Homeಮುಖಪುಟಮೂರು ಬೇಡಿಕೆಗಳ ಈಡೇರಿಕೆಗೆ ಪಟ್ಟು: ಪ್ರತಿಪಕ್ಷಗಳಿಂದ ರಾಜ್ಯಸಭಾ ಅಧಿವೇಶನ ಬಾಯ್ಕಟ್

ಮೂರು ಬೇಡಿಕೆಗಳ ಈಡೇರಿಕೆಗೆ ಪಟ್ಟು: ಪ್ರತಿಪಕ್ಷಗಳಿಂದ ರಾಜ್ಯಸಭಾ ಅಧಿವೇಶನ ಬಾಯ್ಕಟ್

"ನೀವು ನನ್ನನ್ನು ಅಮಾನತ್ತು ಮಾಡಬಹುದು. ಆದರೆ ನಿಶಬ್ದಗೊಳಿಸಲು ಸಾಧ್ಯವಿಲ್ಲ" ಎಂದು ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ'ಬ್ರಿಯೆನ್ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

8 ಸಂಸದರ ಮೇಲಿನ ಒಂದು ವಾರದವರೆಗಿನ ಸಂಸತ್ ಅಧಿವೇಶನದಿಂದ ಅಮಾನತ್ತು ಶಿಕ್ಷೆ ರದ್ದುಗೊಳಿಸುವುದು ಸೇರಿದಂತೆ ಪ್ರಮುಖ ಮೂರು ಬೇಡಿಕೆಗಳನ್ನು ಸಭಾಪತಿಗಳು ಈಡೇರಿಸುವವರೆಗೂ ರಾಜ್ಯಸಭಾ ಅಧಿವೇಶನದಿಂದ ದೂರು ಉಳಿಯುವುದಾಗಿ ಪ್ರತಿಪಕ್ಷಗಳು ನಿರ್ಧರಿಸಿವೆ. ರಾಜ್ಯಸಭಾ ವಿರೋಧ ಪಕ್ಷದ ಮುಖಂಡ ಗುಲಾಮ್ ನಬಿ ಅಜಾದ್‌ರವರ ಈ ತೀರ್ಮಾನಕ್ಕೆ ಆಪ್, ತೃಣಮೂಲ ಕಾಂಗ್ರೆಸ್, ಸಿಪಿಎಂ ಸೇರಿದಂತೆ ಹಲವು ಪ್ರತಿಪಕ್ಷಗಳು ದನಿಗೂಡಿಸಿವೆ.

ಮೂರು ಪ್ರಮುಖ ಬೇಡಿಕೆಗಳು

  1. 8 ಸಂಸದರ ಮೇಲಿನ ಒಂದು ವಾರಗಳ ಅಮಾನತ್ತು ಶಿಕ್ಷೆಯನ್ನು ರದ್ದುಗೊಳಿಸುವುದು.
  2. ರೈತರ ಬೆಳೆಗಳಿಗೆ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು ನಿಗಧಿಗೊಳಿಸಬೇಕು. ಬೆಲೆ ನಿಗಧಿ ಮಾಡುವಾಗ ಎಂ.ಎಸ್ ಸ್ವಾಮಿನಾಥನ್‌ರವರ ಆಯೋಗದ ವರದಿಗಳನ್ನು ಜಾರಿಗೊಳಿಸಬೇಕು. ಈ ಬೆಲೆಗಿಂತ ಕಡಿಮೆ ದರಕ್ಕೆ ಯಾವುದೇ ಖಾಸಗಿ ಕಂಪನಿಗಳು ಕೊಳ್ಳಲು ಅವಕಾಶನೀಡಬಾರದು.
  3. ಸರ್ಕಾರದ ಫುಡ್‌ ಕಾರ್ಪೋರೇಷನ್ ಆಫ್ ಇಂಡಿಯಾ ನೇರವಾಗಿ ರೈತರ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆಗೆ ಕೊಂಡುಕೊಳ್ಳಬೇಕು.

ಭಾನುವಾರ ವಿವಾದಾತ್ಮಕ ಕೃಷಿ ಮಸೂದೆಗಳನ್ನು ಮಂಡಿಸುವಾಗ ಪ್ರತಿಪಕ್ಷಗಳು ಹಲವು ಸದಸ್ಯರು ಗದ್ದಲವೆಬ್ಬಿಸಿದ್ದರು. ಮಸೂದೆಯ ಕರಡುಪ್ರತಿಗಳನ್ನು ಹರಿಯಲು ಮುಂದಾಗಿದ್ದರು. ಈ ಆರೋಪದ ಹಿನ್ನೆಲೆಯಲ್ಲಿ 8 ಜನ ಸಂಸದರನ್ನ ಒಂದು ವಾರದ ಮಟ್ಟಿಗೆ ಸದನದಿಂದ ಅಮಾನತ್ತು ಮಾಡಲಾಗಿದೆ. ಇದನ್ನು ವಿರೋಧಿಸಿ ಆ 8 ಜನ ಸಂಸದರು ಸೋಮವಾರ ರಾತ್ರಿಯಿಡೀ ಸಂಸದ್ ಭವನದ ಎದುರಿನ ಹುಲ್ಲುಹಾಸಿನ ಮೇಲೆ ಕುಳಿತು ಅಹೋರಾತ್ರಿ ಧರಣಿ ನಡೆಸಿದ್ದಾರೆ.

ಮಂಗಳವಾರ ಬೆಳಿಗ್ಗೆಯೇ ಧರಣಿ ನಿರತರ ಬಳಿಗೆ ಟೀ ವಿತರಿಸಲು ಸ್ವತಃ ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ತೆರಳಿದ್ದಾರೆ. ಆದರೆ ಧರಣಿ ನಿರತ ಸಂಸದರು ಟೀ ತೆಗೆದುಕೊಳ್ಳಲು ನಿರಾಕರಿಸಿ ಹರಿವಂಶ್‌ರವರನ್ನು ರೈತವಿರೋಧಿ ಎಂದು ಕರೆದಿದ್ದಾರೆ. ಇದರಿಂದ ನೊಂದುಕೊಂಡ ಉಪಸಭಾಪತಿಗಳು ಒಂದು ದಿನದ ಕಾಲ ಉಪವಾಸ ವ್ರತ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.

ಹರಿವಂಶ್ ಬೆಂಬಲಕ್ಕೆ ನಿಂತಿರುವ ಪ್ರಧಾನಿ ಮೋದಿಯವರು “ವಯಕ್ತಿಕವಾಗಿ ತಮ್ಮ ಮೇಲೆ ದಾಳಿ ನಡೆಸಿದವರೆಗೆ ಟೀ ಕೊಡಲು ಮುಂದಾಗಿರುವ ಅವರ ವಿಶಾಲ ಹೃದಯದ ನಿಲುವನ್ನು ಬೆಂಬಲಿಸುತ್ತೇನೆ’ ಎಂದಿದ್ದಾರೆ.

ಉಪಸಭಾಪತಿಗಳು ರೈತವಿರೋಧಿ ಮಸೂದೆಗಳನ್ನು ಜಾರಿಗೊಳಿಸಲು ಆಡಳಿತ ಸರ್ಕಾರಕ್ಕೆ ಪ್ರಜಾಪ್ರಭುತ್ವ ವಿರೋಧಿಯಾಗಿ ಸಹಾಯ ಮಾಡಿದ್ದಾರೆ. ಮೂರು ದಿನಗಳ ಕಾಲ ಆ ಮಸೂದೆಗಳ ಬಗೆಗೆ ಚರ್ಚೆ ನಡೆಸಬೇಕೆಂದು ಮನವಿಯನ್ನು ತಳ್ಳಿಹಾಕಿದ್ದಾರೆ. ಅಲ್ಲದೇ ನೇರ ಮತದಾನಕ್ಕೆ ಒತ್ತಾಯಿಸಿದ ಪ್ರತಿಪಕ್ಷಗಳ ಮನವಿಯನ್ನು ತಿರಸ್ಕರಿಸಿ ಧ್ವನಿಮತದ ಮೂಲಕ ಮಸೂದೆ ಜಾರಿ ಮಾಡಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

“ನೀವು ನನ್ನನ್ನು ಅಮಾನತ್ತು ಮಾಡಬಹುದು. ಆದರೆ ನಿಶಬ್ದಗೊಳಿಸಲು ಸಾಧ್ಯವಿಲ್ಲ” ಎಂದು ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರಿಯೆನ್ ಟ್ವೀಟ್ ಮಾಡಿದ್ದಾರೆ.

ಇಂದು ಪ್ರತಿಪಕ್ಷಗಳ ಗೈರುಹಾಜರಿಯ ನಡುವೆಯೂ ಸದನ ಆರಂಭವಾಗಿದ್ದು, ಮತ್ತೊಂದು ಕೃಷಿ ಮಸೂದೆಯ ಮಂಡನೆಗೆ ಸಿದ್ಧತೆ ನಡೆದಿದೆ ಎನ್ನಲಾಗಿದೆ.


ಇದನ್ನೂ ಓದಿ; ಅಹೋರಾತ್ರಿ ಪ್ರತಿಭಟನೆ ನಡೆಸಿದ ಅಮಾನತುಗೊಂಡ ಸಂಸದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...