Homeಮುಖಪುಟಲಡಾಖ್‌ಗೆ ರಾಜ್ಯ ಸ್ಥಾನಮಾನ ಮತ್ತು ಆರನೇ ಶೆಡ್ಯೂಲ್ ವಿಸ್ತರಣೆ ಕೋರಿ ಕಾರ್ಗಿಲ್‌ನಲ್ಲಿ ಮೂರು ದಿನಗಳ ಉಪವಾಸ...

ಲಡಾಖ್‌ಗೆ ರಾಜ್ಯ ಸ್ಥಾನಮಾನ ಮತ್ತು ಆರನೇ ಶೆಡ್ಯೂಲ್ ವಿಸ್ತರಣೆ ಕೋರಿ ಕಾರ್ಗಿಲ್‌ನಲ್ಲಿ ಮೂರು ದಿನಗಳ ಉಪವಾಸ ಸತ್ಯಾಗ್ರಹ

- Advertisement -
- Advertisement -

ಕಾರ್ಗಿಲ್: ಲಡಾಖ್ ಪ್ರದೇಶಕ್ಕೆ ರಾಜ್ಯ ಸ್ಥಾನಮಾನ ಮತ್ತು ಸಂವಿಧಾನದ ಆರನೇ ಶೆಡ್ಯೂಲ್ ಅನ್ನು ವಿಸ್ತರಿಸುವಂತೆ ಒತ್ತಾಯಿಸಿ ಕಾರ್ಗಿಲ್‌ನಲ್ಲಿ ಇಂದಿನಿಂದ (ಶನಿವಾರ) ಮೂರು ದಿನಗಳ ಉಪವಾಸ ಸತ್ಯಾಗ್ರಹ ಆರಂಭವಾಗಿದೆ. ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ (KDA) ಮತ್ತು ಲೇಹ್ ಅಪೆಕ್ಸ್ ಬಾಡಿ (LAB) ಜಂಟಿಯಾಗಿ ಹುಸೇನಿ ಪಾರ್ಕ್‌ನಲ್ಲಿ ಈ ಪ್ರತಿಭಟನೆಯನ್ನು ಆಯೋಜಿಸಿವೆ.

ಕೇಂದ್ರ ಸರ್ಕಾರವು ಮಾತುಕತೆಯನ್ನು ಮುಂದೂಡುತ್ತಿರುವುದಕ್ಕೆ ಅಸಮಾಧಾನಗೊಂಡ ಈ ಸಂಘಟನೆಗಳು, ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟವನ್ನು ತೀವ್ರಗೊಳಿಸಿವೆ. ಕಳೆದ ಐದು ವರ್ಷಗಳಿಂದ ಈ ಬೇಡಿಕೆಗಳನ್ನು ಮುಂದಿಟ್ಟುಕೊಂಡು KDA ಮತ್ತು LAB ಜಂಟಿಯಾಗಿ ಹೋರಾಟ ನಡೆಸುತ್ತಿವೆ. ಈ ಕುರಿತು ನವದೆಹಲಿಯೊಂದಿಗೆ ಹಲವಾರು ಸುತ್ತಿನ ಮಾತುಕತೆಗಳೂ ನಡೆದಿವೆ. ಆದಾಗ್ಯೂ, ಸರ್ಕಾರದಿಂದ ಯಾವುದೇ ಸ್ಪಷ್ಟ ಪ್ರಗತಿ ಕಂಡುಬಂದಿಲ್ಲ ಎಂದು ಅವು ಆರೋಪಿಸಿವೆ.ನಾಲ್ಕು ಪ್ರಮುಖ ಬೇಡಿಕೆಗಳೊಂದಿಗೆ ಪ್ರತಿಭಟನಾ ಸ್ಥಳದಲ್ಲಿ ಹಾಕಲಾಗಿರುವ ಬ್ಯಾನರ್‌ನಲ್ಲಿ, “ನಾವೆಲ್ಲರೂ ಒಟ್ಟಾಗಿ, ಲಡಾಖ್ ಅನ್ನು ಲಡಾಖ್ ಆಳುವ ಭವಿಷ್ಯವನ್ನು ನಿರ್ಮಿಸಬಹುದು” ಎಂದು ಬರೆಯಲಾಗಿದೆ. ಪ್ರತಿಭಟನಾಕಾರರು ಈ ನಾಲ್ಕು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ:

  1. ಲಡಾಖ್‌ಗೆ ರಾಜ್ಯ ಸ್ಥಾನಮಾನ.
  2. ಸಂವಿಧಾನದ ಆರನೇ ಶೆಡ್ಯೂಲ್ ವಿಸ್ತರಣೆ
  3. ಲೇಹ್ ಮತ್ತು ಕಾರ್ಗಿಲ್‌ಗೆ ಪ್ರತ್ಯೇಕ ಲೋಕಸಭಾ ಸ್ಥಾನಗಳು
  4. ಪ್ರತ್ಯೇಕ ಲೋಕಸೇವಾ ಆಯೋಗದ (PSC) ಸ್ಥಾಪನೆ

ಪ್ರಮುಖ ಕೆಡಿಎ ನಾಯಕರು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದು, “ವಸಾಹತುಶಾಹಿ ಆಡಳಿತ ಕೊನೆಗೊಳ್ಳಲಿ, ಪ್ರಜಾಪ್ರಭುತ್ವ ಮರುಸ್ಥಾಪನೆಯಾಗಲಿ” ಮತ್ತು “ರಾಜ್ಯ ಸ್ಥಾನಮಾನ – ಆರನೇ ಶೆಡ್ಯೂಲ್, ಬಲಿಷ್ಠ ಲಡಾಖ್” ಎಂಬ ಘೋಷಣೆಗಳನ್ನು ಕೂಗಿದರು.

ಮಾತುಕತೆ ವಿಳಂಬದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಕೆಡಿಎ ಸಹ-ಅಧ್ಯಕ್ಷರಾದ ಅಸ್ಗರ್ ಅಲಿ ಕರ್ಬಲಾಯಿ ಮಾತನಾಡಿ, “ಕಳೆದ ನಾಲ್ಕು ವರ್ಷಗಳಲ್ಲಿ ನಾವು ಈ ಹಕ್ಕುಗಳಿಗಾಗಿ ಪ್ರತಿಭಟನೆಗಳು, ಉಪವಾಸಗಳು ಮತ್ತು ಪಾದಯಾತ್ರೆಗಳನ್ನು ನಡೆಸಿದ್ದೇವೆ. ನಮ್ಮ ಕೊನೆಯ ಮಾತುಕತೆ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ಅವರೊಂದಿಗೆ ಮೇ ತಿಂಗಳಲ್ಲಿ ನಡೆದಿತ್ತು. ರಾಜ್ಯ ಸ್ಥಾನಮಾನ ಮತ್ತು ಆರನೇ ಶೆಡ್ಯೂಲ್ ಕುರಿತು ಮುಂದಿನ ತಿಂಗಳು ಚರ್ಚೆಗಳನ್ನು ಆರಂಭಿಸುವುದಾಗಿ ಅವರು ಭರವಸೆ ನೀಡಿದ್ದರು. ಆದರೆ, ಇದುವರೆಗೂ ಯಾವುದೇ ಮಾತುಕತೆ ನಡೆದಿಲ್ಲ. ಸರ್ಕಾರ ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿರುವಂತೆ ಕಾಣುತ್ತಿದೆ” ಎಂದು ಹೇಳಿದರು.

ಈ ವಿಳಂಬವೇ ಉಪವಾಸ ಸತ್ಯಾಗ್ರಹಕ್ಕೆ ಕಾರಣ ಎಂದು ಕರ್ಬಲಾಯಿ ತಿಳಿಸಿದರು. ಸರ್ಕಾರದ ಪ್ರತಿಕ್ರಿಯೆ ಸಿಗದಿದ್ದರೆ, ಎರಡೂ ಸಂಘಟನೆಗಳ ಉನ್ನತ ಸಮಿತಿಗಳು ಸಭೆ ಸೇರಿ ಮುಂದಿನ ಹೋರಾಟದ ಕುರಿತು ನಿರ್ಧರಿಸಲಿವೆ ಎಂದು ಅವರು ಎಚ್ಚರಿಸಿದರು. “ಸರ್ಕಾರ ಸ್ಪಂದಿಸದಿದ್ದರೆ, ಸಂಪೂರ್ಣ ಲಡಾಖ್ ಪ್ರದೇಶದ ಜನತೆ ಹೋರಾಟವನ್ನು ಮುಂದುವರಿಸಲು ಸಿದ್ಧವಾಗಿದೆ” ಎಂದು ಅವರು ಸ್ಪಷ್ಟಪಡಿಸಿದರು.

ಮತ್ತೊಬ್ಬ ಪ್ರಮುಖ ಕೆಡಿಎ ನಾಯಕರಾದ ಸಜ್ಜಾದ್ ಕಾರ್ಗಿಲಿ, ಭಾರತ ಸರ್ಕಾರ ಮಾತುಕತೆಯ ಭರವಸೆ ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು. “ಲಡಾಖ್ ಜನರಿಗೆ ನೀಡುತ್ತಿರುವ ಈ ವಸಾಹತುಶಾಹಿ ಆಡಳಿತ ಕೊನೆಗೊಳ್ಳಬೇಕು. ಸಂವಿಧಾನದ ಆರನೇ ಶೆಡ್ಯೂಲ್ ಜೊತೆಗೆ ಆದಷ್ಟು ಬೇಗ ಲಡಾಖ್‌ನಲ್ಲಿ ಪ್ರಜಾಪ್ರಭುತ್ವವನ್ನು ಪುನಃಸ್ಥಾಪಿಸಬೇಕು” ಎಂದು ಅವರು ಒತ್ತಾಯಿಸಿದರು.

ಮುಂದಿನ ಸುತ್ತಿನ ಮಾತುಕತೆಗಳನ್ನು ನಡೆಸುವಲ್ಲಿ ವಿಳಂಬ ಮಾಡಿದ್ದರಿಂದ ಉಪವಾಸ ಸತ್ಯಾಗ್ರಹ ನಡೆಸಲು ತಮಗೆ ಅನಿವಾರ್ಯವಾಯಿತು ಎಂದು ಅವರು ತಿಳಿಸಿದ್ದಾರೆ.

“ನಮಗೆ ಮಾತುಕತೆಗಳ ಮೇಲೆ ನಂಬಿಕೆಯಿತ್ತು ಮತ್ತು ಈಗಲೂ ಇದೆ. ಆದರೆ ಅವರು ಪ್ರತಿಭಟನೆ, ಮುಷ್ಕರ ಮತ್ತು ಲಡಾಖ್ ಬಂದ್ ಮಾಡಲು ನಮ್ಮನ್ನು ಪ್ರಚೋದಿಸುತ್ತಿದ್ದಾರೆ. ಈ ಹೋರಾಟ ಇಂದು ಕಾರ್ಗಿಲ್‌ನಲ್ಲಿ ಪ್ರಾರಂಭವಾಗಿದೆ. ಇದು ಮೂರು ದಿನಗಳ KDA ಮತ್ತು LAB ಜಂಟಿ ಕಾರ್ಯಕ್ರಮವಾಗಿದೆ” ಎಂದು ಅವರು ಹೇಳಿದ್ದಾರೆ.

ಸರ್ಕಾರ ಸ್ಪಂದಿಸದಿದ್ದರೆ, ಸಂಪೂರ್ಣ ಲಡಾಖ್‌ನಲ್ಲಿ ಪ್ರತಿಭಟನೆ ಮುಂದುವರಿಯಲಿದೆ. ಎರಡೂ ಸಂಘಟನೆಗಳ ಕೋರ್ ಕಮಿಟಿ ಮುಂದಿನ ಕ್ರಮಗಳನ್ನು ನಿರ್ಧರಿಸಲಿದೆ ಎಂದು ಅವರು ತಿಳಿಸಿದ್ದಾರೆ.

“ಆದ್ದರಿಂದ, ಮತ್ತೊಮ್ಮೆ ನಾವು ಶಾಂತಿಯುತವಾಗಿ ಮತ್ತು ಪ್ರಜಾಸತ್ತಾತ್ಮಕವಾಗಿ ಪ್ರತಿಭಟಿಸುತ್ತಿದ್ದೇವೆ. ಈ ಸಂದೇಶ ಸರ್ಕಾರವನ್ನು ತಲುಪುತ್ತದೆ ಎಂದು ನಾವು ಭಾವಿಸುತ್ತೇವೆ. ಲಡಾಖ್ ಜನರ ಮೇಲಿನ ಈ ವಸಾಹತುಶಾಹಿ ಧೋರಣೆ ಕೊನೆಗೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಪ್ರಜಾಪ್ರಭುತ್ವವನ್ನು ಲಡಾಖ್‌ನಲ್ಲಿ ಆದಷ್ಟು ಬೇಗ ಮರುಸ್ಥಾಪಿಸಬೇಕು ಮತ್ತು ಸರ್ಕಾರ ಭರವಸೆ ನೀಡಿದಂತೆ ಸಂವಿಧಾನದ ಆರನೇ ಶೆಡ್ಯೂಲ್ ಜಾರಿಗೆ ತರಬೇಕು ಎಂದು ಕಾರ್ಗಿಲಿ ಆಗ್ರಹಿಸಿದ್ದಾರೆ.

ಮಳೆಗಾಲದ ಅಧಿವೇಶನದಲ್ಲಿಯೇ ‘ಒಳಮೀಸಲಾತಿ ಗ್ಯಾರಂಟಿ’ಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಆ.11ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...