Homeಕರ್ನಾಟಕಸದನದ ರಸಿಕ ಸವದಿಗೆ ಸುಗ್ಗಿ: ಮೂವರು ಡಿಸಿಎಂ, ಸಿಎಂಗೆ ಮೂರುನಾಮ!

ಸದನದ ರಸಿಕ ಸವದಿಗೆ ಸುಗ್ಗಿ: ಮೂವರು ಡಿಸಿಎಂ, ಸಿಎಂಗೆ ಮೂರುನಾಮ!

ಇತ್ತ ಸವದಿಯ ಎದುರು ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ ಬಚ್ಚಾಗಳಾಗಿದ್ದಾರೆ. ಬಹುಶಃ ಭಿನ್ನಮತ ಸ್ಫೋಟಗೊಳ್ಳಲು ಇದಕ್ಕಿಂತ ಇನ್ನೇನು ಬೇಕು? ವಿಚಿತ್ರವೆಂದರೆ ಈಗ ಯಡಿಯೂರಪ್ಪನವರೇ ಪರಮ ಅತೃಪ್ತರು!

- Advertisement -
- Advertisement -

ಅಂತೂ ಬಿಜೆಪಿ ಅಲ್ಲಲ್ಲ…, ಕ್ಷಮಿಸಿ, ಅಮಿತ್ ಶಾ ಮತ್ತು ಬಿ.ಎಲ್ ಸಂತೋಷ್ ಕರ್ನಾಟಕದ ಸಚಿವ ಮಹಾಶಯರಿಗೆ ಖಾತೆಗಳನ್ನು ಅನುಗ್ರಹಿಸಿದ್ದಾರೆ. ಜೊತೆಗೆ ಕರ್ನಾಟಕದ ಮೇಲೆ ಮೂವರು ಉಪ ಮುಖ್ಯಮಂತ್ರಿಗಳನ್ನು ಹೇರಿದ್ದಾರೆ.

ಮೂವರು ಡಿಸಿಎಂ ಎಂಬುದರ ಅರ್ಥ ಸಿಎಂ ಡಮ್ಮಿ ಎಂದೇ! ಮೂವರು ಡಿಸಿಎಂಗಳ ಪೈಕಿ ಗೋವಿಂದ ಕಾರಜೋಳರನ್ನು ಬಿಟ್ಟರೆ ಲಕ್ಷ್ಮಣ ಸವದಿ ಮತ್ತು ಅಶ್ವಥ್ ನಾರಾಯಣರು ಯಡಿಯೂರಪ್ಪನವರ ಹಿಡಿತಕ್ಕೆ ಸಿಗುವವರಲ್ಲ. ಹೀಗಾಗಿ ಅಷ್ಟರಮಟ್ಟಿಗೆ ಯಡಿಯೂರಪ್ಪ ದೇಶದ ನಂಬರ್ 1 ಡಮ್ಮಿ ಸಿಎಂ!

ಇಲ್ಲಿ ವಿಚಿತ್ರವೆಂದರೆ, ಒಂದು ಬಾರಿ ಮುಖ್ಯಮಂತ್ರಿ ಆಗಿದ್ದ ಜಗದೀಶ್ ಶೆಟ್ಟರ್, ಇತರ ಹಿರಿತಲೆಗಳಾದ ಈಶ್ವರಪ್ಪರಂಥರಿಗೂ ಡಿಸಿಎಂ ಹುದ್ದೆ ಇಲ್ಲ, ಹಾಗೆಯೇ ಒಂದು ಸಲ ಡಿಸಿಎಂ ಆಗಿದ್ದ ಆರ್ ಅಶೋಕ್ ಮತ್ತು ಡಿಸಿಎಂ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದ ಸಿ.ಟಿ. ರವಿಗೂ ಆ ಭಾಗ್ಯವಿಲ್ಲ.

‘ನೀಲಿ ಚಿತ್ರವೇ’ ಕೇಸರಿ ಪಕ್ಷಕ್ಕೆ ಮಾನದಂಡವಾಯಿತೆ?
ಡಿಸಿಎಂಗಳನ್ನು ಆಯ್ಕೆ ಮಾಡುವಾಗ ಯಾವ ಮಾನದಂಡ ಅನುಸರಿಸಿದ್ದಾರೆ ಎಂಬುದನ್ನು ನೋಡುತ್ತ ಹೋದರೆ ಗಾಬರಿ ಬೀಳುತ್ತೀರಿ. ಹಿರಿಯ ದಲಿತ ಸಚಿವ ಗೋವಿಂದ ಕಾರಜೋಳರ ಆಯ್ಕೆಯೇನೋ ಸರಿಯಾಗಿದೆ. ಆದರೆ ಅಶ್ವಥ್ ನಾರಾಯಣ್ ಮತ್ತು ಲಕ್ಷ್ಮಣ ಸವದಿ ಆಯ್ಕೆಗೆ ಬಳಸಿದ ಮಾನದಂಡವಾದರೂ ಏನು?

ಅದರಲ್ಲೂ ಲಕ್ಷಣ ಸವದಿಯವರಿಗಂತೂ ಈ ಸಲ ಬಂಪರ್ ಲಾಟರಿಯೇ ಹೊಡೆದಿದೆ. ಮೊದಲಿಗೆ ಎಂ.ಎಲ್.ಎ ಯು ಅಲ್ಲದ ಎಂಎಲ್‍ಸಿಯೂ ಅಲ್ಲದ ಸವದಿಗೆ ಸಚಿವ ಸ್ಥಾನ ನೀಡಲಾಗಿತು. ಅದರ ಹಿಂದೆಯೇ ಅವರಿಗೆ ‘ಲಾಭದಾಯಕ’ ಸಾರಿಗೆ ಖಾತೆ ನೀಡಲಾಯಿತು. ಈಗ ಉಪ ಮುಖ್ಯಮಂತ್ರಿ ಹುದ್ದೆಯ ಗಿಫ್ಟ್!

ಕರ್ನಾಟಕದ ಜನತೆಗೆ ಸವದಿ ಅಂದ ತಕ್ಷಣ ನೆನಪಾಗುವುದು ವಿಧಾನಸಭಾ ಅಧಿವೇಶನದಲ್ಲಿ ಬ್ಲೂ ಫಿಲಂ ವೀಕ್ಷಸಿದ್ದು! ಬ್ರಹ್ಮಚಾರಿ ಬಿ.ಎಲ್ ಸಂತೋಷರಿಗೆ ಸವದಿಯವರ ಈ ‘ಹವ್ಯಾಸ’ವೂ ಇಷ್ಟವಾಗಿರಬಹುದೇ?

ಅಂದಂತೆ, ಅವತ್ತು ಸವದಿಯವರ ಜೊತೆ ಬ್ಲೂ ಪಿಚ್ಚರ್ ನೋಡಿದ ಆರೋಪ ಹೊತ್ತಿದ್ದ ಸಿ.ಸಿ. ಪಾಟೀಲರಿಗೂ ಗಣಿ ಮತ್ತು ಭೂ ವಿಜ್ಞಾನದಂತಹ ಹುಲ್ಲುಗಾವಲನ್ನೇ ನೀಡಲಾಗಿದೆ.. ಇದೇ ಮಾನದಂಡದ ಪ್ರಕಾರ ಅರವಿಂದ ಲಿಂಬಾವಳಿಯವರಿಗೆ ದೊಡ್ಡ ಅನ್ಯಾಯವಾಗಿದೆ. ಸಚಿವ ಸ್ಥಾನವೂ ಇಲ್ಲ, ಡಿಸಿಎಂ ಕೂಡ ಇಲ್ಲ ಅಂದರೆ ಅವರು ತಮ್ಮ ಫೀಲ್ಡ್ ನಲ್ಲಿ ಇನ್ನು ಮಣ್ಣು ಹೊರಬೇಕಾಗಿದೆ ಅನ್ನಿಸುತ್ತೆ.

ಖಾತೆ ಹಂಚಿಕೆ ಮತ್ತು ಡಿಸಿಎಂ ನೇಮಕಾತಿ ಎರಡರಲ್ಲೂ ಯಡಿಯೂರಪ್ಪರಿಗೆ ದೊಡ್ಡ ಹಿನ್ನಡೆಯಾಗಿದೆ. ಇತ್ತ ಸವದಿಯ ಎದುರು ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ ಬಚ್ಚಾಗಳಾಗಿದ್ದಾರೆ. ಬಹುಶಃ ಭಿನ್ನಮತ ಸ್ಫೋಟಗೊಳ್ಳಲು ಇದಕ್ಕಿಂತ ಇನ್ನೇನು ಬೇಕು? ವಿಚಿತ್ರವೆಂದರೆ ಈಗ ಯಡಿಯೂರಪ್ಪನವರೇ ಪರಮ ಅತೃಪ್ತರು!

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾದ ಸಿ.ಟಿ ರವಿ: ಕಾರಣವೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...