Homeಕರ್ನಾಟಕಒಂದೇ ಕ್ಷೇತ್ರದ ಈ ಮೂರು ಅಭ್ಯರ್ಥಿಗಳ ಆಸ್ತಿ 2000 ಕೋಟಿಗೂ ಹೆಚ್ಚು. ಆ ಕ್ಷೇತ್ರ ಯಾವುದು...

ಒಂದೇ ಕ್ಷೇತ್ರದ ಈ ಮೂರು ಅಭ್ಯರ್ಥಿಗಳ ಆಸ್ತಿ 2000 ಕೋಟಿಗೂ ಹೆಚ್ಚು. ಆ ಕ್ಷೇತ್ರ ಯಾವುದು ಗೊತ್ತೇ?

ಹೆಚ್ಚು ಆಸ್ತಿ ಅಥವಾ ಹಣ ಇದ್ದವರು ಚುನಾವಣೆಗೆ ಸ್ಪರ್ಧಿಸಬಾರದು ಎಂಬ ಯಾವ ಕಾನೂನೂ ಇಲ್ಲ. ಆದರೆ, ಚುನಾವಣೆಗೆ ಮುಂಚೆ ಅಧಿಕೃತವಾಗಿ ಮತ್ತು ನೀತಿ ಸಂಹಿತೆ ಜಾರಿಗೆ ಬಂದ ಮೇಲೆ ಅನಧಿಕೃತವಾಗಿ ಇಂತಹವರು ಕೋಟಿಗಟ್ಟಲೆ ಹಣ ಚೆಲ್ಲಿ ಚುನಾವಣೆ ನಡೆಸುತ್ತಾರೆ.

- Advertisement -
- Advertisement -

ನಿನ್ನೆ ತಾನೇ ಹೊಸಕೋಟೆಯ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರ ಆಸ್ತಿಯ ವಿವರ ಹೊರಬಿದ್ದಿತ್ತು. ಕರ್ನಾಟಕದ ಪ್ರಜ್ಞಾವಂತ ಮತದಾರರನ್ನು ಅದು ಬೆಚ್ಚಿ ಬೀಳಿಸಿತ್ತು. ಏಕೆಂದರೆ ನಾಗರಾಜ್ ಮತ್ತು ಅವರ ಪತ್ನಿ ಶಾಂತಾ ಅವರ ಒಟ್ಟು ಆಸ್ತಿ 1201.50 ಕೋಟಿಗಳಾಗಿತ್ತು. ಅಷ್ಟೇ ಅಲ್ಲದೇ, ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಕಡೆಗೆ ಮುಖ ಮಾಡಿ ಸರ್ಕಾರ ಬೀಳಲು ಕಾರಣವಾದ 5 ದಿನಗಳಲ್ಲಿ ಅವರ ವಿವಿಧ ಬ್ಯಾಂಕ್ ಖಾತೆಗಳಿಗೆ 48 ಕೋಟಿ ರೂ ಹಣ ಬಂದಿತ್ತು. ಇದು ವಿವರವಾಗಿ ಎಲ್ಲಾ ಕಡೆ ವರದಿಯಾಗಿತ್ತು.

ಇದೀಗ ಅದೇ ರೀತಿಯ ಇನ್ನೊಂದು ಸುದ್ದಿ ಬಂದಿದೆ.

ಕ್ಷೇತ್ರದ ಮೂರೂ ಪ್ರಮುಖ ಅಭ್ಯರ್ಥಿಗಳ ಆಸ್ತಿಯ ಮೌಲ್ಯ ತಲಾ ನೂರು ಕೋಟಿಗೂ ಹೆಚ್ಚಿರುವ ವರ್ತಮಾನ ಬಹಿರಂಗವಾಗಿದೆ. ಅಷ್ಟೇ ಅಲ್ಲ ಮೂರು ಅಭ್ಯರ್ಥಿಗಳ ಒಟ್ಟು ಆಸ್ತಿ 2000 ಕೋಟಿಗೂ ಹೆಚ್ಚು  ಅದು ಹೊಸಕೋಟೆ ಕ್ಷೇತ್ರ. ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರ ಆಸ್ತಿಯ ಪ್ರಮಾಣ ಮೇಲಿನಂತಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿಯವರದ್ದೂ ಕಡಿಮೆಯೇನಿಲ್ಲ. ಅವರು ಮತ್ತು ಅವರ ಪತಿ ಬೈರತಿ ಸುರೇಶ್‌ರವರ ಆಸ್ತಿ 424 ಕೋಟಿ ರೂ ಮತ್ತು 407 ಕೋಟಿ ರೂ. ಆಗಿದೆ. ಅಂದರೆ ಒಟ್ಟು 831 ಕೋಟಿ ರೂ.ಗಳ ಆಸ್ತಿ ಅವರದ್ದಾಗಿದೆ.

ಇದನ್ನೂ ಓದಿ: ಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ಹಾಲಿ ಹೆಬ್ಬಾಳ ಕ್ಷೇತ್ರದ ಶಾಸಕರಾಗಿರುವ ಬೈರತಿ ಸುರೇಶ್ ಅದಕ್ಕೆ ಮುಂಚೆ ವಿಧಾನಪರಿಷತ್ ಸದಸ್ಯರಾಗಿದ್ದರು. ಅದೂ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಪಕ್ಷೇತರರಾಗಿ ನಿಂತು ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಶಾಸಕರ ಮತಗಳನ್ನು ಕೊಂಡು ಎಂಎಲ್‌ಸಿ ಆದರು ಎಂಬ ಆರೋಪ ಅವರ ಮೇಲಿತ್ತು. ಸಿದ್ದರಾಮಯ್ಯನವರಿಗೆ ಆಪ್ತರಾಗಿರುವ ಬೈರತಿ ಸುರೇಶ್ ರಾಜ್ಯದಲ್ಲಿ ಅತಿ ಹೆಚ್ಚು ಆಸ್ತಿ ಘೋಷಿಸಿಕೊಂಡಿರುವ ಶಾಸಕರಲ್ಲಿ ಒಬ್ಬರಾಗಿದ್ದಾರೆ.

ಇನ್ನು ಮೂರನೆಯ ಅಭ್ಯರ್ಥಿ ಶರತ್ ಬಚ್ಚೇಗೌಡ. ಕಳೆದ ಸಾರಿ ಬಿಜೆಪಿ ಅಭ್ಯರ್ಥಿಯಾಗಿ ನಿಂತು ಸೋತಿದ್ದ ಅವರು ಈಗ ಪಕ್ಷೇತರ ಅಭ್ಯರ್ಥಿ. ಜೆಡಿಎಸ್ ಅವರ ಉಮೇದುವಾರಿಕೆಯನ್ನು ಬೆಂಬಲಿಸಿದೆ. ಅವರು ಮತ್ತು ಅವರ ಪತ್ನಿ ಪ್ರತಿಭಾ ಅವರ ಒಟ್ಟು ಆಸ್ತಿ ಮೌಲ್ಯ 138 ಕೋಟಿ ರೂ.ಗಳಾಗಿದೆ.

ಬೆಂಗಳೂರಿನ ಸುತ್ತಮುತ್ತಲಿರುವ ಶಾಸಕ ಸ್ಥಾನದ ಅಭ್ಯರ್ಥಿಗಳು ಇಷ್ಟೊಂದು ಪ್ರಮಾಣದ ಆಸ್ತಿ ಗಳಿಸಲು ಕಾರಣವಿದೆ. ರಾಜಕೀಯ ಬಲದಿಂದ ಹೆಚ್ಚೆಚ್ಚು ಭೂ ವ್ಯವಹಾರವನ್ನು ಇವರುಗಳು ಮಾಡುತ್ತಾರೆ. ಕಳೆದ 30 ವರ್ಷಗಳಿಂದ ಬೆಂಗಳೂರು ಹಾಗೂ ಸುತ್ತಮುತ್ತಲಲ್ಲಿ ಭೂಮಿಯ ಬೆಲೆ ಏರುತ್ತಲೇ ಹೋಗಿದೆ. ಹೀಗಾಗಿ ಅದಕ್ಕೆ ತಕ್ಕಂತೆ ಇವರುಗಳ ಆಸ್ತಿಯೂ ಹೆಚ್ಚುತ್ತಿದೆ.

ಈಗ ನೂರಾರು ಕೋಟಿ ರೂ.ಗಳ ಆಸ್ತಿ ಹೊಂದಿರುವ ಮೂವರು ಅಭ್ಯರ್ಥಿಗಳ ಜಿದ್ದಾಜಿದ್ದಿ ಹೊಸಕೋಟೆಯಲ್ಲಿ ನಡೆಯುತ್ತಿದೆ. ಹಾಗಾಗಿಯೇ ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಆದರೆ, ಯಾವ ರೀತಿಯಲ್ಲಿಯೂ ಮೌಲ್ಯಗಳ ಸ್ಪರ್ಧೆ ಇಲ್ಲಿದೆ ಎಂದು ಹೇಳಲಾಗದು. ಮೂವರು ಅಭ್ಯರ್ಥಿಗಳು ಅಥವಾ ಅವರ ಕುಟುಂಬ ಒಂದಲ್ಲಾ ಒಂದು ರೀತಿಯಲ್ಲಿ ಪಕ್ಷಾಂತರ ಅಥವಾ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರೇ ಆಗಿದ್ದಾರೆ. ಆ ಪಕ್ಷಾಂತರಕ್ಕೆ ವೈಯಕ್ತಿಕ ಹಿತಾಸಕ್ತಿಯಲ್ಲದೇ ಬೇರಾವ ಸೈದ್ಧಾಂತಿಕ ಕಾರಣಗಳೂ ಇರಲಿಲ್ಲ.

ಹೆಚ್ಚು ಆಸ್ತಿ ಅಥವಾ ಹಣ ಇದ್ದವರು ಚುನಾವಣೆಗೆ ಸ್ಪರ್ಧಿಸಬಾರದು ಎಂಬ ಯಾವ ಕಾನೂನೂ ಇಲ್ಲ. ಆದರೆ, ಚುನಾವಣೆಗೆ ಮುಂಚೆ ಅಧಿಕೃತವಾಗಿ ಮತ್ತು ನೀತಿ ಸಂಹಿತೆ ಜಾರಿಗೆ ಬಂದ ಮೇಲೆ ಅನಧಿಕೃತವಾಗಿ ಇಂತಹವರು ಕೋಟಿಗಟ್ಟಲೆ ಹಣ ಚೆಲ್ಲಿ ಚುನಾವಣೆ ನಡೆಸುತ್ತಾರೆ. ಆಗ ಪ್ರಜಾಪ್ರಭುತ್ವವೂ ಬೀದಿಯಲ್ಲಿ ಚೆಲ್ಲಾಡಿ ಹೋಗುತ್ತದೆ. ಅಂತಹ ದುರಂತಕ್ಕೆ ಸಾಕ್ಷಿಯಾಗಿರುವುದು ಹೊಸಕೋಟೆ ಮಾತ್ರವಲ್ಲ. ಬೆಂಗಳೂರಿನ ಯಶವಂತಪುರ ಕ್ಷೇತ್ರ, ಬೆಳಗಾವಿ ಜಿಲ್ಲೆಯ ಗೋಕಾಕ್ ಕ್ಷೇತ್ರದ ಅಭ್ಯರ್ಥಿಗಳ ಆಸ್ತಿ ವಿವರಗಳು ಹೊರಬಿದ್ದಾಗ ಅದಕ್ಕೆ ಇನ್ನಷ್ಟು ಸಾಕ್ಷಿ ದೊರೆಯಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿವೇಶನ ಮಾಡಿ ಹಂಚುವುದು, ಮಾರುವುದನ್ನು ನೆಲದೊಡೆಯರ ಹಿಡಿತಕ್ಕೆ ಬಿಡದೆ ಆಳ್ವಕೆ ತಾನೇ ಹಿಡಿತದಲ್ಲಿಟ್ಟು ಕೊಳ್ಳುವಲ್ಲಿ ಸೋತ ಪರಿಣಾಮ!

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...