Homeನ್ಯಾಯ ಪಥಮೂರು ಡೇಟಾ ಮತ್ತು ಒಂದು ಖರೇ ಜನ್ಮಸ್ಥಾನ : ಬೈ ಡೇಟಾಮ್ಯಾಟಿಕ್ಸ್

ಮೂರು ಡೇಟಾ ಮತ್ತು ಒಂದು ಖರೇ ಜನ್ಮಸ್ಥಾನ : ಬೈ ಡೇಟಾಮ್ಯಾಟಿಕ್ಸ್

- Advertisement -
- Advertisement -

‘ಒಂದು ಸಣ್ಣ ಪಕ್ಷಿಯ ಸಾವು ನಿನ್ನನ್ನು ಕವಿಯಾಗಿಸಿದೆ. ನಿನ್ನ ಕಾವ್ಯ ಕಾಲವನ್ನು ಸೋಲಿಸಲಿದೆ’ ಅಂತ ಬ್ರಹ್ಮ ವಾಲ್ಮೀಕಿಗೆ ಹೇಳಿದ. ಆ ಕಾವ್ಯವೇ ರಾಮಾಯಣ. ಅದರಲ್ಲಿ ರಾಜನ, ರಾಜಕುಮಾರನ, ಅವನ ಭಕ್ತನ, ರಾಜಕುಮಾರಿಯ, ಪ್ರತಿನಾಯಕನ, ಖಳನ, ಅವರೆಲ್ಲರ ಹಿಂಬಾಲಕರ ಕತಿ ಅದ.

ಆ ಕತಿ ಅತ್ಲಾ ಕಡೆ ಇರಲಿ. ಇತ್ತೀಚಿನ ಸರ್ವೋಚ್ಚ ನ್ಯಾಯಾಲಯದ ಒಂದು ತೀರ್ಪಿನೊಳಗ ಉಪಯೋಗಿಸಿದ ಕೆಲವು ಪದಗಳ ಈಗ ನೋಡೋಣ.

ಪೊಸೆಷನ್ – ಅನುಭೋಗ, ಸ್ವಾಧೀನ, ಹಿಡುವಳಿ
ಹಿಡುವಳಿ ಅಂದರ ಮಾಲಿಕತ್ವ ಅಲ್ಲ. ಅದು ಸದ್ಯದ ಮಟ್ಟಿಗೆ ಆಸ್ತಿ ಯಾರ ಕೈಯಾಗ ಅದ ಅನ್ನೋ ಪ್ರಶ್ನೆಗೆ ಉತ್ತರ. ಇದು ಸಂಪೂರ್ಣ ಮಾಲಿಕಿ ಹಕ್ಕು ಕೊಡೋದಿಲ್ಲ. ಇದರ ಹಕ್ಕುಗಳಿಗೆ ಮಿತಿ ಅದ. ನೀವು ಸ್ವಾಧೀನ ಪಡೆಯುವಾಗ ಇದ್ದಂಗ ಅದು ಇರಬೇಕು. ಅದನ್ನು ನೀವು ಮಾರಲಿಕ್ಕೆ ಬರೋದಿಲ್ಲ, ಲೀಸು, ಬಾಡಿಗಿ ಕೊಡಲಿಕ್ಕೆ ಬರೋದಿಲ್ಲ. ಅದರ ಮೂಲ ಸ್ವರೂಪ ಬದಲಾಯಿಸಲಿಕ್ಕೆ ಬರೋದಿಲ್ಲ, ಇತ್ಯಾದಿ. ಸ್ವಾಧೀನ ಇದ್ದವರು ಬಿಟ್ಟು ಬೇರೆಯವರು ಅದನ್ನು ಕೆಡವಲಿಕ್ಕೆ, ನಾಶ ಮಾಡಲಿಕ್ಕೆ ಬರೋದಿಲ್ಲ.

ಪೊಸೆಷನ್ ಈಸ್ ನೈನ್ ಪಾಯಿಂಟ್ಸ್ ಇನ್ ಲಾ’ ಅಂತ ಒಂದು ಮಾತು ಅದ. ಅಂದರ ಆಸ್ತಿ ಯಾರಿಗೆ ಹೋಗಬೇಕು ಅನ್ನೋ ಮಾತು ಬಂದಾಗ ಸ್ವಾಧೀನ ಇದ್ದವರ ಕಡೆ ಹತ್ತರಲ್ಲಿ ಒಂಬತ್ತು ಅಂಶ ಇದ್ದಂಗ ಅಂತ ಅದರ ಅರ್ಥ.

ಆದರ ನಮ್ಮ ಗೌರವಾನ್ವಿತ ನ್ಯಾಯಾಧೀಶರು ಈ ಸಮುದಾಯ ಈ ಕಟ್ಟಡವನ್ನು ಐನೂರು ವರ್ಷದಿಂದ ಸ್ವಾಧೀನ ಪಡೆದಿದೆ ಅಂತ ಹೇಳಿ, ಅದನ್ನು ಕೆಡವಿದ್ದು ತಪ್ಪು ಅಂತ ಒಂದು ಕಡೆ ಹೇಳತಾರ. ಇನ್ನೊಂದು ಕಡೆ ಕೆಡವಿದರಿಗೆ ಈ ಜಾಗದ ಮಾಲಿಕತ್ವ ಹೋಗಬೇಕು ಅಂತ ಹೇಳತಾರ. ಅದು ಅವರಿಗೆ ಆಭಾಸ ಅನ್ನಿಸಿಲ್ಲ.

ಓನರಷಿಪ್ – ಒಡೆತನ, ಅಥವಾ ಮಾಲೀಕತ್ವ
ಇದು ಮಾಲೀಕ ಹಾಗೂ ವಸ್ತು ವಿಷಯದ ನಡುವಿನ ಸಂಬಂಧ. ಇದರ ಪ್ರಕಾರ ಮಾಲೀಕನಿಗೆ ಅದರ ಮೇಲೆ ಸಂಪೂರ್ಣ ಹಕ್ಕು ಇರತಾವ. ಅವನು ಅದನ್ನ ಮಾರಬಹುದು, ಲೀಸಿಗೆ ಕೊಡಬಹುದು, ಅದನ್ನು ಸುಟ್ಟು ಹಾಕಿಯೋ, ನೀರಿನಲ್ಲಿ ಹಾಕಿಯೋ ನಾಶ ಮಾಡಬಹುದು. ಅದನ್ನ ಕೆಡವಿ ಕಟ್ಟಬಹುದು. ಕೆಡವಿ ಕಟ್ಟಲಾರದೇ ಇರಬಹುದು. ಅದರ ಸ್ವರೂಪ ಬದಲಿಸಬಹುದು. ಅದನ್ನು ಇಲ್ಲಾ ಅನ್ನಿಸಿ ಬಿಡಬಹುದು. ಅವನ ಹಕ್ಕುಗಳಿಗೆ ಮಿತಿ ಇಲ್ಲ. ಅಯೋಧ್ಯಾ ಕೇಸಿನಲ್ಲಿ ನ್ಯಾಯಾಲಯದ ಮುಂದೆ ಇದ್ದದ್ದು ಮಾಲೀಕತ್ವದ ಪ್ರಶ್ನೆ ಅಷ್ಟ. ಅದರ ಮಾಲೀಕರು ಯಾರು ಅನ್ನೋದು ಗೊತ್ತಾದರ ಹೇಳಬೇಕಿತ್ತು. ಇಲ್ಲಾಂದರ ಇಲ್ಲಾ ಅನ್ನಬೇಕಿತ್ತು. ಅದನ್ನು ಬಿಟ್ಟು

ಅಲ್ಲಿ ಗುಡಿ ಕಟ್ಟಬಹುದು, ಆ ಮಸೀದಿ ಕೆಡವಿದ್ದು ತಪ್ಪು. ಅದು ನಮ್ಮ ಜಾಗ ಅಂತ ಕೇಳತಾ ಇರೋ ನಮಾಜಿಗರಿಗೆ ಅದರ ಡಬಲ್ ಜಾಗ ಕೊಟ್ಟು ಬಿಡಿ ಅಂತ ಹೇಳುವ ಹರಕತ್ತು ಇದ್ದಿದ್ದಿಲ್ಲ. ಇದು ತನ್ನಳವಿಗೆ ಮೀರಿದ ತೀರ್ಪು ಅಂತ ಅದನ್ನು ಕೊಟ್ಟವರಿಗೆ ಅನ್ನಿಸಿಲ್ಲ.

ಬ್ಯಾಲೆನ್ಸ ಆಫ್ ಪ್ರಾಬೆಬಿಲಿಟಿಸ್ – ಸಾಧ್ಯಾಸಾಧ್ಯತೆಗಳ ಸಮತೋಲನ
ಇದು ಅತ್ಯಂತ ಮಜಾಶೀರ ಇರೋ ವಿಷಯ. ಅನೇಕ ವರ್ಷದ ಹಿಂದ ಆಸ್ಟೇಲಿಯಾದೊಳಗ ಬ್ರೂಕ್ಸ ಅನ್ನೋ ಹೆಣಮಗಳ ಗಂಡ ರಸ್ತೆ ಅಪಘಾತದೊಳಗ ತೀರಿಕೊಂಡ. ಅವನು ಆ ಗಾಡಿಯ ಚಾಲಕ. ಅವನಲ್ಲದೇ ಆ ಗಾಡಿಗೆ ಇನ್ನೊಬ್ಬ ಚಾಲಕ ಇದ್ದ. ಅವರಿಬ್ಬರೂ ಸತ್ತು ಹೋದರು. ಅಲ್ಲಿ ಸಾಕ್ಷಿ ಇರಲಿಲ್ಲ. ರಸ್ತೆ ಸೀದಾ ಇತ್ತು. ಅಲ್ಲಿ ಇನ್ನೊಂದು ಗಾಡಿ ಇರಲಿಲ್ಲ. ಹೀಗಿದ್ದಾಗ ತಪ್ಪು ಯಾವ ಚಾಲಕಂದು ಅಂತ ತಿಳಕೊಳ್ಳೋದು ಅಲ್ಲಿನ ನ್ಯಾಯಾಲಯಕ್ಕ ಕಷ್ಟ ಆತು. ಕೊನೆಗೆ ಜಜ್ಜುಗಳೆಲ್ಲಾ ಸೇರಿ ಒಬ್ಬ ಗಣಿತ ತಜ್ಞನ ಕಡೆ ಹೋದರು. ಅವನು ಸಾಧ್ಯಾಸಾಧ್ಯತೆಗಳ ಸಮತೋಲನ ಅನ್ನೋ ಸಂಕಲನ ಬಳಸಿ ಅವರಿಗೆ ವೆನ್ ಡಯಾಗ್ರಾಮು ಹಾಕಿ ತೋರಿಸಿದ.

ಅದರ ಪ್ರಕಾರ ಸಾಕ್ಷಿಗಳು ಕಮ್ಮಿ ಇದ್ದಾಗ, ಲಭ್ಯ ಸಾಕ್ಷಿಗಳಿಂದ ಯಾವುದೇ ವಿಷಯವನ್ನು ನಿಸ್ಸಂದೇಹವಾಗಿ ಪ್ರಮಾಣಿಸಿ ತೋರಿಸಿಲಿಕ್ಕೆ ಸಾಧ್ಯವಾಗದೇ ಇದ್ದಾಗ, ಇದು ಹೀಗಾಗುವ ಸಾಧ್ಯತೆ ಹೆಚ್ಚು, ಹಾಗಾಗುವ ಸಾಧ್ಯತೆ ಕಮ್ಮಿ ಅಂತ ನ್ಯಾಯಾಧೀಶರಿಗೆ ಅನ್ನಿಸಬಹುದು. ಹೀಗೆ ಅವರಿಗೆ ಅನ್ನಿಸುವುದ ಆಧಾರದ ಮೇಲೆ ಅವರು ತೀರ್ಪು ಕೊಡಬಹುದು. ಈಗಾಗಿರೋದು ಹಿಂಗನ. ಈ ತೀರ್ಪು ಸಮಾಜದಲ್ಲಿ ಸಮತೋಲನ ತಂದೀತು ಅಂತ ಭಾಳ ಮಂದಿಗೆ ಅನ್ನಿಸಿದ್ದಕ್ಕ ಎಲ್ಲಾರೂ ಸುಮ್ಮನಿದ್ದಾರ. ಆ ಸಮತೋಲನ ಶಾಂತಿ ಸುವ್ಯವಸ್ಥೆಯ ಸಮತೋಲನವೋ ಅಥವಾ ಸತ್ಯಾಸತ್ಯತೆಯ ಸಮತೋಲನವೋ ಅನ್ನೋ ಪ್ರಶ್ನೆಗೆ ಯಾರ ಹತ್ತರಾನೂ ಉತ್ತರ ಇದ್ದಂಗಿಲ್ಲ.

ಹಿಂದೊಮ್ಮೆ ಸಾಯಿಬಾಬಾ ಅವರ ಭೇಟಿಗೆ ಲಾಲಕೃಷ್ಣ ಅದವಾನಿ ಹಾಗೂ ಕೆಲವು ಇತರ ಮುಖಂಡರು ಪುಟಪರ್ತಿಗೆ ಹೋಗಿದ್ದರಂತ. ಆಗ ಅವರು ಇವರನ್ನ ಕೇಳಿದರಂತೆ. ರಾಮನ ಜನ್ಮಸ್ಥಾನ ಯಾವುದು? ಅಲ್ಲಿದ್ದ ದೊಡ್ಡ ದೊಡ್ಡ ನಾಯಕರೆಲ್ಲಾ ಅಯೋಧ್ಯೆ, ಕೌಸಲ, ರಾಮಜನ್ಮಭೂಮಿ ಅಂತೆಲ್ಲಾ ಹೇಳಿದರಂತ. ಯಾವಾಗಲೂ ಹಸನ್ಮುಖಿಯಾಗಿದ್ದ ಸಾಯಿಬಾಬಾ ಅವರು ಅದೆಲ್ಲಾ ಅಲ್ಲಾ. ಅವನು ಹುಟ್ಟಿದ್ದು ಅವನ ತಾಯಿಯ ಗರ್ಭದಿಂದ ಅಲ್ಲವೇ. ಹಂಗಾದರೆ ಅದೇ ಅವನ ಜನ್ಮಸ್ಥಳ ಅಂತ ಹೇಳಿ ನಕ್ಕರಂತೆ. ಹೌದು ಮಹಾಸ್ವಾಮಿ ಅಂತ ಹೇಳಿ ಇವರೆಲ್ಲಾ ನಕ್ಕು ಸುಮ್ಮನಾದರಂತೆ.

ದೊಡ್ಡವರ ಮಾತುಗಳನ್ನು ಕೇಳದೇ ಇದ್ದದ್ದಕ್ಕ ನಾವು ಇವತ್ತು ಈ ದಿನ ಕಾಣುತ್ತಿದ್ದೇವೆ ಅಂತ ಅನಸತದ.

ಹೆಚ್ಚಿನ ಮಾಹಿತಿಗೆ https://www.sci.gov.in/pdf/JUD_2.pdf

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...