Homeಅಂಕಣಗಳುನೂರರ ನೋಟ: ಪ್ರಜಾಪ್ರಭುತ್ವದ ಕಗ್ಗೊಲೆಯ ಮೂರು ಪ್ರಕರಣಗಳು

ನೂರರ ನೋಟ: ಪ್ರಜಾಪ್ರಭುತ್ವದ ಕಗ್ಗೊಲೆಯ ಮೂರು ಪ್ರಕರಣಗಳು

- Advertisement -
- Advertisement -

ಮೋದಿ ಸರ್ಕಾರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯ ಕೆಲಸ ಅವ್ಯಾಹತವಾಗಿ ನಡೆಯುತ್ತಿದೆ. ಇದಕ್ಕೆ ಸಾಕ್ಷಿ (1) ಕಾಶ್ಮೀರಕ್ಕೆ ಇನ್ನೂ statehood ಕೊಡದೆ ಇರುವುದು (2) ದೆಹಲಿಯಲ್ಲಿ ಅಧಿಕಾರ ಚುನಾಯಿತ ಸರ್ಕಾರದ ಕೈಯಲ್ಲಿರುವುದನ್ನು ಸಹಿಸದೆ ಕೇಂದ್ರ ಸರ್ಕಾರದಿಂದ ನೇಮಕರಾದ ಚುನಾಯಿತರಲ್ಲದ ಲೆಫ್ಟಿನೆಂಟ್ ಗವರ್ನರ್‌ರಿಗೆ ಅಸಂವಿಧಾನ ರೀತ್ಯಾ ಚುನಾಯಿತ ಸರ್ಕಾರದ ಮೇಲೆ ದಬ್ಬಾಳಿಕೆ ನಡೆಸುವ ಶಾಸನ ಜಾರಿಗೆ ತಂದಿರುವುದು (3) ಪುದುಚೇರಿಯಲ್ಲಿ ಕಾಂಗ್ರೆಸ್ ಮತ್ತು ಡಿಎಂಕೆ ಜಂಟಿ ಸರ್ಕಾರ ಅನೇಕ ವರ್ಷಗಳಿಂದ ಆಡಳಿತ ನಡೆಸುತ್ತಿತ್ತು. ಬಿಜೆಪಿ ಕೇಂದ್ರ ಸರ್ಕಾರ ತಾನು ನೇಮಿಸಿದ ರಾಜ್ಯಪಾಲರ ಮೂಲಕ ಪುದುಚೇರಿ ಚುನಾಯಿತ ಸರ್ಕಾರವನ್ನು ಕಿತ್ತೆಸೆಯಲು ಅಸಂವಿಧಾನಕಾರಿ ಷಡ್ಯಂತ್ರಗಳನ್ನು ರಚಿಸಿ ಆ ಸರ್ಕಾರವನ್ನು ಕೆಳಗಿಳಿಸಿ ಗೌರ್‍ನರ್ ರೂಲ್ ಜಾರಿಗೆ ತಂದಿರುವುದು.

ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಅಧಿಕಾರವನ್ನು ಕಿತ್ತುಹಾಕಿ ಮೋದಿ ಸರ್ಕಾರ ಕಾಶ್ಮೀರವನ್ನು ಮೂರು ಪ್ರಾಂತ್ಯಗಳಾಗಿ ಒಡೆದು ಗೌರ್‍ನರ್ ಕೈಗೆ ಅಧಿಕಾರ ನೀಡಿ ಒಂದೆರಡು ವರ್ಷ ಕಳೆದರೂ, ಕಾಶ್ಮೀರಕ್ಕೆ ಇನ್ನೂ statehood ಕೊಟ್ಟಿಲ್ಲ. ಚುನಾವಣೆ ನಡೆಸಿಲ್ಲ. ಚುನಾಯಿತ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿಲ್ಲ. 13.2.2021ರಂದು ಕೇಂದ್ರ ಸರ್ಕಾರದ ಗೃಹಮಂತ್ರಿಗಳು ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪುನರ್ರಚನೆಯ ಮಸೂದೆ ಮಂಡಿಸಿದಾಗ ಗೃಹ ಸಚಿವ ಷಾ ಅವರು ಜಮ್ಮು ಕಾಶ್ಮೀರಕ್ಕೆ statehoodನ್ನು ಸರಿಯಾದ ಸಮಯದಲ್ಲಿ ನೀಡಲಾಗುವುದು ಎಂದು ಉತ್ತರಿಸಿದರು. ಅದರರ್ಥ ಸದ್ಯಕ್ಕಂತೂ statehood ಘೋಷಣೆ ಮಾಡುವುದಿಲ್ಲ ನಮಗೆ ಸಮಯ ಸರಿಯೆನಿಸಿದಾಗ statehood ದಯಪಾಲಿಸುವುದು ಎಂದು ಅರ್ಥೈಸಬೇಕಾದೀತು.

PC :The Federal News

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 371ನೆ ವಿಧಿಯನ್ನು ಮೋದಿ ಸರ್ಕಾರ ರದ್ದುಪಡಿಸಿದ ರೀತಿಯೇ ವಿಚಿತ್ರವಾಗಿತ್ತು. ಸರ್ಕಾರ ಈ ತಿದ್ದುಪಡಿ ತಂದು ಅದಕ್ಕೆ ರಾಷ್ಟ್ರಪತಿಯವರ ಸಹಿ ಹಾಕಿಸುವ ಮುನ್ನ ಪಾರ್ಲಿಮೆಂಟಿನ ಮುಂದೆ ಈ ಪ್ರಸ್ತಾಪ ಇಡಬೇಕಾಗಿತ್ತು. ಕಾಶ್ಮೀರದಲ್ಲಿ ಅಸ್ತಿತ್ವದಲ್ಲಿದ್ದ ಸರ್ಕಾರವನ್ನು ಆಯ್ಕೆಗೊಂಡ ಶಾಸನ ಸಭೆಯ ಸದಸ್ಯರನ್ನು ಈ ತಿದ್ದುಪಡಿಯ ಬಗೆಗೆ ಚರ್ಚೆ ಮಾಡಲು ಅವಕಾಶ ಕಲ್ಪಿಸಬೇಕಾಗಿತ್ತು. Referendum ಮುಖಾಂತರ ಜನರ ಸಮ್ಮತಿ ಪಡೆಯಬೇಕಾಗಿತ್ತು. ಈ ಮಾರ್ಗ ಬಿಟ್ಟು ಮೋದಿ ಸರ್ಕಾರ 50 ಸಾವಿರ ಸೈನಿಕರನ್ನು ಜಮ್ಮು ಕಾಶ್ಮೀರಕ್ಕೆ ಕಳಿಸಿ ಜನ ಬೆಚ್ಚಿ ಬೀಳುವಂತೆ ಮಾಡಿತು. ವಿವಿಧ ರಾಜಕೀಯ ಪಕ್ಷಗಳ ನಾಯಕರನ್ನು ಗೃಹಬಂಧನದಲ್ಲಿ ಇಡಲಾಯಿತು. ಸರ್ಕಾರದ ಧೋರಣೆಯನ್ನು ಪ್ರಶ್ನಿಸಿದ ಪತ್ರಿಕೆ ಸಂಪಾದಕರು, ಗೌರವಯುತ ನಾಗರಿಕರು ಇವರನ್ನೆಲ್ಲ ಬಂಧಿಸಲಾಯಿತು. ಕಾಶ್ಮೀರದಲ್ಲಿ ಏನು ನಡೆಯುತ್ತಿದೆ ಎಂಬುದು ಭಾರತದ ಇತರ ಪ್ರಾಂತ್ಯದವರಿಗೆ, ವಿಶ್ವಕ್ಕೆ ತಿಳಿಯದಂತೆ ಮಾಡಲು ಎಲ್ಲ ಸುದ್ದಿವಾಹಕ ಯಂತ್ರಸಾಧನಗಳನ್ನು ಸ್ಥಗಿತಗೊಳಿಸಲಾಯಿತು. ಭಾರತದ ಅವಿಭಾಜ್ಯ ಅಂಗವಾಗಿರುವ ಒಂದು ರಾಜ್ಯವನ್ನು ಈ ರೀತಿ ನಡೆಸಿಕೊಂಡಿದ್ದು ಪ್ರಜಾಪ್ರಭುತ್ವದ ಕಗ್ಗೊಲೆಯಲ್ಲವೇ?

ಎರಡು ವರ್ಷಗಳೆ ಕಳೆದು ಹೋಗಿದ್ದರೂ ಇನ್ನೂ ಜಮ್ಮು ಕಾಶ್ಮೀರ ರಾಜ್ಯಕ್ಕೆ ಸ್ವಾಯತ್ತತೆ ನೀಡದಿರುವುದು statehood ನೀಡದಿರುವುದು ಪ್ರಜಾಪ್ರಭುತ್ವದ ಬೆನ್ನಲುಬನ್ನೇ ಮುರಿಯುವ ಒಂದು ಹುನ್ನಾರ.

ಎರಡನೆಯ ಪ್ರಜಾಪ್ರಭುತ್ವದಕಗ್ಗೊಲೆಯ ಕೆಲಸ ನಡೆಸಿರುವುದು ರಾಜಧಾನಿ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲರ ಸರ್ಕಾರ ಅಧಿಕ ಬಹುಮತದಿಂದ ಅಧಿಕಾರಕ್ಕೆ ಬಂದಿತ್ತು. ಈ ಸರ್ಕಾರದ ಅಧಿಕಾರವನ್ನು ಮೊಟಕುಗೊಳಿಸಲು ಮೋದಿ ಸರ್ಕಾರ ಮೊದಲಿನಿಂದಲೂ ಹವಣಿಸುತ್ತಿತ್ತು. ಕೇಂದ್ರ ಸರ್ಕಾರದಿಂದ ನೇಮಕಗೊಂಡಿರುವ ಲೆಫ್ಟಿನೆಂಟ್ ಗವರ್ನರ್‌ಗೂ, ಮುಖ್ಯಮಂತ್ರಿ ಕೇಜ್ರಿವಾಲರಿಗೂ ಈ ವಿಷಯದಲ್ಲಿ ದೊಡ್ಡ ಹೋರಾಟವೇ ನಡೆದುಹೋಯಿತು. ಮುಖ್ಯಮಂತ್ರಿ ಕೇಜ್ರಿವಾಲ್‌ರವರು ಲೆಫ್ಟಿನೆಂಟ್ ಗವರ್ನರ್ ಕಚೇರಿಯ ಮುಂದೆ ಅನೇಕ ದಿನಗಳವೆರೆಗೆ ಪ್ರತಿಭಟನೆ ಮಾಡಿದರು. ಸರ್ವೋಚ್ಚ ನ್ಯಾಯಾಲಯ ಮಧ್ಯೆ ಪ್ರವೇಶಿಸಬೇಕಾಗಿ ಬಂದು, ಲೆಫ್ಟಿನೆಂಟ್ ಗವರ್ನರ್‌ರು ದೆಹಲಿ ಸರ್ಕಾರದ ಕಾರ್ಯನಿರ್ವಹಣೆಯಲ್ಲಿ ಪದೇ ಪದೇ ತಲೆ ಹಾಕದ ಹಾಗೆ ತಾಕೀತು ಮಾಡಿತು.

ಇತ್ತೀಚೆಗೆ ಮೋದಿ ಸರ್ಕಾರ ಮತ್ತೆ ದೆಹಲಿಯ ಸರ್ಕಾರದ ಆಡಳಿತದಲ್ಲಿ ಲೆಫ್ಟಿನೆಂಟ್ ಗವರ್ನರ್ ತಲೆ ಹಾಕಲು ಅಧಿಕಾರ ನೀಡಿ, ಎರಡನೇ ಬಾರಿಗೆ ಹೆಚ್ಚು ಬಹುಮತದಿಂದ ಆಯ್ಕೆಯಾಗಿ ಬಂದಿರುವ ಕೇಜ್ರಿವಾಲ್ ಸರ್ಕಾರಕ್ಕೆ ತೊಡರುಗಾಲು ಹಾಕಲು ಅವಕಾಶ ಮಾಡಿಕೊಡುವ ಅವೈಜ್ಞಾನಿಕ ಕಾಯ್ದೆಗಳನ್ನು ರೂಪಿಸಿದ್ದಾರೆ. ಸರ್ಕಾರದ ಮಂತ್ರಿಮಂಡಲವಾಗಲಿ, ಮಂತ್ರಿಗಳೇ ಆಗಲಿ ಯಾವುದೇ ತೀರ್ಮಾನ ಮಾಡುವ ಮೊದಲು ಲೆಫ್ಟಿನೆಂಟ್ ಗವರ್ನರ್‌ರೊಡನೆ ಸಮಾಲೋಚನೆ ನಡೆಸಿ ಒಪ್ಪಿಗೆ ಪಡೆಯಬೇಕು ಎಂಬ ಬರ್ಬರ ಕಾನೂನು ರಚಿಸಲಾಗಿದೆ. ಪ್ರಜೆಗಳ ಭವಿಷ್ಯವನ್ನು ನಿರ್ಧರಿಸುವವರು ಚುನಾಯಿತ ಪ್ರತಿನಿಧಿಗಳಾಗಿರಬೇಕೇ ಹೊರತು ಕೇಂದ್ರ ಸರ್ಕಾರದಿಂದ ನೇಮಕಗೊಂಡ ಲೆಫ್ಟಿನೆಂಟ್ ಗವರ್ನರ್ ಅಲ್ಲ. ಇದೇ ರೀತಿಯ ಅನೇಕ ಪ್ರತಿಬಂಧಕಗಳನ್ನು ಹಾಕಿ ಚುನಾಯಿತ ಪ್ರತಿನಿಧಿಗಳ ಅಭಿಪ್ರಾಯಗಳಿಗಿಂತ ಮೋದಿ ಸರ್ಕಾರದ ಆಯ್ಕೆಯ ಲೆಫ್ಟಿನೆಂಟ್ ಗವರ್ನರ್ ಅಭಿಪ್ರಾಯಗಳಿಗೇ ದೆಹಲಿ ಸರ್ಕಾರ ಮಾನ್ಯತೆ ಕೊಡಬೇಕೆಂದರೆ ಇದು ಪ್ರಜಾಸತ್ತೆಯ ಅವಹೇಳನವಲ್ಲದೇ ಬೇರೇನೂ ಅಲ್ಲ.

ಮತ್ತೆ ದೆಹಲಿ ಸರ್ಕಾರ ತನ್ನ ಸ್ವಾಯತ್ತತೆಯನ್ನು ಉಳಿಸಿಕೊಳ್ಳಲು ಲೆಫ್ಟಿನೆಂಟ್ ಗವರ್ನರ್ ಮತ್ತು ಮೋದಿ ಸರ್ಕಾರದ ವಿರುದ್ಧ ಕಾನೂನು ಸಮರ ಆರಂಭಿಸುವುದು ಅನಿವಾರ್ಯವೆನಿಸಿದೆ.

ಮೂರನೆಯದು ಪುದುಚೇರಿಯ ರಾಜಕೀಯದಲ್ಲಿ ಬಿಜೆಪಿ ಸರ್ಕಾರದಿಂದ ನೇಮಕರಾದ ರಾಜ್ಯಪಾಲರ ಹಸ್ತಕ್ಷೇಪ.

ಹಲವು ವರ್ಷಗಳ ಕಾಲ ರಾಜ್ಯಪಾಲರಾಗಿದ್ದ ಕಿರಣ ಬೇಡಿಯವರು ಅಧಿಕಾರ ವಹಿಸಿಕೊಂಡ ದಿನದಿಂದಲೂ ಕಾಂಗ್ರೆಸ್ ಡಿಎಂಕೆ ಮೈತ್ರಿ ಸರ್ಕಾರದ ವಿರುದ್ಧ ಸಮರ ಸಾರಿದರು. ಈ ಮೈತ್ರಿ ಸರ್ಕಾರದ ಅಧಿಕಾರಗಳನ್ನು ನೇರವಾಗಿ ಸಂಪರ್ಕಿಸುವ ಕೆಟ್ಟ ಸಂಪ್ರದಾಯವನ್ನು ಹುಟ್ಟುಹಾಕಿದರು. ಮುಖ್ಯಮಂತ್ರಿಗಳ ವಿರುದ್ಧ ಸಮರ ಸಾರಿದರು. ಪಕ್ಷದ ಸದಸ್ಯರ ಬಲವನ್ನು ಕುಗ್ಗಿಸಿ ಸರ್ಕಾರ ಬೀಳುವಂತೆ ಮಾಡಲು ಪ್ರಯತ್ನಿಸಿದರು. ಡಿಪಾಸಿಟ್ ಕಳೆದುಕೊಂಡು ಹೀನಾಯವಾಗಿ ಸೋತಿದ್ದ ಬಿಜೆಪಿಯ ಮೂವರನ್ನು ರಾಜ್ಯಪಾಲರು ನಾಮಕರಣ ಸದಸ್ಯರನ್ನಾಗಿ ಶಾಸನಸಭೆಗೆ ನೇಮಿಸಿದರು. ಅವಿಶ್ವಾಸ ನಿರ್ಣಯ ತರುವ ಮೂಲಕ ಶಾಸನಸಭೆಯಲ್ಲಿ ಬಹುಮತ ಕಳೆದುಕೊಳ್ಳುವಂತೆ ಮಾಡಿದರು. ಕೇಂದ್ರ ಸರ್ಕಾರ ಇದ್ದ ರಾಜ್ಯಪಾಲರನ್ನು ಕಿತ್ತುಹಾಕಿ ಗೌರ್‍ನರ್ ರೂಲ್‌ಅನ್ನು ಹೇರಿ ಹೊಸ ಗೌರ್‍ನರ್‌ಅನ್ನು ನೇಮಿಸಿತು. ಈ ರೀತಿಯಲ್ಲಿ ಮೋದಿ ಸರ್ಕಾರ ಅಧಿಕಾರದಲ್ಲಿದ್ದ ಕಾಂಗ್ರೆಸ್, ಡಿಎಂಕೆ ಸಂಯುಕ್ತ ಸರ್ಕಾರದ ಪತನಕ್ಕೆ ಸಂಚುಹೂಡಿ ಅದರಲ್ಲಿಯೂ ಫಲಾನುಭವಿಗಳಾದರು.

ಕೇಂದ್ರ ಸರ್ಕಾರ ಧೋರಣೆ ಏನು ಎಂಬುದನ್ನು ಪುದುಚೇರಿ ಪ್ರಕರಣದಿಂದ ನಾವು ತಿಳಿಯಬಹುದು. ತನ್ನ ವಿರೋಧ ಪಕ್ಷ ಸುಭದ್ರವಾಗಿ ಸರ್ಕಾರ ನಡೆಸುತ್ತಿದ್ದ ರಾಜ್ಯದಲ್ಲಿ, ಆ ಪಕ್ಷದ ಶಾಸಕರಲ್ಲಿ ಒಡಕುಉಂಟು ಮಾಡಿ, ಆ ಸರ್ಕಾರವನ್ನು ಅವಿಶ್ವಾಸ ನಿರ್ಣಯದ ಮೂಲಕ ಉರುಳಿಸಿ, ವಜಾಮಾಡಿ ಗೌರ್‍ನರ್ ರೂಲ್ ಎಂಬ ಹಿಂಬಾಗಿಲಿನ ಮೂಲಕ ತೆಕ್ಕೆಗೆ ತೆಗೆದುಕೊಂಡು, ಮುಂದೆ ಬಿಜೆಪಿ ಸರ್ಕಾರವನ್ನು ಅಸ್ತಿತ್ವಕ್ಕೆ ತರುವುದು ಮೋದಿ ಸರ್ಕಾರದ ನೀತಿಯಾಗಿದೆ.

ಬೇರೆ ಪಕ್ಷಗಳ ಹಿಡಿತದಲ್ಲಿರುವ ರಾಜ್ಯಗಳನ್ನು ಬಿಜೆಪಿ ರಾಜ್ಯವನ್ನಾಗಿ ಪರಿವರ್ತಿಸಲು ಸಂಚು ಮಾಡುವುದರಲ್ಲಿ ಮೋದಿ ಸರ್ಕಾರ ಎತ್ತಿದ ಕೈ. ಈ ಪ್ರವೃತ್ತಿಯನ್ನು ತಡೆಗಟ್ಟಲು ಎಲ್ಲ ರಾಜಕೀಯ ಪಕ್ಷಗಳೂ ಒಗ್ಗೂಡಿ ಹೋರಾಟ ನಡೆಸಬೇಕು. ಪ್ರಜಾಪ್ರಭುತ್ವದಲ್ಲಿ ನಂಬಿಕೆಯುಳ್ಳ ಎಲ್ಲರೂ ಈ ಹೋರಾಟದಲ್ಲಿ ಕೂಡಿಕೊಳ್ಳಬೇಕು.


ಇದನ್ನೂ ಓದಿ: ಎನ್‌ಸಿಟಿ ದೆಹಲಿ ತಿದ್ದುಪಡಿ ಬಿಲ್: ಬೇರೆ ರಾಜ್ಯಗಳ ಬಾಗಿಲಿಗೂ ಕೇಂದ್ರೀಕರಣದ ಭೂತ ವಕ್ಕರಿಸುವ ಮುನ್ಸೂಚನೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...