Homeನ್ಯಾಯ ಪಥಮೂರು ಡೇಟಾ ಮತ್ತು ಒಂದು ಖರೇ ಜನ್ಮಸ್ಥಾನ : ಬೈ ಡೇಟಾಮ್ಯಾಟಿಕ್ಸ್

ಮೂರು ಡೇಟಾ ಮತ್ತು ಒಂದು ಖರೇ ಜನ್ಮಸ್ಥಾನ : ಬೈ ಡೇಟಾಮ್ಯಾಟಿಕ್ಸ್

- Advertisement -
- Advertisement -

‘ಒಂದು ಸಣ್ಣ ಪಕ್ಷಿಯ ಸಾವು ನಿನ್ನನ್ನು ಕವಿಯಾಗಿಸಿದೆ. ನಿನ್ನ ಕಾವ್ಯ ಕಾಲವನ್ನು ಸೋಲಿಸಲಿದೆ’ ಅಂತ ಬ್ರಹ್ಮ ವಾಲ್ಮೀಕಿಗೆ ಹೇಳಿದ. ಆ ಕಾವ್ಯವೇ ರಾಮಾಯಣ. ಅದರಲ್ಲಿ ರಾಜನ, ರಾಜಕುಮಾರನ, ಅವನ ಭಕ್ತನ, ರಾಜಕುಮಾರಿಯ, ಪ್ರತಿನಾಯಕನ, ಖಳನ, ಅವರೆಲ್ಲರ ಹಿಂಬಾಲಕರ ಕತಿ ಅದ.

ಆ ಕತಿ ಅತ್ಲಾ ಕಡೆ ಇರಲಿ. ಇತ್ತೀಚಿನ ಸರ್ವೋಚ್ಚ ನ್ಯಾಯಾಲಯದ ಒಂದು ತೀರ್ಪಿನೊಳಗ ಉಪಯೋಗಿಸಿದ ಕೆಲವು ಪದಗಳ ಈಗ ನೋಡೋಣ.

ಪೊಸೆಷನ್ – ಅನುಭೋಗ, ಸ್ವಾಧೀನ, ಹಿಡುವಳಿ
ಹಿಡುವಳಿ ಅಂದರ ಮಾಲಿಕತ್ವ ಅಲ್ಲ. ಅದು ಸದ್ಯದ ಮಟ್ಟಿಗೆ ಆಸ್ತಿ ಯಾರ ಕೈಯಾಗ ಅದ ಅನ್ನೋ ಪ್ರಶ್ನೆಗೆ ಉತ್ತರ. ಇದು ಸಂಪೂರ್ಣ ಮಾಲಿಕಿ ಹಕ್ಕು ಕೊಡೋದಿಲ್ಲ. ಇದರ ಹಕ್ಕುಗಳಿಗೆ ಮಿತಿ ಅದ. ನೀವು ಸ್ವಾಧೀನ ಪಡೆಯುವಾಗ ಇದ್ದಂಗ ಅದು ಇರಬೇಕು. ಅದನ್ನು ನೀವು ಮಾರಲಿಕ್ಕೆ ಬರೋದಿಲ್ಲ, ಲೀಸು, ಬಾಡಿಗಿ ಕೊಡಲಿಕ್ಕೆ ಬರೋದಿಲ್ಲ. ಅದರ ಮೂಲ ಸ್ವರೂಪ ಬದಲಾಯಿಸಲಿಕ್ಕೆ ಬರೋದಿಲ್ಲ, ಇತ್ಯಾದಿ. ಸ್ವಾಧೀನ ಇದ್ದವರು ಬಿಟ್ಟು ಬೇರೆಯವರು ಅದನ್ನು ಕೆಡವಲಿಕ್ಕೆ, ನಾಶ ಮಾಡಲಿಕ್ಕೆ ಬರೋದಿಲ್ಲ.

ಪೊಸೆಷನ್ ಈಸ್ ನೈನ್ ಪಾಯಿಂಟ್ಸ್ ಇನ್ ಲಾ’ ಅಂತ ಒಂದು ಮಾತು ಅದ. ಅಂದರ ಆಸ್ತಿ ಯಾರಿಗೆ ಹೋಗಬೇಕು ಅನ್ನೋ ಮಾತು ಬಂದಾಗ ಸ್ವಾಧೀನ ಇದ್ದವರ ಕಡೆ ಹತ್ತರಲ್ಲಿ ಒಂಬತ್ತು ಅಂಶ ಇದ್ದಂಗ ಅಂತ ಅದರ ಅರ್ಥ.

ಆದರ ನಮ್ಮ ಗೌರವಾನ್ವಿತ ನ್ಯಾಯಾಧೀಶರು ಈ ಸಮುದಾಯ ಈ ಕಟ್ಟಡವನ್ನು ಐನೂರು ವರ್ಷದಿಂದ ಸ್ವಾಧೀನ ಪಡೆದಿದೆ ಅಂತ ಹೇಳಿ, ಅದನ್ನು ಕೆಡವಿದ್ದು ತಪ್ಪು ಅಂತ ಒಂದು ಕಡೆ ಹೇಳತಾರ. ಇನ್ನೊಂದು ಕಡೆ ಕೆಡವಿದರಿಗೆ ಈ ಜಾಗದ ಮಾಲಿಕತ್ವ ಹೋಗಬೇಕು ಅಂತ ಹೇಳತಾರ. ಅದು ಅವರಿಗೆ ಆಭಾಸ ಅನ್ನಿಸಿಲ್ಲ.

ಓನರಷಿಪ್ – ಒಡೆತನ, ಅಥವಾ ಮಾಲೀಕತ್ವ
ಇದು ಮಾಲೀಕ ಹಾಗೂ ವಸ್ತು ವಿಷಯದ ನಡುವಿನ ಸಂಬಂಧ. ಇದರ ಪ್ರಕಾರ ಮಾಲೀಕನಿಗೆ ಅದರ ಮೇಲೆ ಸಂಪೂರ್ಣ ಹಕ್ಕು ಇರತಾವ. ಅವನು ಅದನ್ನ ಮಾರಬಹುದು, ಲೀಸಿಗೆ ಕೊಡಬಹುದು, ಅದನ್ನು ಸುಟ್ಟು ಹಾಕಿಯೋ, ನೀರಿನಲ್ಲಿ ಹಾಕಿಯೋ ನಾಶ ಮಾಡಬಹುದು. ಅದನ್ನ ಕೆಡವಿ ಕಟ್ಟಬಹುದು. ಕೆಡವಿ ಕಟ್ಟಲಾರದೇ ಇರಬಹುದು. ಅದರ ಸ್ವರೂಪ ಬದಲಿಸಬಹುದು. ಅದನ್ನು ಇಲ್ಲಾ ಅನ್ನಿಸಿ ಬಿಡಬಹುದು. ಅವನ ಹಕ್ಕುಗಳಿಗೆ ಮಿತಿ ಇಲ್ಲ. ಅಯೋಧ್ಯಾ ಕೇಸಿನಲ್ಲಿ ನ್ಯಾಯಾಲಯದ ಮುಂದೆ ಇದ್ದದ್ದು ಮಾಲೀಕತ್ವದ ಪ್ರಶ್ನೆ ಅಷ್ಟ. ಅದರ ಮಾಲೀಕರು ಯಾರು ಅನ್ನೋದು ಗೊತ್ತಾದರ ಹೇಳಬೇಕಿತ್ತು. ಇಲ್ಲಾಂದರ ಇಲ್ಲಾ ಅನ್ನಬೇಕಿತ್ತು. ಅದನ್ನು ಬಿಟ್ಟು

ಅಲ್ಲಿ ಗುಡಿ ಕಟ್ಟಬಹುದು, ಆ ಮಸೀದಿ ಕೆಡವಿದ್ದು ತಪ್ಪು. ಅದು ನಮ್ಮ ಜಾಗ ಅಂತ ಕೇಳತಾ ಇರೋ ನಮಾಜಿಗರಿಗೆ ಅದರ ಡಬಲ್ ಜಾಗ ಕೊಟ್ಟು ಬಿಡಿ ಅಂತ ಹೇಳುವ ಹರಕತ್ತು ಇದ್ದಿದ್ದಿಲ್ಲ. ಇದು ತನ್ನಳವಿಗೆ ಮೀರಿದ ತೀರ್ಪು ಅಂತ ಅದನ್ನು ಕೊಟ್ಟವರಿಗೆ ಅನ್ನಿಸಿಲ್ಲ.

ಬ್ಯಾಲೆನ್ಸ ಆಫ್ ಪ್ರಾಬೆಬಿಲಿಟಿಸ್ – ಸಾಧ್ಯಾಸಾಧ್ಯತೆಗಳ ಸಮತೋಲನ
ಇದು ಅತ್ಯಂತ ಮಜಾಶೀರ ಇರೋ ವಿಷಯ. ಅನೇಕ ವರ್ಷದ ಹಿಂದ ಆಸ್ಟೇಲಿಯಾದೊಳಗ ಬ್ರೂಕ್ಸ ಅನ್ನೋ ಹೆಣಮಗಳ ಗಂಡ ರಸ್ತೆ ಅಪಘಾತದೊಳಗ ತೀರಿಕೊಂಡ. ಅವನು ಆ ಗಾಡಿಯ ಚಾಲಕ. ಅವನಲ್ಲದೇ ಆ ಗಾಡಿಗೆ ಇನ್ನೊಬ್ಬ ಚಾಲಕ ಇದ್ದ. ಅವರಿಬ್ಬರೂ ಸತ್ತು ಹೋದರು. ಅಲ್ಲಿ ಸಾಕ್ಷಿ ಇರಲಿಲ್ಲ. ರಸ್ತೆ ಸೀದಾ ಇತ್ತು. ಅಲ್ಲಿ ಇನ್ನೊಂದು ಗಾಡಿ ಇರಲಿಲ್ಲ. ಹೀಗಿದ್ದಾಗ ತಪ್ಪು ಯಾವ ಚಾಲಕಂದು ಅಂತ ತಿಳಕೊಳ್ಳೋದು ಅಲ್ಲಿನ ನ್ಯಾಯಾಲಯಕ್ಕ ಕಷ್ಟ ಆತು. ಕೊನೆಗೆ ಜಜ್ಜುಗಳೆಲ್ಲಾ ಸೇರಿ ಒಬ್ಬ ಗಣಿತ ತಜ್ಞನ ಕಡೆ ಹೋದರು. ಅವನು ಸಾಧ್ಯಾಸಾಧ್ಯತೆಗಳ ಸಮತೋಲನ ಅನ್ನೋ ಸಂಕಲನ ಬಳಸಿ ಅವರಿಗೆ ವೆನ್ ಡಯಾಗ್ರಾಮು ಹಾಕಿ ತೋರಿಸಿದ.

ಅದರ ಪ್ರಕಾರ ಸಾಕ್ಷಿಗಳು ಕಮ್ಮಿ ಇದ್ದಾಗ, ಲಭ್ಯ ಸಾಕ್ಷಿಗಳಿಂದ ಯಾವುದೇ ವಿಷಯವನ್ನು ನಿಸ್ಸಂದೇಹವಾಗಿ ಪ್ರಮಾಣಿಸಿ ತೋರಿಸಿಲಿಕ್ಕೆ ಸಾಧ್ಯವಾಗದೇ ಇದ್ದಾಗ, ಇದು ಹೀಗಾಗುವ ಸಾಧ್ಯತೆ ಹೆಚ್ಚು, ಹಾಗಾಗುವ ಸಾಧ್ಯತೆ ಕಮ್ಮಿ ಅಂತ ನ್ಯಾಯಾಧೀಶರಿಗೆ ಅನ್ನಿಸಬಹುದು. ಹೀಗೆ ಅವರಿಗೆ ಅನ್ನಿಸುವುದ ಆಧಾರದ ಮೇಲೆ ಅವರು ತೀರ್ಪು ಕೊಡಬಹುದು. ಈಗಾಗಿರೋದು ಹಿಂಗನ. ಈ ತೀರ್ಪು ಸಮಾಜದಲ್ಲಿ ಸಮತೋಲನ ತಂದೀತು ಅಂತ ಭಾಳ ಮಂದಿಗೆ ಅನ್ನಿಸಿದ್ದಕ್ಕ ಎಲ್ಲಾರೂ ಸುಮ್ಮನಿದ್ದಾರ. ಆ ಸಮತೋಲನ ಶಾಂತಿ ಸುವ್ಯವಸ್ಥೆಯ ಸಮತೋಲನವೋ ಅಥವಾ ಸತ್ಯಾಸತ್ಯತೆಯ ಸಮತೋಲನವೋ ಅನ್ನೋ ಪ್ರಶ್ನೆಗೆ ಯಾರ ಹತ್ತರಾನೂ ಉತ್ತರ ಇದ್ದಂಗಿಲ್ಲ.

ಹಿಂದೊಮ್ಮೆ ಸಾಯಿಬಾಬಾ ಅವರ ಭೇಟಿಗೆ ಲಾಲಕೃಷ್ಣ ಅದವಾನಿ ಹಾಗೂ ಕೆಲವು ಇತರ ಮುಖಂಡರು ಪುಟಪರ್ತಿಗೆ ಹೋಗಿದ್ದರಂತ. ಆಗ ಅವರು ಇವರನ್ನ ಕೇಳಿದರಂತೆ. ರಾಮನ ಜನ್ಮಸ್ಥಾನ ಯಾವುದು? ಅಲ್ಲಿದ್ದ ದೊಡ್ಡ ದೊಡ್ಡ ನಾಯಕರೆಲ್ಲಾ ಅಯೋಧ್ಯೆ, ಕೌಸಲ, ರಾಮಜನ್ಮಭೂಮಿ ಅಂತೆಲ್ಲಾ ಹೇಳಿದರಂತ. ಯಾವಾಗಲೂ ಹಸನ್ಮುಖಿಯಾಗಿದ್ದ ಸಾಯಿಬಾಬಾ ಅವರು ಅದೆಲ್ಲಾ ಅಲ್ಲಾ. ಅವನು ಹುಟ್ಟಿದ್ದು ಅವನ ತಾಯಿಯ ಗರ್ಭದಿಂದ ಅಲ್ಲವೇ. ಹಂಗಾದರೆ ಅದೇ ಅವನ ಜನ್ಮಸ್ಥಳ ಅಂತ ಹೇಳಿ ನಕ್ಕರಂತೆ. ಹೌದು ಮಹಾಸ್ವಾಮಿ ಅಂತ ಹೇಳಿ ಇವರೆಲ್ಲಾ ನಕ್ಕು ಸುಮ್ಮನಾದರಂತೆ.

ದೊಡ್ಡವರ ಮಾತುಗಳನ್ನು ಕೇಳದೇ ಇದ್ದದ್ದಕ್ಕ ನಾವು ಇವತ್ತು ಈ ದಿನ ಕಾಣುತ್ತಿದ್ದೇವೆ ಅಂತ ಅನಸತದ.

ಹೆಚ್ಚಿನ ಮಾಹಿತಿಗೆ https://www.sci.gov.in/pdf/JUD_2.pdf

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...