Homeಅಂಕಣಗಳುನೂರರ ನೋಟ: ಪ್ರಜಾಪ್ರಭುತ್ವದ ಕಗ್ಗೊಲೆಯ ಮೂರು ಪ್ರಕರಣಗಳು

ನೂರರ ನೋಟ: ಪ್ರಜಾಪ್ರಭುತ್ವದ ಕಗ್ಗೊಲೆಯ ಮೂರು ಪ್ರಕರಣಗಳು

- Advertisement -
- Advertisement -

ಮೋದಿ ಸರ್ಕಾರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯ ಕೆಲಸ ಅವ್ಯಾಹತವಾಗಿ ನಡೆಯುತ್ತಿದೆ. ಇದಕ್ಕೆ ಸಾಕ್ಷಿ (1) ಕಾಶ್ಮೀರಕ್ಕೆ ಇನ್ನೂ statehood ಕೊಡದೆ ಇರುವುದು (2) ದೆಹಲಿಯಲ್ಲಿ ಅಧಿಕಾರ ಚುನಾಯಿತ ಸರ್ಕಾರದ ಕೈಯಲ್ಲಿರುವುದನ್ನು ಸಹಿಸದೆ ಕೇಂದ್ರ ಸರ್ಕಾರದಿಂದ ನೇಮಕರಾದ ಚುನಾಯಿತರಲ್ಲದ ಲೆಫ್ಟಿನೆಂಟ್ ಗವರ್ನರ್‌ರಿಗೆ ಅಸಂವಿಧಾನ ರೀತ್ಯಾ ಚುನಾಯಿತ ಸರ್ಕಾರದ ಮೇಲೆ ದಬ್ಬಾಳಿಕೆ ನಡೆಸುವ ಶಾಸನ ಜಾರಿಗೆ ತಂದಿರುವುದು (3) ಪುದುಚೇರಿಯಲ್ಲಿ ಕಾಂಗ್ರೆಸ್ ಮತ್ತು ಡಿಎಂಕೆ ಜಂಟಿ ಸರ್ಕಾರ ಅನೇಕ ವರ್ಷಗಳಿಂದ ಆಡಳಿತ ನಡೆಸುತ್ತಿತ್ತು. ಬಿಜೆಪಿ ಕೇಂದ್ರ ಸರ್ಕಾರ ತಾನು ನೇಮಿಸಿದ ರಾಜ್ಯಪಾಲರ ಮೂಲಕ ಪುದುಚೇರಿ ಚುನಾಯಿತ ಸರ್ಕಾರವನ್ನು ಕಿತ್ತೆಸೆಯಲು ಅಸಂವಿಧಾನಕಾರಿ ಷಡ್ಯಂತ್ರಗಳನ್ನು ರಚಿಸಿ ಆ ಸರ್ಕಾರವನ್ನು ಕೆಳಗಿಳಿಸಿ ಗೌರ್‍ನರ್ ರೂಲ್ ಜಾರಿಗೆ ತಂದಿರುವುದು.

ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಅಧಿಕಾರವನ್ನು ಕಿತ್ತುಹಾಕಿ ಮೋದಿ ಸರ್ಕಾರ ಕಾಶ್ಮೀರವನ್ನು ಮೂರು ಪ್ರಾಂತ್ಯಗಳಾಗಿ ಒಡೆದು ಗೌರ್‍ನರ್ ಕೈಗೆ ಅಧಿಕಾರ ನೀಡಿ ಒಂದೆರಡು ವರ್ಷ ಕಳೆದರೂ, ಕಾಶ್ಮೀರಕ್ಕೆ ಇನ್ನೂ statehood ಕೊಟ್ಟಿಲ್ಲ. ಚುನಾವಣೆ ನಡೆಸಿಲ್ಲ. ಚುನಾಯಿತ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿಲ್ಲ. 13.2.2021ರಂದು ಕೇಂದ್ರ ಸರ್ಕಾರದ ಗೃಹಮಂತ್ರಿಗಳು ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪುನರ್ರಚನೆಯ ಮಸೂದೆ ಮಂಡಿಸಿದಾಗ ಗೃಹ ಸಚಿವ ಷಾ ಅವರು ಜಮ್ಮು ಕಾಶ್ಮೀರಕ್ಕೆ statehoodನ್ನು ಸರಿಯಾದ ಸಮಯದಲ್ಲಿ ನೀಡಲಾಗುವುದು ಎಂದು ಉತ್ತರಿಸಿದರು. ಅದರರ್ಥ ಸದ್ಯಕ್ಕಂತೂ statehood ಘೋಷಣೆ ಮಾಡುವುದಿಲ್ಲ ನಮಗೆ ಸಮಯ ಸರಿಯೆನಿಸಿದಾಗ statehood ದಯಪಾಲಿಸುವುದು ಎಂದು ಅರ್ಥೈಸಬೇಕಾದೀತು.

PC :The Federal News

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 371ನೆ ವಿಧಿಯನ್ನು ಮೋದಿ ಸರ್ಕಾರ ರದ್ದುಪಡಿಸಿದ ರೀತಿಯೇ ವಿಚಿತ್ರವಾಗಿತ್ತು. ಸರ್ಕಾರ ಈ ತಿದ್ದುಪಡಿ ತಂದು ಅದಕ್ಕೆ ರಾಷ್ಟ್ರಪತಿಯವರ ಸಹಿ ಹಾಕಿಸುವ ಮುನ್ನ ಪಾರ್ಲಿಮೆಂಟಿನ ಮುಂದೆ ಈ ಪ್ರಸ್ತಾಪ ಇಡಬೇಕಾಗಿತ್ತು. ಕಾಶ್ಮೀರದಲ್ಲಿ ಅಸ್ತಿತ್ವದಲ್ಲಿದ್ದ ಸರ್ಕಾರವನ್ನು ಆಯ್ಕೆಗೊಂಡ ಶಾಸನ ಸಭೆಯ ಸದಸ್ಯರನ್ನು ಈ ತಿದ್ದುಪಡಿಯ ಬಗೆಗೆ ಚರ್ಚೆ ಮಾಡಲು ಅವಕಾಶ ಕಲ್ಪಿಸಬೇಕಾಗಿತ್ತು. Referendum ಮುಖಾಂತರ ಜನರ ಸಮ್ಮತಿ ಪಡೆಯಬೇಕಾಗಿತ್ತು. ಈ ಮಾರ್ಗ ಬಿಟ್ಟು ಮೋದಿ ಸರ್ಕಾರ 50 ಸಾವಿರ ಸೈನಿಕರನ್ನು ಜಮ್ಮು ಕಾಶ್ಮೀರಕ್ಕೆ ಕಳಿಸಿ ಜನ ಬೆಚ್ಚಿ ಬೀಳುವಂತೆ ಮಾಡಿತು. ವಿವಿಧ ರಾಜಕೀಯ ಪಕ್ಷಗಳ ನಾಯಕರನ್ನು ಗೃಹಬಂಧನದಲ್ಲಿ ಇಡಲಾಯಿತು. ಸರ್ಕಾರದ ಧೋರಣೆಯನ್ನು ಪ್ರಶ್ನಿಸಿದ ಪತ್ರಿಕೆ ಸಂಪಾದಕರು, ಗೌರವಯುತ ನಾಗರಿಕರು ಇವರನ್ನೆಲ್ಲ ಬಂಧಿಸಲಾಯಿತು. ಕಾಶ್ಮೀರದಲ್ಲಿ ಏನು ನಡೆಯುತ್ತಿದೆ ಎಂಬುದು ಭಾರತದ ಇತರ ಪ್ರಾಂತ್ಯದವರಿಗೆ, ವಿಶ್ವಕ್ಕೆ ತಿಳಿಯದಂತೆ ಮಾಡಲು ಎಲ್ಲ ಸುದ್ದಿವಾಹಕ ಯಂತ್ರಸಾಧನಗಳನ್ನು ಸ್ಥಗಿತಗೊಳಿಸಲಾಯಿತು. ಭಾರತದ ಅವಿಭಾಜ್ಯ ಅಂಗವಾಗಿರುವ ಒಂದು ರಾಜ್ಯವನ್ನು ಈ ರೀತಿ ನಡೆಸಿಕೊಂಡಿದ್ದು ಪ್ರಜಾಪ್ರಭುತ್ವದ ಕಗ್ಗೊಲೆಯಲ್ಲವೇ?

ಎರಡು ವರ್ಷಗಳೆ ಕಳೆದು ಹೋಗಿದ್ದರೂ ಇನ್ನೂ ಜಮ್ಮು ಕಾಶ್ಮೀರ ರಾಜ್ಯಕ್ಕೆ ಸ್ವಾಯತ್ತತೆ ನೀಡದಿರುವುದು statehood ನೀಡದಿರುವುದು ಪ್ರಜಾಪ್ರಭುತ್ವದ ಬೆನ್ನಲುಬನ್ನೇ ಮುರಿಯುವ ಒಂದು ಹುನ್ನಾರ.

ಎರಡನೆಯ ಪ್ರಜಾಪ್ರಭುತ್ವದಕಗ್ಗೊಲೆಯ ಕೆಲಸ ನಡೆಸಿರುವುದು ರಾಜಧಾನಿ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲರ ಸರ್ಕಾರ ಅಧಿಕ ಬಹುಮತದಿಂದ ಅಧಿಕಾರಕ್ಕೆ ಬಂದಿತ್ತು. ಈ ಸರ್ಕಾರದ ಅಧಿಕಾರವನ್ನು ಮೊಟಕುಗೊಳಿಸಲು ಮೋದಿ ಸರ್ಕಾರ ಮೊದಲಿನಿಂದಲೂ ಹವಣಿಸುತ್ತಿತ್ತು. ಕೇಂದ್ರ ಸರ್ಕಾರದಿಂದ ನೇಮಕಗೊಂಡಿರುವ ಲೆಫ್ಟಿನೆಂಟ್ ಗವರ್ನರ್‌ಗೂ, ಮುಖ್ಯಮಂತ್ರಿ ಕೇಜ್ರಿವಾಲರಿಗೂ ಈ ವಿಷಯದಲ್ಲಿ ದೊಡ್ಡ ಹೋರಾಟವೇ ನಡೆದುಹೋಯಿತು. ಮುಖ್ಯಮಂತ್ರಿ ಕೇಜ್ರಿವಾಲ್‌ರವರು ಲೆಫ್ಟಿನೆಂಟ್ ಗವರ್ನರ್ ಕಚೇರಿಯ ಮುಂದೆ ಅನೇಕ ದಿನಗಳವೆರೆಗೆ ಪ್ರತಿಭಟನೆ ಮಾಡಿದರು. ಸರ್ವೋಚ್ಚ ನ್ಯಾಯಾಲಯ ಮಧ್ಯೆ ಪ್ರವೇಶಿಸಬೇಕಾಗಿ ಬಂದು, ಲೆಫ್ಟಿನೆಂಟ್ ಗವರ್ನರ್‌ರು ದೆಹಲಿ ಸರ್ಕಾರದ ಕಾರ್ಯನಿರ್ವಹಣೆಯಲ್ಲಿ ಪದೇ ಪದೇ ತಲೆ ಹಾಕದ ಹಾಗೆ ತಾಕೀತು ಮಾಡಿತು.

ಇತ್ತೀಚೆಗೆ ಮೋದಿ ಸರ್ಕಾರ ಮತ್ತೆ ದೆಹಲಿಯ ಸರ್ಕಾರದ ಆಡಳಿತದಲ್ಲಿ ಲೆಫ್ಟಿನೆಂಟ್ ಗವರ್ನರ್ ತಲೆ ಹಾಕಲು ಅಧಿಕಾರ ನೀಡಿ, ಎರಡನೇ ಬಾರಿಗೆ ಹೆಚ್ಚು ಬಹುಮತದಿಂದ ಆಯ್ಕೆಯಾಗಿ ಬಂದಿರುವ ಕೇಜ್ರಿವಾಲ್ ಸರ್ಕಾರಕ್ಕೆ ತೊಡರುಗಾಲು ಹಾಕಲು ಅವಕಾಶ ಮಾಡಿಕೊಡುವ ಅವೈಜ್ಞಾನಿಕ ಕಾಯ್ದೆಗಳನ್ನು ರೂಪಿಸಿದ್ದಾರೆ. ಸರ್ಕಾರದ ಮಂತ್ರಿಮಂಡಲವಾಗಲಿ, ಮಂತ್ರಿಗಳೇ ಆಗಲಿ ಯಾವುದೇ ತೀರ್ಮಾನ ಮಾಡುವ ಮೊದಲು ಲೆಫ್ಟಿನೆಂಟ್ ಗವರ್ನರ್‌ರೊಡನೆ ಸಮಾಲೋಚನೆ ನಡೆಸಿ ಒಪ್ಪಿಗೆ ಪಡೆಯಬೇಕು ಎಂಬ ಬರ್ಬರ ಕಾನೂನು ರಚಿಸಲಾಗಿದೆ. ಪ್ರಜೆಗಳ ಭವಿಷ್ಯವನ್ನು ನಿರ್ಧರಿಸುವವರು ಚುನಾಯಿತ ಪ್ರತಿನಿಧಿಗಳಾಗಿರಬೇಕೇ ಹೊರತು ಕೇಂದ್ರ ಸರ್ಕಾರದಿಂದ ನೇಮಕಗೊಂಡ ಲೆಫ್ಟಿನೆಂಟ್ ಗವರ್ನರ್ ಅಲ್ಲ. ಇದೇ ರೀತಿಯ ಅನೇಕ ಪ್ರತಿಬಂಧಕಗಳನ್ನು ಹಾಕಿ ಚುನಾಯಿತ ಪ್ರತಿನಿಧಿಗಳ ಅಭಿಪ್ರಾಯಗಳಿಗಿಂತ ಮೋದಿ ಸರ್ಕಾರದ ಆಯ್ಕೆಯ ಲೆಫ್ಟಿನೆಂಟ್ ಗವರ್ನರ್ ಅಭಿಪ್ರಾಯಗಳಿಗೇ ದೆಹಲಿ ಸರ್ಕಾರ ಮಾನ್ಯತೆ ಕೊಡಬೇಕೆಂದರೆ ಇದು ಪ್ರಜಾಸತ್ತೆಯ ಅವಹೇಳನವಲ್ಲದೇ ಬೇರೇನೂ ಅಲ್ಲ.

ಮತ್ತೆ ದೆಹಲಿ ಸರ್ಕಾರ ತನ್ನ ಸ್ವಾಯತ್ತತೆಯನ್ನು ಉಳಿಸಿಕೊಳ್ಳಲು ಲೆಫ್ಟಿನೆಂಟ್ ಗವರ್ನರ್ ಮತ್ತು ಮೋದಿ ಸರ್ಕಾರದ ವಿರುದ್ಧ ಕಾನೂನು ಸಮರ ಆರಂಭಿಸುವುದು ಅನಿವಾರ್ಯವೆನಿಸಿದೆ.

ಮೂರನೆಯದು ಪುದುಚೇರಿಯ ರಾಜಕೀಯದಲ್ಲಿ ಬಿಜೆಪಿ ಸರ್ಕಾರದಿಂದ ನೇಮಕರಾದ ರಾಜ್ಯಪಾಲರ ಹಸ್ತಕ್ಷೇಪ.

ಹಲವು ವರ್ಷಗಳ ಕಾಲ ರಾಜ್ಯಪಾಲರಾಗಿದ್ದ ಕಿರಣ ಬೇಡಿಯವರು ಅಧಿಕಾರ ವಹಿಸಿಕೊಂಡ ದಿನದಿಂದಲೂ ಕಾಂಗ್ರೆಸ್ ಡಿಎಂಕೆ ಮೈತ್ರಿ ಸರ್ಕಾರದ ವಿರುದ್ಧ ಸಮರ ಸಾರಿದರು. ಈ ಮೈತ್ರಿ ಸರ್ಕಾರದ ಅಧಿಕಾರಗಳನ್ನು ನೇರವಾಗಿ ಸಂಪರ್ಕಿಸುವ ಕೆಟ್ಟ ಸಂಪ್ರದಾಯವನ್ನು ಹುಟ್ಟುಹಾಕಿದರು. ಮುಖ್ಯಮಂತ್ರಿಗಳ ವಿರುದ್ಧ ಸಮರ ಸಾರಿದರು. ಪಕ್ಷದ ಸದಸ್ಯರ ಬಲವನ್ನು ಕುಗ್ಗಿಸಿ ಸರ್ಕಾರ ಬೀಳುವಂತೆ ಮಾಡಲು ಪ್ರಯತ್ನಿಸಿದರು. ಡಿಪಾಸಿಟ್ ಕಳೆದುಕೊಂಡು ಹೀನಾಯವಾಗಿ ಸೋತಿದ್ದ ಬಿಜೆಪಿಯ ಮೂವರನ್ನು ರಾಜ್ಯಪಾಲರು ನಾಮಕರಣ ಸದಸ್ಯರನ್ನಾಗಿ ಶಾಸನಸಭೆಗೆ ನೇಮಿಸಿದರು. ಅವಿಶ್ವಾಸ ನಿರ್ಣಯ ತರುವ ಮೂಲಕ ಶಾಸನಸಭೆಯಲ್ಲಿ ಬಹುಮತ ಕಳೆದುಕೊಳ್ಳುವಂತೆ ಮಾಡಿದರು. ಕೇಂದ್ರ ಸರ್ಕಾರ ಇದ್ದ ರಾಜ್ಯಪಾಲರನ್ನು ಕಿತ್ತುಹಾಕಿ ಗೌರ್‍ನರ್ ರೂಲ್‌ಅನ್ನು ಹೇರಿ ಹೊಸ ಗೌರ್‍ನರ್‌ಅನ್ನು ನೇಮಿಸಿತು. ಈ ರೀತಿಯಲ್ಲಿ ಮೋದಿ ಸರ್ಕಾರ ಅಧಿಕಾರದಲ್ಲಿದ್ದ ಕಾಂಗ್ರೆಸ್, ಡಿಎಂಕೆ ಸಂಯುಕ್ತ ಸರ್ಕಾರದ ಪತನಕ್ಕೆ ಸಂಚುಹೂಡಿ ಅದರಲ್ಲಿಯೂ ಫಲಾನುಭವಿಗಳಾದರು.

ಕೇಂದ್ರ ಸರ್ಕಾರ ಧೋರಣೆ ಏನು ಎಂಬುದನ್ನು ಪುದುಚೇರಿ ಪ್ರಕರಣದಿಂದ ನಾವು ತಿಳಿಯಬಹುದು. ತನ್ನ ವಿರೋಧ ಪಕ್ಷ ಸುಭದ್ರವಾಗಿ ಸರ್ಕಾರ ನಡೆಸುತ್ತಿದ್ದ ರಾಜ್ಯದಲ್ಲಿ, ಆ ಪಕ್ಷದ ಶಾಸಕರಲ್ಲಿ ಒಡಕುಉಂಟು ಮಾಡಿ, ಆ ಸರ್ಕಾರವನ್ನು ಅವಿಶ್ವಾಸ ನಿರ್ಣಯದ ಮೂಲಕ ಉರುಳಿಸಿ, ವಜಾಮಾಡಿ ಗೌರ್‍ನರ್ ರೂಲ್ ಎಂಬ ಹಿಂಬಾಗಿಲಿನ ಮೂಲಕ ತೆಕ್ಕೆಗೆ ತೆಗೆದುಕೊಂಡು, ಮುಂದೆ ಬಿಜೆಪಿ ಸರ್ಕಾರವನ್ನು ಅಸ್ತಿತ್ವಕ್ಕೆ ತರುವುದು ಮೋದಿ ಸರ್ಕಾರದ ನೀತಿಯಾಗಿದೆ.

ಬೇರೆ ಪಕ್ಷಗಳ ಹಿಡಿತದಲ್ಲಿರುವ ರಾಜ್ಯಗಳನ್ನು ಬಿಜೆಪಿ ರಾಜ್ಯವನ್ನಾಗಿ ಪರಿವರ್ತಿಸಲು ಸಂಚು ಮಾಡುವುದರಲ್ಲಿ ಮೋದಿ ಸರ್ಕಾರ ಎತ್ತಿದ ಕೈ. ಈ ಪ್ರವೃತ್ತಿಯನ್ನು ತಡೆಗಟ್ಟಲು ಎಲ್ಲ ರಾಜಕೀಯ ಪಕ್ಷಗಳೂ ಒಗ್ಗೂಡಿ ಹೋರಾಟ ನಡೆಸಬೇಕು. ಪ್ರಜಾಪ್ರಭುತ್ವದಲ್ಲಿ ನಂಬಿಕೆಯುಳ್ಳ ಎಲ್ಲರೂ ಈ ಹೋರಾಟದಲ್ಲಿ ಕೂಡಿಕೊಳ್ಳಬೇಕು.


ಇದನ್ನೂ ಓದಿ: ಎನ್‌ಸಿಟಿ ದೆಹಲಿ ತಿದ್ದುಪಡಿ ಬಿಲ್: ಬೇರೆ ರಾಜ್ಯಗಳ ಬಾಗಿಲಿಗೂ ಕೇಂದ್ರೀಕರಣದ ಭೂತ ವಕ್ಕರಿಸುವ ಮುನ್ಸೂಚನೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...