Homeಕರ್ನಾಟಕಸದನದ ರಸಿಕ ಸವದಿಗೆ ಸುಗ್ಗಿ: ಮೂವರು ಡಿಸಿಎಂ, ಸಿಎಂಗೆ ಮೂರುನಾಮ!

ಸದನದ ರಸಿಕ ಸವದಿಗೆ ಸುಗ್ಗಿ: ಮೂವರು ಡಿಸಿಎಂ, ಸಿಎಂಗೆ ಮೂರುನಾಮ!

ಇತ್ತ ಸವದಿಯ ಎದುರು ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ ಬಚ್ಚಾಗಳಾಗಿದ್ದಾರೆ. ಬಹುಶಃ ಭಿನ್ನಮತ ಸ್ಫೋಟಗೊಳ್ಳಲು ಇದಕ್ಕಿಂತ ಇನ್ನೇನು ಬೇಕು? ವಿಚಿತ್ರವೆಂದರೆ ಈಗ ಯಡಿಯೂರಪ್ಪನವರೇ ಪರಮ ಅತೃಪ್ತರು!

- Advertisement -
- Advertisement -

ಅಂತೂ ಬಿಜೆಪಿ ಅಲ್ಲಲ್ಲ…, ಕ್ಷಮಿಸಿ, ಅಮಿತ್ ಶಾ ಮತ್ತು ಬಿ.ಎಲ್ ಸಂತೋಷ್ ಕರ್ನಾಟಕದ ಸಚಿವ ಮಹಾಶಯರಿಗೆ ಖಾತೆಗಳನ್ನು ಅನುಗ್ರಹಿಸಿದ್ದಾರೆ. ಜೊತೆಗೆ ಕರ್ನಾಟಕದ ಮೇಲೆ ಮೂವರು ಉಪ ಮುಖ್ಯಮಂತ್ರಿಗಳನ್ನು ಹೇರಿದ್ದಾರೆ.

ಮೂವರು ಡಿಸಿಎಂ ಎಂಬುದರ ಅರ್ಥ ಸಿಎಂ ಡಮ್ಮಿ ಎಂದೇ! ಮೂವರು ಡಿಸಿಎಂಗಳ ಪೈಕಿ ಗೋವಿಂದ ಕಾರಜೋಳರನ್ನು ಬಿಟ್ಟರೆ ಲಕ್ಷ್ಮಣ ಸವದಿ ಮತ್ತು ಅಶ್ವಥ್ ನಾರಾಯಣರು ಯಡಿಯೂರಪ್ಪನವರ ಹಿಡಿತಕ್ಕೆ ಸಿಗುವವರಲ್ಲ. ಹೀಗಾಗಿ ಅಷ್ಟರಮಟ್ಟಿಗೆ ಯಡಿಯೂರಪ್ಪ ದೇಶದ ನಂಬರ್ 1 ಡಮ್ಮಿ ಸಿಎಂ!

ಇಲ್ಲಿ ವಿಚಿತ್ರವೆಂದರೆ, ಒಂದು ಬಾರಿ ಮುಖ್ಯಮಂತ್ರಿ ಆಗಿದ್ದ ಜಗದೀಶ್ ಶೆಟ್ಟರ್, ಇತರ ಹಿರಿತಲೆಗಳಾದ ಈಶ್ವರಪ್ಪರಂಥರಿಗೂ ಡಿಸಿಎಂ ಹುದ್ದೆ ಇಲ್ಲ, ಹಾಗೆಯೇ ಒಂದು ಸಲ ಡಿಸಿಎಂ ಆಗಿದ್ದ ಆರ್ ಅಶೋಕ್ ಮತ್ತು ಡಿಸಿಎಂ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದ ಸಿ.ಟಿ. ರವಿಗೂ ಆ ಭಾಗ್ಯವಿಲ್ಲ.

‘ನೀಲಿ ಚಿತ್ರವೇ’ ಕೇಸರಿ ಪಕ್ಷಕ್ಕೆ ಮಾನದಂಡವಾಯಿತೆ?
ಡಿಸಿಎಂಗಳನ್ನು ಆಯ್ಕೆ ಮಾಡುವಾಗ ಯಾವ ಮಾನದಂಡ ಅನುಸರಿಸಿದ್ದಾರೆ ಎಂಬುದನ್ನು ನೋಡುತ್ತ ಹೋದರೆ ಗಾಬರಿ ಬೀಳುತ್ತೀರಿ. ಹಿರಿಯ ದಲಿತ ಸಚಿವ ಗೋವಿಂದ ಕಾರಜೋಳರ ಆಯ್ಕೆಯೇನೋ ಸರಿಯಾಗಿದೆ. ಆದರೆ ಅಶ್ವಥ್ ನಾರಾಯಣ್ ಮತ್ತು ಲಕ್ಷ್ಮಣ ಸವದಿ ಆಯ್ಕೆಗೆ ಬಳಸಿದ ಮಾನದಂಡವಾದರೂ ಏನು?

ಅದರಲ್ಲೂ ಲಕ್ಷಣ ಸವದಿಯವರಿಗಂತೂ ಈ ಸಲ ಬಂಪರ್ ಲಾಟರಿಯೇ ಹೊಡೆದಿದೆ. ಮೊದಲಿಗೆ ಎಂ.ಎಲ್.ಎ ಯು ಅಲ್ಲದ ಎಂಎಲ್‍ಸಿಯೂ ಅಲ್ಲದ ಸವದಿಗೆ ಸಚಿವ ಸ್ಥಾನ ನೀಡಲಾಗಿತು. ಅದರ ಹಿಂದೆಯೇ ಅವರಿಗೆ ‘ಲಾಭದಾಯಕ’ ಸಾರಿಗೆ ಖಾತೆ ನೀಡಲಾಯಿತು. ಈಗ ಉಪ ಮುಖ್ಯಮಂತ್ರಿ ಹುದ್ದೆಯ ಗಿಫ್ಟ್!

ಕರ್ನಾಟಕದ ಜನತೆಗೆ ಸವದಿ ಅಂದ ತಕ್ಷಣ ನೆನಪಾಗುವುದು ವಿಧಾನಸಭಾ ಅಧಿವೇಶನದಲ್ಲಿ ಬ್ಲೂ ಫಿಲಂ ವೀಕ್ಷಸಿದ್ದು! ಬ್ರಹ್ಮಚಾರಿ ಬಿ.ಎಲ್ ಸಂತೋಷರಿಗೆ ಸವದಿಯವರ ಈ ‘ಹವ್ಯಾಸ’ವೂ ಇಷ್ಟವಾಗಿರಬಹುದೇ?

ಅಂದಂತೆ, ಅವತ್ತು ಸವದಿಯವರ ಜೊತೆ ಬ್ಲೂ ಪಿಚ್ಚರ್ ನೋಡಿದ ಆರೋಪ ಹೊತ್ತಿದ್ದ ಸಿ.ಸಿ. ಪಾಟೀಲರಿಗೂ ಗಣಿ ಮತ್ತು ಭೂ ವಿಜ್ಞಾನದಂತಹ ಹುಲ್ಲುಗಾವಲನ್ನೇ ನೀಡಲಾಗಿದೆ.. ಇದೇ ಮಾನದಂಡದ ಪ್ರಕಾರ ಅರವಿಂದ ಲಿಂಬಾವಳಿಯವರಿಗೆ ದೊಡ್ಡ ಅನ್ಯಾಯವಾಗಿದೆ. ಸಚಿವ ಸ್ಥಾನವೂ ಇಲ್ಲ, ಡಿಸಿಎಂ ಕೂಡ ಇಲ್ಲ ಅಂದರೆ ಅವರು ತಮ್ಮ ಫೀಲ್ಡ್ ನಲ್ಲಿ ಇನ್ನು ಮಣ್ಣು ಹೊರಬೇಕಾಗಿದೆ ಅನ್ನಿಸುತ್ತೆ.

ಖಾತೆ ಹಂಚಿಕೆ ಮತ್ತು ಡಿಸಿಎಂ ನೇಮಕಾತಿ ಎರಡರಲ್ಲೂ ಯಡಿಯೂರಪ್ಪರಿಗೆ ದೊಡ್ಡ ಹಿನ್ನಡೆಯಾಗಿದೆ. ಇತ್ತ ಸವದಿಯ ಎದುರು ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ ಬಚ್ಚಾಗಳಾಗಿದ್ದಾರೆ. ಬಹುಶಃ ಭಿನ್ನಮತ ಸ್ಫೋಟಗೊಳ್ಳಲು ಇದಕ್ಕಿಂತ ಇನ್ನೇನು ಬೇಕು? ವಿಚಿತ್ರವೆಂದರೆ ಈಗ ಯಡಿಯೂರಪ್ಪನವರೇ ಪರಮ ಅತೃಪ್ತರು!

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾದ ಸಿ.ಟಿ ರವಿ: ಕಾರಣವೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....