Homeಅಂಕಣಗಳುನೂರರ ನೋಟ: ಪ್ರಜಾಪ್ರಭುತ್ವದ ಕಗ್ಗೊಲೆಯ ಮೂರು ಪ್ರಕರಣಗಳು

ನೂರರ ನೋಟ: ಪ್ರಜಾಪ್ರಭುತ್ವದ ಕಗ್ಗೊಲೆಯ ಮೂರು ಪ್ರಕರಣಗಳು

- Advertisement -
- Advertisement -

ಮೋದಿ ಸರ್ಕಾರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯ ಕೆಲಸ ಅವ್ಯಾಹತವಾಗಿ ನಡೆಯುತ್ತಿದೆ. ಇದಕ್ಕೆ ಸಾಕ್ಷಿ (1) ಕಾಶ್ಮೀರಕ್ಕೆ ಇನ್ನೂ statehood ಕೊಡದೆ ಇರುವುದು (2) ದೆಹಲಿಯಲ್ಲಿ ಅಧಿಕಾರ ಚುನಾಯಿತ ಸರ್ಕಾರದ ಕೈಯಲ್ಲಿರುವುದನ್ನು ಸಹಿಸದೆ ಕೇಂದ್ರ ಸರ್ಕಾರದಿಂದ ನೇಮಕರಾದ ಚುನಾಯಿತರಲ್ಲದ ಲೆಫ್ಟಿನೆಂಟ್ ಗವರ್ನರ್‌ರಿಗೆ ಅಸಂವಿಧಾನ ರೀತ್ಯಾ ಚುನಾಯಿತ ಸರ್ಕಾರದ ಮೇಲೆ ದಬ್ಬಾಳಿಕೆ ನಡೆಸುವ ಶಾಸನ ಜಾರಿಗೆ ತಂದಿರುವುದು (3) ಪುದುಚೇರಿಯಲ್ಲಿ ಕಾಂಗ್ರೆಸ್ ಮತ್ತು ಡಿಎಂಕೆ ಜಂಟಿ ಸರ್ಕಾರ ಅನೇಕ ವರ್ಷಗಳಿಂದ ಆಡಳಿತ ನಡೆಸುತ್ತಿತ್ತು. ಬಿಜೆಪಿ ಕೇಂದ್ರ ಸರ್ಕಾರ ತಾನು ನೇಮಿಸಿದ ರಾಜ್ಯಪಾಲರ ಮೂಲಕ ಪುದುಚೇರಿ ಚುನಾಯಿತ ಸರ್ಕಾರವನ್ನು ಕಿತ್ತೆಸೆಯಲು ಅಸಂವಿಧಾನಕಾರಿ ಷಡ್ಯಂತ್ರಗಳನ್ನು ರಚಿಸಿ ಆ ಸರ್ಕಾರವನ್ನು ಕೆಳಗಿಳಿಸಿ ಗೌರ್‍ನರ್ ರೂಲ್ ಜಾರಿಗೆ ತಂದಿರುವುದು.

ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಅಧಿಕಾರವನ್ನು ಕಿತ್ತುಹಾಕಿ ಮೋದಿ ಸರ್ಕಾರ ಕಾಶ್ಮೀರವನ್ನು ಮೂರು ಪ್ರಾಂತ್ಯಗಳಾಗಿ ಒಡೆದು ಗೌರ್‍ನರ್ ಕೈಗೆ ಅಧಿಕಾರ ನೀಡಿ ಒಂದೆರಡು ವರ್ಷ ಕಳೆದರೂ, ಕಾಶ್ಮೀರಕ್ಕೆ ಇನ್ನೂ statehood ಕೊಟ್ಟಿಲ್ಲ. ಚುನಾವಣೆ ನಡೆಸಿಲ್ಲ. ಚುನಾಯಿತ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿಲ್ಲ. 13.2.2021ರಂದು ಕೇಂದ್ರ ಸರ್ಕಾರದ ಗೃಹಮಂತ್ರಿಗಳು ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪುನರ್ರಚನೆಯ ಮಸೂದೆ ಮಂಡಿಸಿದಾಗ ಗೃಹ ಸಚಿವ ಷಾ ಅವರು ಜಮ್ಮು ಕಾಶ್ಮೀರಕ್ಕೆ statehoodನ್ನು ಸರಿಯಾದ ಸಮಯದಲ್ಲಿ ನೀಡಲಾಗುವುದು ಎಂದು ಉತ್ತರಿಸಿದರು. ಅದರರ್ಥ ಸದ್ಯಕ್ಕಂತೂ statehood ಘೋಷಣೆ ಮಾಡುವುದಿಲ್ಲ ನಮಗೆ ಸಮಯ ಸರಿಯೆನಿಸಿದಾಗ statehood ದಯಪಾಲಿಸುವುದು ಎಂದು ಅರ್ಥೈಸಬೇಕಾದೀತು.

PC :The Federal News

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 371ನೆ ವಿಧಿಯನ್ನು ಮೋದಿ ಸರ್ಕಾರ ರದ್ದುಪಡಿಸಿದ ರೀತಿಯೇ ವಿಚಿತ್ರವಾಗಿತ್ತು. ಸರ್ಕಾರ ಈ ತಿದ್ದುಪಡಿ ತಂದು ಅದಕ್ಕೆ ರಾಷ್ಟ್ರಪತಿಯವರ ಸಹಿ ಹಾಕಿಸುವ ಮುನ್ನ ಪಾರ್ಲಿಮೆಂಟಿನ ಮುಂದೆ ಈ ಪ್ರಸ್ತಾಪ ಇಡಬೇಕಾಗಿತ್ತು. ಕಾಶ್ಮೀರದಲ್ಲಿ ಅಸ್ತಿತ್ವದಲ್ಲಿದ್ದ ಸರ್ಕಾರವನ್ನು ಆಯ್ಕೆಗೊಂಡ ಶಾಸನ ಸಭೆಯ ಸದಸ್ಯರನ್ನು ಈ ತಿದ್ದುಪಡಿಯ ಬಗೆಗೆ ಚರ್ಚೆ ಮಾಡಲು ಅವಕಾಶ ಕಲ್ಪಿಸಬೇಕಾಗಿತ್ತು. Referendum ಮುಖಾಂತರ ಜನರ ಸಮ್ಮತಿ ಪಡೆಯಬೇಕಾಗಿತ್ತು. ಈ ಮಾರ್ಗ ಬಿಟ್ಟು ಮೋದಿ ಸರ್ಕಾರ 50 ಸಾವಿರ ಸೈನಿಕರನ್ನು ಜಮ್ಮು ಕಾಶ್ಮೀರಕ್ಕೆ ಕಳಿಸಿ ಜನ ಬೆಚ್ಚಿ ಬೀಳುವಂತೆ ಮಾಡಿತು. ವಿವಿಧ ರಾಜಕೀಯ ಪಕ್ಷಗಳ ನಾಯಕರನ್ನು ಗೃಹಬಂಧನದಲ್ಲಿ ಇಡಲಾಯಿತು. ಸರ್ಕಾರದ ಧೋರಣೆಯನ್ನು ಪ್ರಶ್ನಿಸಿದ ಪತ್ರಿಕೆ ಸಂಪಾದಕರು, ಗೌರವಯುತ ನಾಗರಿಕರು ಇವರನ್ನೆಲ್ಲ ಬಂಧಿಸಲಾಯಿತು. ಕಾಶ್ಮೀರದಲ್ಲಿ ಏನು ನಡೆಯುತ್ತಿದೆ ಎಂಬುದು ಭಾರತದ ಇತರ ಪ್ರಾಂತ್ಯದವರಿಗೆ, ವಿಶ್ವಕ್ಕೆ ತಿಳಿಯದಂತೆ ಮಾಡಲು ಎಲ್ಲ ಸುದ್ದಿವಾಹಕ ಯಂತ್ರಸಾಧನಗಳನ್ನು ಸ್ಥಗಿತಗೊಳಿಸಲಾಯಿತು. ಭಾರತದ ಅವಿಭಾಜ್ಯ ಅಂಗವಾಗಿರುವ ಒಂದು ರಾಜ್ಯವನ್ನು ಈ ರೀತಿ ನಡೆಸಿಕೊಂಡಿದ್ದು ಪ್ರಜಾಪ್ರಭುತ್ವದ ಕಗ್ಗೊಲೆಯಲ್ಲವೇ?

ಎರಡು ವರ್ಷಗಳೆ ಕಳೆದು ಹೋಗಿದ್ದರೂ ಇನ್ನೂ ಜಮ್ಮು ಕಾಶ್ಮೀರ ರಾಜ್ಯಕ್ಕೆ ಸ್ವಾಯತ್ತತೆ ನೀಡದಿರುವುದು statehood ನೀಡದಿರುವುದು ಪ್ರಜಾಪ್ರಭುತ್ವದ ಬೆನ್ನಲುಬನ್ನೇ ಮುರಿಯುವ ಒಂದು ಹುನ್ನಾರ.

ಎರಡನೆಯ ಪ್ರಜಾಪ್ರಭುತ್ವದಕಗ್ಗೊಲೆಯ ಕೆಲಸ ನಡೆಸಿರುವುದು ರಾಜಧಾನಿ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲರ ಸರ್ಕಾರ ಅಧಿಕ ಬಹುಮತದಿಂದ ಅಧಿಕಾರಕ್ಕೆ ಬಂದಿತ್ತು. ಈ ಸರ್ಕಾರದ ಅಧಿಕಾರವನ್ನು ಮೊಟಕುಗೊಳಿಸಲು ಮೋದಿ ಸರ್ಕಾರ ಮೊದಲಿನಿಂದಲೂ ಹವಣಿಸುತ್ತಿತ್ತು. ಕೇಂದ್ರ ಸರ್ಕಾರದಿಂದ ನೇಮಕಗೊಂಡಿರುವ ಲೆಫ್ಟಿನೆಂಟ್ ಗವರ್ನರ್‌ಗೂ, ಮುಖ್ಯಮಂತ್ರಿ ಕೇಜ್ರಿವಾಲರಿಗೂ ಈ ವಿಷಯದಲ್ಲಿ ದೊಡ್ಡ ಹೋರಾಟವೇ ನಡೆದುಹೋಯಿತು. ಮುಖ್ಯಮಂತ್ರಿ ಕೇಜ್ರಿವಾಲ್‌ರವರು ಲೆಫ್ಟಿನೆಂಟ್ ಗವರ್ನರ್ ಕಚೇರಿಯ ಮುಂದೆ ಅನೇಕ ದಿನಗಳವೆರೆಗೆ ಪ್ರತಿಭಟನೆ ಮಾಡಿದರು. ಸರ್ವೋಚ್ಚ ನ್ಯಾಯಾಲಯ ಮಧ್ಯೆ ಪ್ರವೇಶಿಸಬೇಕಾಗಿ ಬಂದು, ಲೆಫ್ಟಿನೆಂಟ್ ಗವರ್ನರ್‌ರು ದೆಹಲಿ ಸರ್ಕಾರದ ಕಾರ್ಯನಿರ್ವಹಣೆಯಲ್ಲಿ ಪದೇ ಪದೇ ತಲೆ ಹಾಕದ ಹಾಗೆ ತಾಕೀತು ಮಾಡಿತು.

ಇತ್ತೀಚೆಗೆ ಮೋದಿ ಸರ್ಕಾರ ಮತ್ತೆ ದೆಹಲಿಯ ಸರ್ಕಾರದ ಆಡಳಿತದಲ್ಲಿ ಲೆಫ್ಟಿನೆಂಟ್ ಗವರ್ನರ್ ತಲೆ ಹಾಕಲು ಅಧಿಕಾರ ನೀಡಿ, ಎರಡನೇ ಬಾರಿಗೆ ಹೆಚ್ಚು ಬಹುಮತದಿಂದ ಆಯ್ಕೆಯಾಗಿ ಬಂದಿರುವ ಕೇಜ್ರಿವಾಲ್ ಸರ್ಕಾರಕ್ಕೆ ತೊಡರುಗಾಲು ಹಾಕಲು ಅವಕಾಶ ಮಾಡಿಕೊಡುವ ಅವೈಜ್ಞಾನಿಕ ಕಾಯ್ದೆಗಳನ್ನು ರೂಪಿಸಿದ್ದಾರೆ. ಸರ್ಕಾರದ ಮಂತ್ರಿಮಂಡಲವಾಗಲಿ, ಮಂತ್ರಿಗಳೇ ಆಗಲಿ ಯಾವುದೇ ತೀರ್ಮಾನ ಮಾಡುವ ಮೊದಲು ಲೆಫ್ಟಿನೆಂಟ್ ಗವರ್ನರ್‌ರೊಡನೆ ಸಮಾಲೋಚನೆ ನಡೆಸಿ ಒಪ್ಪಿಗೆ ಪಡೆಯಬೇಕು ಎಂಬ ಬರ್ಬರ ಕಾನೂನು ರಚಿಸಲಾಗಿದೆ. ಪ್ರಜೆಗಳ ಭವಿಷ್ಯವನ್ನು ನಿರ್ಧರಿಸುವವರು ಚುನಾಯಿತ ಪ್ರತಿನಿಧಿಗಳಾಗಿರಬೇಕೇ ಹೊರತು ಕೇಂದ್ರ ಸರ್ಕಾರದಿಂದ ನೇಮಕಗೊಂಡ ಲೆಫ್ಟಿನೆಂಟ್ ಗವರ್ನರ್ ಅಲ್ಲ. ಇದೇ ರೀತಿಯ ಅನೇಕ ಪ್ರತಿಬಂಧಕಗಳನ್ನು ಹಾಕಿ ಚುನಾಯಿತ ಪ್ರತಿನಿಧಿಗಳ ಅಭಿಪ್ರಾಯಗಳಿಗಿಂತ ಮೋದಿ ಸರ್ಕಾರದ ಆಯ್ಕೆಯ ಲೆಫ್ಟಿನೆಂಟ್ ಗವರ್ನರ್ ಅಭಿಪ್ರಾಯಗಳಿಗೇ ದೆಹಲಿ ಸರ್ಕಾರ ಮಾನ್ಯತೆ ಕೊಡಬೇಕೆಂದರೆ ಇದು ಪ್ರಜಾಸತ್ತೆಯ ಅವಹೇಳನವಲ್ಲದೇ ಬೇರೇನೂ ಅಲ್ಲ.

ಮತ್ತೆ ದೆಹಲಿ ಸರ್ಕಾರ ತನ್ನ ಸ್ವಾಯತ್ತತೆಯನ್ನು ಉಳಿಸಿಕೊಳ್ಳಲು ಲೆಫ್ಟಿನೆಂಟ್ ಗವರ್ನರ್ ಮತ್ತು ಮೋದಿ ಸರ್ಕಾರದ ವಿರುದ್ಧ ಕಾನೂನು ಸಮರ ಆರಂಭಿಸುವುದು ಅನಿವಾರ್ಯವೆನಿಸಿದೆ.

ಮೂರನೆಯದು ಪುದುಚೇರಿಯ ರಾಜಕೀಯದಲ್ಲಿ ಬಿಜೆಪಿ ಸರ್ಕಾರದಿಂದ ನೇಮಕರಾದ ರಾಜ್ಯಪಾಲರ ಹಸ್ತಕ್ಷೇಪ.

ಹಲವು ವರ್ಷಗಳ ಕಾಲ ರಾಜ್ಯಪಾಲರಾಗಿದ್ದ ಕಿರಣ ಬೇಡಿಯವರು ಅಧಿಕಾರ ವಹಿಸಿಕೊಂಡ ದಿನದಿಂದಲೂ ಕಾಂಗ್ರೆಸ್ ಡಿಎಂಕೆ ಮೈತ್ರಿ ಸರ್ಕಾರದ ವಿರುದ್ಧ ಸಮರ ಸಾರಿದರು. ಈ ಮೈತ್ರಿ ಸರ್ಕಾರದ ಅಧಿಕಾರಗಳನ್ನು ನೇರವಾಗಿ ಸಂಪರ್ಕಿಸುವ ಕೆಟ್ಟ ಸಂಪ್ರದಾಯವನ್ನು ಹುಟ್ಟುಹಾಕಿದರು. ಮುಖ್ಯಮಂತ್ರಿಗಳ ವಿರುದ್ಧ ಸಮರ ಸಾರಿದರು. ಪಕ್ಷದ ಸದಸ್ಯರ ಬಲವನ್ನು ಕುಗ್ಗಿಸಿ ಸರ್ಕಾರ ಬೀಳುವಂತೆ ಮಾಡಲು ಪ್ರಯತ್ನಿಸಿದರು. ಡಿಪಾಸಿಟ್ ಕಳೆದುಕೊಂಡು ಹೀನಾಯವಾಗಿ ಸೋತಿದ್ದ ಬಿಜೆಪಿಯ ಮೂವರನ್ನು ರಾಜ್ಯಪಾಲರು ನಾಮಕರಣ ಸದಸ್ಯರನ್ನಾಗಿ ಶಾಸನಸಭೆಗೆ ನೇಮಿಸಿದರು. ಅವಿಶ್ವಾಸ ನಿರ್ಣಯ ತರುವ ಮೂಲಕ ಶಾಸನಸಭೆಯಲ್ಲಿ ಬಹುಮತ ಕಳೆದುಕೊಳ್ಳುವಂತೆ ಮಾಡಿದರು. ಕೇಂದ್ರ ಸರ್ಕಾರ ಇದ್ದ ರಾಜ್ಯಪಾಲರನ್ನು ಕಿತ್ತುಹಾಕಿ ಗೌರ್‍ನರ್ ರೂಲ್‌ಅನ್ನು ಹೇರಿ ಹೊಸ ಗೌರ್‍ನರ್‌ಅನ್ನು ನೇಮಿಸಿತು. ಈ ರೀತಿಯಲ್ಲಿ ಮೋದಿ ಸರ್ಕಾರ ಅಧಿಕಾರದಲ್ಲಿದ್ದ ಕಾಂಗ್ರೆಸ್, ಡಿಎಂಕೆ ಸಂಯುಕ್ತ ಸರ್ಕಾರದ ಪತನಕ್ಕೆ ಸಂಚುಹೂಡಿ ಅದರಲ್ಲಿಯೂ ಫಲಾನುಭವಿಗಳಾದರು.

ಕೇಂದ್ರ ಸರ್ಕಾರ ಧೋರಣೆ ಏನು ಎಂಬುದನ್ನು ಪುದುಚೇರಿ ಪ್ರಕರಣದಿಂದ ನಾವು ತಿಳಿಯಬಹುದು. ತನ್ನ ವಿರೋಧ ಪಕ್ಷ ಸುಭದ್ರವಾಗಿ ಸರ್ಕಾರ ನಡೆಸುತ್ತಿದ್ದ ರಾಜ್ಯದಲ್ಲಿ, ಆ ಪಕ್ಷದ ಶಾಸಕರಲ್ಲಿ ಒಡಕುಉಂಟು ಮಾಡಿ, ಆ ಸರ್ಕಾರವನ್ನು ಅವಿಶ್ವಾಸ ನಿರ್ಣಯದ ಮೂಲಕ ಉರುಳಿಸಿ, ವಜಾಮಾಡಿ ಗೌರ್‍ನರ್ ರೂಲ್ ಎಂಬ ಹಿಂಬಾಗಿಲಿನ ಮೂಲಕ ತೆಕ್ಕೆಗೆ ತೆಗೆದುಕೊಂಡು, ಮುಂದೆ ಬಿಜೆಪಿ ಸರ್ಕಾರವನ್ನು ಅಸ್ತಿತ್ವಕ್ಕೆ ತರುವುದು ಮೋದಿ ಸರ್ಕಾರದ ನೀತಿಯಾಗಿದೆ.

ಬೇರೆ ಪಕ್ಷಗಳ ಹಿಡಿತದಲ್ಲಿರುವ ರಾಜ್ಯಗಳನ್ನು ಬಿಜೆಪಿ ರಾಜ್ಯವನ್ನಾಗಿ ಪರಿವರ್ತಿಸಲು ಸಂಚು ಮಾಡುವುದರಲ್ಲಿ ಮೋದಿ ಸರ್ಕಾರ ಎತ್ತಿದ ಕೈ. ಈ ಪ್ರವೃತ್ತಿಯನ್ನು ತಡೆಗಟ್ಟಲು ಎಲ್ಲ ರಾಜಕೀಯ ಪಕ್ಷಗಳೂ ಒಗ್ಗೂಡಿ ಹೋರಾಟ ನಡೆಸಬೇಕು. ಪ್ರಜಾಪ್ರಭುತ್ವದಲ್ಲಿ ನಂಬಿಕೆಯುಳ್ಳ ಎಲ್ಲರೂ ಈ ಹೋರಾಟದಲ್ಲಿ ಕೂಡಿಕೊಳ್ಳಬೇಕು.


ಇದನ್ನೂ ಓದಿ: ಎನ್‌ಸಿಟಿ ದೆಹಲಿ ತಿದ್ದುಪಡಿ ಬಿಲ್: ಬೇರೆ ರಾಜ್ಯಗಳ ಬಾಗಿಲಿಗೂ ಕೇಂದ್ರೀಕರಣದ ಭೂತ ವಕ್ಕರಿಸುವ ಮುನ್ಸೂಚನೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...