Homeಕರ್ನಾಟಕಸದನದ ರಸಿಕ ಸವದಿಗೆ ಸುಗ್ಗಿ: ಮೂವರು ಡಿಸಿಎಂ, ಸಿಎಂಗೆ ಮೂರುನಾಮ!

ಸದನದ ರಸಿಕ ಸವದಿಗೆ ಸುಗ್ಗಿ: ಮೂವರು ಡಿಸಿಎಂ, ಸಿಎಂಗೆ ಮೂರುನಾಮ!

ಇತ್ತ ಸವದಿಯ ಎದುರು ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ ಬಚ್ಚಾಗಳಾಗಿದ್ದಾರೆ. ಬಹುಶಃ ಭಿನ್ನಮತ ಸ್ಫೋಟಗೊಳ್ಳಲು ಇದಕ್ಕಿಂತ ಇನ್ನೇನು ಬೇಕು? ವಿಚಿತ್ರವೆಂದರೆ ಈಗ ಯಡಿಯೂರಪ್ಪನವರೇ ಪರಮ ಅತೃಪ್ತರು!

- Advertisement -
- Advertisement -

ಅಂತೂ ಬಿಜೆಪಿ ಅಲ್ಲಲ್ಲ…, ಕ್ಷಮಿಸಿ, ಅಮಿತ್ ಶಾ ಮತ್ತು ಬಿ.ಎಲ್ ಸಂತೋಷ್ ಕರ್ನಾಟಕದ ಸಚಿವ ಮಹಾಶಯರಿಗೆ ಖಾತೆಗಳನ್ನು ಅನುಗ್ರಹಿಸಿದ್ದಾರೆ. ಜೊತೆಗೆ ಕರ್ನಾಟಕದ ಮೇಲೆ ಮೂವರು ಉಪ ಮುಖ್ಯಮಂತ್ರಿಗಳನ್ನು ಹೇರಿದ್ದಾರೆ.

ಮೂವರು ಡಿಸಿಎಂ ಎಂಬುದರ ಅರ್ಥ ಸಿಎಂ ಡಮ್ಮಿ ಎಂದೇ! ಮೂವರು ಡಿಸಿಎಂಗಳ ಪೈಕಿ ಗೋವಿಂದ ಕಾರಜೋಳರನ್ನು ಬಿಟ್ಟರೆ ಲಕ್ಷ್ಮಣ ಸವದಿ ಮತ್ತು ಅಶ್ವಥ್ ನಾರಾಯಣರು ಯಡಿಯೂರಪ್ಪನವರ ಹಿಡಿತಕ್ಕೆ ಸಿಗುವವರಲ್ಲ. ಹೀಗಾಗಿ ಅಷ್ಟರಮಟ್ಟಿಗೆ ಯಡಿಯೂರಪ್ಪ ದೇಶದ ನಂಬರ್ 1 ಡಮ್ಮಿ ಸಿಎಂ!

ಇಲ್ಲಿ ವಿಚಿತ್ರವೆಂದರೆ, ಒಂದು ಬಾರಿ ಮುಖ್ಯಮಂತ್ರಿ ಆಗಿದ್ದ ಜಗದೀಶ್ ಶೆಟ್ಟರ್, ಇತರ ಹಿರಿತಲೆಗಳಾದ ಈಶ್ವರಪ್ಪರಂಥರಿಗೂ ಡಿಸಿಎಂ ಹುದ್ದೆ ಇಲ್ಲ, ಹಾಗೆಯೇ ಒಂದು ಸಲ ಡಿಸಿಎಂ ಆಗಿದ್ದ ಆರ್ ಅಶೋಕ್ ಮತ್ತು ಡಿಸಿಎಂ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದ ಸಿ.ಟಿ. ರವಿಗೂ ಆ ಭಾಗ್ಯವಿಲ್ಲ.

‘ನೀಲಿ ಚಿತ್ರವೇ’ ಕೇಸರಿ ಪಕ್ಷಕ್ಕೆ ಮಾನದಂಡವಾಯಿತೆ?
ಡಿಸಿಎಂಗಳನ್ನು ಆಯ್ಕೆ ಮಾಡುವಾಗ ಯಾವ ಮಾನದಂಡ ಅನುಸರಿಸಿದ್ದಾರೆ ಎಂಬುದನ್ನು ನೋಡುತ್ತ ಹೋದರೆ ಗಾಬರಿ ಬೀಳುತ್ತೀರಿ. ಹಿರಿಯ ದಲಿತ ಸಚಿವ ಗೋವಿಂದ ಕಾರಜೋಳರ ಆಯ್ಕೆಯೇನೋ ಸರಿಯಾಗಿದೆ. ಆದರೆ ಅಶ್ವಥ್ ನಾರಾಯಣ್ ಮತ್ತು ಲಕ್ಷ್ಮಣ ಸವದಿ ಆಯ್ಕೆಗೆ ಬಳಸಿದ ಮಾನದಂಡವಾದರೂ ಏನು?

ಅದರಲ್ಲೂ ಲಕ್ಷಣ ಸವದಿಯವರಿಗಂತೂ ಈ ಸಲ ಬಂಪರ್ ಲಾಟರಿಯೇ ಹೊಡೆದಿದೆ. ಮೊದಲಿಗೆ ಎಂ.ಎಲ್.ಎ ಯು ಅಲ್ಲದ ಎಂಎಲ್‍ಸಿಯೂ ಅಲ್ಲದ ಸವದಿಗೆ ಸಚಿವ ಸ್ಥಾನ ನೀಡಲಾಗಿತು. ಅದರ ಹಿಂದೆಯೇ ಅವರಿಗೆ ‘ಲಾಭದಾಯಕ’ ಸಾರಿಗೆ ಖಾತೆ ನೀಡಲಾಯಿತು. ಈಗ ಉಪ ಮುಖ್ಯಮಂತ್ರಿ ಹುದ್ದೆಯ ಗಿಫ್ಟ್!

ಕರ್ನಾಟಕದ ಜನತೆಗೆ ಸವದಿ ಅಂದ ತಕ್ಷಣ ನೆನಪಾಗುವುದು ವಿಧಾನಸಭಾ ಅಧಿವೇಶನದಲ್ಲಿ ಬ್ಲೂ ಫಿಲಂ ವೀಕ್ಷಸಿದ್ದು! ಬ್ರಹ್ಮಚಾರಿ ಬಿ.ಎಲ್ ಸಂತೋಷರಿಗೆ ಸವದಿಯವರ ಈ ‘ಹವ್ಯಾಸ’ವೂ ಇಷ್ಟವಾಗಿರಬಹುದೇ?

ಅಂದಂತೆ, ಅವತ್ತು ಸವದಿಯವರ ಜೊತೆ ಬ್ಲೂ ಪಿಚ್ಚರ್ ನೋಡಿದ ಆರೋಪ ಹೊತ್ತಿದ್ದ ಸಿ.ಸಿ. ಪಾಟೀಲರಿಗೂ ಗಣಿ ಮತ್ತು ಭೂ ವಿಜ್ಞಾನದಂತಹ ಹುಲ್ಲುಗಾವಲನ್ನೇ ನೀಡಲಾಗಿದೆ.. ಇದೇ ಮಾನದಂಡದ ಪ್ರಕಾರ ಅರವಿಂದ ಲಿಂಬಾವಳಿಯವರಿಗೆ ದೊಡ್ಡ ಅನ್ಯಾಯವಾಗಿದೆ. ಸಚಿವ ಸ್ಥಾನವೂ ಇಲ್ಲ, ಡಿಸಿಎಂ ಕೂಡ ಇಲ್ಲ ಅಂದರೆ ಅವರು ತಮ್ಮ ಫೀಲ್ಡ್ ನಲ್ಲಿ ಇನ್ನು ಮಣ್ಣು ಹೊರಬೇಕಾಗಿದೆ ಅನ್ನಿಸುತ್ತೆ.

ಖಾತೆ ಹಂಚಿಕೆ ಮತ್ತು ಡಿಸಿಎಂ ನೇಮಕಾತಿ ಎರಡರಲ್ಲೂ ಯಡಿಯೂರಪ್ಪರಿಗೆ ದೊಡ್ಡ ಹಿನ್ನಡೆಯಾಗಿದೆ. ಇತ್ತ ಸವದಿಯ ಎದುರು ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ ಬಚ್ಚಾಗಳಾಗಿದ್ದಾರೆ. ಬಹುಶಃ ಭಿನ್ನಮತ ಸ್ಫೋಟಗೊಳ್ಳಲು ಇದಕ್ಕಿಂತ ಇನ್ನೇನು ಬೇಕು? ವಿಚಿತ್ರವೆಂದರೆ ಈಗ ಯಡಿಯೂರಪ್ಪನವರೇ ಪರಮ ಅತೃಪ್ತರು!

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾದ ಸಿ.ಟಿ ರವಿ: ಕಾರಣವೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...