Homeಕರ್ನಾಟಕಒಂದೇ ಕ್ಷೇತ್ರದ ಈ ಮೂರು ಅಭ್ಯರ್ಥಿಗಳ ಆಸ್ತಿ 2000 ಕೋಟಿಗೂ ಹೆಚ್ಚು. ಆ ಕ್ಷೇತ್ರ ಯಾವುದು...

ಒಂದೇ ಕ್ಷೇತ್ರದ ಈ ಮೂರು ಅಭ್ಯರ್ಥಿಗಳ ಆಸ್ತಿ 2000 ಕೋಟಿಗೂ ಹೆಚ್ಚು. ಆ ಕ್ಷೇತ್ರ ಯಾವುದು ಗೊತ್ತೇ?

ಹೆಚ್ಚು ಆಸ್ತಿ ಅಥವಾ ಹಣ ಇದ್ದವರು ಚುನಾವಣೆಗೆ ಸ್ಪರ್ಧಿಸಬಾರದು ಎಂಬ ಯಾವ ಕಾನೂನೂ ಇಲ್ಲ. ಆದರೆ, ಚುನಾವಣೆಗೆ ಮುಂಚೆ ಅಧಿಕೃತವಾಗಿ ಮತ್ತು ನೀತಿ ಸಂಹಿತೆ ಜಾರಿಗೆ ಬಂದ ಮೇಲೆ ಅನಧಿಕೃತವಾಗಿ ಇಂತಹವರು ಕೋಟಿಗಟ್ಟಲೆ ಹಣ ಚೆಲ್ಲಿ ಚುನಾವಣೆ ನಡೆಸುತ್ತಾರೆ.

- Advertisement -
- Advertisement -

ನಿನ್ನೆ ತಾನೇ ಹೊಸಕೋಟೆಯ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರ ಆಸ್ತಿಯ ವಿವರ ಹೊರಬಿದ್ದಿತ್ತು. ಕರ್ನಾಟಕದ ಪ್ರಜ್ಞಾವಂತ ಮತದಾರರನ್ನು ಅದು ಬೆಚ್ಚಿ ಬೀಳಿಸಿತ್ತು. ಏಕೆಂದರೆ ನಾಗರಾಜ್ ಮತ್ತು ಅವರ ಪತ್ನಿ ಶಾಂತಾ ಅವರ ಒಟ್ಟು ಆಸ್ತಿ 1201.50 ಕೋಟಿಗಳಾಗಿತ್ತು. ಅಷ್ಟೇ ಅಲ್ಲದೇ, ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಕಡೆಗೆ ಮುಖ ಮಾಡಿ ಸರ್ಕಾರ ಬೀಳಲು ಕಾರಣವಾದ 5 ದಿನಗಳಲ್ಲಿ ಅವರ ವಿವಿಧ ಬ್ಯಾಂಕ್ ಖಾತೆಗಳಿಗೆ 48 ಕೋಟಿ ರೂ ಹಣ ಬಂದಿತ್ತು. ಇದು ವಿವರವಾಗಿ ಎಲ್ಲಾ ಕಡೆ ವರದಿಯಾಗಿತ್ತು.

ಇದೀಗ ಅದೇ ರೀತಿಯ ಇನ್ನೊಂದು ಸುದ್ದಿ ಬಂದಿದೆ.

ಕ್ಷೇತ್ರದ ಮೂರೂ ಪ್ರಮುಖ ಅಭ್ಯರ್ಥಿಗಳ ಆಸ್ತಿಯ ಮೌಲ್ಯ ತಲಾ ನೂರು ಕೋಟಿಗೂ ಹೆಚ್ಚಿರುವ ವರ್ತಮಾನ ಬಹಿರಂಗವಾಗಿದೆ. ಅಷ್ಟೇ ಅಲ್ಲ ಮೂರು ಅಭ್ಯರ್ಥಿಗಳ ಒಟ್ಟು ಆಸ್ತಿ 2000 ಕೋಟಿಗೂ ಹೆಚ್ಚು  ಅದು ಹೊಸಕೋಟೆ ಕ್ಷೇತ್ರ. ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರ ಆಸ್ತಿಯ ಪ್ರಮಾಣ ಮೇಲಿನಂತಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿಯವರದ್ದೂ ಕಡಿಮೆಯೇನಿಲ್ಲ. ಅವರು ಮತ್ತು ಅವರ ಪತಿ ಬೈರತಿ ಸುರೇಶ್‌ರವರ ಆಸ್ತಿ 424 ಕೋಟಿ ರೂ ಮತ್ತು 407 ಕೋಟಿ ರೂ. ಆಗಿದೆ. ಅಂದರೆ ಒಟ್ಟು 831 ಕೋಟಿ ರೂ.ಗಳ ಆಸ್ತಿ ಅವರದ್ದಾಗಿದೆ.

ಇದನ್ನೂ ಓದಿ: ಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ಹಾಲಿ ಹೆಬ್ಬಾಳ ಕ್ಷೇತ್ರದ ಶಾಸಕರಾಗಿರುವ ಬೈರತಿ ಸುರೇಶ್ ಅದಕ್ಕೆ ಮುಂಚೆ ವಿಧಾನಪರಿಷತ್ ಸದಸ್ಯರಾಗಿದ್ದರು. ಅದೂ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಪಕ್ಷೇತರರಾಗಿ ನಿಂತು ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಶಾಸಕರ ಮತಗಳನ್ನು ಕೊಂಡು ಎಂಎಲ್‌ಸಿ ಆದರು ಎಂಬ ಆರೋಪ ಅವರ ಮೇಲಿತ್ತು. ಸಿದ್ದರಾಮಯ್ಯನವರಿಗೆ ಆಪ್ತರಾಗಿರುವ ಬೈರತಿ ಸುರೇಶ್ ರಾಜ್ಯದಲ್ಲಿ ಅತಿ ಹೆಚ್ಚು ಆಸ್ತಿ ಘೋಷಿಸಿಕೊಂಡಿರುವ ಶಾಸಕರಲ್ಲಿ ಒಬ್ಬರಾಗಿದ್ದಾರೆ.

ಇನ್ನು ಮೂರನೆಯ ಅಭ್ಯರ್ಥಿ ಶರತ್ ಬಚ್ಚೇಗೌಡ. ಕಳೆದ ಸಾರಿ ಬಿಜೆಪಿ ಅಭ್ಯರ್ಥಿಯಾಗಿ ನಿಂತು ಸೋತಿದ್ದ ಅವರು ಈಗ ಪಕ್ಷೇತರ ಅಭ್ಯರ್ಥಿ. ಜೆಡಿಎಸ್ ಅವರ ಉಮೇದುವಾರಿಕೆಯನ್ನು ಬೆಂಬಲಿಸಿದೆ. ಅವರು ಮತ್ತು ಅವರ ಪತ್ನಿ ಪ್ರತಿಭಾ ಅವರ ಒಟ್ಟು ಆಸ್ತಿ ಮೌಲ್ಯ 138 ಕೋಟಿ ರೂ.ಗಳಾಗಿದೆ.

ಬೆಂಗಳೂರಿನ ಸುತ್ತಮುತ್ತಲಿರುವ ಶಾಸಕ ಸ್ಥಾನದ ಅಭ್ಯರ್ಥಿಗಳು ಇಷ್ಟೊಂದು ಪ್ರಮಾಣದ ಆಸ್ತಿ ಗಳಿಸಲು ಕಾರಣವಿದೆ. ರಾಜಕೀಯ ಬಲದಿಂದ ಹೆಚ್ಚೆಚ್ಚು ಭೂ ವ್ಯವಹಾರವನ್ನು ಇವರುಗಳು ಮಾಡುತ್ತಾರೆ. ಕಳೆದ 30 ವರ್ಷಗಳಿಂದ ಬೆಂಗಳೂರು ಹಾಗೂ ಸುತ್ತಮುತ್ತಲಲ್ಲಿ ಭೂಮಿಯ ಬೆಲೆ ಏರುತ್ತಲೇ ಹೋಗಿದೆ. ಹೀಗಾಗಿ ಅದಕ್ಕೆ ತಕ್ಕಂತೆ ಇವರುಗಳ ಆಸ್ತಿಯೂ ಹೆಚ್ಚುತ್ತಿದೆ.

ಈಗ ನೂರಾರು ಕೋಟಿ ರೂ.ಗಳ ಆಸ್ತಿ ಹೊಂದಿರುವ ಮೂವರು ಅಭ್ಯರ್ಥಿಗಳ ಜಿದ್ದಾಜಿದ್ದಿ ಹೊಸಕೋಟೆಯಲ್ಲಿ ನಡೆಯುತ್ತಿದೆ. ಹಾಗಾಗಿಯೇ ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಆದರೆ, ಯಾವ ರೀತಿಯಲ್ಲಿಯೂ ಮೌಲ್ಯಗಳ ಸ್ಪರ್ಧೆ ಇಲ್ಲಿದೆ ಎಂದು ಹೇಳಲಾಗದು. ಮೂವರು ಅಭ್ಯರ್ಥಿಗಳು ಅಥವಾ ಅವರ ಕುಟುಂಬ ಒಂದಲ್ಲಾ ಒಂದು ರೀತಿಯಲ್ಲಿ ಪಕ್ಷಾಂತರ ಅಥವಾ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರೇ ಆಗಿದ್ದಾರೆ. ಆ ಪಕ್ಷಾಂತರಕ್ಕೆ ವೈಯಕ್ತಿಕ ಹಿತಾಸಕ್ತಿಯಲ್ಲದೇ ಬೇರಾವ ಸೈದ್ಧಾಂತಿಕ ಕಾರಣಗಳೂ ಇರಲಿಲ್ಲ.

ಹೆಚ್ಚು ಆಸ್ತಿ ಅಥವಾ ಹಣ ಇದ್ದವರು ಚುನಾವಣೆಗೆ ಸ್ಪರ್ಧಿಸಬಾರದು ಎಂಬ ಯಾವ ಕಾನೂನೂ ಇಲ್ಲ. ಆದರೆ, ಚುನಾವಣೆಗೆ ಮುಂಚೆ ಅಧಿಕೃತವಾಗಿ ಮತ್ತು ನೀತಿ ಸಂಹಿತೆ ಜಾರಿಗೆ ಬಂದ ಮೇಲೆ ಅನಧಿಕೃತವಾಗಿ ಇಂತಹವರು ಕೋಟಿಗಟ್ಟಲೆ ಹಣ ಚೆಲ್ಲಿ ಚುನಾವಣೆ ನಡೆಸುತ್ತಾರೆ. ಆಗ ಪ್ರಜಾಪ್ರಭುತ್ವವೂ ಬೀದಿಯಲ್ಲಿ ಚೆಲ್ಲಾಡಿ ಹೋಗುತ್ತದೆ. ಅಂತಹ ದುರಂತಕ್ಕೆ ಸಾಕ್ಷಿಯಾಗಿರುವುದು ಹೊಸಕೋಟೆ ಮಾತ್ರವಲ್ಲ. ಬೆಂಗಳೂರಿನ ಯಶವಂತಪುರ ಕ್ಷೇತ್ರ, ಬೆಳಗಾವಿ ಜಿಲ್ಲೆಯ ಗೋಕಾಕ್ ಕ್ಷೇತ್ರದ ಅಭ್ಯರ್ಥಿಗಳ ಆಸ್ತಿ ವಿವರಗಳು ಹೊರಬಿದ್ದಾಗ ಅದಕ್ಕೆ ಇನ್ನಷ್ಟು ಸಾಕ್ಷಿ ದೊರೆಯಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿವೇಶನ ಮಾಡಿ ಹಂಚುವುದು, ಮಾರುವುದನ್ನು ನೆಲದೊಡೆಯರ ಹಿಡಿತಕ್ಕೆ ಬಿಡದೆ ಆಳ್ವಕೆ ತಾನೇ ಹಿಡಿತದಲ್ಲಿಟ್ಟು ಕೊಳ್ಳುವಲ್ಲಿ ಸೋತ ಪರಿಣಾಮ!

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...