Homeಮುಖಪುಟಮೂರು ಬೇಡಿಕೆಗಳ ಈಡೇರಿಕೆಗೆ ಪಟ್ಟು: ಪ್ರತಿಪಕ್ಷಗಳಿಂದ ರಾಜ್ಯಸಭಾ ಅಧಿವೇಶನ ಬಾಯ್ಕಟ್

ಮೂರು ಬೇಡಿಕೆಗಳ ಈಡೇರಿಕೆಗೆ ಪಟ್ಟು: ಪ್ರತಿಪಕ್ಷಗಳಿಂದ ರಾಜ್ಯಸಭಾ ಅಧಿವೇಶನ ಬಾಯ್ಕಟ್

"ನೀವು ನನ್ನನ್ನು ಅಮಾನತ್ತು ಮಾಡಬಹುದು. ಆದರೆ ನಿಶಬ್ದಗೊಳಿಸಲು ಸಾಧ್ಯವಿಲ್ಲ" ಎಂದು ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ'ಬ್ರಿಯೆನ್ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

8 ಸಂಸದರ ಮೇಲಿನ ಒಂದು ವಾರದವರೆಗಿನ ಸಂಸತ್ ಅಧಿವೇಶನದಿಂದ ಅಮಾನತ್ತು ಶಿಕ್ಷೆ ರದ್ದುಗೊಳಿಸುವುದು ಸೇರಿದಂತೆ ಪ್ರಮುಖ ಮೂರು ಬೇಡಿಕೆಗಳನ್ನು ಸಭಾಪತಿಗಳು ಈಡೇರಿಸುವವರೆಗೂ ರಾಜ್ಯಸಭಾ ಅಧಿವೇಶನದಿಂದ ದೂರು ಉಳಿಯುವುದಾಗಿ ಪ್ರತಿಪಕ್ಷಗಳು ನಿರ್ಧರಿಸಿವೆ. ರಾಜ್ಯಸಭಾ ವಿರೋಧ ಪಕ್ಷದ ಮುಖಂಡ ಗುಲಾಮ್ ನಬಿ ಅಜಾದ್‌ರವರ ಈ ತೀರ್ಮಾನಕ್ಕೆ ಆಪ್, ತೃಣಮೂಲ ಕಾಂಗ್ರೆಸ್, ಸಿಪಿಎಂ ಸೇರಿದಂತೆ ಹಲವು ಪ್ರತಿಪಕ್ಷಗಳು ದನಿಗೂಡಿಸಿವೆ.

ಮೂರು ಪ್ರಮುಖ ಬೇಡಿಕೆಗಳು

  1. 8 ಸಂಸದರ ಮೇಲಿನ ಒಂದು ವಾರಗಳ ಅಮಾನತ್ತು ಶಿಕ್ಷೆಯನ್ನು ರದ್ದುಗೊಳಿಸುವುದು.
  2. ರೈತರ ಬೆಳೆಗಳಿಗೆ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು ನಿಗಧಿಗೊಳಿಸಬೇಕು. ಬೆಲೆ ನಿಗಧಿ ಮಾಡುವಾಗ ಎಂ.ಎಸ್ ಸ್ವಾಮಿನಾಥನ್‌ರವರ ಆಯೋಗದ ವರದಿಗಳನ್ನು ಜಾರಿಗೊಳಿಸಬೇಕು. ಈ ಬೆಲೆಗಿಂತ ಕಡಿಮೆ ದರಕ್ಕೆ ಯಾವುದೇ ಖಾಸಗಿ ಕಂಪನಿಗಳು ಕೊಳ್ಳಲು ಅವಕಾಶನೀಡಬಾರದು.
  3. ಸರ್ಕಾರದ ಫುಡ್‌ ಕಾರ್ಪೋರೇಷನ್ ಆಫ್ ಇಂಡಿಯಾ ನೇರವಾಗಿ ರೈತರ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆಗೆ ಕೊಂಡುಕೊಳ್ಳಬೇಕು.

ಭಾನುವಾರ ವಿವಾದಾತ್ಮಕ ಕೃಷಿ ಮಸೂದೆಗಳನ್ನು ಮಂಡಿಸುವಾಗ ಪ್ರತಿಪಕ್ಷಗಳು ಹಲವು ಸದಸ್ಯರು ಗದ್ದಲವೆಬ್ಬಿಸಿದ್ದರು. ಮಸೂದೆಯ ಕರಡುಪ್ರತಿಗಳನ್ನು ಹರಿಯಲು ಮುಂದಾಗಿದ್ದರು. ಈ ಆರೋಪದ ಹಿನ್ನೆಲೆಯಲ್ಲಿ 8 ಜನ ಸಂಸದರನ್ನ ಒಂದು ವಾರದ ಮಟ್ಟಿಗೆ ಸದನದಿಂದ ಅಮಾನತ್ತು ಮಾಡಲಾಗಿದೆ. ಇದನ್ನು ವಿರೋಧಿಸಿ ಆ 8 ಜನ ಸಂಸದರು ಸೋಮವಾರ ರಾತ್ರಿಯಿಡೀ ಸಂಸದ್ ಭವನದ ಎದುರಿನ ಹುಲ್ಲುಹಾಸಿನ ಮೇಲೆ ಕುಳಿತು ಅಹೋರಾತ್ರಿ ಧರಣಿ ನಡೆಸಿದ್ದಾರೆ.

ಮಂಗಳವಾರ ಬೆಳಿಗ್ಗೆಯೇ ಧರಣಿ ನಿರತರ ಬಳಿಗೆ ಟೀ ವಿತರಿಸಲು ಸ್ವತಃ ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ತೆರಳಿದ್ದಾರೆ. ಆದರೆ ಧರಣಿ ನಿರತ ಸಂಸದರು ಟೀ ತೆಗೆದುಕೊಳ್ಳಲು ನಿರಾಕರಿಸಿ ಹರಿವಂಶ್‌ರವರನ್ನು ರೈತವಿರೋಧಿ ಎಂದು ಕರೆದಿದ್ದಾರೆ. ಇದರಿಂದ ನೊಂದುಕೊಂಡ ಉಪಸಭಾಪತಿಗಳು ಒಂದು ದಿನದ ಕಾಲ ಉಪವಾಸ ವ್ರತ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.

ಹರಿವಂಶ್ ಬೆಂಬಲಕ್ಕೆ ನಿಂತಿರುವ ಪ್ರಧಾನಿ ಮೋದಿಯವರು “ವಯಕ್ತಿಕವಾಗಿ ತಮ್ಮ ಮೇಲೆ ದಾಳಿ ನಡೆಸಿದವರೆಗೆ ಟೀ ಕೊಡಲು ಮುಂದಾಗಿರುವ ಅವರ ವಿಶಾಲ ಹೃದಯದ ನಿಲುವನ್ನು ಬೆಂಬಲಿಸುತ್ತೇನೆ’ ಎಂದಿದ್ದಾರೆ.

ಉಪಸಭಾಪತಿಗಳು ರೈತವಿರೋಧಿ ಮಸೂದೆಗಳನ್ನು ಜಾರಿಗೊಳಿಸಲು ಆಡಳಿತ ಸರ್ಕಾರಕ್ಕೆ ಪ್ರಜಾಪ್ರಭುತ್ವ ವಿರೋಧಿಯಾಗಿ ಸಹಾಯ ಮಾಡಿದ್ದಾರೆ. ಮೂರು ದಿನಗಳ ಕಾಲ ಆ ಮಸೂದೆಗಳ ಬಗೆಗೆ ಚರ್ಚೆ ನಡೆಸಬೇಕೆಂದು ಮನವಿಯನ್ನು ತಳ್ಳಿಹಾಕಿದ್ದಾರೆ. ಅಲ್ಲದೇ ನೇರ ಮತದಾನಕ್ಕೆ ಒತ್ತಾಯಿಸಿದ ಪ್ರತಿಪಕ್ಷಗಳ ಮನವಿಯನ್ನು ತಿರಸ್ಕರಿಸಿ ಧ್ವನಿಮತದ ಮೂಲಕ ಮಸೂದೆ ಜಾರಿ ಮಾಡಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

“ನೀವು ನನ್ನನ್ನು ಅಮಾನತ್ತು ಮಾಡಬಹುದು. ಆದರೆ ನಿಶಬ್ದಗೊಳಿಸಲು ಸಾಧ್ಯವಿಲ್ಲ” ಎಂದು ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರಿಯೆನ್ ಟ್ವೀಟ್ ಮಾಡಿದ್ದಾರೆ.

ಇಂದು ಪ್ರತಿಪಕ್ಷಗಳ ಗೈರುಹಾಜರಿಯ ನಡುವೆಯೂ ಸದನ ಆರಂಭವಾಗಿದ್ದು, ಮತ್ತೊಂದು ಕೃಷಿ ಮಸೂದೆಯ ಮಂಡನೆಗೆ ಸಿದ್ಧತೆ ನಡೆದಿದೆ ಎನ್ನಲಾಗಿದೆ.


ಇದನ್ನೂ ಓದಿ; ಅಹೋರಾತ್ರಿ ಪ್ರತಿಭಟನೆ ನಡೆಸಿದ ಅಮಾನತುಗೊಂಡ ಸಂಸದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...