Homeಮುಖಪುಟಒಂದೇ ರೀತಿಯ ಪ್ರಕರಣ ಮೂರು ಭಿನ್ನ ತೀರ್ಪುಗಳು: ಅರ್ನಾಬ್ ಗೋಸ್ವಾಮಿಗೆ ಸಿಕ್ಕ ಅವಕಾಶ ಶಾರ್ಜೀಲ್ ಇಮಾಮ್,...

ಒಂದೇ ರೀತಿಯ ಪ್ರಕರಣ ಮೂರು ಭಿನ್ನ ತೀರ್ಪುಗಳು: ಅರ್ನಾಬ್ ಗೋಸ್ವಾಮಿಗೆ ಸಿಕ್ಕ ಅವಕಾಶ ಶಾರ್ಜೀಲ್ ಇಮಾಮ್, ಪೂನಿಯಾಗೇಕಿಲ್ಲ?

ಇದು ಅರ್ನಾಬ್, ಪೂನಿಯಾ ಮತ್ತು ಇಮಾಮ್ ಪ್ರಕರಣದಲ್ಲಿ ಇದ್ದ ಮೂರು ಬೇರೆಬೇರೆ ನ್ಯಾಯಪೀಠಗಳ ಸಮಸ್ಯೆಯಲ್ಲ. ಇದು ಇಡೀ ಸುಪ್ರೀಂಕೋರ್ಟ್ ಎದುರಿಸುತ್ತಿರುವ ರಾಚನಿಕ ಸಮಸ್ಯೆ.

- Advertisement -
- Advertisement -

ಇತ್ತೀಚಿನ ಮೂರು ಪ್ರಕರಣಗಳು ತೋರಿಸಿಕೊಟ್ಟಿರುವುದು ಏನೆಂದರೆ, ಕಾನೂನಿನ ಅನ್ವಯವು ಪ್ರಕರಣದಿಂದ ಪ್ರಕರಣಕ್ಕೆ ಬದಲಾಗಬಹುದಾದರೂ, ನ್ಯಾಯಾಧೀಶರಿಂದ ನ್ಯಾಯಾಧೀಶರಿಗೆ ತೀರ್ಪುಗಳು ಬದಲಾಗುವಾಗ ಈ ಪ್ರಶ್ನೆಯನ್ನು ಗಂಭೀರವಾಗಿ ಪರಿಶೀಲಿಸುವ ಅಗತ್ಯವಿದೆ ಎಂದು.

ಸರೀಂ ನವೇದ್

ಸಾರಾನುವಾದ: ನಿಖಿಲ್ ಕೋಲ್ಪೆ

ಕಳೆದ ಮೇ 19ರಂದು ಸುಪ್ರೀಂಕೋರ್ಟ್ ಅರ್ನಾಬ್ ಗೋಸ್ವಾಮಿ ಪ್ರಕರಣದಲ್ಲಿ ಒಂದು ತೀರ್ಪು ನೀಡಿತು ಮತ್ತು ಒಂದು ಅಪರಾಧಕ್ಕಾಗಿ ಒಂದಕ್ಕಿಂತ ಹೆಚ್ಚು ಪ್ರಥಮ ವರ್ತಮಾನ ವರದಿ (ಎಫ್‌ಐಆರ್) ದಾಖಲಿಸುವಂತಿಲ್ಲ ಎಂಬುದನ್ನು ಎತ್ತಿಹಿಡಿಯಿತು. ಹಾಗಾಗಿ ಸಾರ್ವಜನಿಕ ಕ್ಷೋಭೆ ಉಂಟುಮಾಡುವ ಸಾಧ್ಯತೆ ಇದೆ ಎಂದು ಎಫ್‌ಐಆರ್‌ಗಳಲ್ಲಿ ಆರೋಪಿಸಲಾಗಿರುವಂತಹ ಒಂದು ಪ್ರಕರಣದಲ್ಲಿ ಮೊದಲ ಎಫ್‌ಐಆರ್ ದಾಖಲಾದ ಸಂಬಂಧ ವಿಚಾರಣೆಯನ್ನು ಹೊರತುಪಡಿಸಿ, ಉಳಿದ ನ್ಯಾಯಾಲಯಗಳಲ್ಲಿ ವಿಚಾರಣೆಯಿಂದ ಆತ ಪಾರಾಗುವಂತಾಯಿತು.

Arnab Goswami, Maharashtra government, Supreme Court ,ರಿಪಬ್ಲಿಕ್ ಟಿವಿ, ಅರ್ನಾಬ್ ಗೋಸ್ವಾಮಿ
ಅರ್ನಾಬ್‌ ಗೋಸ್ವಾಮಿ

ಕೇವಲ ಹತ್ತು ದಿನಗಳ ನಂತರ, ಅಂದರೆ ಮೇ 29ರಂದು ಸುಪ್ರೀಂಕೋರ್ಟ್‌ನಲ್ಲಿ ಕಾಂಗ್ರೆಸ್ ನಾಯಕ ಪಂಕಜ್ ಪೂನಿಯಾ ದಾಖಲಿಸಿದಂತಹಾ ಇಂತದ್ದೇ ಅರ್ಜಿಯು ಮುಂದೆ ಬಂತು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುವಂತೆ ಮಾಡಿದ ಹೇಳಿಕೆಯ ಆರೋಪದಲ್ಲಿ ಅವರ ಮೇಲೆ ಹಲವಾರು ಕಡೆಗಳಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಆದರೆ, ಸುಪ್ರೀಂಕೋರ್ಟ್ ಈ ವಿಷಯದ ಕುರಿತು ವಿಚಾರಣೆ ನಡೆಸಲು ನಿರಾಕರಿಸಿ, ಪರಿಹಾರಕ್ಕಾಗಿ ಸಂಬಂಧಿತ ಹೈಕೋರ್ಟ್‌ಗಳಲ್ಲಿ ಅರ್ಜಿ ಸಲ್ಲಿಸುವಂತೆ ಪೂನಿಯಾ ಅವರಿಗೆ ಸೂಚಿಸಿತು.

ಇದು ಮೂವರು ಸದಸ್ಯರ ಪೀಠದ ತೀರ್ಮಾನವಾಗಿದ್ದು, ಅದಕ್ಕೆ ಇಬ್ಬರು ಸದಸ್ಯರ ಪೀಠದ ಅರ್ನಾಬ್ ಗೋಸ್ವಾಮಿ ಪ್ರಕರಣದ ತೀರ್ಮಾನವನ್ನು ಬದಿಗೆ ಸರಿಸುವ ಅಧಿಕಾರವಿತ್ತು ಎಂಬುದು ನಿಜ. ಆದರೆ, ಈ ಪೀಠವು ಸಾರಾಸಗಟಾಗಿ ಪೂನಿಯಾ ಅವರ ಅರ್ಜಿಯನ್ನು ಮೇಲ್ನೋಟಕ್ಕೇ ತಿರಸ್ಕರಿಸಿತು. ಅದು ಏನು ಹೇಳಿತು:

ಪೂನಿಯಾ

“ಸಂವಿಧಾನದ ವಿಧಿ 32ರ ಅನ್ವಯ ಸಲ್ಲಿಸಲಾದ ಈ ಅರ್ಜಿಯ ವಿಚಾರಣೆ ನಡೆಸಲು ನಮಗೆ ಮನಸ್ಸಿಲ್ಲ. ಅದಕ್ಕನುಗುಣವಾಗಿ ಈ ರಿಟ್ ಅರ್ಜಿಯನ್ನು ತಿರಸ್ಕರಿಸಲಾಗಿದೆ. ಆದರೆ ಅರ್ಜಿದಾರರಿಗೆ ಸಂಬಂಧಿತ ಹೈಕೋರ್ಟ್‌ಗಳು/ ವೇದಿಕೆಗಳಿಗೆ ಅರ್ಜಿ ಸಲ್ಲಿಸಲು ಸ್ವಾತಂತ್ರ್ಯವಿದೆ”.

ಮೇ 1ರಂದು ಸುಪ್ರೀಂಕೋರ್ಟ್ ಅದೇ ರೀತಿಯ ಭಾಷಣಗಳನ್ನು ಮಾಡಿದ್ದಕ್ಕಾಗಿ ಬೇರೆಬೇರೆ ಕಡೆ ಹೂಡಲಾದ ದಾವೆಗಳನ್ನು ಒಂದೆಡೆ ಸೇರಿಸಲು ಶಾರ್ಜೀಲ್ ಇಮಾಮ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿತ್ತು. ಇಮಾಮ್ ಪ್ರಕರಣದಲ್ಲಿ ಇರುವ ವ್ಯತ್ಯಾಸವೆಂದರೆ, ತಕ್ಷಣದ ಪರಿಹಾರ ಇರಲಿಲ್ಲ. ಅದೆಂದರೆ, ಗೋಸ್ವಾಮಿಗೆ ಮಾಡಿದಂತೆ ಮೊದಲ ಎಫ್‌ಐಆರ್ ಪ್ರಕರಣ ಹೊರತುಪಡಿಸಿ ಬೇರೆ ಎಫ್‌ಐಆರ್‌ಗಳಲ್ಲಿ ತನಿಖೆಗೆ ತಡೆ ಇರಲಿಲ್ಲ.

ಶಾರ್ಜೀಲ್ ಇಮಾಮ್

ಈ ಮೂರೂ ಪ್ರಕರಣಗಳನ್ನು ಮೂರು ಬೇರೆಬೇರೆ ಪೀಠಗಳು ವಿಚಾರಣೆ ನಡೆಸಿದ್ದವು. ಪ್ರಕರಣದಿಂದ ಪ್ರಕರಣಕ್ಕೆ ಕಾನೂನಿನ ಅನ್ವಯವು ಬದಲಾಗುತ್ತದೆ ಎಂಬುದು ಕಾನೂನು ರೂಢಿಯಲ್ಲಿ ಅರ್ಥವಾಗುವ ವಿಷಯ. ಆದರೆ, ಪ್ರತಿಯೊಂದು ಪ್ರಕರಣದ ವಿಶಿಷ್ಟತೆಗಳನ್ನು ಪರಿಗಣಿಸದೆಯೇ ಯಾಂತ್ರಿಕವಾಗಿ ಕಾನೂನನ್ನು ಅನ್ವಯಿಸುವ ಪರಿಸ್ಥಿತಿಯು ಅಪೇಕ್ಷಿತವಲ್ಲ ಮತ್ತು ಇದು ಸಾಕಷ್ಟು ಅನ್ಯಾಯದಲ್ಲಿ ಕೊನೆಗೊಳ್ಳುತ್ತದೆ.

ನ್ಯಾಯಾಧೀಶರು ಮತ್ತು ಕಾನೂನಿನ ಅನ್ವಯ

ಆದರೆ, ನ್ಯಾಯಾಧೀಶರಿಂದ ನ್ಯಾಯಾಧೀಶರಿಗೆ ತೀರ್ಪುಗಳು ಬದಲಾದಾಗ ಕಾನೂನಿನ ಅನ್ವಯದ ವಿಷಯವನ್ನು ಗಂಭೀರವಾಗಿ ಪರಿಶೀಲಿಸಬೇಕು. ಬೇರೆಬೇರೆ ನ್ಯಾಯಾಧೀಶರು ಕಾನೂನಿನ ಬಗ್ಗೆ ಬೇರೆಬೇರೆ ದೃಷ್ಟಿಕೋನ ಹೊಂದಿರುತ್ತಾರೆ ಎಂಬುದು ನಿಜ. ಅವರು ಬೇರೆ ವ್ಯಾಖ್ಯಾನಗಳನ್ನೂ ಹೊಂದಿರುತ್ತಾರೆ.

ಮೇಲಿನ ಮೂರೂ ಪ್ರಕರಣಗಳು ಸಂವಿಧಾನದ ವಿಧಿ 32ರ ಪ್ರಕಾರ ಸಲ್ಲಿಸಲಾದ ರಿಟ್ ಅರ್ಜಿಗಳಾಗಿವೆ. ಅದು ತಮ್ಮ ಮೂಲಭೂತ ಹಕ್ಕುಗಳ ಉಲ್ಲಂಘನೆಯಾದಾಗ ನೇರವಾಗಿ ಸುಪ್ರೀಂಕೋರ್ಟಿನ ಬಾಗಿಲು ತಟ್ಟುವ ಅವಕಾಶ ನೀಡುತ್ತದೆ. ಇದರ ವಿಚಾರಣೆ ನಡೆಸಬೇಕೋ ಬೇಡವೋ ಎಂಬುದು ನ್ಯಾಯಾಲಯದ ವಿವೇಚನೆಗೆ ಬಿಟ್ಟ ವಿಷಯ ಎಂಬುದು ಸರ್ವವಿಧಿತ. ಆದರೆ, ಈ ಕುರಿತು ಏಕರೂಪದ ನಿಲುಮೆ ಇರಬೇಕೆಂಬುದನ್ನು ನಿರಾಕರಿಸಲು ಸಾಧ್ಯವಿಲ್ಲ.

ಒಂದು ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಹಲವು ಎಫ್‌ಐಆರ್‌ಗಳಲ್ಲಿ ಮೊದಲ ಎಫ್‌ಐಆರ್ ಹೊರತುಪಡಿಸಿ ಉಳಿದವುಗಳಲ್ಲಿ ತಡೆ ನೀಡುವುದಾದಲ್ಲಿ (ಗೋಸ್ವಾಮಿ ಪ್ರಕರಣ), ಇಂತದ್ದೇ ಪ್ರಕರಣಗಳಲ್ಲಿ ಇತರ ವ್ಯಕ್ತಿಗಳಿಗೆ ಅಂತದ್ದೇ ಪರಿಹಾರ ನೀಡಬೇಕು- ಒಂದು ವೇಳೆ ಪರಿಸ್ಥಿತಿಯು ಬೇರೆಯಾಗಿದೆ ಎಂದು ನ್ಯಾಯಾಲಯವು ಭಾವಿಸಿದ ಸಂದರ್ಭವನ್ನು ಹೊರತುಪಡಿಸಿ. ಈ ನಿರ್ಧಾರವನ್ನು ತೀರ್ಪಿನಲ್ಲೇ ದಾಖಲಿಸಬೇಕು. ಇಲ್ಲವಾದಲ್ಲಿ ಕಾನೂನಿನ ಅನ್ವಯವು ಮನಸೋಇಚ್ಛೆ ನಡೆಯುತ್ತಿದೆ ಎಂಬಂತೆ ಕಾಣುತ್ತದೆ.

ಸಂವಿಧಾನದ ವಿಧಿ 141 ಹಿಂದಿನ ತೀರ್ಪುಗಳಿಂದ ಬೇರೆಯಾದ ತೀರ್ಪುಗಳನ್ನು ನೀಡಲು ಸುಪ್ರೀಂಕೋರ್ಟಿಗೆ ಅವಕಾಶ ನೀಡುತ್ತದೆ ಎಂಬುದು ನಿಜ. ಆದರೆ, ಚಿಕ್ಕ ಅವಧಿಯಲ್ಲಿ ಬೇರೆ ಬೇರೆ ನ್ಯಾಯಾಧೀಶರುಗಳು ಪೀಠದಲ್ಲಿ ಇದ್ದರು ಎಂಬ ಕಾರಣಕ್ಕಾಗಿ ಬೇರೆಬೇರೆ ತೀರ್ಪುಗಳು ಬರುವುದು ಅಪೇಕ್ಷಣೀಯವಲ್ಲ.

ಇದು ಅರ್ನಾಬ್, ಪೂನಿಯಾ ಮತ್ತು ಇಮಾಮ್ ಪ್ರಕರಣದಲ್ಲಿ ಇದ್ದ ಮೂರು ಬೇರೆಬೇರೆ ನ್ಯಾಯಪೀಠಗಳ ಸಮಸ್ಯೆಯಲ್ಲ. ಇದು ಇಡೀ ಸುಪ್ರೀಂಕೋರ್ಟ್ ಎದುರಿಸುತ್ತಿರುವ ರಾಚನಿಕ ಸಮಸ್ಯೆ. ಸುಪ್ರೀಂಕೋರ್ಟ್‌ನಲ್ಲಿ ಎಲ್ಲಾ ನ್ಯಾಯಾಧೀಶರು ಸಮನರು; ಆದುದರಿಂದ ಒಂದು ಸುಪ್ರೀಂಕೋರ್ಟ್ ತೀರ್ಮಾನಕ್ಕೆ ಮೇಲ್ಮನವಿ ಸಲ್ಲಿಸುವುದು ಆ ನಿಟ್ಟಿನಲ್ಲಿ ಸಾಧ್ಯವಿಲ್ಲ. ಯಾವ ಪೀಠದ ಮುಂದೆ ಪ್ರಕರಣ ಇದೆಯೋ, ಅದರ ತೀರ್ಪಿನಂತೆ ಪ್ರಕರಣದ ಕತೆ ಮುಗಿಯುತ್ತದೆ.

ಉದಾಹರಣೆಗೆ ಕೆಲವು ನ್ಯಾಯಾಧೀಶರು ಉಳಿದ ನ್ಯಾಯಾಧೀಶರುಗಳಿಗಿಂತ ಹೆಚ್ಚಾಗಿ ಜಾಮೀನು ನೀಡುತ್ತಾರೆ. ಕೆಲವರು ಕೆಲವು ಕಾನೂನುಗಳಲ್ಲಿ- ಉದಾಹರಣೆಗೆ ತೆರಿಗೆ ಕಾನೂನುಗಳಲ್ಲಿ ನಿಷ್ಣಾತರಾಗಿರುತ್ತಾರೆ. ಇದರ ಅರ್ಥವೆಂದರೆ, ಸುಪ್ರೀಂಕೋರ್ಟ್ ಒಂದೇ ನ್ಯಾಯಾಲಯವಲ್ಲ. ಅದು 16 ಬೇರೆಬೇರೆ ನ್ಯಾಯಾಲಯಗಳು. ಪೀಠದಲ್ಲಿರುವ ನ್ಯಾಯಾಧೀಶರುಗಳ ಸಂಖ್ಯೆಗೆ ಅನುಗುಣವಾಗಿ ಅವರವರು ಕಾನೂನನ್ನು ಮತ್ತು ಹಿಂದಿನ ತೀರ್ಪುಗಳನ್ನು ಹೇಗೆಹೇಗೆ ವ್ಯಾಖ್ಯಾನ ಮಾಡುತ್ತಾರೋ, ಅವುಗಳಿಗೆ ಅನುಗುಣವಾಗಿಯೇ ತೀರ್ಪುಗಳು ಇರುತ್ತವೆ! ಇದಕ್ಕೆ ಪರಿಹಾರವನ್ನೂ ಸುಪ್ರೀಂಕೋರ್ಟೇ ಕಂಡುಕೊಳ್ಳಬೇಕು.

(ಲೇಖಕ ಸರೀಂ ನವೇದ್ ಅವರು ದಿಲ್ಲಿಯಲ್ಲಿ ವಕೀಲರು)

ಕೃಪೆ: ದಿ ವೈರ್


ಇದನ್ನೂ ಓದಿ: ಎರಡು ವಾರಗಳಲ್ಲಿ ಪಿಎಂ ಕೇರ್ಸ್ ವಿವರ ನೀಡಿ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...