Homeಕರ್ನಾಟಕಸದನದ ರಸಿಕ ಸವದಿಗೆ ಸುಗ್ಗಿ: ಮೂವರು ಡಿಸಿಎಂ, ಸಿಎಂಗೆ ಮೂರುನಾಮ!

ಸದನದ ರಸಿಕ ಸವದಿಗೆ ಸುಗ್ಗಿ: ಮೂವರು ಡಿಸಿಎಂ, ಸಿಎಂಗೆ ಮೂರುನಾಮ!

ಇತ್ತ ಸವದಿಯ ಎದುರು ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ ಬಚ್ಚಾಗಳಾಗಿದ್ದಾರೆ. ಬಹುಶಃ ಭಿನ್ನಮತ ಸ್ಫೋಟಗೊಳ್ಳಲು ಇದಕ್ಕಿಂತ ಇನ್ನೇನು ಬೇಕು? ವಿಚಿತ್ರವೆಂದರೆ ಈಗ ಯಡಿಯೂರಪ್ಪನವರೇ ಪರಮ ಅತೃಪ್ತರು!

- Advertisement -
- Advertisement -

ಅಂತೂ ಬಿಜೆಪಿ ಅಲ್ಲಲ್ಲ…, ಕ್ಷಮಿಸಿ, ಅಮಿತ್ ಶಾ ಮತ್ತು ಬಿ.ಎಲ್ ಸಂತೋಷ್ ಕರ್ನಾಟಕದ ಸಚಿವ ಮಹಾಶಯರಿಗೆ ಖಾತೆಗಳನ್ನು ಅನುಗ್ರಹಿಸಿದ್ದಾರೆ. ಜೊತೆಗೆ ಕರ್ನಾಟಕದ ಮೇಲೆ ಮೂವರು ಉಪ ಮುಖ್ಯಮಂತ್ರಿಗಳನ್ನು ಹೇರಿದ್ದಾರೆ.

ಮೂವರು ಡಿಸಿಎಂ ಎಂಬುದರ ಅರ್ಥ ಸಿಎಂ ಡಮ್ಮಿ ಎಂದೇ! ಮೂವರು ಡಿಸಿಎಂಗಳ ಪೈಕಿ ಗೋವಿಂದ ಕಾರಜೋಳರನ್ನು ಬಿಟ್ಟರೆ ಲಕ್ಷ್ಮಣ ಸವದಿ ಮತ್ತು ಅಶ್ವಥ್ ನಾರಾಯಣರು ಯಡಿಯೂರಪ್ಪನವರ ಹಿಡಿತಕ್ಕೆ ಸಿಗುವವರಲ್ಲ. ಹೀಗಾಗಿ ಅಷ್ಟರಮಟ್ಟಿಗೆ ಯಡಿಯೂರಪ್ಪ ದೇಶದ ನಂಬರ್ 1 ಡಮ್ಮಿ ಸಿಎಂ!

ಇಲ್ಲಿ ವಿಚಿತ್ರವೆಂದರೆ, ಒಂದು ಬಾರಿ ಮುಖ್ಯಮಂತ್ರಿ ಆಗಿದ್ದ ಜಗದೀಶ್ ಶೆಟ್ಟರ್, ಇತರ ಹಿರಿತಲೆಗಳಾದ ಈಶ್ವರಪ್ಪರಂಥರಿಗೂ ಡಿಸಿಎಂ ಹುದ್ದೆ ಇಲ್ಲ, ಹಾಗೆಯೇ ಒಂದು ಸಲ ಡಿಸಿಎಂ ಆಗಿದ್ದ ಆರ್ ಅಶೋಕ್ ಮತ್ತು ಡಿಸಿಎಂ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದ ಸಿ.ಟಿ. ರವಿಗೂ ಆ ಭಾಗ್ಯವಿಲ್ಲ.

‘ನೀಲಿ ಚಿತ್ರವೇ’ ಕೇಸರಿ ಪಕ್ಷಕ್ಕೆ ಮಾನದಂಡವಾಯಿತೆ?
ಡಿಸಿಎಂಗಳನ್ನು ಆಯ್ಕೆ ಮಾಡುವಾಗ ಯಾವ ಮಾನದಂಡ ಅನುಸರಿಸಿದ್ದಾರೆ ಎಂಬುದನ್ನು ನೋಡುತ್ತ ಹೋದರೆ ಗಾಬರಿ ಬೀಳುತ್ತೀರಿ. ಹಿರಿಯ ದಲಿತ ಸಚಿವ ಗೋವಿಂದ ಕಾರಜೋಳರ ಆಯ್ಕೆಯೇನೋ ಸರಿಯಾಗಿದೆ. ಆದರೆ ಅಶ್ವಥ್ ನಾರಾಯಣ್ ಮತ್ತು ಲಕ್ಷ್ಮಣ ಸವದಿ ಆಯ್ಕೆಗೆ ಬಳಸಿದ ಮಾನದಂಡವಾದರೂ ಏನು?

ಅದರಲ್ಲೂ ಲಕ್ಷಣ ಸವದಿಯವರಿಗಂತೂ ಈ ಸಲ ಬಂಪರ್ ಲಾಟರಿಯೇ ಹೊಡೆದಿದೆ. ಮೊದಲಿಗೆ ಎಂ.ಎಲ್.ಎ ಯು ಅಲ್ಲದ ಎಂಎಲ್‍ಸಿಯೂ ಅಲ್ಲದ ಸವದಿಗೆ ಸಚಿವ ಸ್ಥಾನ ನೀಡಲಾಗಿತು. ಅದರ ಹಿಂದೆಯೇ ಅವರಿಗೆ ‘ಲಾಭದಾಯಕ’ ಸಾರಿಗೆ ಖಾತೆ ನೀಡಲಾಯಿತು. ಈಗ ಉಪ ಮುಖ್ಯಮಂತ್ರಿ ಹುದ್ದೆಯ ಗಿಫ್ಟ್!

ಕರ್ನಾಟಕದ ಜನತೆಗೆ ಸವದಿ ಅಂದ ತಕ್ಷಣ ನೆನಪಾಗುವುದು ವಿಧಾನಸಭಾ ಅಧಿವೇಶನದಲ್ಲಿ ಬ್ಲೂ ಫಿಲಂ ವೀಕ್ಷಸಿದ್ದು! ಬ್ರಹ್ಮಚಾರಿ ಬಿ.ಎಲ್ ಸಂತೋಷರಿಗೆ ಸವದಿಯವರ ಈ ‘ಹವ್ಯಾಸ’ವೂ ಇಷ್ಟವಾಗಿರಬಹುದೇ?

ಅಂದಂತೆ, ಅವತ್ತು ಸವದಿಯವರ ಜೊತೆ ಬ್ಲೂ ಪಿಚ್ಚರ್ ನೋಡಿದ ಆರೋಪ ಹೊತ್ತಿದ್ದ ಸಿ.ಸಿ. ಪಾಟೀಲರಿಗೂ ಗಣಿ ಮತ್ತು ಭೂ ವಿಜ್ಞಾನದಂತಹ ಹುಲ್ಲುಗಾವಲನ್ನೇ ನೀಡಲಾಗಿದೆ.. ಇದೇ ಮಾನದಂಡದ ಪ್ರಕಾರ ಅರವಿಂದ ಲಿಂಬಾವಳಿಯವರಿಗೆ ದೊಡ್ಡ ಅನ್ಯಾಯವಾಗಿದೆ. ಸಚಿವ ಸ್ಥಾನವೂ ಇಲ್ಲ, ಡಿಸಿಎಂ ಕೂಡ ಇಲ್ಲ ಅಂದರೆ ಅವರು ತಮ್ಮ ಫೀಲ್ಡ್ ನಲ್ಲಿ ಇನ್ನು ಮಣ್ಣು ಹೊರಬೇಕಾಗಿದೆ ಅನ್ನಿಸುತ್ತೆ.

ಖಾತೆ ಹಂಚಿಕೆ ಮತ್ತು ಡಿಸಿಎಂ ನೇಮಕಾತಿ ಎರಡರಲ್ಲೂ ಯಡಿಯೂರಪ್ಪರಿಗೆ ದೊಡ್ಡ ಹಿನ್ನಡೆಯಾಗಿದೆ. ಇತ್ತ ಸವದಿಯ ಎದುರು ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ ಬಚ್ಚಾಗಳಾಗಿದ್ದಾರೆ. ಬಹುಶಃ ಭಿನ್ನಮತ ಸ್ಫೋಟಗೊಳ್ಳಲು ಇದಕ್ಕಿಂತ ಇನ್ನೇನು ಬೇಕು? ವಿಚಿತ್ರವೆಂದರೆ ಈಗ ಯಡಿಯೂರಪ್ಪನವರೇ ಪರಮ ಅತೃಪ್ತರು!

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾದ ಸಿ.ಟಿ ರವಿ: ಕಾರಣವೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...