Homeನ್ಯಾಯ ಪಥಮೂರು ಡೇಟಾ ಮತ್ತು ಒಂದು ಖರೇ ಜನ್ಮಸ್ಥಾನ : ಬೈ ಡೇಟಾಮ್ಯಾಟಿಕ್ಸ್

ಮೂರು ಡೇಟಾ ಮತ್ತು ಒಂದು ಖರೇ ಜನ್ಮಸ್ಥಾನ : ಬೈ ಡೇಟಾಮ್ಯಾಟಿಕ್ಸ್

- Advertisement -
- Advertisement -

‘ಒಂದು ಸಣ್ಣ ಪಕ್ಷಿಯ ಸಾವು ನಿನ್ನನ್ನು ಕವಿಯಾಗಿಸಿದೆ. ನಿನ್ನ ಕಾವ್ಯ ಕಾಲವನ್ನು ಸೋಲಿಸಲಿದೆ’ ಅಂತ ಬ್ರಹ್ಮ ವಾಲ್ಮೀಕಿಗೆ ಹೇಳಿದ. ಆ ಕಾವ್ಯವೇ ರಾಮಾಯಣ. ಅದರಲ್ಲಿ ರಾಜನ, ರಾಜಕುಮಾರನ, ಅವನ ಭಕ್ತನ, ರಾಜಕುಮಾರಿಯ, ಪ್ರತಿನಾಯಕನ, ಖಳನ, ಅವರೆಲ್ಲರ ಹಿಂಬಾಲಕರ ಕತಿ ಅದ.

ಆ ಕತಿ ಅತ್ಲಾ ಕಡೆ ಇರಲಿ. ಇತ್ತೀಚಿನ ಸರ್ವೋಚ್ಚ ನ್ಯಾಯಾಲಯದ ಒಂದು ತೀರ್ಪಿನೊಳಗ ಉಪಯೋಗಿಸಿದ ಕೆಲವು ಪದಗಳ ಈಗ ನೋಡೋಣ.

ಪೊಸೆಷನ್ – ಅನುಭೋಗ, ಸ್ವಾಧೀನ, ಹಿಡುವಳಿ
ಹಿಡುವಳಿ ಅಂದರ ಮಾಲಿಕತ್ವ ಅಲ್ಲ. ಅದು ಸದ್ಯದ ಮಟ್ಟಿಗೆ ಆಸ್ತಿ ಯಾರ ಕೈಯಾಗ ಅದ ಅನ್ನೋ ಪ್ರಶ್ನೆಗೆ ಉತ್ತರ. ಇದು ಸಂಪೂರ್ಣ ಮಾಲಿಕಿ ಹಕ್ಕು ಕೊಡೋದಿಲ್ಲ. ಇದರ ಹಕ್ಕುಗಳಿಗೆ ಮಿತಿ ಅದ. ನೀವು ಸ್ವಾಧೀನ ಪಡೆಯುವಾಗ ಇದ್ದಂಗ ಅದು ಇರಬೇಕು. ಅದನ್ನು ನೀವು ಮಾರಲಿಕ್ಕೆ ಬರೋದಿಲ್ಲ, ಲೀಸು, ಬಾಡಿಗಿ ಕೊಡಲಿಕ್ಕೆ ಬರೋದಿಲ್ಲ. ಅದರ ಮೂಲ ಸ್ವರೂಪ ಬದಲಾಯಿಸಲಿಕ್ಕೆ ಬರೋದಿಲ್ಲ, ಇತ್ಯಾದಿ. ಸ್ವಾಧೀನ ಇದ್ದವರು ಬಿಟ್ಟು ಬೇರೆಯವರು ಅದನ್ನು ಕೆಡವಲಿಕ್ಕೆ, ನಾಶ ಮಾಡಲಿಕ್ಕೆ ಬರೋದಿಲ್ಲ.

ಪೊಸೆಷನ್ ಈಸ್ ನೈನ್ ಪಾಯಿಂಟ್ಸ್ ಇನ್ ಲಾ’ ಅಂತ ಒಂದು ಮಾತು ಅದ. ಅಂದರ ಆಸ್ತಿ ಯಾರಿಗೆ ಹೋಗಬೇಕು ಅನ್ನೋ ಮಾತು ಬಂದಾಗ ಸ್ವಾಧೀನ ಇದ್ದವರ ಕಡೆ ಹತ್ತರಲ್ಲಿ ಒಂಬತ್ತು ಅಂಶ ಇದ್ದಂಗ ಅಂತ ಅದರ ಅರ್ಥ.

ಆದರ ನಮ್ಮ ಗೌರವಾನ್ವಿತ ನ್ಯಾಯಾಧೀಶರು ಈ ಸಮುದಾಯ ಈ ಕಟ್ಟಡವನ್ನು ಐನೂರು ವರ್ಷದಿಂದ ಸ್ವಾಧೀನ ಪಡೆದಿದೆ ಅಂತ ಹೇಳಿ, ಅದನ್ನು ಕೆಡವಿದ್ದು ತಪ್ಪು ಅಂತ ಒಂದು ಕಡೆ ಹೇಳತಾರ. ಇನ್ನೊಂದು ಕಡೆ ಕೆಡವಿದರಿಗೆ ಈ ಜಾಗದ ಮಾಲಿಕತ್ವ ಹೋಗಬೇಕು ಅಂತ ಹೇಳತಾರ. ಅದು ಅವರಿಗೆ ಆಭಾಸ ಅನ್ನಿಸಿಲ್ಲ.

ಓನರಷಿಪ್ – ಒಡೆತನ, ಅಥವಾ ಮಾಲೀಕತ್ವ
ಇದು ಮಾಲೀಕ ಹಾಗೂ ವಸ್ತು ವಿಷಯದ ನಡುವಿನ ಸಂಬಂಧ. ಇದರ ಪ್ರಕಾರ ಮಾಲೀಕನಿಗೆ ಅದರ ಮೇಲೆ ಸಂಪೂರ್ಣ ಹಕ್ಕು ಇರತಾವ. ಅವನು ಅದನ್ನ ಮಾರಬಹುದು, ಲೀಸಿಗೆ ಕೊಡಬಹುದು, ಅದನ್ನು ಸುಟ್ಟು ಹಾಕಿಯೋ, ನೀರಿನಲ್ಲಿ ಹಾಕಿಯೋ ನಾಶ ಮಾಡಬಹುದು. ಅದನ್ನ ಕೆಡವಿ ಕಟ್ಟಬಹುದು. ಕೆಡವಿ ಕಟ್ಟಲಾರದೇ ಇರಬಹುದು. ಅದರ ಸ್ವರೂಪ ಬದಲಿಸಬಹುದು. ಅದನ್ನು ಇಲ್ಲಾ ಅನ್ನಿಸಿ ಬಿಡಬಹುದು. ಅವನ ಹಕ್ಕುಗಳಿಗೆ ಮಿತಿ ಇಲ್ಲ. ಅಯೋಧ್ಯಾ ಕೇಸಿನಲ್ಲಿ ನ್ಯಾಯಾಲಯದ ಮುಂದೆ ಇದ್ದದ್ದು ಮಾಲೀಕತ್ವದ ಪ್ರಶ್ನೆ ಅಷ್ಟ. ಅದರ ಮಾಲೀಕರು ಯಾರು ಅನ್ನೋದು ಗೊತ್ತಾದರ ಹೇಳಬೇಕಿತ್ತು. ಇಲ್ಲಾಂದರ ಇಲ್ಲಾ ಅನ್ನಬೇಕಿತ್ತು. ಅದನ್ನು ಬಿಟ್ಟು

ಅಲ್ಲಿ ಗುಡಿ ಕಟ್ಟಬಹುದು, ಆ ಮಸೀದಿ ಕೆಡವಿದ್ದು ತಪ್ಪು. ಅದು ನಮ್ಮ ಜಾಗ ಅಂತ ಕೇಳತಾ ಇರೋ ನಮಾಜಿಗರಿಗೆ ಅದರ ಡಬಲ್ ಜಾಗ ಕೊಟ್ಟು ಬಿಡಿ ಅಂತ ಹೇಳುವ ಹರಕತ್ತು ಇದ್ದಿದ್ದಿಲ್ಲ. ಇದು ತನ್ನಳವಿಗೆ ಮೀರಿದ ತೀರ್ಪು ಅಂತ ಅದನ್ನು ಕೊಟ್ಟವರಿಗೆ ಅನ್ನಿಸಿಲ್ಲ.

ಬ್ಯಾಲೆನ್ಸ ಆಫ್ ಪ್ರಾಬೆಬಿಲಿಟಿಸ್ – ಸಾಧ್ಯಾಸಾಧ್ಯತೆಗಳ ಸಮತೋಲನ
ಇದು ಅತ್ಯಂತ ಮಜಾಶೀರ ಇರೋ ವಿಷಯ. ಅನೇಕ ವರ್ಷದ ಹಿಂದ ಆಸ್ಟೇಲಿಯಾದೊಳಗ ಬ್ರೂಕ್ಸ ಅನ್ನೋ ಹೆಣಮಗಳ ಗಂಡ ರಸ್ತೆ ಅಪಘಾತದೊಳಗ ತೀರಿಕೊಂಡ. ಅವನು ಆ ಗಾಡಿಯ ಚಾಲಕ. ಅವನಲ್ಲದೇ ಆ ಗಾಡಿಗೆ ಇನ್ನೊಬ್ಬ ಚಾಲಕ ಇದ್ದ. ಅವರಿಬ್ಬರೂ ಸತ್ತು ಹೋದರು. ಅಲ್ಲಿ ಸಾಕ್ಷಿ ಇರಲಿಲ್ಲ. ರಸ್ತೆ ಸೀದಾ ಇತ್ತು. ಅಲ್ಲಿ ಇನ್ನೊಂದು ಗಾಡಿ ಇರಲಿಲ್ಲ. ಹೀಗಿದ್ದಾಗ ತಪ್ಪು ಯಾವ ಚಾಲಕಂದು ಅಂತ ತಿಳಕೊಳ್ಳೋದು ಅಲ್ಲಿನ ನ್ಯಾಯಾಲಯಕ್ಕ ಕಷ್ಟ ಆತು. ಕೊನೆಗೆ ಜಜ್ಜುಗಳೆಲ್ಲಾ ಸೇರಿ ಒಬ್ಬ ಗಣಿತ ತಜ್ಞನ ಕಡೆ ಹೋದರು. ಅವನು ಸಾಧ್ಯಾಸಾಧ್ಯತೆಗಳ ಸಮತೋಲನ ಅನ್ನೋ ಸಂಕಲನ ಬಳಸಿ ಅವರಿಗೆ ವೆನ್ ಡಯಾಗ್ರಾಮು ಹಾಕಿ ತೋರಿಸಿದ.

ಅದರ ಪ್ರಕಾರ ಸಾಕ್ಷಿಗಳು ಕಮ್ಮಿ ಇದ್ದಾಗ, ಲಭ್ಯ ಸಾಕ್ಷಿಗಳಿಂದ ಯಾವುದೇ ವಿಷಯವನ್ನು ನಿಸ್ಸಂದೇಹವಾಗಿ ಪ್ರಮಾಣಿಸಿ ತೋರಿಸಿಲಿಕ್ಕೆ ಸಾಧ್ಯವಾಗದೇ ಇದ್ದಾಗ, ಇದು ಹೀಗಾಗುವ ಸಾಧ್ಯತೆ ಹೆಚ್ಚು, ಹಾಗಾಗುವ ಸಾಧ್ಯತೆ ಕಮ್ಮಿ ಅಂತ ನ್ಯಾಯಾಧೀಶರಿಗೆ ಅನ್ನಿಸಬಹುದು. ಹೀಗೆ ಅವರಿಗೆ ಅನ್ನಿಸುವುದ ಆಧಾರದ ಮೇಲೆ ಅವರು ತೀರ್ಪು ಕೊಡಬಹುದು. ಈಗಾಗಿರೋದು ಹಿಂಗನ. ಈ ತೀರ್ಪು ಸಮಾಜದಲ್ಲಿ ಸಮತೋಲನ ತಂದೀತು ಅಂತ ಭಾಳ ಮಂದಿಗೆ ಅನ್ನಿಸಿದ್ದಕ್ಕ ಎಲ್ಲಾರೂ ಸುಮ್ಮನಿದ್ದಾರ. ಆ ಸಮತೋಲನ ಶಾಂತಿ ಸುವ್ಯವಸ್ಥೆಯ ಸಮತೋಲನವೋ ಅಥವಾ ಸತ್ಯಾಸತ್ಯತೆಯ ಸಮತೋಲನವೋ ಅನ್ನೋ ಪ್ರಶ್ನೆಗೆ ಯಾರ ಹತ್ತರಾನೂ ಉತ್ತರ ಇದ್ದಂಗಿಲ್ಲ.

ಹಿಂದೊಮ್ಮೆ ಸಾಯಿಬಾಬಾ ಅವರ ಭೇಟಿಗೆ ಲಾಲಕೃಷ್ಣ ಅದವಾನಿ ಹಾಗೂ ಕೆಲವು ಇತರ ಮುಖಂಡರು ಪುಟಪರ್ತಿಗೆ ಹೋಗಿದ್ದರಂತ. ಆಗ ಅವರು ಇವರನ್ನ ಕೇಳಿದರಂತೆ. ರಾಮನ ಜನ್ಮಸ್ಥಾನ ಯಾವುದು? ಅಲ್ಲಿದ್ದ ದೊಡ್ಡ ದೊಡ್ಡ ನಾಯಕರೆಲ್ಲಾ ಅಯೋಧ್ಯೆ, ಕೌಸಲ, ರಾಮಜನ್ಮಭೂಮಿ ಅಂತೆಲ್ಲಾ ಹೇಳಿದರಂತ. ಯಾವಾಗಲೂ ಹಸನ್ಮುಖಿಯಾಗಿದ್ದ ಸಾಯಿಬಾಬಾ ಅವರು ಅದೆಲ್ಲಾ ಅಲ್ಲಾ. ಅವನು ಹುಟ್ಟಿದ್ದು ಅವನ ತಾಯಿಯ ಗರ್ಭದಿಂದ ಅಲ್ಲವೇ. ಹಂಗಾದರೆ ಅದೇ ಅವನ ಜನ್ಮಸ್ಥಳ ಅಂತ ಹೇಳಿ ನಕ್ಕರಂತೆ. ಹೌದು ಮಹಾಸ್ವಾಮಿ ಅಂತ ಹೇಳಿ ಇವರೆಲ್ಲಾ ನಕ್ಕು ಸುಮ್ಮನಾದರಂತೆ.

ದೊಡ್ಡವರ ಮಾತುಗಳನ್ನು ಕೇಳದೇ ಇದ್ದದ್ದಕ್ಕ ನಾವು ಇವತ್ತು ಈ ದಿನ ಕಾಣುತ್ತಿದ್ದೇವೆ ಅಂತ ಅನಸತದ.

ಹೆಚ್ಚಿನ ಮಾಹಿತಿಗೆ https://www.sci.gov.in/pdf/JUD_2.pdf

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...