Homeಮುಖಪುಟಯೆಸ್ ಬ್ಯಾಂಕ್ ಪತನಕ್ಕೆ ಮುನ್ನುಡಿ ಬರೆದ ಮೂವರು ಮಾಜಿ ಬಿಲಿಯಾಧಿಪತಿಗಳು: ಅಂಬಾನಿ, ವಾಧ್ವಾನ್ ಮತ್ತು ಚಂದ್ರ!

ಯೆಸ್ ಬ್ಯಾಂಕ್ ಪತನಕ್ಕೆ ಮುನ್ನುಡಿ ಬರೆದ ಮೂವರು ಮಾಜಿ ಬಿಲಿಯಾಧಿಪತಿಗಳು: ಅಂಬಾನಿ, ವಾಧ್ವಾನ್ ಮತ್ತು ಚಂದ್ರ!

ದಿವಾಳಿ ಅಂಚಿನಲ್ಲಿರುವ ಮೂವರು ಮಿಲಿಯಾಧಿಪತಿಗಳ ಜೊತೆ ವ್ಯವಹರಿಸುತ್ತಿದ್ದ ಯೆಸ್ ಬ್ಯಾಂಕ್ ಲೆಕ್ಕಪತ್ರಗಳ ಸೂಕ್ಷ್ಮ ಅಪರಾಧಿಕ ಪರಿಶೀಲನೆ ನಡೆಸಿದಲ್ಲಿ ಇನ್ನಷ್ಟು ಅಸ್ತಿಪಂಜರಗಳು ಹೊರಬರಲಿವೆ.

- Advertisement -
- Advertisement -

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ಮುಂಬಯಿಯ ಗಜಿಬಿಜಿಯ ಲೋವರ್ ಪರೇಲ್‌ನಲ್ಲಿರುವ ಯಾವುದೇ ದೇಖಾದೇಕಿ ಇಲ್ಲದ ಮೂರು ಗಗನಚುಂಬಿ ಕಟ್ಟಡಗಳನ್ನು ಹೊಂದಿರುವ ಇಂಡಿಯಾ ಬುಲ್ಸ್ ಫೈನಾನ್ಸ್ ಸೆಂಟರ್ ಎಂಬ ವಾಣಿಜ್ಯ ಸಂಕೀರ್ಣದಲ್ಲಿರುವ ಯೆಸ್ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಈಗ ಭಯಹುಟ್ಟಿಸುವ ಮೌನವಿದೆ. ಕೆಟ್ಟ ಸಾಲಗಳು ಮತ್ತು ಅಭದ್ರ ಆಸ್ತಿಗಳ ಕಾರಣದಿಂದ ಕಳೆದ ವಾರ ಪ್ರಪಾತದ ಅಂಚಿನಲ್ಲಿದ್ದ ದೇಶದ ನಾಲ್ಕನೇ ಅತಿದೊಡ್ಡ ಖಾಸಗಿ ಬ್ಯಾಂಕಿನಲ್ಲೀಗ ಬದುಕಬಹುದೋ ಏನೋ ಎಂಬ ಆಶಾವಾದ ಮೂಡಿದೆ.

ಕಳೆದ ವಾರ ಭಾರತೀಯ ರಿಸರ್ವ್ ಬ್ಯಾಂಕ್ ಈ ಬ್ಯಾಂಕಿನ ಮೇಲೆ ನಿರ್ಬಂಧ ಹೇರಿ ಹಣ ಹಿಂತೆಗೆತಕ್ಕೆ ಮಿತಿಯನ್ನು ವಿಧಿಸಿದಾಗ ಹಣ ಕಳೆದುಕೊಳ್ಳುವ ಭೀತಿಗೆ ಒಳಗಾದ ಸಾವಿರಾರು ಜನರು ಈ ಬ್ಯಾಂಕಿನ ವಿಶಾಲವಾದ ಲಾಬಿಯಲ್ಲಿ ಜಮಾಯಿಸಿದ್ದರು. ಈ ಕಟ್ಟಡಗಳಲ್ಲಿರುವ ಹಲವಾರು ಮಧ್ಯಮ ಪ್ರಮಾಣದ ಕಂಪನಿಗಳು ಈ ಬ್ಯಾಂಕಿನ ಕಾರ್ಪೊರೇಟ್ ಗ್ರಾಹಕರಾಗಿದ್ದು, ತಮ್ಮ ನೌಕರರ ಸಂಬಳದ ಖಾತೆಗಳನ್ನು ಇಲ್ಲಿಯೇ ಹೊಂದಿರುವುದು ಬಹುದೊಡ್ಡ ಗದ್ದಲಕ್ಕೆ ಕಾರಣವಾಗಿತ್ತು.

ಇದೀಗ ನಿಮ್ಮ ಹಣ ಸುರಕ್ಷಿತ ಎಂದು ಸರಕಾರ ಭರವಸೆ ನೀಡಿರುವುದರಿಂದ ಗ್ರಾಹಕರು ಸ್ವಲ್ಪ ಮಟ್ಟಿನ ನಿಟ್ಟುಸಿರು ಬಿಟ್ಟಿದ್ದಾರೆ. 16 ವರ್ಷಗಳ ಹಿಂದೆ ಈ ಬ್ಯಾಂಕನ್ನು ಸ್ಥಾಪಿಸಿದ್ದ ರಾಣಾ ಕಪೂರ್ ಇದೀಗ ಭಾರತೀಯ ಬ್ಯಾಂಕಿಂಗ್ ಕ್ಷೇತ್ರದ ಹೊಸ ಖಳನಾಯಕ ಎನಿಸಿದ್ದಾರೆ. ಅವರೀಗ ಮುಂಬಯಿಯ ಜಾರಿ ನಿರ್ದೇಶನಾಲಯದ ವಶದಲ್ಲಿದ್ದು, ಕ್ರಿಮಿನಲ್ ಸಂಚು, ವಂಚನೆ ಮತ್ತು ಭ್ರಷ್ಟಾಚಾರದ ಆರೋಪದಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.

ಇದೇ ಕಪೂರ್ ಈಗ ಬ್ಯಾಂಕಿನ ಪತನಕ್ಕಾಗಿ ಆರ್ಥಿಕ ಹಿಂಜರಿತ ಮತ್ತು ನೋಟು ಅಮಾನ್ಯೀಕರಣವನ್ನು ದೂರಬಹುದು. ಆದರೆ, ಇವರೇ ಅದನ್ನು ಸರಕಾರದ ಮಾಸ್ಟರ್ ಸ್ಟ್ರೋಕ್ ಎಂದು ಕೊಂಡಾಡಿದ್ದರು. ಬ್ಯಾಂಕಿನ ರಕ್ತಸಿಕ್ತ ಲೆಕ್ಕಪತ್ರದ ವಿವರಗಳು ಏನನ್ನು ತೋರಿಸುತ್ತವೆ ಎಂದರೆ ಹಿಂದೆ ಬಿಲಿಯಾಧಿಪತಿಗಳಾಗಿದ್ದು ನಂತರ ಆಸ್ತಿಪಾಸ್ತಿಗಳ ವಿನಾಶಕರಾಗಿ ಪರಿಣಮಿಸಿದ ಮೂವರು ಮಹಾನುಭಾವರು ಈ ಬ್ಯಾಂಕಿನ ಪತನಕ್ಕೆ ಮುನ್ನುಡಿ ಬರೆದಿದ್ದಾರೆ.

ಅವರೇ ಅನಿಲ್ ಅಂಬಾನಿ (ರಿಲಯನ್ಸ್ ಗ್ರೂಪ್), ಕಪಿಲ್ ವಾಧ್ವಾನ್ (ಡಿಎಚ್‌ಎಫ್‌ಎಲ್) ಮತ್ತು ಸುಭಾಷ್ ಚಂದ್ರ (ಎಸ್ಸೆಲ್ ಗ್ರೂಪ್). ಇವರು ಅಪಾಯದೊಂದಿಗೆ ಆಟವಾಡುವ ಚಾಳಿಯ ಶೋಕಿಲಾಲ ಕಪೂರ್ ಜೊತೆ ನಡೆಸಿದ ಗುಪ್ತ ವ್ಯವಹಾರಗಳ ಈಗ ತನಿಖಾ ಸಂಸ್ಥೆಗಳ ಭೂತಕನ್ನಡಿಯ ಅಡಿಯಲ್ಲಿವೆ. ಇವರು ಬ್ಯಾಂಕಿನ ಒಟ್ಟು 50,000 ಕೋಟಿ ರೂ.ಗಳ ಒತ್ತಡದ ಆಸ್ತಿಯಲ್ಲಿ 20,000 ಕೋಟಿ ರೂ.ಗಳ ಆಸ್ತಿಯನ್ನು ಪಡೆಯಲು ಈ ಮೂವರು ಕಪೂರ್‌ಗೆ ನೆರವಾದರು ಎಂದು ಬ್ಯಾಂಕಿನ ಕಾರ್ಪೊರೇಟ್ ಸಾಲಗಳ ಲೆಕ್ಕಪುಸ್ತಕವು ತೋರಿಸುತ್ತದೆ. ಇದಕ್ಕಾಗಿ ಕಪೂರ್ ವಂಚನೆಯ ಪ್ರತಿಯೊಂದು ಕೊಳಕು ತಂತ್ರಗಳನ್ನು ಬಳಸಿದ್ದಾರೆ- ರೌಂಡ್ ಟ್ರಿಪ್ಪಿಂಗ್ ಅಂದರೆ ಮಾಲಕರೇ ಅಥವಾ ಸಹವರ್ತಿಗಳು ಹೊಂದಿರುವ ಶೆಲ್ ಕಂಪನಿಗಳಿಗೆ ಅಂದರೆ ನಕಲಿ ಕಂಪನಿಗಳಿಗೆ ಸಾಲ ನೀಡುವುದು, ಕಪ್ಪು ಹಣ ಬಿಳಿ ಮಾಡುವುದು, ಒಳಗಿನ ಗುಟ್ಟು ಬೇರೆಯವರಿಗೆ ನೀಡಿ ಲಾಭ ಮಾಡುವುದು (ಇನ್‌ಸೈಡರ್ ಟ್ರೇಡಿಂಗ್), ಭ್ರಷ್ಟಾಚಾರ, ಸಾಂಸ್ಥಿಕ ದುರಾಡಳಿತ ಇತ್ಯಾದಿ.

ಈ ಬೇಜವಾಬ್ದಾರಿ ಬ್ಯಾಂಕ್ ಮಾಲಕ ಅಪಾಯಕಾರಿ ಅಟಗಳನ್ನು ವಿಸ್ತರಿಸಿ, ತಾನೊಬ್ಬ ಬಹುದೊಡ್ಡ ಸಾಲ ನೀಡಿಕೆದಾರ ಎಂದು ಎಂದು ಸಾಬೀತುಪಡಿಸುತ್ತಿರುವಾಗ ತಾನೊಂದು ಚತುರ ನಿಯಂತ್ರಕ ಸಂಸ್ಥೆ ಎಂಬ ರಿಸರ್ವ್ ಬ್ಯಾಂಕಿನ ಪ್ರತಿಷ್ಟೆ ನಡುಗಲು ಆ‌ರಂಭಿಸಿತು.

ಪ್ರಸ್ತುತ ನಡೆಯುತ್ತಿರುವ ತನಿಖೆಯು ಬ್ಯಾಂಕಿನ ಬಾಕಿ ಸಾಲಗಳು 2013-14ರಲ್ಲಿ 55,000 ಕೋಟಿ ರೂ.ಗಳಿದ್ದದ್ದು, 2018-19ರಲ್ಲಿ ಬಹುಪಟ್ಟು ಹೆಚ್ಚಳವಾಗಿ 2.4 ಕೋಟಿ ರೂ.ಗಳಿಗೆ ತಲಪಿದವು ಎಂಬುದನ್ನು ತೋರಿಸುತ್ತದೆ. ಇದು ಆರ್ಥಿಕ ಹಿಂಜರಿಕೆಯ ಹೊರತಾಗಿಯೂ ನಡೆದಿದೆ. ಬ್ಯಾಂಕಿನ ಬಾಕಿ ಸಾಲವು 2016-17ರಲ್ಲಿದ್ದ 1.3 ಲಕ್ಷ ಕೋಟಿಯಿಂದ ಎರಡೇ ವರ್ಷಗಳಲ್ಲಿ  80 ಶೇಕಡಾ ರಹಿತ ಕ್ಷೇತ್ರಗಳು ಎಂದರೆ, ಖಾಸಗಿ ನಿರ್ಮಾಣಗಾರರಿಗೆ, ಪ್ರವಾಸೋದ್ಯಮ, ಸೇವೆಗಳು, ವೈಯಕ್ತಿಕ ಸಾಲ ಇತ್ಯಾದಿಗಳಿಗೆ ನೀಡಿದ ಸಾಲ ಅಸಹಜವಾದ ಏರಿಕೆ ಕಂಡಿತು- ಅದೂ ಎಲ್ಲಾ ಭಾರತೀಯ ಕಂಪನಿಗಳು ನಿರಾಶರಾಗಿ 2018-19ರ ವಿಸ್ತರಣಾ ಯೋಜನೆಗ ಕಸದ ಬುಟ್ಟಿಗೆ ಎಸೆದಿರುವ ಸಂದರ್ಭದಲ್ಲಿ! ಇದೇ ಸಂದರ್ಭದಲ್ಲಿ ದುಡಿಯದ ಬಂಡವಾಳವೂ ಅಸಹಜವಾಗಿ ಏರಿಕೆ ಕಂಡಿದೆ. ತುರ್ತು ನಿಧಿಯು 2017-18ರಲ್ಲಿ 1,553.8 ಕೋಟಿ ರೂ. ಇದ್ದದ್ದು, 2018-19ರಲ್ಲಿ ಒಮ್ಮೆಲೇ 272 ಶೇಕಡಾ ಏರಿ 5,777.56 ಕೋಟಿಗೆ ತಲಪಿತು. ಅದೇ ಹೊತ್ತಿಗೆ ಲಾಭವು 2018-19ರ ವಾರ್ಷಿಕ ವರದಿಯಂತೆ 59 ಶೇಕಡಾ ಇಳಿದು 1,720.28 ಕೋಟಿ ರೂ.ಗಳಿಗೆ ತಲಪಿತು.

ಬ್ಯಾಂಕಿನ ಅಂದಾಜು ಅಪಾಯಕಾರಿ ಸಾಲವು 46,000 ಕೋಟಿ ರೂ.ಗಳಷ್ಟಿದೆ ಎಂದು ಜೆಪಿ ಮೋರ್ಗನ್ ಹೇಳಿದ್ದರೆ, ಕೆಲವು ಆರ್ಥಿಕ ತಜ್ಞರು 55,000 ಕೋಟಿ ರೂ. ಎಂದು ಹೇಳುತ್ತಿದ್ದಾರೆ. ಇವೆಲ್ಲವೂ ಕಳೆದ ನಾಲ್ಕೈದು ವರ್ಷಗಳಲ್ಲಿ ಉಂಟಾದವುಗಳು. ಅತ್ಯಂತ ಹೆಚ್ಚು ಸಾಲ ಪಡೆದ 20 ಖಾತೆಗಳ ಸಾಲವು ಒಂದು ವರ್ಷ ಹಿಂದೆ 48,435.4 ಕೋಟಿ ರೂ. ಇದ್ದದ್ದು ಮಾರ್ಚ್ 31, 2019ರಲ್ಲಿ 61,799.3 ಕೋಟಿ ರೂ.ಗಳಿಗೆ ಏರಿರುವುದು ಸಾಲ ನೀಡಿಕೆಯು ಕೆಲವೇ ಆಪ್ತರಿಗೆ ಸೀಮಿತಗೊಳ್ಳುತ್ತಿತ್ತು ಎಂಬುದನ್ನು ಸೂಚಿಸುತ್ತದೆ.

ಕಳೆದ 2-3 ವರ್ಷಗಳಿಂದ ಬಿಲಿಯಾಧಿಪತಿಗಳ ಏಣಿಯಿಂದ ಉರುಳುತ್ತಲೇ ಬಂದಿರುವ ಅನಿಲ್ ಅಂಬಾನಿ ಮತ್ತು ಈ ಬ್ಯಾಂಕಿನ ಜೊತೆ ಸಂಬಂಧ ಹೊಂದಿರುವ ಬಹುತೇಕ ಎಲ್ಲಾ ಉದ್ಯಮ ಸಂಸ್ಥೆಗಳು ಉರುಳುತ್ತಲೇ ಇರುವುದು ಬ್ಯಾಂಕಿನ ದುರ್ಗತಿಗೆ ಕಾರಣ. ಡಿಸೆಂಬರ್ 31, 2019ರ ಲೆಕ್ಕಾಚಾರದಂತೆ ಅನಿಲ್ ಅಂಬಾನಿಯ ಟೆಲಿಕಾಂ, ಮೂಲಸೌಕರ್ಯ, ನೌಕಾ ಮತ್ತು ವಿದ್ಯುತ್ ಕ್ಷೇತ್ರದ ಕಂಪನಿಗಳು ಯೆಸ್ ಬ್ಯಾಂಕಿಗೆ 43,800 ರೂ. ಮುಳುಗಿಸಿವೆ. ಇದರಲ್ಲಿ ಕಾಲು ಭಾಗ ಯೆಸ್ ಬ್ಯಾಂಕಿನಿಂದ ಪಡೆದುದಾಗಿದೆ. ಈ ಎಲ್ಲಾ ಕಂಪನಿಗಳು ಇಸ್ಪೀಟ್ ಎಲೆಗಳಂತೆ ಉರುಳಿದವು. ಹಣಕಾಸು ಒದಗಿಸುವವರು ಭಾರೀ ತಳಮಳಕ್ಕೆ ಒಳಗಾದರು.

ಯೆಸ್ ಬ್ಯಾಂಕ್ ಭಾರಿ ಪ್ರಮಾಣದಲ್ಲಿ ಶೇರುಗಳ ಅಡಮಾನಿನ ಆಧಾರದಲ್ಲಿ ಸಾಲಗಳನ್ನು ನೀಡಲು ಆರಂಭಿಸಿತು. ಇದು ಕಡಲ ತಡಿಯಲ್ಲಿ ನೆಟ್ಟಗೆ ನಿಂತಂತೆ. ಕಾಲಡಿಯ ಉಸುಕು ಅಥವಾ ಹೊಯ್ಗೆ ಕೊಚ್ಚಿಹೋಗಿ ಯಾವಾಗ ಉರುಳುವಿರೋ ಗೊತ್ತಾಗದು. ಅನಿಲ್ ಅಂಬಾನಿಯ ರಿಲಯನ್ಸ್ ಪವರ್ 685 ಕೋಟಿ ಕೋಟಿ ರೂ.ಗಳ ಸಾಲ ಬಾಕಿ ಇರಿಸಿ ಇದೇ ಅಡವು ಸಾಲದ ಮೇಲೆ ತನ್ನದೇ ಸಬ್ಸಿಡರಿ ಕಂಪನಿಯಾದ ರೋಸಾ ಪಲರ್ ಸಪ್ಲೈ ಕಂಪನಿಯಿಂದ 30 ಶೇಕಡಾ ಪಾಲುದಾರಿಕೆ ಖರೀದಿಸಿತು.

ಸುಬಾಷ್ ಚಂದ್ರ ಅವರ ಎಸ್ಸೆಲ್ ಗ್ರೂಪ್ ಅದೇ ರೀತಿಯಲ್ಲಿ 3,330 ಕೋಟಿ ರೂ.ಗಳ ಧೋಕಾ ಮಾಡಿತು. ಈ ರೀತಿಯಲ್ಲಿ 20 ದೊಡ್ಡ ಸಾಲಗಾರ ಕುಳಗಳು ಬ್ಯಾಂಕಿನ ಮಾಲಕರ ಸಹಕಾರದ ಮೂಲಕವೇ ಸಾವಿರಾರು ಕೋಟಿ ಸಾಲ ಮಾಡಿ ಮುಳುಗಿಸಿದ್ದಾರೆ. ಠೇವಣಿದಾರರ ಹಣ ಮತ್ತು ನಂಬಿಕೆ ಮುಳುಗಿಸಿದ್ದಾರೆ. ಇದು ಸರಕಾರ ಜನರಿಗೆ ಒದಗಿಸುತ್ತಿರುವ ಆರ್ಥಿಕ ಭದ್ರತೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...