Homeಕರ್ನಾಟಕಒಂದೇ ಕ್ಷೇತ್ರದ ಈ ಮೂರು ಅಭ್ಯರ್ಥಿಗಳ ಆಸ್ತಿ 2000 ಕೋಟಿಗೂ ಹೆಚ್ಚು. ಆ ಕ್ಷೇತ್ರ ಯಾವುದು...

ಒಂದೇ ಕ್ಷೇತ್ರದ ಈ ಮೂರು ಅಭ್ಯರ್ಥಿಗಳ ಆಸ್ತಿ 2000 ಕೋಟಿಗೂ ಹೆಚ್ಚು. ಆ ಕ್ಷೇತ್ರ ಯಾವುದು ಗೊತ್ತೇ?

ಹೆಚ್ಚು ಆಸ್ತಿ ಅಥವಾ ಹಣ ಇದ್ದವರು ಚುನಾವಣೆಗೆ ಸ್ಪರ್ಧಿಸಬಾರದು ಎಂಬ ಯಾವ ಕಾನೂನೂ ಇಲ್ಲ. ಆದರೆ, ಚುನಾವಣೆಗೆ ಮುಂಚೆ ಅಧಿಕೃತವಾಗಿ ಮತ್ತು ನೀತಿ ಸಂಹಿತೆ ಜಾರಿಗೆ ಬಂದ ಮೇಲೆ ಅನಧಿಕೃತವಾಗಿ ಇಂತಹವರು ಕೋಟಿಗಟ್ಟಲೆ ಹಣ ಚೆಲ್ಲಿ ಚುನಾವಣೆ ನಡೆಸುತ್ತಾರೆ.

- Advertisement -
- Advertisement -

ನಿನ್ನೆ ತಾನೇ ಹೊಸಕೋಟೆಯ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರ ಆಸ್ತಿಯ ವಿವರ ಹೊರಬಿದ್ದಿತ್ತು. ಕರ್ನಾಟಕದ ಪ್ರಜ್ಞಾವಂತ ಮತದಾರರನ್ನು ಅದು ಬೆಚ್ಚಿ ಬೀಳಿಸಿತ್ತು. ಏಕೆಂದರೆ ನಾಗರಾಜ್ ಮತ್ತು ಅವರ ಪತ್ನಿ ಶಾಂತಾ ಅವರ ಒಟ್ಟು ಆಸ್ತಿ 1201.50 ಕೋಟಿಗಳಾಗಿತ್ತು. ಅಷ್ಟೇ ಅಲ್ಲದೇ, ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಕಡೆಗೆ ಮುಖ ಮಾಡಿ ಸರ್ಕಾರ ಬೀಳಲು ಕಾರಣವಾದ 5 ದಿನಗಳಲ್ಲಿ ಅವರ ವಿವಿಧ ಬ್ಯಾಂಕ್ ಖಾತೆಗಳಿಗೆ 48 ಕೋಟಿ ರೂ ಹಣ ಬಂದಿತ್ತು. ಇದು ವಿವರವಾಗಿ ಎಲ್ಲಾ ಕಡೆ ವರದಿಯಾಗಿತ್ತು.

ಇದೀಗ ಅದೇ ರೀತಿಯ ಇನ್ನೊಂದು ಸುದ್ದಿ ಬಂದಿದೆ.

ಕ್ಷೇತ್ರದ ಮೂರೂ ಪ್ರಮುಖ ಅಭ್ಯರ್ಥಿಗಳ ಆಸ್ತಿಯ ಮೌಲ್ಯ ತಲಾ ನೂರು ಕೋಟಿಗೂ ಹೆಚ್ಚಿರುವ ವರ್ತಮಾನ ಬಹಿರಂಗವಾಗಿದೆ. ಅಷ್ಟೇ ಅಲ್ಲ ಮೂರು ಅಭ್ಯರ್ಥಿಗಳ ಒಟ್ಟು ಆಸ್ತಿ 2000 ಕೋಟಿಗೂ ಹೆಚ್ಚು  ಅದು ಹೊಸಕೋಟೆ ಕ್ಷೇತ್ರ. ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರ ಆಸ್ತಿಯ ಪ್ರಮಾಣ ಮೇಲಿನಂತಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿಯವರದ್ದೂ ಕಡಿಮೆಯೇನಿಲ್ಲ. ಅವರು ಮತ್ತು ಅವರ ಪತಿ ಬೈರತಿ ಸುರೇಶ್‌ರವರ ಆಸ್ತಿ 424 ಕೋಟಿ ರೂ ಮತ್ತು 407 ಕೋಟಿ ರೂ. ಆಗಿದೆ. ಅಂದರೆ ಒಟ್ಟು 831 ಕೋಟಿ ರೂ.ಗಳ ಆಸ್ತಿ ಅವರದ್ದಾಗಿದೆ.

ಇದನ್ನೂ ಓದಿ: ಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ಹಾಲಿ ಹೆಬ್ಬಾಳ ಕ್ಷೇತ್ರದ ಶಾಸಕರಾಗಿರುವ ಬೈರತಿ ಸುರೇಶ್ ಅದಕ್ಕೆ ಮುಂಚೆ ವಿಧಾನಪರಿಷತ್ ಸದಸ್ಯರಾಗಿದ್ದರು. ಅದೂ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಪಕ್ಷೇತರರಾಗಿ ನಿಂತು ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಶಾಸಕರ ಮತಗಳನ್ನು ಕೊಂಡು ಎಂಎಲ್‌ಸಿ ಆದರು ಎಂಬ ಆರೋಪ ಅವರ ಮೇಲಿತ್ತು. ಸಿದ್ದರಾಮಯ್ಯನವರಿಗೆ ಆಪ್ತರಾಗಿರುವ ಬೈರತಿ ಸುರೇಶ್ ರಾಜ್ಯದಲ್ಲಿ ಅತಿ ಹೆಚ್ಚು ಆಸ್ತಿ ಘೋಷಿಸಿಕೊಂಡಿರುವ ಶಾಸಕರಲ್ಲಿ ಒಬ್ಬರಾಗಿದ್ದಾರೆ.

ಇನ್ನು ಮೂರನೆಯ ಅಭ್ಯರ್ಥಿ ಶರತ್ ಬಚ್ಚೇಗೌಡ. ಕಳೆದ ಸಾರಿ ಬಿಜೆಪಿ ಅಭ್ಯರ್ಥಿಯಾಗಿ ನಿಂತು ಸೋತಿದ್ದ ಅವರು ಈಗ ಪಕ್ಷೇತರ ಅಭ್ಯರ್ಥಿ. ಜೆಡಿಎಸ್ ಅವರ ಉಮೇದುವಾರಿಕೆಯನ್ನು ಬೆಂಬಲಿಸಿದೆ. ಅವರು ಮತ್ತು ಅವರ ಪತ್ನಿ ಪ್ರತಿಭಾ ಅವರ ಒಟ್ಟು ಆಸ್ತಿ ಮೌಲ್ಯ 138 ಕೋಟಿ ರೂ.ಗಳಾಗಿದೆ.

ಬೆಂಗಳೂರಿನ ಸುತ್ತಮುತ್ತಲಿರುವ ಶಾಸಕ ಸ್ಥಾನದ ಅಭ್ಯರ್ಥಿಗಳು ಇಷ್ಟೊಂದು ಪ್ರಮಾಣದ ಆಸ್ತಿ ಗಳಿಸಲು ಕಾರಣವಿದೆ. ರಾಜಕೀಯ ಬಲದಿಂದ ಹೆಚ್ಚೆಚ್ಚು ಭೂ ವ್ಯವಹಾರವನ್ನು ಇವರುಗಳು ಮಾಡುತ್ತಾರೆ. ಕಳೆದ 30 ವರ್ಷಗಳಿಂದ ಬೆಂಗಳೂರು ಹಾಗೂ ಸುತ್ತಮುತ್ತಲಲ್ಲಿ ಭೂಮಿಯ ಬೆಲೆ ಏರುತ್ತಲೇ ಹೋಗಿದೆ. ಹೀಗಾಗಿ ಅದಕ್ಕೆ ತಕ್ಕಂತೆ ಇವರುಗಳ ಆಸ್ತಿಯೂ ಹೆಚ್ಚುತ್ತಿದೆ.

ಈಗ ನೂರಾರು ಕೋಟಿ ರೂ.ಗಳ ಆಸ್ತಿ ಹೊಂದಿರುವ ಮೂವರು ಅಭ್ಯರ್ಥಿಗಳ ಜಿದ್ದಾಜಿದ್ದಿ ಹೊಸಕೋಟೆಯಲ್ಲಿ ನಡೆಯುತ್ತಿದೆ. ಹಾಗಾಗಿಯೇ ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಆದರೆ, ಯಾವ ರೀತಿಯಲ್ಲಿಯೂ ಮೌಲ್ಯಗಳ ಸ್ಪರ್ಧೆ ಇಲ್ಲಿದೆ ಎಂದು ಹೇಳಲಾಗದು. ಮೂವರು ಅಭ್ಯರ್ಥಿಗಳು ಅಥವಾ ಅವರ ಕುಟುಂಬ ಒಂದಲ್ಲಾ ಒಂದು ರೀತಿಯಲ್ಲಿ ಪಕ್ಷಾಂತರ ಅಥವಾ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರೇ ಆಗಿದ್ದಾರೆ. ಆ ಪಕ್ಷಾಂತರಕ್ಕೆ ವೈಯಕ್ತಿಕ ಹಿತಾಸಕ್ತಿಯಲ್ಲದೇ ಬೇರಾವ ಸೈದ್ಧಾಂತಿಕ ಕಾರಣಗಳೂ ಇರಲಿಲ್ಲ.

ಹೆಚ್ಚು ಆಸ್ತಿ ಅಥವಾ ಹಣ ಇದ್ದವರು ಚುನಾವಣೆಗೆ ಸ್ಪರ್ಧಿಸಬಾರದು ಎಂಬ ಯಾವ ಕಾನೂನೂ ಇಲ್ಲ. ಆದರೆ, ಚುನಾವಣೆಗೆ ಮುಂಚೆ ಅಧಿಕೃತವಾಗಿ ಮತ್ತು ನೀತಿ ಸಂಹಿತೆ ಜಾರಿಗೆ ಬಂದ ಮೇಲೆ ಅನಧಿಕೃತವಾಗಿ ಇಂತಹವರು ಕೋಟಿಗಟ್ಟಲೆ ಹಣ ಚೆಲ್ಲಿ ಚುನಾವಣೆ ನಡೆಸುತ್ತಾರೆ. ಆಗ ಪ್ರಜಾಪ್ರಭುತ್ವವೂ ಬೀದಿಯಲ್ಲಿ ಚೆಲ್ಲಾಡಿ ಹೋಗುತ್ತದೆ. ಅಂತಹ ದುರಂತಕ್ಕೆ ಸಾಕ್ಷಿಯಾಗಿರುವುದು ಹೊಸಕೋಟೆ ಮಾತ್ರವಲ್ಲ. ಬೆಂಗಳೂರಿನ ಯಶವಂತಪುರ ಕ್ಷೇತ್ರ, ಬೆಳಗಾವಿ ಜಿಲ್ಲೆಯ ಗೋಕಾಕ್ ಕ್ಷೇತ್ರದ ಅಭ್ಯರ್ಥಿಗಳ ಆಸ್ತಿ ವಿವರಗಳು ಹೊರಬಿದ್ದಾಗ ಅದಕ್ಕೆ ಇನ್ನಷ್ಟು ಸಾಕ್ಷಿ ದೊರೆಯಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿವೇಶನ ಮಾಡಿ ಹಂಚುವುದು, ಮಾರುವುದನ್ನು ನೆಲದೊಡೆಯರ ಹಿಡಿತಕ್ಕೆ ಬಿಡದೆ ಆಳ್ವಕೆ ತಾನೇ ಹಿಡಿತದಲ್ಲಿಟ್ಟು ಕೊಳ್ಳುವಲ್ಲಿ ಸೋತ ಪರಿಣಾಮ!

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...