Homeಮುಖಪುಟಲಡಾಖ್‌ಗೆ ರಾಜ್ಯ ಸ್ಥಾನಮಾನ ಮತ್ತು ಆರನೇ ಶೆಡ್ಯೂಲ್ ವಿಸ್ತರಣೆ ಕೋರಿ ಕಾರ್ಗಿಲ್‌ನಲ್ಲಿ ಮೂರು ದಿನಗಳ ಉಪವಾಸ...

ಲಡಾಖ್‌ಗೆ ರಾಜ್ಯ ಸ್ಥಾನಮಾನ ಮತ್ತು ಆರನೇ ಶೆಡ್ಯೂಲ್ ವಿಸ್ತರಣೆ ಕೋರಿ ಕಾರ್ಗಿಲ್‌ನಲ್ಲಿ ಮೂರು ದಿನಗಳ ಉಪವಾಸ ಸತ್ಯಾಗ್ರಹ

- Advertisement -
- Advertisement -

ಕಾರ್ಗಿಲ್: ಲಡಾಖ್ ಪ್ರದೇಶಕ್ಕೆ ರಾಜ್ಯ ಸ್ಥಾನಮಾನ ಮತ್ತು ಸಂವಿಧಾನದ ಆರನೇ ಶೆಡ್ಯೂಲ್ ಅನ್ನು ವಿಸ್ತರಿಸುವಂತೆ ಒತ್ತಾಯಿಸಿ ಕಾರ್ಗಿಲ್‌ನಲ್ಲಿ ಇಂದಿನಿಂದ (ಶನಿವಾರ) ಮೂರು ದಿನಗಳ ಉಪವಾಸ ಸತ್ಯಾಗ್ರಹ ಆರಂಭವಾಗಿದೆ. ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ (KDA) ಮತ್ತು ಲೇಹ್ ಅಪೆಕ್ಸ್ ಬಾಡಿ (LAB) ಜಂಟಿಯಾಗಿ ಹುಸೇನಿ ಪಾರ್ಕ್‌ನಲ್ಲಿ ಈ ಪ್ರತಿಭಟನೆಯನ್ನು ಆಯೋಜಿಸಿವೆ.

ಕೇಂದ್ರ ಸರ್ಕಾರವು ಮಾತುಕತೆಯನ್ನು ಮುಂದೂಡುತ್ತಿರುವುದಕ್ಕೆ ಅಸಮಾಧಾನಗೊಂಡ ಈ ಸಂಘಟನೆಗಳು, ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟವನ್ನು ತೀವ್ರಗೊಳಿಸಿವೆ. ಕಳೆದ ಐದು ವರ್ಷಗಳಿಂದ ಈ ಬೇಡಿಕೆಗಳನ್ನು ಮುಂದಿಟ್ಟುಕೊಂಡು KDA ಮತ್ತು LAB ಜಂಟಿಯಾಗಿ ಹೋರಾಟ ನಡೆಸುತ್ತಿವೆ. ಈ ಕುರಿತು ನವದೆಹಲಿಯೊಂದಿಗೆ ಹಲವಾರು ಸುತ್ತಿನ ಮಾತುಕತೆಗಳೂ ನಡೆದಿವೆ. ಆದಾಗ್ಯೂ, ಸರ್ಕಾರದಿಂದ ಯಾವುದೇ ಸ್ಪಷ್ಟ ಪ್ರಗತಿ ಕಂಡುಬಂದಿಲ್ಲ ಎಂದು ಅವು ಆರೋಪಿಸಿವೆ.ನಾಲ್ಕು ಪ್ರಮುಖ ಬೇಡಿಕೆಗಳೊಂದಿಗೆ ಪ್ರತಿಭಟನಾ ಸ್ಥಳದಲ್ಲಿ ಹಾಕಲಾಗಿರುವ ಬ್ಯಾನರ್‌ನಲ್ಲಿ, “ನಾವೆಲ್ಲರೂ ಒಟ್ಟಾಗಿ, ಲಡಾಖ್ ಅನ್ನು ಲಡಾಖ್ ಆಳುವ ಭವಿಷ್ಯವನ್ನು ನಿರ್ಮಿಸಬಹುದು” ಎಂದು ಬರೆಯಲಾಗಿದೆ. ಪ್ರತಿಭಟನಾಕಾರರು ಈ ನಾಲ್ಕು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ:

  1. ಲಡಾಖ್‌ಗೆ ರಾಜ್ಯ ಸ್ಥಾನಮಾನ.
  2. ಸಂವಿಧಾನದ ಆರನೇ ಶೆಡ್ಯೂಲ್ ವಿಸ್ತರಣೆ
  3. ಲೇಹ್ ಮತ್ತು ಕಾರ್ಗಿಲ್‌ಗೆ ಪ್ರತ್ಯೇಕ ಲೋಕಸಭಾ ಸ್ಥಾನಗಳು
  4. ಪ್ರತ್ಯೇಕ ಲೋಕಸೇವಾ ಆಯೋಗದ (PSC) ಸ್ಥಾಪನೆ

ಪ್ರಮುಖ ಕೆಡಿಎ ನಾಯಕರು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದು, “ವಸಾಹತುಶಾಹಿ ಆಡಳಿತ ಕೊನೆಗೊಳ್ಳಲಿ, ಪ್ರಜಾಪ್ರಭುತ್ವ ಮರುಸ್ಥಾಪನೆಯಾಗಲಿ” ಮತ್ತು “ರಾಜ್ಯ ಸ್ಥಾನಮಾನ – ಆರನೇ ಶೆಡ್ಯೂಲ್, ಬಲಿಷ್ಠ ಲಡಾಖ್” ಎಂಬ ಘೋಷಣೆಗಳನ್ನು ಕೂಗಿದರು.

ಮಾತುಕತೆ ವಿಳಂಬದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಕೆಡಿಎ ಸಹ-ಅಧ್ಯಕ್ಷರಾದ ಅಸ್ಗರ್ ಅಲಿ ಕರ್ಬಲಾಯಿ ಮಾತನಾಡಿ, “ಕಳೆದ ನಾಲ್ಕು ವರ್ಷಗಳಲ್ಲಿ ನಾವು ಈ ಹಕ್ಕುಗಳಿಗಾಗಿ ಪ್ರತಿಭಟನೆಗಳು, ಉಪವಾಸಗಳು ಮತ್ತು ಪಾದಯಾತ್ರೆಗಳನ್ನು ನಡೆಸಿದ್ದೇವೆ. ನಮ್ಮ ಕೊನೆಯ ಮಾತುಕತೆ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ಅವರೊಂದಿಗೆ ಮೇ ತಿಂಗಳಲ್ಲಿ ನಡೆದಿತ್ತು. ರಾಜ್ಯ ಸ್ಥಾನಮಾನ ಮತ್ತು ಆರನೇ ಶೆಡ್ಯೂಲ್ ಕುರಿತು ಮುಂದಿನ ತಿಂಗಳು ಚರ್ಚೆಗಳನ್ನು ಆರಂಭಿಸುವುದಾಗಿ ಅವರು ಭರವಸೆ ನೀಡಿದ್ದರು. ಆದರೆ, ಇದುವರೆಗೂ ಯಾವುದೇ ಮಾತುಕತೆ ನಡೆದಿಲ್ಲ. ಸರ್ಕಾರ ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿರುವಂತೆ ಕಾಣುತ್ತಿದೆ” ಎಂದು ಹೇಳಿದರು.

ಈ ವಿಳಂಬವೇ ಉಪವಾಸ ಸತ್ಯಾಗ್ರಹಕ್ಕೆ ಕಾರಣ ಎಂದು ಕರ್ಬಲಾಯಿ ತಿಳಿಸಿದರು. ಸರ್ಕಾರದ ಪ್ರತಿಕ್ರಿಯೆ ಸಿಗದಿದ್ದರೆ, ಎರಡೂ ಸಂಘಟನೆಗಳ ಉನ್ನತ ಸಮಿತಿಗಳು ಸಭೆ ಸೇರಿ ಮುಂದಿನ ಹೋರಾಟದ ಕುರಿತು ನಿರ್ಧರಿಸಲಿವೆ ಎಂದು ಅವರು ಎಚ್ಚರಿಸಿದರು. “ಸರ್ಕಾರ ಸ್ಪಂದಿಸದಿದ್ದರೆ, ಸಂಪೂರ್ಣ ಲಡಾಖ್ ಪ್ರದೇಶದ ಜನತೆ ಹೋರಾಟವನ್ನು ಮುಂದುವರಿಸಲು ಸಿದ್ಧವಾಗಿದೆ” ಎಂದು ಅವರು ಸ್ಪಷ್ಟಪಡಿಸಿದರು.

ಮತ್ತೊಬ್ಬ ಪ್ರಮುಖ ಕೆಡಿಎ ನಾಯಕರಾದ ಸಜ್ಜಾದ್ ಕಾರ್ಗಿಲಿ, ಭಾರತ ಸರ್ಕಾರ ಮಾತುಕತೆಯ ಭರವಸೆ ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು. “ಲಡಾಖ್ ಜನರಿಗೆ ನೀಡುತ್ತಿರುವ ಈ ವಸಾಹತುಶಾಹಿ ಆಡಳಿತ ಕೊನೆಗೊಳ್ಳಬೇಕು. ಸಂವಿಧಾನದ ಆರನೇ ಶೆಡ್ಯೂಲ್ ಜೊತೆಗೆ ಆದಷ್ಟು ಬೇಗ ಲಡಾಖ್‌ನಲ್ಲಿ ಪ್ರಜಾಪ್ರಭುತ್ವವನ್ನು ಪುನಃಸ್ಥಾಪಿಸಬೇಕು” ಎಂದು ಅವರು ಒತ್ತಾಯಿಸಿದರು.

ಮುಂದಿನ ಸುತ್ತಿನ ಮಾತುಕತೆಗಳನ್ನು ನಡೆಸುವಲ್ಲಿ ವಿಳಂಬ ಮಾಡಿದ್ದರಿಂದ ಉಪವಾಸ ಸತ್ಯಾಗ್ರಹ ನಡೆಸಲು ತಮಗೆ ಅನಿವಾರ್ಯವಾಯಿತು ಎಂದು ಅವರು ತಿಳಿಸಿದ್ದಾರೆ.

“ನಮಗೆ ಮಾತುಕತೆಗಳ ಮೇಲೆ ನಂಬಿಕೆಯಿತ್ತು ಮತ್ತು ಈಗಲೂ ಇದೆ. ಆದರೆ ಅವರು ಪ್ರತಿಭಟನೆ, ಮುಷ್ಕರ ಮತ್ತು ಲಡಾಖ್ ಬಂದ್ ಮಾಡಲು ನಮ್ಮನ್ನು ಪ್ರಚೋದಿಸುತ್ತಿದ್ದಾರೆ. ಈ ಹೋರಾಟ ಇಂದು ಕಾರ್ಗಿಲ್‌ನಲ್ಲಿ ಪ್ರಾರಂಭವಾಗಿದೆ. ಇದು ಮೂರು ದಿನಗಳ KDA ಮತ್ತು LAB ಜಂಟಿ ಕಾರ್ಯಕ್ರಮವಾಗಿದೆ” ಎಂದು ಅವರು ಹೇಳಿದ್ದಾರೆ.

ಸರ್ಕಾರ ಸ್ಪಂದಿಸದಿದ್ದರೆ, ಸಂಪೂರ್ಣ ಲಡಾಖ್‌ನಲ್ಲಿ ಪ್ರತಿಭಟನೆ ಮುಂದುವರಿಯಲಿದೆ. ಎರಡೂ ಸಂಘಟನೆಗಳ ಕೋರ್ ಕಮಿಟಿ ಮುಂದಿನ ಕ್ರಮಗಳನ್ನು ನಿರ್ಧರಿಸಲಿದೆ ಎಂದು ಅವರು ತಿಳಿಸಿದ್ದಾರೆ.

“ಆದ್ದರಿಂದ, ಮತ್ತೊಮ್ಮೆ ನಾವು ಶಾಂತಿಯುತವಾಗಿ ಮತ್ತು ಪ್ರಜಾಸತ್ತಾತ್ಮಕವಾಗಿ ಪ್ರತಿಭಟಿಸುತ್ತಿದ್ದೇವೆ. ಈ ಸಂದೇಶ ಸರ್ಕಾರವನ್ನು ತಲುಪುತ್ತದೆ ಎಂದು ನಾವು ಭಾವಿಸುತ್ತೇವೆ. ಲಡಾಖ್ ಜನರ ಮೇಲಿನ ಈ ವಸಾಹತುಶಾಹಿ ಧೋರಣೆ ಕೊನೆಗೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಪ್ರಜಾಪ್ರಭುತ್ವವನ್ನು ಲಡಾಖ್‌ನಲ್ಲಿ ಆದಷ್ಟು ಬೇಗ ಮರುಸ್ಥಾಪಿಸಬೇಕು ಮತ್ತು ಸರ್ಕಾರ ಭರವಸೆ ನೀಡಿದಂತೆ ಸಂವಿಧಾನದ ಆರನೇ ಶೆಡ್ಯೂಲ್ ಜಾರಿಗೆ ತರಬೇಕು ಎಂದು ಕಾರ್ಗಿಲಿ ಆಗ್ರಹಿಸಿದ್ದಾರೆ.

ಮಳೆಗಾಲದ ಅಧಿವೇಶನದಲ್ಲಿಯೇ ‘ಒಳಮೀಸಲಾತಿ ಗ್ಯಾರಂಟಿ’ಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಆ.11ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...