Homeಮುಖಪುಟಯೆಸ್ ಬ್ಯಾಂಕ್ ಪತನಕ್ಕೆ ಮುನ್ನುಡಿ ಬರೆದ ಮೂವರು ಮಾಜಿ ಬಿಲಿಯಾಧಿಪತಿಗಳು: ಅಂಬಾನಿ, ವಾಧ್ವಾನ್ ಮತ್ತು ಚಂದ್ರ!

ಯೆಸ್ ಬ್ಯಾಂಕ್ ಪತನಕ್ಕೆ ಮುನ್ನುಡಿ ಬರೆದ ಮೂವರು ಮಾಜಿ ಬಿಲಿಯಾಧಿಪತಿಗಳು: ಅಂಬಾನಿ, ವಾಧ್ವಾನ್ ಮತ್ತು ಚಂದ್ರ!

ದಿವಾಳಿ ಅಂಚಿನಲ್ಲಿರುವ ಮೂವರು ಮಿಲಿಯಾಧಿಪತಿಗಳ ಜೊತೆ ವ್ಯವಹರಿಸುತ್ತಿದ್ದ ಯೆಸ್ ಬ್ಯಾಂಕ್ ಲೆಕ್ಕಪತ್ರಗಳ ಸೂಕ್ಷ್ಮ ಅಪರಾಧಿಕ ಪರಿಶೀಲನೆ ನಡೆಸಿದಲ್ಲಿ ಇನ್ನಷ್ಟು ಅಸ್ತಿಪಂಜರಗಳು ಹೊರಬರಲಿವೆ.

- Advertisement -
- Advertisement -

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ಮುಂಬಯಿಯ ಗಜಿಬಿಜಿಯ ಲೋವರ್ ಪರೇಲ್‌ನಲ್ಲಿರುವ ಯಾವುದೇ ದೇಖಾದೇಕಿ ಇಲ್ಲದ ಮೂರು ಗಗನಚುಂಬಿ ಕಟ್ಟಡಗಳನ್ನು ಹೊಂದಿರುವ ಇಂಡಿಯಾ ಬುಲ್ಸ್ ಫೈನಾನ್ಸ್ ಸೆಂಟರ್ ಎಂಬ ವಾಣಿಜ್ಯ ಸಂಕೀರ್ಣದಲ್ಲಿರುವ ಯೆಸ್ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಈಗ ಭಯಹುಟ್ಟಿಸುವ ಮೌನವಿದೆ. ಕೆಟ್ಟ ಸಾಲಗಳು ಮತ್ತು ಅಭದ್ರ ಆಸ್ತಿಗಳ ಕಾರಣದಿಂದ ಕಳೆದ ವಾರ ಪ್ರಪಾತದ ಅಂಚಿನಲ್ಲಿದ್ದ ದೇಶದ ನಾಲ್ಕನೇ ಅತಿದೊಡ್ಡ ಖಾಸಗಿ ಬ್ಯಾಂಕಿನಲ್ಲೀಗ ಬದುಕಬಹುದೋ ಏನೋ ಎಂಬ ಆಶಾವಾದ ಮೂಡಿದೆ.

ಕಳೆದ ವಾರ ಭಾರತೀಯ ರಿಸರ್ವ್ ಬ್ಯಾಂಕ್ ಈ ಬ್ಯಾಂಕಿನ ಮೇಲೆ ನಿರ್ಬಂಧ ಹೇರಿ ಹಣ ಹಿಂತೆಗೆತಕ್ಕೆ ಮಿತಿಯನ್ನು ವಿಧಿಸಿದಾಗ ಹಣ ಕಳೆದುಕೊಳ್ಳುವ ಭೀತಿಗೆ ಒಳಗಾದ ಸಾವಿರಾರು ಜನರು ಈ ಬ್ಯಾಂಕಿನ ವಿಶಾಲವಾದ ಲಾಬಿಯಲ್ಲಿ ಜಮಾಯಿಸಿದ್ದರು. ಈ ಕಟ್ಟಡಗಳಲ್ಲಿರುವ ಹಲವಾರು ಮಧ್ಯಮ ಪ್ರಮಾಣದ ಕಂಪನಿಗಳು ಈ ಬ್ಯಾಂಕಿನ ಕಾರ್ಪೊರೇಟ್ ಗ್ರಾಹಕರಾಗಿದ್ದು, ತಮ್ಮ ನೌಕರರ ಸಂಬಳದ ಖಾತೆಗಳನ್ನು ಇಲ್ಲಿಯೇ ಹೊಂದಿರುವುದು ಬಹುದೊಡ್ಡ ಗದ್ದಲಕ್ಕೆ ಕಾರಣವಾಗಿತ್ತು.

ಇದೀಗ ನಿಮ್ಮ ಹಣ ಸುರಕ್ಷಿತ ಎಂದು ಸರಕಾರ ಭರವಸೆ ನೀಡಿರುವುದರಿಂದ ಗ್ರಾಹಕರು ಸ್ವಲ್ಪ ಮಟ್ಟಿನ ನಿಟ್ಟುಸಿರು ಬಿಟ್ಟಿದ್ದಾರೆ. 16 ವರ್ಷಗಳ ಹಿಂದೆ ಈ ಬ್ಯಾಂಕನ್ನು ಸ್ಥಾಪಿಸಿದ್ದ ರಾಣಾ ಕಪೂರ್ ಇದೀಗ ಭಾರತೀಯ ಬ್ಯಾಂಕಿಂಗ್ ಕ್ಷೇತ್ರದ ಹೊಸ ಖಳನಾಯಕ ಎನಿಸಿದ್ದಾರೆ. ಅವರೀಗ ಮುಂಬಯಿಯ ಜಾರಿ ನಿರ್ದೇಶನಾಲಯದ ವಶದಲ್ಲಿದ್ದು, ಕ್ರಿಮಿನಲ್ ಸಂಚು, ವಂಚನೆ ಮತ್ತು ಭ್ರಷ್ಟಾಚಾರದ ಆರೋಪದಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.

ಇದೇ ಕಪೂರ್ ಈಗ ಬ್ಯಾಂಕಿನ ಪತನಕ್ಕಾಗಿ ಆರ್ಥಿಕ ಹಿಂಜರಿತ ಮತ್ತು ನೋಟು ಅಮಾನ್ಯೀಕರಣವನ್ನು ದೂರಬಹುದು. ಆದರೆ, ಇವರೇ ಅದನ್ನು ಸರಕಾರದ ಮಾಸ್ಟರ್ ಸ್ಟ್ರೋಕ್ ಎಂದು ಕೊಂಡಾಡಿದ್ದರು. ಬ್ಯಾಂಕಿನ ರಕ್ತಸಿಕ್ತ ಲೆಕ್ಕಪತ್ರದ ವಿವರಗಳು ಏನನ್ನು ತೋರಿಸುತ್ತವೆ ಎಂದರೆ ಹಿಂದೆ ಬಿಲಿಯಾಧಿಪತಿಗಳಾಗಿದ್ದು ನಂತರ ಆಸ್ತಿಪಾಸ್ತಿಗಳ ವಿನಾಶಕರಾಗಿ ಪರಿಣಮಿಸಿದ ಮೂವರು ಮಹಾನುಭಾವರು ಈ ಬ್ಯಾಂಕಿನ ಪತನಕ್ಕೆ ಮುನ್ನುಡಿ ಬರೆದಿದ್ದಾರೆ.

ಅವರೇ ಅನಿಲ್ ಅಂಬಾನಿ (ರಿಲಯನ್ಸ್ ಗ್ರೂಪ್), ಕಪಿಲ್ ವಾಧ್ವಾನ್ (ಡಿಎಚ್‌ಎಫ್‌ಎಲ್) ಮತ್ತು ಸುಭಾಷ್ ಚಂದ್ರ (ಎಸ್ಸೆಲ್ ಗ್ರೂಪ್). ಇವರು ಅಪಾಯದೊಂದಿಗೆ ಆಟವಾಡುವ ಚಾಳಿಯ ಶೋಕಿಲಾಲ ಕಪೂರ್ ಜೊತೆ ನಡೆಸಿದ ಗುಪ್ತ ವ್ಯವಹಾರಗಳ ಈಗ ತನಿಖಾ ಸಂಸ್ಥೆಗಳ ಭೂತಕನ್ನಡಿಯ ಅಡಿಯಲ್ಲಿವೆ. ಇವರು ಬ್ಯಾಂಕಿನ ಒಟ್ಟು 50,000 ಕೋಟಿ ರೂ.ಗಳ ಒತ್ತಡದ ಆಸ್ತಿಯಲ್ಲಿ 20,000 ಕೋಟಿ ರೂ.ಗಳ ಆಸ್ತಿಯನ್ನು ಪಡೆಯಲು ಈ ಮೂವರು ಕಪೂರ್‌ಗೆ ನೆರವಾದರು ಎಂದು ಬ್ಯಾಂಕಿನ ಕಾರ್ಪೊರೇಟ್ ಸಾಲಗಳ ಲೆಕ್ಕಪುಸ್ತಕವು ತೋರಿಸುತ್ತದೆ. ಇದಕ್ಕಾಗಿ ಕಪೂರ್ ವಂಚನೆಯ ಪ್ರತಿಯೊಂದು ಕೊಳಕು ತಂತ್ರಗಳನ್ನು ಬಳಸಿದ್ದಾರೆ- ರೌಂಡ್ ಟ್ರಿಪ್ಪಿಂಗ್ ಅಂದರೆ ಮಾಲಕರೇ ಅಥವಾ ಸಹವರ್ತಿಗಳು ಹೊಂದಿರುವ ಶೆಲ್ ಕಂಪನಿಗಳಿಗೆ ಅಂದರೆ ನಕಲಿ ಕಂಪನಿಗಳಿಗೆ ಸಾಲ ನೀಡುವುದು, ಕಪ್ಪು ಹಣ ಬಿಳಿ ಮಾಡುವುದು, ಒಳಗಿನ ಗುಟ್ಟು ಬೇರೆಯವರಿಗೆ ನೀಡಿ ಲಾಭ ಮಾಡುವುದು (ಇನ್‌ಸೈಡರ್ ಟ್ರೇಡಿಂಗ್), ಭ್ರಷ್ಟಾಚಾರ, ಸಾಂಸ್ಥಿಕ ದುರಾಡಳಿತ ಇತ್ಯಾದಿ.

ಈ ಬೇಜವಾಬ್ದಾರಿ ಬ್ಯಾಂಕ್ ಮಾಲಕ ಅಪಾಯಕಾರಿ ಅಟಗಳನ್ನು ವಿಸ್ತರಿಸಿ, ತಾನೊಬ್ಬ ಬಹುದೊಡ್ಡ ಸಾಲ ನೀಡಿಕೆದಾರ ಎಂದು ಎಂದು ಸಾಬೀತುಪಡಿಸುತ್ತಿರುವಾಗ ತಾನೊಂದು ಚತುರ ನಿಯಂತ್ರಕ ಸಂಸ್ಥೆ ಎಂಬ ರಿಸರ್ವ್ ಬ್ಯಾಂಕಿನ ಪ್ರತಿಷ್ಟೆ ನಡುಗಲು ಆ‌ರಂಭಿಸಿತು.

ಪ್ರಸ್ತುತ ನಡೆಯುತ್ತಿರುವ ತನಿಖೆಯು ಬ್ಯಾಂಕಿನ ಬಾಕಿ ಸಾಲಗಳು 2013-14ರಲ್ಲಿ 55,000 ಕೋಟಿ ರೂ.ಗಳಿದ್ದದ್ದು, 2018-19ರಲ್ಲಿ ಬಹುಪಟ್ಟು ಹೆಚ್ಚಳವಾಗಿ 2.4 ಕೋಟಿ ರೂ.ಗಳಿಗೆ ತಲಪಿದವು ಎಂಬುದನ್ನು ತೋರಿಸುತ್ತದೆ. ಇದು ಆರ್ಥಿಕ ಹಿಂಜರಿಕೆಯ ಹೊರತಾಗಿಯೂ ನಡೆದಿದೆ. ಬ್ಯಾಂಕಿನ ಬಾಕಿ ಸಾಲವು 2016-17ರಲ್ಲಿದ್ದ 1.3 ಲಕ್ಷ ಕೋಟಿಯಿಂದ ಎರಡೇ ವರ್ಷಗಳಲ್ಲಿ  80 ಶೇಕಡಾ ರಹಿತ ಕ್ಷೇತ್ರಗಳು ಎಂದರೆ, ಖಾಸಗಿ ನಿರ್ಮಾಣಗಾರರಿಗೆ, ಪ್ರವಾಸೋದ್ಯಮ, ಸೇವೆಗಳು, ವೈಯಕ್ತಿಕ ಸಾಲ ಇತ್ಯಾದಿಗಳಿಗೆ ನೀಡಿದ ಸಾಲ ಅಸಹಜವಾದ ಏರಿಕೆ ಕಂಡಿತು- ಅದೂ ಎಲ್ಲಾ ಭಾರತೀಯ ಕಂಪನಿಗಳು ನಿರಾಶರಾಗಿ 2018-19ರ ವಿಸ್ತರಣಾ ಯೋಜನೆಗ ಕಸದ ಬುಟ್ಟಿಗೆ ಎಸೆದಿರುವ ಸಂದರ್ಭದಲ್ಲಿ! ಇದೇ ಸಂದರ್ಭದಲ್ಲಿ ದುಡಿಯದ ಬಂಡವಾಳವೂ ಅಸಹಜವಾಗಿ ಏರಿಕೆ ಕಂಡಿದೆ. ತುರ್ತು ನಿಧಿಯು 2017-18ರಲ್ಲಿ 1,553.8 ಕೋಟಿ ರೂ. ಇದ್ದದ್ದು, 2018-19ರಲ್ಲಿ ಒಮ್ಮೆಲೇ 272 ಶೇಕಡಾ ಏರಿ 5,777.56 ಕೋಟಿಗೆ ತಲಪಿತು. ಅದೇ ಹೊತ್ತಿಗೆ ಲಾಭವು 2018-19ರ ವಾರ್ಷಿಕ ವರದಿಯಂತೆ 59 ಶೇಕಡಾ ಇಳಿದು 1,720.28 ಕೋಟಿ ರೂ.ಗಳಿಗೆ ತಲಪಿತು.

ಬ್ಯಾಂಕಿನ ಅಂದಾಜು ಅಪಾಯಕಾರಿ ಸಾಲವು 46,000 ಕೋಟಿ ರೂ.ಗಳಷ್ಟಿದೆ ಎಂದು ಜೆಪಿ ಮೋರ್ಗನ್ ಹೇಳಿದ್ದರೆ, ಕೆಲವು ಆರ್ಥಿಕ ತಜ್ಞರು 55,000 ಕೋಟಿ ರೂ. ಎಂದು ಹೇಳುತ್ತಿದ್ದಾರೆ. ಇವೆಲ್ಲವೂ ಕಳೆದ ನಾಲ್ಕೈದು ವರ್ಷಗಳಲ್ಲಿ ಉಂಟಾದವುಗಳು. ಅತ್ಯಂತ ಹೆಚ್ಚು ಸಾಲ ಪಡೆದ 20 ಖಾತೆಗಳ ಸಾಲವು ಒಂದು ವರ್ಷ ಹಿಂದೆ 48,435.4 ಕೋಟಿ ರೂ. ಇದ್ದದ್ದು ಮಾರ್ಚ್ 31, 2019ರಲ್ಲಿ 61,799.3 ಕೋಟಿ ರೂ.ಗಳಿಗೆ ಏರಿರುವುದು ಸಾಲ ನೀಡಿಕೆಯು ಕೆಲವೇ ಆಪ್ತರಿಗೆ ಸೀಮಿತಗೊಳ್ಳುತ್ತಿತ್ತು ಎಂಬುದನ್ನು ಸೂಚಿಸುತ್ತದೆ.

ಕಳೆದ 2-3 ವರ್ಷಗಳಿಂದ ಬಿಲಿಯಾಧಿಪತಿಗಳ ಏಣಿಯಿಂದ ಉರುಳುತ್ತಲೇ ಬಂದಿರುವ ಅನಿಲ್ ಅಂಬಾನಿ ಮತ್ತು ಈ ಬ್ಯಾಂಕಿನ ಜೊತೆ ಸಂಬಂಧ ಹೊಂದಿರುವ ಬಹುತೇಕ ಎಲ್ಲಾ ಉದ್ಯಮ ಸಂಸ್ಥೆಗಳು ಉರುಳುತ್ತಲೇ ಇರುವುದು ಬ್ಯಾಂಕಿನ ದುರ್ಗತಿಗೆ ಕಾರಣ. ಡಿಸೆಂಬರ್ 31, 2019ರ ಲೆಕ್ಕಾಚಾರದಂತೆ ಅನಿಲ್ ಅಂಬಾನಿಯ ಟೆಲಿಕಾಂ, ಮೂಲಸೌಕರ್ಯ, ನೌಕಾ ಮತ್ತು ವಿದ್ಯುತ್ ಕ್ಷೇತ್ರದ ಕಂಪನಿಗಳು ಯೆಸ್ ಬ್ಯಾಂಕಿಗೆ 43,800 ರೂ. ಮುಳುಗಿಸಿವೆ. ಇದರಲ್ಲಿ ಕಾಲು ಭಾಗ ಯೆಸ್ ಬ್ಯಾಂಕಿನಿಂದ ಪಡೆದುದಾಗಿದೆ. ಈ ಎಲ್ಲಾ ಕಂಪನಿಗಳು ಇಸ್ಪೀಟ್ ಎಲೆಗಳಂತೆ ಉರುಳಿದವು. ಹಣಕಾಸು ಒದಗಿಸುವವರು ಭಾರೀ ತಳಮಳಕ್ಕೆ ಒಳಗಾದರು.

ಯೆಸ್ ಬ್ಯಾಂಕ್ ಭಾರಿ ಪ್ರಮಾಣದಲ್ಲಿ ಶೇರುಗಳ ಅಡಮಾನಿನ ಆಧಾರದಲ್ಲಿ ಸಾಲಗಳನ್ನು ನೀಡಲು ಆರಂಭಿಸಿತು. ಇದು ಕಡಲ ತಡಿಯಲ್ಲಿ ನೆಟ್ಟಗೆ ನಿಂತಂತೆ. ಕಾಲಡಿಯ ಉಸುಕು ಅಥವಾ ಹೊಯ್ಗೆ ಕೊಚ್ಚಿಹೋಗಿ ಯಾವಾಗ ಉರುಳುವಿರೋ ಗೊತ್ತಾಗದು. ಅನಿಲ್ ಅಂಬಾನಿಯ ರಿಲಯನ್ಸ್ ಪವರ್ 685 ಕೋಟಿ ಕೋಟಿ ರೂ.ಗಳ ಸಾಲ ಬಾಕಿ ಇರಿಸಿ ಇದೇ ಅಡವು ಸಾಲದ ಮೇಲೆ ತನ್ನದೇ ಸಬ್ಸಿಡರಿ ಕಂಪನಿಯಾದ ರೋಸಾ ಪಲರ್ ಸಪ್ಲೈ ಕಂಪನಿಯಿಂದ 30 ಶೇಕಡಾ ಪಾಲುದಾರಿಕೆ ಖರೀದಿಸಿತು.

ಸುಬಾಷ್ ಚಂದ್ರ ಅವರ ಎಸ್ಸೆಲ್ ಗ್ರೂಪ್ ಅದೇ ರೀತಿಯಲ್ಲಿ 3,330 ಕೋಟಿ ರೂ.ಗಳ ಧೋಕಾ ಮಾಡಿತು. ಈ ರೀತಿಯಲ್ಲಿ 20 ದೊಡ್ಡ ಸಾಲಗಾರ ಕುಳಗಳು ಬ್ಯಾಂಕಿನ ಮಾಲಕರ ಸಹಕಾರದ ಮೂಲಕವೇ ಸಾವಿರಾರು ಕೋಟಿ ಸಾಲ ಮಾಡಿ ಮುಳುಗಿಸಿದ್ದಾರೆ. ಠೇವಣಿದಾರರ ಹಣ ಮತ್ತು ನಂಬಿಕೆ ಮುಳುಗಿಸಿದ್ದಾರೆ. ಇದು ಸರಕಾರ ಜನರಿಗೆ ಒದಗಿಸುತ್ತಿರುವ ಆರ್ಥಿಕ ಭದ್ರತೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...