Homeದಲಿತ್ ಫೈಲ್ಸ್24 ದಲಿತರ ಸಾಮೂಹಿಕ ಹತ್ಯೆ ಪ್ರಕರಣ | 44 ವರ್ಷಗಳ ಬಳಿಕ ತೀರ್ಪು ಪ್ರಕಟ; ಮೂವರು...

24 ದಲಿತರ ಸಾಮೂಹಿಕ ಹತ್ಯೆ ಪ್ರಕರಣ | 44 ವರ್ಷಗಳ ಬಳಿಕ ತೀರ್ಪು ಪ್ರಕಟ; ಮೂವರು ದೋಷಿಗಳೆಂದ ಕೋರ್ಟ್

- Advertisement -
- Advertisement -

ಉತ್ತರ ಪ್ರದೇಶದ ಫಿರೋಝಾಬಾದ್ ಜಿಲ್ಲೆಯ ದಿಹುಲಿ ಗ್ರಾಮದಲ್ಲಿ ಏಳು ಮಹಿಳೆಯರು ಮತ್ತು ಇಬ್ಬರು ಅಪ್ರಾಪ್ತ ವಯಸ್ಕರು ಸೇರಿದಂತೆ 24 ದಲಿತರ ಹತ್ಯೆ ನಡೆದು ಸುಮಾರು 44 ವರ್ಷಗಳ ನಂತರ, ವಿಚಾರಣಾ ನ್ಯಾಯಾಲಯವು ಮೂವರು ಆರೋಪಿಗಳನ್ನು ದೋಷಿಗಳು ಎಂದು ಘೋಷಿಸಿದೆ.

ಕಳೆದ ವರ್ಷ ಅಲಹಾಬಾದ್ ಹೈಕೋರ್ಟ್‌ನ ಆದೇಶದ ಮೇರೆಗೆ ಮೈನ್‌ಪುರಿ ಜಿಲ್ಲೆಯ ನ್ಯಾಯಾಲಯಕ್ಕೆ ವರ್ಗಾಯಿಸಲಾದ ಈ ಪ್ರಕರಣದ ದೀರ್ಘ ವಿಚಾರಣೆಯ ಅವಧಿಯಲ್ಲಿ, 13 ಆರೋಪಿಗಳು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಇನ್ನೂ ತಲೆಮರೆಸಿಕೊಂಡಿದ್ದಾರೆ.

ಕ್ರಿಮಿನಲ್ ಗ್ಯಾಂಗ್ ಒಂದರ ವಿರುದ್ಧ ದಿಹುಲಿ ಗ್ರಾಮದ ಕೆಲ ಜನರು ಸಾಕ್ಷ್ಯ ನುಡಿದ ನಂತರ 24 ದಲಿತರ ಹತ್ಯಾಕಾಂಡ ನಡೆದಿತ್ತು. ಹತ್ಯೆ ಮಾಡಿದ ಕ್ರಿಮಿನಲ್ ಗ್ಯಾಂಗ್‌ನ ಸದಸ್ಯರು ಹೆಚ್ಚಾಗಿ ಪ್ರಬಲ ಜಾತಿಗೆ ಸೇರಿದವರಾಗಿದ್ದರು.

“ಸಾಮೂಹಿಕ ಹತ್ಯೆ ಪ್ರಕರಣದಲ್ಲಿ ಮೂವರು ವ್ಯಕ್ತಿಗಳನ್ನು ದೋಷಿಗಳು ಎಂದು ನ್ಯಾಯಾಲಯ ಮಂಗಳವಾರ (ಮಾ.11) ತೀರ್ಪು ನೀಡಿದೆ. ಮೂವರು ಅಪರಾಧಿಗಳ ಪೈಕಿ ಜೈಲಿನಲ್ಲಿರುವ ರಾಮ್ ಸೇವಕ್ ಎಂಬಾತ ಅಲ್ಲಿಂದಲೇ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಜಾಮೀನಿನ ಮೇಲೆ ಹೊರಗಿದ್ದ ಕಪ್ತಾನ್ ಅವರನ್ನು ತಪ್ಪಿತಸ್ಥರೆಂದು ಸಾಬೀತಾದ ನಂತರ ವಶಕ್ಕೆ ಪಡೆಯಲಾಗಿದೆ. ಮೂರನೇ ಅಪರಾಧಿ ರಾಂಪಾಲ್ ನ್ಯಾಯಾಲಯಕ್ಕೆ ಗೈರಾಗಿದ್ದರು. ವಿನಾಯಿತಿ ನೀಡುವಂತೆ ಕೋರಿದ್ದ ಅವರ ಮನವಿಯನ್ನು ತಿರಸ್ಕರಿಸಿದ್ದರೂ ನ್ಯಾಯಾಲಯಕ್ಕೆ ಬಂದಿಲ್ಲ. ಹಾಗಾಗಿ, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ” ಎಂದು ಸರ್ಕಾರಿ ವಕೀಲ (ಮೈನ್‌ಪುರಿ) ರೋಹಿತ್ ಶುಕ್ಲಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನ್ಯಾಯಾಲಯವು ಐಪಿಸಿ ಸೆಕ್ಷನ್ 302 (ಕೊಲೆ), 307 (ಕೊಲೆ ಯತ್ನ), 120 ಬಿ (ಕ್ರಿಮಿನಲ್ ಪಿತೂರಿ), 216 (ಕಸ್ಟಡಿಯಿಂದ ತಪ್ಪಿಸಿಕೊಂಡ ಅಥವಾ ಬಂಧನಕ್ಕೆ ಆದೇಶಿಸಲಾದ ಅಪರಾಧಿಗೆ ಆಶ್ರಯ ನೀಡುವುದು), 449 (ಮರಣಶಿಕ್ಷೆಗೆ ಅರ್ಹವಾದ ಅಪರಾಧವನ್ನು ಮಾಡಲು ಮನೆ-ಅತಿಕ್ರಮಣ) ಮತ್ತು 450 (ಜೀವಾವಧಿ ಶಿಕ್ಷೆಗೆ ಅರ್ಹವಾದ ಅಪರಾಧವನ್ನು ಮಾಡಲು ಮನೆ-ಅತಿಕ್ರಮಣ) ಸೇರಿದಂತೆ ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಮೂವರನ್ನು ತಪ್ಪಿತಸ್ಥರೆಂದು ಘೋಷಿಸಿದೆ.

ಶಿಕ್ಷೆಯ ಪ್ರಮಾಣವನ್ನು ಮಾರ್ಚ್ 18 ರಂದು ಪ್ರಕಟಿಸಲಿದೆ ಎಂದು ವಕೀಲ ಶುಕ್ಲಾ ಹೇಳಿದ್ದಾರೆ.

ಪ್ರಾಸಿಕ್ಯೂಷನ್ ಪ್ರಕಾರ, ಈ ಘಟನೆ ನವೆಂಬರ್ 18, 1981ರಂದು ನಡೆದಿದ್ದು, ರಾಧೇ-ಸಂತೋಷ್ ಎಂಬ ಕ್ರಿಮಿನಲ್ ಗ್ಯಾಂಗ್ ದಿಹುಲಿ ಗ್ರಾಮದ ಮೇಲೆ ದಾಳಿ ಮಾಡಿತ್ತು. ಅಲ್ಲಿನ ಮನೆಗಳಿಗೆ ನುಗ್ಗಿ ಜನರನ್ನು ಗುಂಡಿಕ್ಕಿ ಕೊಂದು, ಮನೆಗಳನ್ನು ಲೂಟಿ ಮಾಡಿತ್ತು. ಘಟನಾ ಸ್ಥಳಕ್ಕೆ ಸ್ಥಳೀಯ ಜಸ್ರಾನಾ ಪೊಲೀಸ್ ಠಾಣೆಯ ತಂಡ ತಲುಪುವ ಹೊತ್ತಿಗೆ, ದಾಳಿ ಮಾಡಿದವರು ಪರಾರಿಯಾಗಿದ್ದರು.

ಸಾಮೂಹಿಕ ಹತ್ಯೆಗೆ ಸುಮಾರು ಒಂದೂವರೆ ವರ್ಷಗಳ ಮೊದಲು, ರಾಧೇ-ಸಂತೋಷ್ ಗ್ಯಾಂಗ್ ಮತ್ತು ಪೊಲೀಸರ ನಡುವೆ ಎನ್‌ಕೌಂಟರ್ ನಡೆದಿತ್ತು. ಇದರ ಪರಿಣಾಮವಾಗಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿತ್ತು.

ಎನ್‌ಕೌಂಟರ್‌ಗೆ ಸಾಕ್ಷಿಯಾಗಿದ್ದ ನಾಲ್ವರು ದಿಹುಲಿ ಗ್ರಾಮದ ನಿವಾಸಿಗಳಾಗಿದ್ದರು. ಹಾಗಾಗಿ, ಗ್ರಾಮಸ್ಥರನ್ನು ಬೆದರಿಸುವ ಉದ್ದೇಶದಿಂದ ಗ್ಯಾಂಗ್‌ ಸಾಮೂಹಿಕ ಹತ್ಯೆಗಳನ್ನು ಮಾಡಿತ್ತು. ರಾಧೇ-ಸಂತೋಷ್ ಗ್ಯಾಂಗ್‌ನ ಹೆಚ್ಚಿನ ಸದಸ್ಯರು ಪ್ರಬಲ ಜಾತಿಗೆ ಸೇರಿದವರು ಎಂದು ಪ್ರಾಸಿಕ್ಯೂಷನ್ ಹೇಳಿದೆ.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಡಕಾಯಿತರ ತಂಡದ ಮುಖಂಡ ಸಂತೋಷ್‌ ಮತ್ತು ರಾಧೇ ಒಳಗೊಂಡು 17 ಜನರ ವಿರುದ್ಧ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ಹಂತದಲ್ಲಿ 17 ಆರೋಪಿಗಳಲ್ಲಿ ಸಂತೋಷ್ ಮತ್ತು ರಾಧೇ ಸೇರಿ 13 ಜನ ಮೃತಪಟ್ಟಿದ್ದಾರೆ. ಬದುಕುಳಿದಿರುವ ನಾಲ್ವರಲ್ಲಿ 40 ವರ್ಷಗಳ ಬಳಿಕವೂ ಒಬ್ಬ ನಾಪತ್ತೆಯಾಗಿದ್ದಾನೆ. ಉಳಿದ ಮೂವರು ವಿಚಾರಣೆ ಎದುರಿಸಿದ್ದರು.

ಈ ಘಟನೆ ನಡೆದ ನಂತರ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. ವಿರೋಧ ಪಕ್ಷದ ನಾಯಕರಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ಹತ್ಯಾಕಾಂಡ ಖಂಡಿಸಿ ದಿಹುಲಿಯಿಂದ ಫಿರೋಝಾಬಾದ್‌ನ ಸಾದುಪುರ್‌ವರೆಗೆ ಪಾದಯಾತ್ರೆ ಕೈಗೊಂಡಿದ್ದರು.

ದಿಹುಲಿ ಗ್ರಾಮವು 1981ರಲ್ಲಿ ಮೈನ್‌ಪುರಿ ಜಿಲ್ಲೆಯ ಭಾಗವಾಗಿತ್ತು. 1989ರಲ್ಲಿ ಫಿರೋಝಾಬಾದ್ ಜಿಲ್ಲೆಯನ್ನು ರಚಿಸಿದ ನಂತರ, ಈ ಗ್ರಾಮವು ಅದರ ವ್ಯಾಪ್ತಿಗೆ ಒಳಪಟ್ಟಿತು.

ದಿಹುಲಿ ಸಾಮೂಹಿಕ ಹತ್ಯೆ ಘಟನೆಯ ನಂತರ ಡಿಸೆಂಬರ್ 30, 1981 ರಂದು ಹತ್ತಿರದ ಸಾಧುಪುರ ಗ್ರಾಮದಲ್ಲಿ ದಲಿತರ ಮೇಲೆ ಮತ್ತೊಂದು ದಾಳಿ ನಡೆದಿತ್ತು. ಡಕಾಯಿತ ಅನಾರ್ ಸಿಂಗ್ ಯಾದವ್ ನೇತೃತ್ವದ ಗ್ಯಾಂಗ್‌ಗೆ ಸೇರಿದ ಪುರುಷರು ಪರಿಶಿಷ್ಟ ಜಾತಿಗೆ ಸೇರಿದ ಆರು ಮಹಿಳೆಯರು ಸೇರಿದಂತೆ ಹತ್ತು ಜನರನ್ನು ಹತ್ಯೆ ಮಾಡಿದ್ದರು.

ತಮಿಳುನಾಡು : ಪರೀಕ್ಷೆ ಬರೆಯಲು ಹೋಗುತ್ತಿದ್ದ ದಲಿತ ವಿದ್ಯಾರ್ಥಿಯ ಕೈ ಬೆರಳು ಕತ್ತರಿಸಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...