Homeದಲಿತ್ ಫೈಲ್ಸ್24 ದಲಿತರ ಸಾಮೂಹಿಕ ಹತ್ಯೆ ಪ್ರಕರಣ | 44 ವರ್ಷಗಳ ಬಳಿಕ ತೀರ್ಪು ಪ್ರಕಟ; ಮೂವರು...

24 ದಲಿತರ ಸಾಮೂಹಿಕ ಹತ್ಯೆ ಪ್ರಕರಣ | 44 ವರ್ಷಗಳ ಬಳಿಕ ತೀರ್ಪು ಪ್ರಕಟ; ಮೂವರು ದೋಷಿಗಳೆಂದ ಕೋರ್ಟ್

- Advertisement -
- Advertisement -

ಉತ್ತರ ಪ್ರದೇಶದ ಫಿರೋಝಾಬಾದ್ ಜಿಲ್ಲೆಯ ದಿಹುಲಿ ಗ್ರಾಮದಲ್ಲಿ ಏಳು ಮಹಿಳೆಯರು ಮತ್ತು ಇಬ್ಬರು ಅಪ್ರಾಪ್ತ ವಯಸ್ಕರು ಸೇರಿದಂತೆ 24 ದಲಿತರ ಹತ್ಯೆ ನಡೆದು ಸುಮಾರು 44 ವರ್ಷಗಳ ನಂತರ, ವಿಚಾರಣಾ ನ್ಯಾಯಾಲಯವು ಮೂವರು ಆರೋಪಿಗಳನ್ನು ದೋಷಿಗಳು ಎಂದು ಘೋಷಿಸಿದೆ.

ಕಳೆದ ವರ್ಷ ಅಲಹಾಬಾದ್ ಹೈಕೋರ್ಟ್‌ನ ಆದೇಶದ ಮೇರೆಗೆ ಮೈನ್‌ಪುರಿ ಜಿಲ್ಲೆಯ ನ್ಯಾಯಾಲಯಕ್ಕೆ ವರ್ಗಾಯಿಸಲಾದ ಈ ಪ್ರಕರಣದ ದೀರ್ಘ ವಿಚಾರಣೆಯ ಅವಧಿಯಲ್ಲಿ, 13 ಆರೋಪಿಗಳು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಇನ್ನೂ ತಲೆಮರೆಸಿಕೊಂಡಿದ್ದಾರೆ.

ಕ್ರಿಮಿನಲ್ ಗ್ಯಾಂಗ್ ಒಂದರ ವಿರುದ್ಧ ದಿಹುಲಿ ಗ್ರಾಮದ ಕೆಲ ಜನರು ಸಾಕ್ಷ್ಯ ನುಡಿದ ನಂತರ 24 ದಲಿತರ ಹತ್ಯಾಕಾಂಡ ನಡೆದಿತ್ತು. ಹತ್ಯೆ ಮಾಡಿದ ಕ್ರಿಮಿನಲ್ ಗ್ಯಾಂಗ್‌ನ ಸದಸ್ಯರು ಹೆಚ್ಚಾಗಿ ಪ್ರಬಲ ಜಾತಿಗೆ ಸೇರಿದವರಾಗಿದ್ದರು.

“ಸಾಮೂಹಿಕ ಹತ್ಯೆ ಪ್ರಕರಣದಲ್ಲಿ ಮೂವರು ವ್ಯಕ್ತಿಗಳನ್ನು ದೋಷಿಗಳು ಎಂದು ನ್ಯಾಯಾಲಯ ಮಂಗಳವಾರ (ಮಾ.11) ತೀರ್ಪು ನೀಡಿದೆ. ಮೂವರು ಅಪರಾಧಿಗಳ ಪೈಕಿ ಜೈಲಿನಲ್ಲಿರುವ ರಾಮ್ ಸೇವಕ್ ಎಂಬಾತ ಅಲ್ಲಿಂದಲೇ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಜಾಮೀನಿನ ಮೇಲೆ ಹೊರಗಿದ್ದ ಕಪ್ತಾನ್ ಅವರನ್ನು ತಪ್ಪಿತಸ್ಥರೆಂದು ಸಾಬೀತಾದ ನಂತರ ವಶಕ್ಕೆ ಪಡೆಯಲಾಗಿದೆ. ಮೂರನೇ ಅಪರಾಧಿ ರಾಂಪಾಲ್ ನ್ಯಾಯಾಲಯಕ್ಕೆ ಗೈರಾಗಿದ್ದರು. ವಿನಾಯಿತಿ ನೀಡುವಂತೆ ಕೋರಿದ್ದ ಅವರ ಮನವಿಯನ್ನು ತಿರಸ್ಕರಿಸಿದ್ದರೂ ನ್ಯಾಯಾಲಯಕ್ಕೆ ಬಂದಿಲ್ಲ. ಹಾಗಾಗಿ, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ” ಎಂದು ಸರ್ಕಾರಿ ವಕೀಲ (ಮೈನ್‌ಪುರಿ) ರೋಹಿತ್ ಶುಕ್ಲಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನ್ಯಾಯಾಲಯವು ಐಪಿಸಿ ಸೆಕ್ಷನ್ 302 (ಕೊಲೆ), 307 (ಕೊಲೆ ಯತ್ನ), 120 ಬಿ (ಕ್ರಿಮಿನಲ್ ಪಿತೂರಿ), 216 (ಕಸ್ಟಡಿಯಿಂದ ತಪ್ಪಿಸಿಕೊಂಡ ಅಥವಾ ಬಂಧನಕ್ಕೆ ಆದೇಶಿಸಲಾದ ಅಪರಾಧಿಗೆ ಆಶ್ರಯ ನೀಡುವುದು), 449 (ಮರಣಶಿಕ್ಷೆಗೆ ಅರ್ಹವಾದ ಅಪರಾಧವನ್ನು ಮಾಡಲು ಮನೆ-ಅತಿಕ್ರಮಣ) ಮತ್ತು 450 (ಜೀವಾವಧಿ ಶಿಕ್ಷೆಗೆ ಅರ್ಹವಾದ ಅಪರಾಧವನ್ನು ಮಾಡಲು ಮನೆ-ಅತಿಕ್ರಮಣ) ಸೇರಿದಂತೆ ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಮೂವರನ್ನು ತಪ್ಪಿತಸ್ಥರೆಂದು ಘೋಷಿಸಿದೆ.

ಶಿಕ್ಷೆಯ ಪ್ರಮಾಣವನ್ನು ಮಾರ್ಚ್ 18 ರಂದು ಪ್ರಕಟಿಸಲಿದೆ ಎಂದು ವಕೀಲ ಶುಕ್ಲಾ ಹೇಳಿದ್ದಾರೆ.

ಪ್ರಾಸಿಕ್ಯೂಷನ್ ಪ್ರಕಾರ, ಈ ಘಟನೆ ನವೆಂಬರ್ 18, 1981ರಂದು ನಡೆದಿದ್ದು, ರಾಧೇ-ಸಂತೋಷ್ ಎಂಬ ಕ್ರಿಮಿನಲ್ ಗ್ಯಾಂಗ್ ದಿಹುಲಿ ಗ್ರಾಮದ ಮೇಲೆ ದಾಳಿ ಮಾಡಿತ್ತು. ಅಲ್ಲಿನ ಮನೆಗಳಿಗೆ ನುಗ್ಗಿ ಜನರನ್ನು ಗುಂಡಿಕ್ಕಿ ಕೊಂದು, ಮನೆಗಳನ್ನು ಲೂಟಿ ಮಾಡಿತ್ತು. ಘಟನಾ ಸ್ಥಳಕ್ಕೆ ಸ್ಥಳೀಯ ಜಸ್ರಾನಾ ಪೊಲೀಸ್ ಠಾಣೆಯ ತಂಡ ತಲುಪುವ ಹೊತ್ತಿಗೆ, ದಾಳಿ ಮಾಡಿದವರು ಪರಾರಿಯಾಗಿದ್ದರು.

ಸಾಮೂಹಿಕ ಹತ್ಯೆಗೆ ಸುಮಾರು ಒಂದೂವರೆ ವರ್ಷಗಳ ಮೊದಲು, ರಾಧೇ-ಸಂತೋಷ್ ಗ್ಯಾಂಗ್ ಮತ್ತು ಪೊಲೀಸರ ನಡುವೆ ಎನ್‌ಕೌಂಟರ್ ನಡೆದಿತ್ತು. ಇದರ ಪರಿಣಾಮವಾಗಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿತ್ತು.

ಎನ್‌ಕೌಂಟರ್‌ಗೆ ಸಾಕ್ಷಿಯಾಗಿದ್ದ ನಾಲ್ವರು ದಿಹುಲಿ ಗ್ರಾಮದ ನಿವಾಸಿಗಳಾಗಿದ್ದರು. ಹಾಗಾಗಿ, ಗ್ರಾಮಸ್ಥರನ್ನು ಬೆದರಿಸುವ ಉದ್ದೇಶದಿಂದ ಗ್ಯಾಂಗ್‌ ಸಾಮೂಹಿಕ ಹತ್ಯೆಗಳನ್ನು ಮಾಡಿತ್ತು. ರಾಧೇ-ಸಂತೋಷ್ ಗ್ಯಾಂಗ್‌ನ ಹೆಚ್ಚಿನ ಸದಸ್ಯರು ಪ್ರಬಲ ಜಾತಿಗೆ ಸೇರಿದವರು ಎಂದು ಪ್ರಾಸಿಕ್ಯೂಷನ್ ಹೇಳಿದೆ.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಡಕಾಯಿತರ ತಂಡದ ಮುಖಂಡ ಸಂತೋಷ್‌ ಮತ್ತು ರಾಧೇ ಒಳಗೊಂಡು 17 ಜನರ ವಿರುದ್ಧ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ಹಂತದಲ್ಲಿ 17 ಆರೋಪಿಗಳಲ್ಲಿ ಸಂತೋಷ್ ಮತ್ತು ರಾಧೇ ಸೇರಿ 13 ಜನ ಮೃತಪಟ್ಟಿದ್ದಾರೆ. ಬದುಕುಳಿದಿರುವ ನಾಲ್ವರಲ್ಲಿ 40 ವರ್ಷಗಳ ಬಳಿಕವೂ ಒಬ್ಬ ನಾಪತ್ತೆಯಾಗಿದ್ದಾನೆ. ಉಳಿದ ಮೂವರು ವಿಚಾರಣೆ ಎದುರಿಸಿದ್ದರು.

ಈ ಘಟನೆ ನಡೆದ ನಂತರ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. ವಿರೋಧ ಪಕ್ಷದ ನಾಯಕರಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ಹತ್ಯಾಕಾಂಡ ಖಂಡಿಸಿ ದಿಹುಲಿಯಿಂದ ಫಿರೋಝಾಬಾದ್‌ನ ಸಾದುಪುರ್‌ವರೆಗೆ ಪಾದಯಾತ್ರೆ ಕೈಗೊಂಡಿದ್ದರು.

ದಿಹುಲಿ ಗ್ರಾಮವು 1981ರಲ್ಲಿ ಮೈನ್‌ಪುರಿ ಜಿಲ್ಲೆಯ ಭಾಗವಾಗಿತ್ತು. 1989ರಲ್ಲಿ ಫಿರೋಝಾಬಾದ್ ಜಿಲ್ಲೆಯನ್ನು ರಚಿಸಿದ ನಂತರ, ಈ ಗ್ರಾಮವು ಅದರ ವ್ಯಾಪ್ತಿಗೆ ಒಳಪಟ್ಟಿತು.

ದಿಹುಲಿ ಸಾಮೂಹಿಕ ಹತ್ಯೆ ಘಟನೆಯ ನಂತರ ಡಿಸೆಂಬರ್ 30, 1981 ರಂದು ಹತ್ತಿರದ ಸಾಧುಪುರ ಗ್ರಾಮದಲ್ಲಿ ದಲಿತರ ಮೇಲೆ ಮತ್ತೊಂದು ದಾಳಿ ನಡೆದಿತ್ತು. ಡಕಾಯಿತ ಅನಾರ್ ಸಿಂಗ್ ಯಾದವ್ ನೇತೃತ್ವದ ಗ್ಯಾಂಗ್‌ಗೆ ಸೇರಿದ ಪುರುಷರು ಪರಿಶಿಷ್ಟ ಜಾತಿಗೆ ಸೇರಿದ ಆರು ಮಹಿಳೆಯರು ಸೇರಿದಂತೆ ಹತ್ತು ಜನರನ್ನು ಹತ್ಯೆ ಮಾಡಿದ್ದರು.

ತಮಿಳುನಾಡು : ಪರೀಕ್ಷೆ ಬರೆಯಲು ಹೋಗುತ್ತಿದ್ದ ದಲಿತ ವಿದ್ಯಾರ್ಥಿಯ ಕೈ ಬೆರಳು ಕತ್ತರಿಸಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...