Homeನ್ಯಾಯ ಪಥಮೂರು ಡೇಟಾ ಮತ್ತು ಒಂದು ಖರೇ ಜನ್ಮಸ್ಥಾನ : ಬೈ ಡೇಟಾಮ್ಯಾಟಿಕ್ಸ್

ಮೂರು ಡೇಟಾ ಮತ್ತು ಒಂದು ಖರೇ ಜನ್ಮಸ್ಥಾನ : ಬೈ ಡೇಟಾಮ್ಯಾಟಿಕ್ಸ್

- Advertisement -
- Advertisement -

‘ಒಂದು ಸಣ್ಣ ಪಕ್ಷಿಯ ಸಾವು ನಿನ್ನನ್ನು ಕವಿಯಾಗಿಸಿದೆ. ನಿನ್ನ ಕಾವ್ಯ ಕಾಲವನ್ನು ಸೋಲಿಸಲಿದೆ’ ಅಂತ ಬ್ರಹ್ಮ ವಾಲ್ಮೀಕಿಗೆ ಹೇಳಿದ. ಆ ಕಾವ್ಯವೇ ರಾಮಾಯಣ. ಅದರಲ್ಲಿ ರಾಜನ, ರಾಜಕುಮಾರನ, ಅವನ ಭಕ್ತನ, ರಾಜಕುಮಾರಿಯ, ಪ್ರತಿನಾಯಕನ, ಖಳನ, ಅವರೆಲ್ಲರ ಹಿಂಬಾಲಕರ ಕತಿ ಅದ.

ಆ ಕತಿ ಅತ್ಲಾ ಕಡೆ ಇರಲಿ. ಇತ್ತೀಚಿನ ಸರ್ವೋಚ್ಚ ನ್ಯಾಯಾಲಯದ ಒಂದು ತೀರ್ಪಿನೊಳಗ ಉಪಯೋಗಿಸಿದ ಕೆಲವು ಪದಗಳ ಈಗ ನೋಡೋಣ.

ಪೊಸೆಷನ್ – ಅನುಭೋಗ, ಸ್ವಾಧೀನ, ಹಿಡುವಳಿ
ಹಿಡುವಳಿ ಅಂದರ ಮಾಲಿಕತ್ವ ಅಲ್ಲ. ಅದು ಸದ್ಯದ ಮಟ್ಟಿಗೆ ಆಸ್ತಿ ಯಾರ ಕೈಯಾಗ ಅದ ಅನ್ನೋ ಪ್ರಶ್ನೆಗೆ ಉತ್ತರ. ಇದು ಸಂಪೂರ್ಣ ಮಾಲಿಕಿ ಹಕ್ಕು ಕೊಡೋದಿಲ್ಲ. ಇದರ ಹಕ್ಕುಗಳಿಗೆ ಮಿತಿ ಅದ. ನೀವು ಸ್ವಾಧೀನ ಪಡೆಯುವಾಗ ಇದ್ದಂಗ ಅದು ಇರಬೇಕು. ಅದನ್ನು ನೀವು ಮಾರಲಿಕ್ಕೆ ಬರೋದಿಲ್ಲ, ಲೀಸು, ಬಾಡಿಗಿ ಕೊಡಲಿಕ್ಕೆ ಬರೋದಿಲ್ಲ. ಅದರ ಮೂಲ ಸ್ವರೂಪ ಬದಲಾಯಿಸಲಿಕ್ಕೆ ಬರೋದಿಲ್ಲ, ಇತ್ಯಾದಿ. ಸ್ವಾಧೀನ ಇದ್ದವರು ಬಿಟ್ಟು ಬೇರೆಯವರು ಅದನ್ನು ಕೆಡವಲಿಕ್ಕೆ, ನಾಶ ಮಾಡಲಿಕ್ಕೆ ಬರೋದಿಲ್ಲ.

ಪೊಸೆಷನ್ ಈಸ್ ನೈನ್ ಪಾಯಿಂಟ್ಸ್ ಇನ್ ಲಾ’ ಅಂತ ಒಂದು ಮಾತು ಅದ. ಅಂದರ ಆಸ್ತಿ ಯಾರಿಗೆ ಹೋಗಬೇಕು ಅನ್ನೋ ಮಾತು ಬಂದಾಗ ಸ್ವಾಧೀನ ಇದ್ದವರ ಕಡೆ ಹತ್ತರಲ್ಲಿ ಒಂಬತ್ತು ಅಂಶ ಇದ್ದಂಗ ಅಂತ ಅದರ ಅರ್ಥ.

ಆದರ ನಮ್ಮ ಗೌರವಾನ್ವಿತ ನ್ಯಾಯಾಧೀಶರು ಈ ಸಮುದಾಯ ಈ ಕಟ್ಟಡವನ್ನು ಐನೂರು ವರ್ಷದಿಂದ ಸ್ವಾಧೀನ ಪಡೆದಿದೆ ಅಂತ ಹೇಳಿ, ಅದನ್ನು ಕೆಡವಿದ್ದು ತಪ್ಪು ಅಂತ ಒಂದು ಕಡೆ ಹೇಳತಾರ. ಇನ್ನೊಂದು ಕಡೆ ಕೆಡವಿದರಿಗೆ ಈ ಜಾಗದ ಮಾಲಿಕತ್ವ ಹೋಗಬೇಕು ಅಂತ ಹೇಳತಾರ. ಅದು ಅವರಿಗೆ ಆಭಾಸ ಅನ್ನಿಸಿಲ್ಲ.

ಓನರಷಿಪ್ – ಒಡೆತನ, ಅಥವಾ ಮಾಲೀಕತ್ವ
ಇದು ಮಾಲೀಕ ಹಾಗೂ ವಸ್ತು ವಿಷಯದ ನಡುವಿನ ಸಂಬಂಧ. ಇದರ ಪ್ರಕಾರ ಮಾಲೀಕನಿಗೆ ಅದರ ಮೇಲೆ ಸಂಪೂರ್ಣ ಹಕ್ಕು ಇರತಾವ. ಅವನು ಅದನ್ನ ಮಾರಬಹುದು, ಲೀಸಿಗೆ ಕೊಡಬಹುದು, ಅದನ್ನು ಸುಟ್ಟು ಹಾಕಿಯೋ, ನೀರಿನಲ್ಲಿ ಹಾಕಿಯೋ ನಾಶ ಮಾಡಬಹುದು. ಅದನ್ನ ಕೆಡವಿ ಕಟ್ಟಬಹುದು. ಕೆಡವಿ ಕಟ್ಟಲಾರದೇ ಇರಬಹುದು. ಅದರ ಸ್ವರೂಪ ಬದಲಿಸಬಹುದು. ಅದನ್ನು ಇಲ್ಲಾ ಅನ್ನಿಸಿ ಬಿಡಬಹುದು. ಅವನ ಹಕ್ಕುಗಳಿಗೆ ಮಿತಿ ಇಲ್ಲ. ಅಯೋಧ್ಯಾ ಕೇಸಿನಲ್ಲಿ ನ್ಯಾಯಾಲಯದ ಮುಂದೆ ಇದ್ದದ್ದು ಮಾಲೀಕತ್ವದ ಪ್ರಶ್ನೆ ಅಷ್ಟ. ಅದರ ಮಾಲೀಕರು ಯಾರು ಅನ್ನೋದು ಗೊತ್ತಾದರ ಹೇಳಬೇಕಿತ್ತು. ಇಲ್ಲಾಂದರ ಇಲ್ಲಾ ಅನ್ನಬೇಕಿತ್ತು. ಅದನ್ನು ಬಿಟ್ಟು

ಅಲ್ಲಿ ಗುಡಿ ಕಟ್ಟಬಹುದು, ಆ ಮಸೀದಿ ಕೆಡವಿದ್ದು ತಪ್ಪು. ಅದು ನಮ್ಮ ಜಾಗ ಅಂತ ಕೇಳತಾ ಇರೋ ನಮಾಜಿಗರಿಗೆ ಅದರ ಡಬಲ್ ಜಾಗ ಕೊಟ್ಟು ಬಿಡಿ ಅಂತ ಹೇಳುವ ಹರಕತ್ತು ಇದ್ದಿದ್ದಿಲ್ಲ. ಇದು ತನ್ನಳವಿಗೆ ಮೀರಿದ ತೀರ್ಪು ಅಂತ ಅದನ್ನು ಕೊಟ್ಟವರಿಗೆ ಅನ್ನಿಸಿಲ್ಲ.

ಬ್ಯಾಲೆನ್ಸ ಆಫ್ ಪ್ರಾಬೆಬಿಲಿಟಿಸ್ – ಸಾಧ್ಯಾಸಾಧ್ಯತೆಗಳ ಸಮತೋಲನ
ಇದು ಅತ್ಯಂತ ಮಜಾಶೀರ ಇರೋ ವಿಷಯ. ಅನೇಕ ವರ್ಷದ ಹಿಂದ ಆಸ್ಟೇಲಿಯಾದೊಳಗ ಬ್ರೂಕ್ಸ ಅನ್ನೋ ಹೆಣಮಗಳ ಗಂಡ ರಸ್ತೆ ಅಪಘಾತದೊಳಗ ತೀರಿಕೊಂಡ. ಅವನು ಆ ಗಾಡಿಯ ಚಾಲಕ. ಅವನಲ್ಲದೇ ಆ ಗಾಡಿಗೆ ಇನ್ನೊಬ್ಬ ಚಾಲಕ ಇದ್ದ. ಅವರಿಬ್ಬರೂ ಸತ್ತು ಹೋದರು. ಅಲ್ಲಿ ಸಾಕ್ಷಿ ಇರಲಿಲ್ಲ. ರಸ್ತೆ ಸೀದಾ ಇತ್ತು. ಅಲ್ಲಿ ಇನ್ನೊಂದು ಗಾಡಿ ಇರಲಿಲ್ಲ. ಹೀಗಿದ್ದಾಗ ತಪ್ಪು ಯಾವ ಚಾಲಕಂದು ಅಂತ ತಿಳಕೊಳ್ಳೋದು ಅಲ್ಲಿನ ನ್ಯಾಯಾಲಯಕ್ಕ ಕಷ್ಟ ಆತು. ಕೊನೆಗೆ ಜಜ್ಜುಗಳೆಲ್ಲಾ ಸೇರಿ ಒಬ್ಬ ಗಣಿತ ತಜ್ಞನ ಕಡೆ ಹೋದರು. ಅವನು ಸಾಧ್ಯಾಸಾಧ್ಯತೆಗಳ ಸಮತೋಲನ ಅನ್ನೋ ಸಂಕಲನ ಬಳಸಿ ಅವರಿಗೆ ವೆನ್ ಡಯಾಗ್ರಾಮು ಹಾಕಿ ತೋರಿಸಿದ.

ಅದರ ಪ್ರಕಾರ ಸಾಕ್ಷಿಗಳು ಕಮ್ಮಿ ಇದ್ದಾಗ, ಲಭ್ಯ ಸಾಕ್ಷಿಗಳಿಂದ ಯಾವುದೇ ವಿಷಯವನ್ನು ನಿಸ್ಸಂದೇಹವಾಗಿ ಪ್ರಮಾಣಿಸಿ ತೋರಿಸಿಲಿಕ್ಕೆ ಸಾಧ್ಯವಾಗದೇ ಇದ್ದಾಗ, ಇದು ಹೀಗಾಗುವ ಸಾಧ್ಯತೆ ಹೆಚ್ಚು, ಹಾಗಾಗುವ ಸಾಧ್ಯತೆ ಕಮ್ಮಿ ಅಂತ ನ್ಯಾಯಾಧೀಶರಿಗೆ ಅನ್ನಿಸಬಹುದು. ಹೀಗೆ ಅವರಿಗೆ ಅನ್ನಿಸುವುದ ಆಧಾರದ ಮೇಲೆ ಅವರು ತೀರ್ಪು ಕೊಡಬಹುದು. ಈಗಾಗಿರೋದು ಹಿಂಗನ. ಈ ತೀರ್ಪು ಸಮಾಜದಲ್ಲಿ ಸಮತೋಲನ ತಂದೀತು ಅಂತ ಭಾಳ ಮಂದಿಗೆ ಅನ್ನಿಸಿದ್ದಕ್ಕ ಎಲ್ಲಾರೂ ಸುಮ್ಮನಿದ್ದಾರ. ಆ ಸಮತೋಲನ ಶಾಂತಿ ಸುವ್ಯವಸ್ಥೆಯ ಸಮತೋಲನವೋ ಅಥವಾ ಸತ್ಯಾಸತ್ಯತೆಯ ಸಮತೋಲನವೋ ಅನ್ನೋ ಪ್ರಶ್ನೆಗೆ ಯಾರ ಹತ್ತರಾನೂ ಉತ್ತರ ಇದ್ದಂಗಿಲ್ಲ.

ಹಿಂದೊಮ್ಮೆ ಸಾಯಿಬಾಬಾ ಅವರ ಭೇಟಿಗೆ ಲಾಲಕೃಷ್ಣ ಅದವಾನಿ ಹಾಗೂ ಕೆಲವು ಇತರ ಮುಖಂಡರು ಪುಟಪರ್ತಿಗೆ ಹೋಗಿದ್ದರಂತ. ಆಗ ಅವರು ಇವರನ್ನ ಕೇಳಿದರಂತೆ. ರಾಮನ ಜನ್ಮಸ್ಥಾನ ಯಾವುದು? ಅಲ್ಲಿದ್ದ ದೊಡ್ಡ ದೊಡ್ಡ ನಾಯಕರೆಲ್ಲಾ ಅಯೋಧ್ಯೆ, ಕೌಸಲ, ರಾಮಜನ್ಮಭೂಮಿ ಅಂತೆಲ್ಲಾ ಹೇಳಿದರಂತ. ಯಾವಾಗಲೂ ಹಸನ್ಮುಖಿಯಾಗಿದ್ದ ಸಾಯಿಬಾಬಾ ಅವರು ಅದೆಲ್ಲಾ ಅಲ್ಲಾ. ಅವನು ಹುಟ್ಟಿದ್ದು ಅವನ ತಾಯಿಯ ಗರ್ಭದಿಂದ ಅಲ್ಲವೇ. ಹಂಗಾದರೆ ಅದೇ ಅವನ ಜನ್ಮಸ್ಥಳ ಅಂತ ಹೇಳಿ ನಕ್ಕರಂತೆ. ಹೌದು ಮಹಾಸ್ವಾಮಿ ಅಂತ ಹೇಳಿ ಇವರೆಲ್ಲಾ ನಕ್ಕು ಸುಮ್ಮನಾದರಂತೆ.

ದೊಡ್ಡವರ ಮಾತುಗಳನ್ನು ಕೇಳದೇ ಇದ್ದದ್ದಕ್ಕ ನಾವು ಇವತ್ತು ಈ ದಿನ ಕಾಣುತ್ತಿದ್ದೇವೆ ಅಂತ ಅನಸತದ.

ಹೆಚ್ಚಿನ ಮಾಹಿತಿಗೆ https://www.sci.gov.in/pdf/JUD_2.pdf

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...