Homeಕರ್ನಾಟಕಸದನದ ರಸಿಕ ಸವದಿಗೆ ಸುಗ್ಗಿ: ಮೂವರು ಡಿಸಿಎಂ, ಸಿಎಂಗೆ ಮೂರುನಾಮ!

ಸದನದ ರಸಿಕ ಸವದಿಗೆ ಸುಗ್ಗಿ: ಮೂವರು ಡಿಸಿಎಂ, ಸಿಎಂಗೆ ಮೂರುನಾಮ!

ಇತ್ತ ಸವದಿಯ ಎದುರು ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ ಬಚ್ಚಾಗಳಾಗಿದ್ದಾರೆ. ಬಹುಶಃ ಭಿನ್ನಮತ ಸ್ಫೋಟಗೊಳ್ಳಲು ಇದಕ್ಕಿಂತ ಇನ್ನೇನು ಬೇಕು? ವಿಚಿತ್ರವೆಂದರೆ ಈಗ ಯಡಿಯೂರಪ್ಪನವರೇ ಪರಮ ಅತೃಪ್ತರು!

- Advertisement -
- Advertisement -

ಅಂತೂ ಬಿಜೆಪಿ ಅಲ್ಲಲ್ಲ…, ಕ್ಷಮಿಸಿ, ಅಮಿತ್ ಶಾ ಮತ್ತು ಬಿ.ಎಲ್ ಸಂತೋಷ್ ಕರ್ನಾಟಕದ ಸಚಿವ ಮಹಾಶಯರಿಗೆ ಖಾತೆಗಳನ್ನು ಅನುಗ್ರಹಿಸಿದ್ದಾರೆ. ಜೊತೆಗೆ ಕರ್ನಾಟಕದ ಮೇಲೆ ಮೂವರು ಉಪ ಮುಖ್ಯಮಂತ್ರಿಗಳನ್ನು ಹೇರಿದ್ದಾರೆ.

ಮೂವರು ಡಿಸಿಎಂ ಎಂಬುದರ ಅರ್ಥ ಸಿಎಂ ಡಮ್ಮಿ ಎಂದೇ! ಮೂವರು ಡಿಸಿಎಂಗಳ ಪೈಕಿ ಗೋವಿಂದ ಕಾರಜೋಳರನ್ನು ಬಿಟ್ಟರೆ ಲಕ್ಷ್ಮಣ ಸವದಿ ಮತ್ತು ಅಶ್ವಥ್ ನಾರಾಯಣರು ಯಡಿಯೂರಪ್ಪನವರ ಹಿಡಿತಕ್ಕೆ ಸಿಗುವವರಲ್ಲ. ಹೀಗಾಗಿ ಅಷ್ಟರಮಟ್ಟಿಗೆ ಯಡಿಯೂರಪ್ಪ ದೇಶದ ನಂಬರ್ 1 ಡಮ್ಮಿ ಸಿಎಂ!

ಇಲ್ಲಿ ವಿಚಿತ್ರವೆಂದರೆ, ಒಂದು ಬಾರಿ ಮುಖ್ಯಮಂತ್ರಿ ಆಗಿದ್ದ ಜಗದೀಶ್ ಶೆಟ್ಟರ್, ಇತರ ಹಿರಿತಲೆಗಳಾದ ಈಶ್ವರಪ್ಪರಂಥರಿಗೂ ಡಿಸಿಎಂ ಹುದ್ದೆ ಇಲ್ಲ, ಹಾಗೆಯೇ ಒಂದು ಸಲ ಡಿಸಿಎಂ ಆಗಿದ್ದ ಆರ್ ಅಶೋಕ್ ಮತ್ತು ಡಿಸಿಎಂ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದ ಸಿ.ಟಿ. ರವಿಗೂ ಆ ಭಾಗ್ಯವಿಲ್ಲ.

‘ನೀಲಿ ಚಿತ್ರವೇ’ ಕೇಸರಿ ಪಕ್ಷಕ್ಕೆ ಮಾನದಂಡವಾಯಿತೆ?
ಡಿಸಿಎಂಗಳನ್ನು ಆಯ್ಕೆ ಮಾಡುವಾಗ ಯಾವ ಮಾನದಂಡ ಅನುಸರಿಸಿದ್ದಾರೆ ಎಂಬುದನ್ನು ನೋಡುತ್ತ ಹೋದರೆ ಗಾಬರಿ ಬೀಳುತ್ತೀರಿ. ಹಿರಿಯ ದಲಿತ ಸಚಿವ ಗೋವಿಂದ ಕಾರಜೋಳರ ಆಯ್ಕೆಯೇನೋ ಸರಿಯಾಗಿದೆ. ಆದರೆ ಅಶ್ವಥ್ ನಾರಾಯಣ್ ಮತ್ತು ಲಕ್ಷ್ಮಣ ಸವದಿ ಆಯ್ಕೆಗೆ ಬಳಸಿದ ಮಾನದಂಡವಾದರೂ ಏನು?

ಅದರಲ್ಲೂ ಲಕ್ಷಣ ಸವದಿಯವರಿಗಂತೂ ಈ ಸಲ ಬಂಪರ್ ಲಾಟರಿಯೇ ಹೊಡೆದಿದೆ. ಮೊದಲಿಗೆ ಎಂ.ಎಲ್.ಎ ಯು ಅಲ್ಲದ ಎಂಎಲ್‍ಸಿಯೂ ಅಲ್ಲದ ಸವದಿಗೆ ಸಚಿವ ಸ್ಥಾನ ನೀಡಲಾಗಿತು. ಅದರ ಹಿಂದೆಯೇ ಅವರಿಗೆ ‘ಲಾಭದಾಯಕ’ ಸಾರಿಗೆ ಖಾತೆ ನೀಡಲಾಯಿತು. ಈಗ ಉಪ ಮುಖ್ಯಮಂತ್ರಿ ಹುದ್ದೆಯ ಗಿಫ್ಟ್!

ಕರ್ನಾಟಕದ ಜನತೆಗೆ ಸವದಿ ಅಂದ ತಕ್ಷಣ ನೆನಪಾಗುವುದು ವಿಧಾನಸಭಾ ಅಧಿವೇಶನದಲ್ಲಿ ಬ್ಲೂ ಫಿಲಂ ವೀಕ್ಷಸಿದ್ದು! ಬ್ರಹ್ಮಚಾರಿ ಬಿ.ಎಲ್ ಸಂತೋಷರಿಗೆ ಸವದಿಯವರ ಈ ‘ಹವ್ಯಾಸ’ವೂ ಇಷ್ಟವಾಗಿರಬಹುದೇ?

ಅಂದಂತೆ, ಅವತ್ತು ಸವದಿಯವರ ಜೊತೆ ಬ್ಲೂ ಪಿಚ್ಚರ್ ನೋಡಿದ ಆರೋಪ ಹೊತ್ತಿದ್ದ ಸಿ.ಸಿ. ಪಾಟೀಲರಿಗೂ ಗಣಿ ಮತ್ತು ಭೂ ವಿಜ್ಞಾನದಂತಹ ಹುಲ್ಲುಗಾವಲನ್ನೇ ನೀಡಲಾಗಿದೆ.. ಇದೇ ಮಾನದಂಡದ ಪ್ರಕಾರ ಅರವಿಂದ ಲಿಂಬಾವಳಿಯವರಿಗೆ ದೊಡ್ಡ ಅನ್ಯಾಯವಾಗಿದೆ. ಸಚಿವ ಸ್ಥಾನವೂ ಇಲ್ಲ, ಡಿಸಿಎಂ ಕೂಡ ಇಲ್ಲ ಅಂದರೆ ಅವರು ತಮ್ಮ ಫೀಲ್ಡ್ ನಲ್ಲಿ ಇನ್ನು ಮಣ್ಣು ಹೊರಬೇಕಾಗಿದೆ ಅನ್ನಿಸುತ್ತೆ.

ಖಾತೆ ಹಂಚಿಕೆ ಮತ್ತು ಡಿಸಿಎಂ ನೇಮಕಾತಿ ಎರಡರಲ್ಲೂ ಯಡಿಯೂರಪ್ಪರಿಗೆ ದೊಡ್ಡ ಹಿನ್ನಡೆಯಾಗಿದೆ. ಇತ್ತ ಸವದಿಯ ಎದುರು ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ ಬಚ್ಚಾಗಳಾಗಿದ್ದಾರೆ. ಬಹುಶಃ ಭಿನ್ನಮತ ಸ್ಫೋಟಗೊಳ್ಳಲು ಇದಕ್ಕಿಂತ ಇನ್ನೇನು ಬೇಕು? ವಿಚಿತ್ರವೆಂದರೆ ಈಗ ಯಡಿಯೂರಪ್ಪನವರೇ ಪರಮ ಅತೃಪ್ತರು!

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾದ ಸಿ.ಟಿ ರವಿ: ಕಾರಣವೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...