Homeಮುಖಪುಟಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

ಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

- Advertisement -
- Advertisement -

ಜೂನ್ 13ರಂದು ಟೆಹ್ರಾನ್ ಮೇಲೆ ಇಸ್ರೇಲ್ ನಡೆಸಿದ ಬೃಹತ್ ಅನಿರೀಕ್ಷಿತ ದಾಳಿಯ ನಂತರ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಸತತ ಮೂರನೇ ದಿನವೂ ಮುಂದುವರಿದಿದೆ.

ಇಸ್ರೇಲ್ ನಡೆಸಿದ ಆರಂಭದ ದಾಳಿಯಲ್ಲಿ ಇರಾನ್‌ನ ಉನ್ನತ ಮಿಲಿಟರಿ ಅಧಿಕಾರಿಗಳು, ಹಿರಿಯ ವಿಜ್ಞಾನಿಗಳು ಮತ್ತು 20 ಮಕ್ಕಳು ಸೇರಿದಂತೆ 60ಕ್ಕೂ ಹೆಚ್ಚು ನಾಗರಿರು ಬಲಿಯಾಗಿದ್ದರು.

1. ಇರಾನ್‌ನಲ್ಲಿ 220 ದಾಟಿದ ಸಾವಿನ ಸಂಖ್ಯೆ : ಶನಿವಾರ ಇರಾನ್‌ನ ತೈಲ ಕೇಂದ್ರಗಳು ಮತ್ತು ಟೆಹ್ರಾನ್‌ನ ಜನವಸತಿ ಪ್ರದೇಶಗಳನ್ನು ಗುರಿಯಾಗಿಸಿ ಇಸ್ರೇಲ್ ನಡೆಸಿದ ದಾಳಿಯಲ್ಲಿ 70 ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಾವಿನ ಸಂಖ್ಯೆ 224ಕ್ಕೆ ಏರಿಕೆಯಾಗಿದೆ. 1,200ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.

ಕೊಲ್ಲಲ್ಪಟ್ಟವರಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ)ನ ಗುಪ್ತಚರ ಸಂಸ್ಥೆಯ ಮುಖ್ಯಸ್ಥ ಮೊಹಮ್ಮದ್ ಕಜೆಮಿ ಮತ್ತು ಇತರ ಇಬ್ಬರು ಜನರಲ್‌ಗಳು ಸೇರಿದ್ದಾರೆ.

2. ಇಸ್ರೇಲ್‌ನಲ್ಲಿ 14 ಜನರ ಸಾವು: ಇರಾನ್ ಕ್ಷಿಪಣಿ ದಾಳಿಯ ಮೂಲಕ ಇಸ್ರೇಲ್ ವಿರುದ್ದ ಪ್ರತೀಕಾರ ತೀರಿಸಿಕೊಂಡಿದ್ದು, ಕ್ಷಿಪಣಿಯು ಟೆಲ್ ಅವೀವ್‌ನ ಮಧ್ಯಭಾಗಕ್ಕೆ ಅಪ್ಪಳಿಸಿ ಜನವಸತಿ ಪ್ರದೇಶಗಳಲ್ಲಿ ಹಾನಿಯುಂಟು ಮಾಡಿದೆ. ಇದರಿಂದ 14 ಜನರು ಸಾವನ್ನಪ್ಪಿದ್ದಾರೆ ಮತ್ತು 390 ಜನರು ಗಾಯಗೊಂಡಿದ್ದಾರೆ.

3. ಇರಾನ್-ಯುಎಸ್ ಪರಮಾಣು ಮಾತುಕತೆ ರದ್ದು: ಇರಾನ್‌ನ ಪರಮಾಣು ಯೋಜನೆಯ ಭವಿಷ್ಯದ ಕುರಿತು ಅಮೆರಿಕ ಮತ್ತು ಇರಾನ್ ನಡುವಿನ ನಿಗದಿತ ಮಾತುಕತೆಗೆ ಕೆಲವು ದಿನಗಳ ಮೊದಲು ಇಸ್ರೇಲ್ ಇರಾನ್‌ ಮೇಲೆ ಅನಿರೀಕ್ಷಿತ ದಾಳಿ ನಡೆಸಿದೆ. ಮಧ್ಯಪ್ರಾಚ್ಯದ ಏಕೈಕ, ಆದರೆ ಅಘೋಷಿತ ಪರಮಾಣು ಶಸ್ತ್ರಸಜ್ಜಿತ ರಾಷ್ಟ್ರವಾದ ಇಸ್ರೇಲ್, ಇರಾನ್ ಪರಮಾಣು ಕಾರ್ಯಕ್ರಮವನ್ನು ಅಭಿವೃದ್ಧಿಪಡಿಸುವುದನ್ನು ತಡೆಯಲು ಪೂರ್ವಭಾವಿಯಾ ದಾಳಿ ನಡೆಸಲಾಗಿದೆ ಎಂದು ಹೇಳಿಕೊಂಡಿದೆ.

4. ಖಮೇನಿ ಹತ್ಯೆಯ ಇಸ್ರೇಲ್‌ ಯೋಜನೆಗೆ ಟ್ರಂಪ್ ತಡೆ: ಸಂಘರ್ಷದ ಮುಂದುವರಿದ ಭಾಗವಾಗಿ ಇರಾನ್‌ನ ಸಶಸ್ತ್ರ ಪಡೆಗಳ ಕಮಾಂಡರ್-ಇನ್-ಚೀಫ್ ಆಗಿ ಸೇವೆ ಸಲ್ಲಿಸುತ್ತಿರುವ ಮತ್ತು ಪ್ರಬಲ ಕ್ರಾಂತಿಕಾರಿ ಗಾರ್ಡ್ ಅನ್ನು ನಿಯಂತ್ರಿಸುತ್ತಿರುವ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಕೊಲ್ಲುವ ಇಸ್ರೇಲ್ ಯೋಜನೆಗೆ ಅಮೆರಿಕ ಅಧ್ಯಕ್ಷ ಟ್ರಂಪ್ ತಡೆಯೊಡ್ಡಿದ್ದಾರೆ ಎಂದು ಅಮೆರಿಕದ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಅಸೋಸಿಯೇಟೆಡ್ ಪ್ರೆಸ್‌ ವರದಿ ಮಾಡಿದೆ.

5. ಇರಾನ್-ಇಸ್ರೇಲ್ ನಡುವೆ ಕದನ ವಿರಾಮ ಒಪ್ಪಂದಕ್ಕೆ ಟ್ರಂಪ್ ಕರೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಇರಾನ್ ಮತ್ತು ಇಸ್ರೇಲ್‌ಗೆ ಕದನ ವಿರಾಮ ‘ಒಪ್ಪಂದ ಮಾಡಿಕೊಳ್ಳಿ’ ಎಂದು ಕರೆ ನೀಡಿದ್ದಾರೆ. ಶಾಂತಿ ಮಾತುಕತೆಗೆ ಮಧ್ಯಸ್ಥಿತಿಕೆ ವಹಿಸಲು ಅಮೆರಿಕ ಸಿದ್ದ ಎಂದಿದ್ದಾರೆ.

ಇಸ್ಫಹಾನ್ ತೈಲ ಸಂಸ್ಕರಣಾಗಾರದ ಮೇಲಿನ ದಾಳಿ ವರದಿ ನಿರಾಕರಿಸಿದ ಇರಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...