Homeಮುಖಪುಟಲಡಾಖ್‌ಗೆ ರಾಜ್ಯ ಸ್ಥಾನಮಾನ ಮತ್ತು ಆರನೇ ಶೆಡ್ಯೂಲ್ ವಿಸ್ತರಣೆ ಕೋರಿ ಕಾರ್ಗಿಲ್‌ನಲ್ಲಿ ಮೂರು ದಿನಗಳ ಉಪವಾಸ...

ಲಡಾಖ್‌ಗೆ ರಾಜ್ಯ ಸ್ಥಾನಮಾನ ಮತ್ತು ಆರನೇ ಶೆಡ್ಯೂಲ್ ವಿಸ್ತರಣೆ ಕೋರಿ ಕಾರ್ಗಿಲ್‌ನಲ್ಲಿ ಮೂರು ದಿನಗಳ ಉಪವಾಸ ಸತ್ಯಾಗ್ರಹ

- Advertisement -
- Advertisement -

ಕಾರ್ಗಿಲ್: ಲಡಾಖ್ ಪ್ರದೇಶಕ್ಕೆ ರಾಜ್ಯ ಸ್ಥಾನಮಾನ ಮತ್ತು ಸಂವಿಧಾನದ ಆರನೇ ಶೆಡ್ಯೂಲ್ ಅನ್ನು ವಿಸ್ತರಿಸುವಂತೆ ಒತ್ತಾಯಿಸಿ ಕಾರ್ಗಿಲ್‌ನಲ್ಲಿ ಇಂದಿನಿಂದ (ಶನಿವಾರ) ಮೂರು ದಿನಗಳ ಉಪವಾಸ ಸತ್ಯಾಗ್ರಹ ಆರಂಭವಾಗಿದೆ. ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ (KDA) ಮತ್ತು ಲೇಹ್ ಅಪೆಕ್ಸ್ ಬಾಡಿ (LAB) ಜಂಟಿಯಾಗಿ ಹುಸೇನಿ ಪಾರ್ಕ್‌ನಲ್ಲಿ ಈ ಪ್ರತಿಭಟನೆಯನ್ನು ಆಯೋಜಿಸಿವೆ.

ಕೇಂದ್ರ ಸರ್ಕಾರವು ಮಾತುಕತೆಯನ್ನು ಮುಂದೂಡುತ್ತಿರುವುದಕ್ಕೆ ಅಸಮಾಧಾನಗೊಂಡ ಈ ಸಂಘಟನೆಗಳು, ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟವನ್ನು ತೀವ್ರಗೊಳಿಸಿವೆ. ಕಳೆದ ಐದು ವರ್ಷಗಳಿಂದ ಈ ಬೇಡಿಕೆಗಳನ್ನು ಮುಂದಿಟ್ಟುಕೊಂಡು KDA ಮತ್ತು LAB ಜಂಟಿಯಾಗಿ ಹೋರಾಟ ನಡೆಸುತ್ತಿವೆ. ಈ ಕುರಿತು ನವದೆಹಲಿಯೊಂದಿಗೆ ಹಲವಾರು ಸುತ್ತಿನ ಮಾತುಕತೆಗಳೂ ನಡೆದಿವೆ. ಆದಾಗ್ಯೂ, ಸರ್ಕಾರದಿಂದ ಯಾವುದೇ ಸ್ಪಷ್ಟ ಪ್ರಗತಿ ಕಂಡುಬಂದಿಲ್ಲ ಎಂದು ಅವು ಆರೋಪಿಸಿವೆ.ನಾಲ್ಕು ಪ್ರಮುಖ ಬೇಡಿಕೆಗಳೊಂದಿಗೆ ಪ್ರತಿಭಟನಾ ಸ್ಥಳದಲ್ಲಿ ಹಾಕಲಾಗಿರುವ ಬ್ಯಾನರ್‌ನಲ್ಲಿ, “ನಾವೆಲ್ಲರೂ ಒಟ್ಟಾಗಿ, ಲಡಾಖ್ ಅನ್ನು ಲಡಾಖ್ ಆಳುವ ಭವಿಷ್ಯವನ್ನು ನಿರ್ಮಿಸಬಹುದು” ಎಂದು ಬರೆಯಲಾಗಿದೆ. ಪ್ರತಿಭಟನಾಕಾರರು ಈ ನಾಲ್ಕು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ:

  1. ಲಡಾಖ್‌ಗೆ ರಾಜ್ಯ ಸ್ಥಾನಮಾನ.
  2. ಸಂವಿಧಾನದ ಆರನೇ ಶೆಡ್ಯೂಲ್ ವಿಸ್ತರಣೆ
  3. ಲೇಹ್ ಮತ್ತು ಕಾರ್ಗಿಲ್‌ಗೆ ಪ್ರತ್ಯೇಕ ಲೋಕಸಭಾ ಸ್ಥಾನಗಳು
  4. ಪ್ರತ್ಯೇಕ ಲೋಕಸೇವಾ ಆಯೋಗದ (PSC) ಸ್ಥಾಪನೆ

ಪ್ರಮುಖ ಕೆಡಿಎ ನಾಯಕರು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದು, “ವಸಾಹತುಶಾಹಿ ಆಡಳಿತ ಕೊನೆಗೊಳ್ಳಲಿ, ಪ್ರಜಾಪ್ರಭುತ್ವ ಮರುಸ್ಥಾಪನೆಯಾಗಲಿ” ಮತ್ತು “ರಾಜ್ಯ ಸ್ಥಾನಮಾನ – ಆರನೇ ಶೆಡ್ಯೂಲ್, ಬಲಿಷ್ಠ ಲಡಾಖ್” ಎಂಬ ಘೋಷಣೆಗಳನ್ನು ಕೂಗಿದರು.

ಮಾತುಕತೆ ವಿಳಂಬದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಕೆಡಿಎ ಸಹ-ಅಧ್ಯಕ್ಷರಾದ ಅಸ್ಗರ್ ಅಲಿ ಕರ್ಬಲಾಯಿ ಮಾತನಾಡಿ, “ಕಳೆದ ನಾಲ್ಕು ವರ್ಷಗಳಲ್ಲಿ ನಾವು ಈ ಹಕ್ಕುಗಳಿಗಾಗಿ ಪ್ರತಿಭಟನೆಗಳು, ಉಪವಾಸಗಳು ಮತ್ತು ಪಾದಯಾತ್ರೆಗಳನ್ನು ನಡೆಸಿದ್ದೇವೆ. ನಮ್ಮ ಕೊನೆಯ ಮಾತುಕತೆ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ಅವರೊಂದಿಗೆ ಮೇ ತಿಂಗಳಲ್ಲಿ ನಡೆದಿತ್ತು. ರಾಜ್ಯ ಸ್ಥಾನಮಾನ ಮತ್ತು ಆರನೇ ಶೆಡ್ಯೂಲ್ ಕುರಿತು ಮುಂದಿನ ತಿಂಗಳು ಚರ್ಚೆಗಳನ್ನು ಆರಂಭಿಸುವುದಾಗಿ ಅವರು ಭರವಸೆ ನೀಡಿದ್ದರು. ಆದರೆ, ಇದುವರೆಗೂ ಯಾವುದೇ ಮಾತುಕತೆ ನಡೆದಿಲ್ಲ. ಸರ್ಕಾರ ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿರುವಂತೆ ಕಾಣುತ್ತಿದೆ” ಎಂದು ಹೇಳಿದರು.

ಈ ವಿಳಂಬವೇ ಉಪವಾಸ ಸತ್ಯಾಗ್ರಹಕ್ಕೆ ಕಾರಣ ಎಂದು ಕರ್ಬಲಾಯಿ ತಿಳಿಸಿದರು. ಸರ್ಕಾರದ ಪ್ರತಿಕ್ರಿಯೆ ಸಿಗದಿದ್ದರೆ, ಎರಡೂ ಸಂಘಟನೆಗಳ ಉನ್ನತ ಸಮಿತಿಗಳು ಸಭೆ ಸೇರಿ ಮುಂದಿನ ಹೋರಾಟದ ಕುರಿತು ನಿರ್ಧರಿಸಲಿವೆ ಎಂದು ಅವರು ಎಚ್ಚರಿಸಿದರು. “ಸರ್ಕಾರ ಸ್ಪಂದಿಸದಿದ್ದರೆ, ಸಂಪೂರ್ಣ ಲಡಾಖ್ ಪ್ರದೇಶದ ಜನತೆ ಹೋರಾಟವನ್ನು ಮುಂದುವರಿಸಲು ಸಿದ್ಧವಾಗಿದೆ” ಎಂದು ಅವರು ಸ್ಪಷ್ಟಪಡಿಸಿದರು.

ಮತ್ತೊಬ್ಬ ಪ್ರಮುಖ ಕೆಡಿಎ ನಾಯಕರಾದ ಸಜ್ಜಾದ್ ಕಾರ್ಗಿಲಿ, ಭಾರತ ಸರ್ಕಾರ ಮಾತುಕತೆಯ ಭರವಸೆ ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು. “ಲಡಾಖ್ ಜನರಿಗೆ ನೀಡುತ್ತಿರುವ ಈ ವಸಾಹತುಶಾಹಿ ಆಡಳಿತ ಕೊನೆಗೊಳ್ಳಬೇಕು. ಸಂವಿಧಾನದ ಆರನೇ ಶೆಡ್ಯೂಲ್ ಜೊತೆಗೆ ಆದಷ್ಟು ಬೇಗ ಲಡಾಖ್‌ನಲ್ಲಿ ಪ್ರಜಾಪ್ರಭುತ್ವವನ್ನು ಪುನಃಸ್ಥಾಪಿಸಬೇಕು” ಎಂದು ಅವರು ಒತ್ತಾಯಿಸಿದರು.

ಮುಂದಿನ ಸುತ್ತಿನ ಮಾತುಕತೆಗಳನ್ನು ನಡೆಸುವಲ್ಲಿ ವಿಳಂಬ ಮಾಡಿದ್ದರಿಂದ ಉಪವಾಸ ಸತ್ಯಾಗ್ರಹ ನಡೆಸಲು ತಮಗೆ ಅನಿವಾರ್ಯವಾಯಿತು ಎಂದು ಅವರು ತಿಳಿಸಿದ್ದಾರೆ.

“ನಮಗೆ ಮಾತುಕತೆಗಳ ಮೇಲೆ ನಂಬಿಕೆಯಿತ್ತು ಮತ್ತು ಈಗಲೂ ಇದೆ. ಆದರೆ ಅವರು ಪ್ರತಿಭಟನೆ, ಮುಷ್ಕರ ಮತ್ತು ಲಡಾಖ್ ಬಂದ್ ಮಾಡಲು ನಮ್ಮನ್ನು ಪ್ರಚೋದಿಸುತ್ತಿದ್ದಾರೆ. ಈ ಹೋರಾಟ ಇಂದು ಕಾರ್ಗಿಲ್‌ನಲ್ಲಿ ಪ್ರಾರಂಭವಾಗಿದೆ. ಇದು ಮೂರು ದಿನಗಳ KDA ಮತ್ತು LAB ಜಂಟಿ ಕಾರ್ಯಕ್ರಮವಾಗಿದೆ” ಎಂದು ಅವರು ಹೇಳಿದ್ದಾರೆ.

ಸರ್ಕಾರ ಸ್ಪಂದಿಸದಿದ್ದರೆ, ಸಂಪೂರ್ಣ ಲಡಾಖ್‌ನಲ್ಲಿ ಪ್ರತಿಭಟನೆ ಮುಂದುವರಿಯಲಿದೆ. ಎರಡೂ ಸಂಘಟನೆಗಳ ಕೋರ್ ಕಮಿಟಿ ಮುಂದಿನ ಕ್ರಮಗಳನ್ನು ನಿರ್ಧರಿಸಲಿದೆ ಎಂದು ಅವರು ತಿಳಿಸಿದ್ದಾರೆ.

“ಆದ್ದರಿಂದ, ಮತ್ತೊಮ್ಮೆ ನಾವು ಶಾಂತಿಯುತವಾಗಿ ಮತ್ತು ಪ್ರಜಾಸತ್ತಾತ್ಮಕವಾಗಿ ಪ್ರತಿಭಟಿಸುತ್ತಿದ್ದೇವೆ. ಈ ಸಂದೇಶ ಸರ್ಕಾರವನ್ನು ತಲುಪುತ್ತದೆ ಎಂದು ನಾವು ಭಾವಿಸುತ್ತೇವೆ. ಲಡಾಖ್ ಜನರ ಮೇಲಿನ ಈ ವಸಾಹತುಶಾಹಿ ಧೋರಣೆ ಕೊನೆಗೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಪ್ರಜಾಪ್ರಭುತ್ವವನ್ನು ಲಡಾಖ್‌ನಲ್ಲಿ ಆದಷ್ಟು ಬೇಗ ಮರುಸ್ಥಾಪಿಸಬೇಕು ಮತ್ತು ಸರ್ಕಾರ ಭರವಸೆ ನೀಡಿದಂತೆ ಸಂವಿಧಾನದ ಆರನೇ ಶೆಡ್ಯೂಲ್ ಜಾರಿಗೆ ತರಬೇಕು ಎಂದು ಕಾರ್ಗಿಲಿ ಆಗ್ರಹಿಸಿದ್ದಾರೆ.

ಮಳೆಗಾಲದ ಅಧಿವೇಶನದಲ್ಲಿಯೇ ‘ಒಳಮೀಸಲಾತಿ ಗ್ಯಾರಂಟಿ’ಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಆ.11ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...