭ್ಯರ್ಥಿಗಳ ಒಟ್ಟು ಆಸ್ತಿ 2000 ಕೋಟಿಗೂ ಹೆಚ್ಚು  ಅದು ಹೊಸಕೋಟೆ ಕ್ಷೇತ್ರ. ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರ ಆಸ್ತಿಯ ಪ್ರಮಾಣ ಮೇಲಿನಂತಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿಯವರದ್ದೂ ಕಡಿಮೆಯೇನಿಲ್ಲ. ಅವರು ಮತ್ತು ಅವರ ಪತಿ ಬೈರತಿ ಸುರೇಶ್‌ರವರ ಆಸ್ತಿ 424 ಕೋಟಿ ರೂ ಮತ್ತು 407 ಕೋಟಿ ರೂ. ಆಗಿದೆ. ಅಂದರೆ ಒಟ್ಟು 831 ಕೋಟಿ ರೂ.ಗಳ ಆಸ್ತಿ ಅವರದ್ದಾಗಿದೆ.

ಇದನ್ನೂ ಓದಿ: ಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ಹಾಲಿ ಹೆಬ್ಬಾಳ ಕ್ಷೇತ್ರದ ಶಾಸಕರಾಗಿರುವ ಬೈರತಿ ಸುರೇಶ್ ಅದಕ್ಕೆ ಮುಂಚೆ ವಿಧಾನಪರಿಷತ್ ಸದಸ್ಯರಾಗಿದ್ದರು. ಅದೂ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಪಕ್ಷೇತರರಾಗಿ ನಿಂತು ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಶಾಸಕರ ಮತಗಳನ್ನು ಕೊಂಡು ಎಂಎಲ್‌ಸಿ ಆದರು ಎಂಬ ಆರೋಪ ಅವರ ಮೇಲಿತ್ತು. ಸಿದ್ದರಾಮಯ್ಯನವರಿಗೆ ಆಪ್ತರಾಗಿರುವ ಬೈರತಿ ಸುರೇಶ್ ರಾಜ್ಯದಲ್ಲಿ ಅತಿ ಹೆಚ್ಚು ಆಸ್ತಿ ಘೋಷಿಸಿಕೊಂಡಿರುವ ಶಾಸಕರಲ್ಲಿ ಒಬ್ಬರಾಗಿದ್ದಾರೆ.

ಇನ್ನು ಮೂರನೆಯ ಅಭ್ಯರ್ಥಿ ಶರತ್ ಬಚ್ಚೇಗೌಡ. ಕಳೆದ ಸಾರಿ ಬಿಜೆಪಿ ಅಭ್ಯರ್ಥಿಯಾಗಿ ನಿಂತು ಸೋತಿದ್ದ ಅವರು ಈಗ ಪಕ್ಷೇತರ ಅಭ್ಯರ್ಥಿ. ಜೆಡಿಎಸ್ ಅವರ ಉಮೇದುವಾರಿಕೆಯನ್ನು ಬೆಂಬಲಿಸಿದೆ. ಅವರು ಮತ್ತು ಅವರ ಪತ್ನಿ ಪ್ರತಿಭಾ ಅವರ ಒಟ್ಟು ಆಸ್ತಿ ಮೌಲ್ಯ 138 ಕೋಟಿ ರೂ.ಗಳಾಗಿದೆ.

ಬೆಂಗಳೂರಿನ ಸುತ್ತಮುತ್ತಲಿರುವ ಶಾಸಕ ಸ್ಥಾನದ ಅಭ್ಯರ್ಥಿಗಳು ಇಷ್ಟೊಂದು ಪ್ರಮಾಣದ ಆಸ್ತಿ ಗಳಿಸಲು ಕಾರಣವಿದೆ. ರಾಜಕೀಯ ಬಲದಿಂದ ಹೆಚ್ಚೆಚ್ಚು ಭೂ ವ್ಯವಹಾರವನ್ನು ಇವರುಗಳು ಮಾಡುತ್ತಾರೆ. ಕಳೆದ 30 ವರ್ಷಗಳಿಂದ ಬೆಂಗಳೂರು ಹಾಗೂ ಸುತ್ತಮುತ್ತಲಲ್ಲಿ ಭೂಮಿಯ ಬೆಲೆ ಏರುತ್ತಲೇ ಹೋಗಿದೆ. ಹೀಗಾಗಿ ಅದಕ್ಕೆ ತಕ್ಕಂತೆ ಇವರುಗಳ ಆಸ್ತಿಯೂ ಹೆಚ್ಚುತ್ತಿದೆ.

ಈಗ ನೂರಾರು ಕೋಟಿ ರೂ.ಗಳ ಆಸ್ತಿ ಹೊಂದಿರುವ ಮೂವರು ಅಭ್ಯರ್ಥಿಗಳ ಜಿದ್ದಾಜಿದ್ದಿ ಹೊಸಕೋಟೆಯಲ್ಲಿ ನಡೆಯುತ್ತಿದೆ. ಹಾಗಾಗಿಯೇ ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಆದರೆ, ಯಾವ ರೀತಿಯಲ್ಲಿಯೂ ಮೌಲ್ಯಗಳ ಸ್ಪರ್ಧೆ ಇಲ್ಲಿದೆ ಎಂದು ಹೇಳಲಾಗದು. ಮೂವರು ಅಭ್ಯರ್ಥಿಗಳು ಅಥವಾ ಅವರ ಕುಟುಂಬ ಒಂದಲ್ಲಾ ಒಂದು ರೀತಿಯಲ್ಲಿ ಪಕ್ಷಾಂತರ ಅಥವಾ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರೇ ಆಗಿದ್ದಾರೆ. ಆ ಪಕ್ಷಾಂತರಕ್ಕೆ ವೈಯಕ್ತಿಕ ಹಿತಾಸಕ್ತಿಯಲ್ಲದೇ ಬೇರಾವ ಸೈದ್ಧಾಂತಿಕ ಕಾರಣಗಳೂ ಇರಲಿಲ್ಲ.

ಹೆಚ್ಚು ಆಸ್ತಿ ಅಥವಾ ಹಣ ಇದ್ದವರು ಚುನಾವಣೆಗೆ ಸ್ಪರ್ಧಿಸಬಾರದು ಎಂಬ ಯಾವ ಕಾನೂನೂ ಇಲ್ಲ. ಆದರೆ, ಚುನಾವಣೆಗೆ ಮುಂಚೆ ಅಧಿಕೃತವಾಗಿ ಮತ್ತು ನೀತಿ ಸಂಹಿತೆ ಜಾರಿಗೆ ಬಂದ ಮೇಲೆ ಅನಧಿಕೃತವಾಗಿ ಇಂತಹವರು ಕೋಟಿಗಟ್ಟಲೆ ಹಣ ಚೆಲ್ಲಿ ಚುನಾವಣೆ ನಡೆಸುತ್ತಾರೆ. ಆಗ ಪ್ರಜಾಪ್ರಭುತ್ವವೂ ಬೀದಿಯಲ್ಲಿ ಚೆಲ್ಲಾಡಿ ಹೋಗುತ್ತದೆ. ಅಂತಹ ದುರಂತಕ್ಕೆ ಸಾಕ್ಷಿಯಾಗಿರುವುದು ಹೊಸಕೋಟೆ ಮಾತ್ರವಲ್ಲ. ಬೆಂಗಳೂರಿನ ಯಶವಂತಪುರ ಕ್ಷೇತ್ರ, ಬೆಳಗಾವಿ ಜಿಲ್ಲೆಯ ಗೋಕಾಕ್ ಕ್ಷೇತ್ರದ ಅಭ್ಯರ್ಥಿಗಳ ಆಸ್ತಿ ವಿವರಗಳು ಹೊರಬಿದ್ದಾಗ ಅದಕ್ಕೆ ಇನ್ನಷ್ಟು ಸಾಕ್ಷಿ ದೊರೆಯಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿವೇಶನ ಮಾಡಿ ಹಂಚುವುದು, ಮಾರುವುದನ್ನು ನೆಲದೊಡೆಯರ ಹಿಡಿತಕ್ಕೆ ಬಿಡದೆ ಆಳ್ವಕೆ ತಾನೇ ಹಿಡಿತದಲ್ಲಿಟ್ಟು ಕೊಳ್ಳುವಲ್ಲಿ ಸೋತ ಪರಿಣಾಮ!

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...