Homeಕರ್ನಾಟಕಸದನದ ರಸಿಕ ಸವದಿಗೆ ಸುಗ್ಗಿ: ಮೂವರು ಡಿಸಿಎಂ, ಸಿಎಂಗೆ ಮೂರುನಾಮ!

ಸದನದ ರಸಿಕ ಸವದಿಗೆ ಸುಗ್ಗಿ: ಮೂವರು ಡಿಸಿಎಂ, ಸಿಎಂಗೆ ಮೂರುನಾಮ!

ಇತ್ತ ಸವದಿಯ ಎದುರು ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ ಬಚ್ಚಾಗಳಾಗಿದ್ದಾರೆ. ಬಹುಶಃ ಭಿನ್ನಮತ ಸ್ಫೋಟಗೊಳ್ಳಲು ಇದಕ್ಕಿಂತ ಇನ್ನೇನು ಬೇಕು? ವಿಚಿತ್ರವೆಂದರೆ ಈಗ ಯಡಿಯೂರಪ್ಪನವರೇ ಪರಮ ಅತೃಪ್ತರು!

- Advertisement -
- Advertisement -

ಅಂತೂ ಬಿಜೆಪಿ ಅಲ್ಲಲ್ಲ…, ಕ್ಷಮಿಸಿ, ಅಮಿತ್ ಶಾ ಮತ್ತು ಬಿ.ಎಲ್ ಸಂತೋಷ್ ಕರ್ನಾಟಕದ ಸಚಿವ ಮಹಾಶಯರಿಗೆ ಖಾತೆಗಳನ್ನು ಅನುಗ್ರಹಿಸಿದ್ದಾರೆ. ಜೊತೆಗೆ ಕರ್ನಾಟಕದ ಮೇಲೆ ಮೂವರು ಉಪ ಮುಖ್ಯಮಂತ್ರಿಗಳನ್ನು ಹೇರಿದ್ದಾರೆ.

ಮೂವರು ಡಿಸಿಎಂ ಎಂಬುದರ ಅರ್ಥ ಸಿಎಂ ಡಮ್ಮಿ ಎಂದೇ! ಮೂವರು ಡಿಸಿಎಂಗಳ ಪೈಕಿ ಗೋವಿಂದ ಕಾರಜೋಳರನ್ನು ಬಿಟ್ಟರೆ ಲಕ್ಷ್ಮಣ ಸವದಿ ಮತ್ತು ಅಶ್ವಥ್ ನಾರಾಯಣರು ಯಡಿಯೂರಪ್ಪನವರ ಹಿಡಿತಕ್ಕೆ ಸಿಗುವವರಲ್ಲ. ಹೀಗಾಗಿ ಅಷ್ಟರಮಟ್ಟಿಗೆ ಯಡಿಯೂರಪ್ಪ ದೇಶದ ನಂಬರ್ 1 ಡಮ್ಮಿ ಸಿಎಂ!

ಇಲ್ಲಿ ವಿಚಿತ್ರವೆಂದರೆ, ಒಂದು ಬಾರಿ ಮುಖ್ಯಮಂತ್ರಿ ಆಗಿದ್ದ ಜಗದೀಶ್ ಶೆಟ್ಟರ್, ಇತರ ಹಿರಿತಲೆಗಳಾದ ಈಶ್ವರಪ್ಪರಂಥರಿಗೂ ಡಿಸಿಎಂ ಹುದ್ದೆ ಇಲ್ಲ, ಹಾಗೆಯೇ ಒಂದು ಸಲ ಡಿಸಿಎಂ ಆಗಿದ್ದ ಆರ್ ಅಶೋಕ್ ಮತ್ತು ಡಿಸಿಎಂ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದ ಸಿ.ಟಿ. ರವಿಗೂ ಆ ಭಾಗ್ಯವಿಲ್ಲ.

‘ನೀಲಿ ಚಿತ್ರವೇ’ ಕೇಸರಿ ಪಕ್ಷಕ್ಕೆ ಮಾನದಂಡವಾಯಿತೆ?
ಡಿಸಿಎಂಗಳನ್ನು ಆಯ್ಕೆ ಮಾಡುವಾಗ ಯಾವ ಮಾನದಂಡ ಅನುಸರಿಸಿದ್ದಾರೆ ಎಂಬುದನ್ನು ನೋಡುತ್ತ ಹೋದರೆ ಗಾಬರಿ ಬೀಳುತ್ತೀರಿ. ಹಿರಿಯ ದಲಿತ ಸಚಿವ ಗೋವಿಂದ ಕಾರಜೋಳರ ಆಯ್ಕೆಯೇನೋ ಸರಿಯಾಗಿದೆ. ಆದರೆ ಅಶ್ವಥ್ ನಾರಾಯಣ್ ಮತ್ತು ಲಕ್ಷ್ಮಣ ಸವದಿ ಆಯ್ಕೆಗೆ ಬಳಸಿದ ಮಾನದಂಡವಾದರೂ ಏನು?

ಅದರಲ್ಲೂ ಲಕ್ಷಣ ಸವದಿಯವರಿಗಂತೂ ಈ ಸಲ ಬಂಪರ್ ಲಾಟರಿಯೇ ಹೊಡೆದಿದೆ. ಮೊದಲಿಗೆ ಎಂ.ಎಲ್.ಎ ಯು ಅಲ್ಲದ ಎಂಎಲ್‍ಸಿಯೂ ಅಲ್ಲದ ಸವದಿಗೆ ಸಚಿವ ಸ್ಥಾನ ನೀಡಲಾಗಿತು. ಅದರ ಹಿಂದೆಯೇ ಅವರಿಗೆ ‘ಲಾಭದಾಯಕ’ ಸಾರಿಗೆ ಖಾತೆ ನೀಡಲಾಯಿತು. ಈಗ ಉಪ ಮುಖ್ಯಮಂತ್ರಿ ಹುದ್ದೆಯ ಗಿಫ್ಟ್!

ಕರ್ನಾಟಕದ ಜನತೆಗೆ ಸವದಿ ಅಂದ ತಕ್ಷಣ ನೆನಪಾಗುವುದು ವಿಧಾನಸಭಾ ಅಧಿವೇಶನದಲ್ಲಿ ಬ್ಲೂ ಫಿಲಂ ವೀಕ್ಷಸಿದ್ದು! ಬ್ರಹ್ಮಚಾರಿ ಬಿ.ಎಲ್ ಸಂತೋಷರಿಗೆ ಸವದಿಯವರ ಈ ‘ಹವ್ಯಾಸ’ವೂ ಇಷ್ಟವಾಗಿರಬಹುದೇ?

ಅಂದಂತೆ, ಅವತ್ತು ಸವದಿಯವರ ಜೊತೆ ಬ್ಲೂ ಪಿಚ್ಚರ್ ನೋಡಿದ ಆರೋಪ ಹೊತ್ತಿದ್ದ ಸಿ.ಸಿ. ಪಾಟೀಲರಿಗೂ ಗಣಿ ಮತ್ತು ಭೂ ವಿಜ್ಞಾನದಂತಹ ಹುಲ್ಲುಗಾವಲನ್ನೇ ನೀಡಲಾಗಿದೆ.. ಇದೇ ಮಾನದಂಡದ ಪ್ರಕಾರ ಅರವಿಂದ ಲಿಂಬಾವಳಿಯವರಿಗೆ ದೊಡ್ಡ ಅನ್ಯಾಯವಾಗಿದೆ. ಸಚಿವ ಸ್ಥಾನವೂ ಇಲ್ಲ, ಡಿಸಿಎಂ ಕೂಡ ಇಲ್ಲ ಅಂದರೆ ಅವರು ತಮ್ಮ ಫೀಲ್ಡ್ ನಲ್ಲಿ ಇನ್ನು ಮಣ್ಣು ಹೊರಬೇಕಾಗಿದೆ ಅನ್ನಿಸುತ್ತೆ.

ಖಾತೆ ಹಂಚಿಕೆ ಮತ್ತು ಡಿಸಿಎಂ ನೇಮಕಾತಿ ಎರಡರಲ್ಲೂ ಯಡಿಯೂರಪ್ಪರಿಗೆ ದೊಡ್ಡ ಹಿನ್ನಡೆಯಾಗಿದೆ. ಇತ್ತ ಸವದಿಯ ಎದುರು ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ ಬಚ್ಚಾಗಳಾಗಿದ್ದಾರೆ. ಬಹುಶಃ ಭಿನ್ನಮತ ಸ್ಫೋಟಗೊಳ್ಳಲು ಇದಕ್ಕಿಂತ ಇನ್ನೇನು ಬೇಕು? ವಿಚಿತ್ರವೆಂದರೆ ಈಗ ಯಡಿಯೂರಪ್ಪನವರೇ ಪರಮ ಅತೃಪ್ತರು!

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾದ ಸಿ.ಟಿ ರವಿ: ಕಾರಣವೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...