Homeಅಂಕಣಗಳುನೂರರ ನೋಟ: ಪ್ರಜಾಪ್ರಭುತ್ವದ ಕಗ್ಗೊಲೆಯ ಮೂರು ಪ್ರಕರಣಗಳು

ನೂರರ ನೋಟ: ಪ್ರಜಾಪ್ರಭುತ್ವದ ಕಗ್ಗೊಲೆಯ ಮೂರು ಪ್ರಕರಣಗಳು

- Advertisement -
- Advertisement -

ಮೋದಿ ಸರ್ಕಾರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯ ಕೆಲಸ ಅವ್ಯಾಹತವಾಗಿ ನಡೆಯುತ್ತಿದೆ. ಇದಕ್ಕೆ ಸಾಕ್ಷಿ (1) ಕಾಶ್ಮೀರಕ್ಕೆ ಇನ್ನೂ statehood ಕೊಡದೆ ಇರುವುದು (2) ದೆಹಲಿಯಲ್ಲಿ ಅಧಿಕಾರ ಚುನಾಯಿತ ಸರ್ಕಾರದ ಕೈಯಲ್ಲಿರುವುದನ್ನು ಸಹಿಸದೆ ಕೇಂದ್ರ ಸರ್ಕಾರದಿಂದ ನೇಮಕರಾದ ಚುನಾಯಿತರಲ್ಲದ ಲೆಫ್ಟಿನೆಂಟ್ ಗವರ್ನರ್‌ರಿಗೆ ಅಸಂವಿಧಾನ ರೀತ್ಯಾ ಚುನಾಯಿತ ಸರ್ಕಾರದ ಮೇಲೆ ದಬ್ಬಾಳಿಕೆ ನಡೆಸುವ ಶಾಸನ ಜಾರಿಗೆ ತಂದಿರುವುದು (3) ಪುದುಚೇರಿಯಲ್ಲಿ ಕಾಂಗ್ರೆಸ್ ಮತ್ತು ಡಿಎಂಕೆ ಜಂಟಿ ಸರ್ಕಾರ ಅನೇಕ ವರ್ಷಗಳಿಂದ ಆಡಳಿತ ನಡೆಸುತ್ತಿತ್ತು. ಬಿಜೆಪಿ ಕೇಂದ್ರ ಸರ್ಕಾರ ತಾನು ನೇಮಿಸಿದ ರಾಜ್ಯಪಾಲರ ಮೂಲಕ ಪುದುಚೇರಿ ಚುನಾಯಿತ ಸರ್ಕಾರವನ್ನು ಕಿತ್ತೆಸೆಯಲು ಅಸಂವಿಧಾನಕಾರಿ ಷಡ್ಯಂತ್ರಗಳನ್ನು ರಚಿಸಿ ಆ ಸರ್ಕಾರವನ್ನು ಕೆಳಗಿಳಿಸಿ ಗೌರ್‍ನರ್ ರೂಲ್ ಜಾರಿಗೆ ತಂದಿರುವುದು.

ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಅಧಿಕಾರವನ್ನು ಕಿತ್ತುಹಾಕಿ ಮೋದಿ ಸರ್ಕಾರ ಕಾಶ್ಮೀರವನ್ನು ಮೂರು ಪ್ರಾಂತ್ಯಗಳಾಗಿ ಒಡೆದು ಗೌರ್‍ನರ್ ಕೈಗೆ ಅಧಿಕಾರ ನೀಡಿ ಒಂದೆರಡು ವರ್ಷ ಕಳೆದರೂ, ಕಾಶ್ಮೀರಕ್ಕೆ ಇನ್ನೂ statehood ಕೊಟ್ಟಿಲ್ಲ. ಚುನಾವಣೆ ನಡೆಸಿಲ್ಲ. ಚುನಾಯಿತ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿಲ್ಲ. 13.2.2021ರಂದು ಕೇಂದ್ರ ಸರ್ಕಾರದ ಗೃಹಮಂತ್ರಿಗಳು ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪುನರ್ರಚನೆಯ ಮಸೂದೆ ಮಂಡಿಸಿದಾಗ ಗೃಹ ಸಚಿವ ಷಾ ಅವರು ಜಮ್ಮು ಕಾಶ್ಮೀರಕ್ಕೆ statehoodನ್ನು ಸರಿಯಾದ ಸಮಯದಲ್ಲಿ ನೀಡಲಾಗುವುದು ಎಂದು ಉತ್ತರಿಸಿದರು. ಅದರರ್ಥ ಸದ್ಯಕ್ಕಂತೂ statehood ಘೋಷಣೆ ಮಾಡುವುದಿಲ್ಲ ನಮಗೆ ಸಮಯ ಸರಿಯೆನಿಸಿದಾಗ statehood ದಯಪಾಲಿಸುವುದು ಎಂದು ಅರ್ಥೈಸಬೇಕಾದೀತು.

PC :The Federal News

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 371ನೆ ವಿಧಿಯನ್ನು ಮೋದಿ ಸರ್ಕಾರ ರದ್ದುಪಡಿಸಿದ ರೀತಿಯೇ ವಿಚಿತ್ರವಾಗಿತ್ತು. ಸರ್ಕಾರ ಈ ತಿದ್ದುಪಡಿ ತಂದು ಅದಕ್ಕೆ ರಾಷ್ಟ್ರಪತಿಯವರ ಸಹಿ ಹಾಕಿಸುವ ಮುನ್ನ ಪಾರ್ಲಿಮೆಂಟಿನ ಮುಂದೆ ಈ ಪ್ರಸ್ತಾಪ ಇಡಬೇಕಾಗಿತ್ತು. ಕಾಶ್ಮೀರದಲ್ಲಿ ಅಸ್ತಿತ್ವದಲ್ಲಿದ್ದ ಸರ್ಕಾರವನ್ನು ಆಯ್ಕೆಗೊಂಡ ಶಾಸನ ಸಭೆಯ ಸದಸ್ಯರನ್ನು ಈ ತಿದ್ದುಪಡಿಯ ಬಗೆಗೆ ಚರ್ಚೆ ಮಾಡಲು ಅವಕಾಶ ಕಲ್ಪಿಸಬೇಕಾಗಿತ್ತು. Referendum ಮುಖಾಂತರ ಜನರ ಸಮ್ಮತಿ ಪಡೆಯಬೇಕಾಗಿತ್ತು. ಈ ಮಾರ್ಗ ಬಿಟ್ಟು ಮೋದಿ ಸರ್ಕಾರ 50 ಸಾವಿರ ಸೈನಿಕರನ್ನು ಜಮ್ಮು ಕಾಶ್ಮೀರಕ್ಕೆ ಕಳಿಸಿ ಜನ ಬೆಚ್ಚಿ ಬೀಳುವಂತೆ ಮಾಡಿತು. ವಿವಿಧ ರಾಜಕೀಯ ಪಕ್ಷಗಳ ನಾಯಕರನ್ನು ಗೃಹಬಂಧನದಲ್ಲಿ ಇಡಲಾಯಿತು. ಸರ್ಕಾರದ ಧೋರಣೆಯನ್ನು ಪ್ರಶ್ನಿಸಿದ ಪತ್ರಿಕೆ ಸಂಪಾದಕರು, ಗೌರವಯುತ ನಾಗರಿಕರು ಇವರನ್ನೆಲ್ಲ ಬಂಧಿಸಲಾಯಿತು. ಕಾಶ್ಮೀರದಲ್ಲಿ ಏನು ನಡೆಯುತ್ತಿದೆ ಎಂಬುದು ಭಾರತದ ಇತರ ಪ್ರಾಂತ್ಯದವರಿಗೆ, ವಿಶ್ವಕ್ಕೆ ತಿಳಿಯದಂತೆ ಮಾಡಲು ಎಲ್ಲ ಸುದ್ದಿವಾಹಕ ಯಂತ್ರಸಾಧನಗಳನ್ನು ಸ್ಥಗಿತಗೊಳಿಸಲಾಯಿತು. ಭಾರತದ ಅವಿಭಾಜ್ಯ ಅಂಗವಾಗಿರುವ ಒಂದು ರಾಜ್ಯವನ್ನು ಈ ರೀತಿ ನಡೆಸಿಕೊಂಡಿದ್ದು ಪ್ರಜಾಪ್ರಭುತ್ವದ ಕಗ್ಗೊಲೆಯಲ್ಲವೇ?

ಎರಡು ವರ್ಷಗಳೆ ಕಳೆದು ಹೋಗಿದ್ದರೂ ಇನ್ನೂ ಜಮ್ಮು ಕಾಶ್ಮೀರ ರಾಜ್ಯಕ್ಕೆ ಸ್ವಾಯತ್ತತೆ ನೀಡದಿರುವುದು statehood ನೀಡದಿರುವುದು ಪ್ರಜಾಪ್ರಭುತ್ವದ ಬೆನ್ನಲುಬನ್ನೇ ಮುರಿಯುವ ಒಂದು ಹುನ್ನಾರ.

ಎರಡನೆಯ ಪ್ರಜಾಪ್ರಭುತ್ವದಕಗ್ಗೊಲೆಯ ಕೆಲಸ ನಡೆಸಿರುವುದು ರಾಜಧಾನಿ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲರ ಸರ್ಕಾರ ಅಧಿಕ ಬಹುಮತದಿಂದ ಅಧಿಕಾರಕ್ಕೆ ಬಂದಿತ್ತು. ಈ ಸರ್ಕಾರದ ಅಧಿಕಾರವನ್ನು ಮೊಟಕುಗೊಳಿಸಲು ಮೋದಿ ಸರ್ಕಾರ ಮೊದಲಿನಿಂದಲೂ ಹವಣಿಸುತ್ತಿತ್ತು. ಕೇಂದ್ರ ಸರ್ಕಾರದಿಂದ ನೇಮಕಗೊಂಡಿರುವ ಲೆಫ್ಟಿನೆಂಟ್ ಗವರ್ನರ್‌ಗೂ, ಮುಖ್ಯಮಂತ್ರಿ ಕೇಜ್ರಿವಾಲರಿಗೂ ಈ ವಿಷಯದಲ್ಲಿ ದೊಡ್ಡ ಹೋರಾಟವೇ ನಡೆದುಹೋಯಿತು. ಮುಖ್ಯಮಂತ್ರಿ ಕೇಜ್ರಿವಾಲ್‌ರವರು ಲೆಫ್ಟಿನೆಂಟ್ ಗವರ್ನರ್ ಕಚೇರಿಯ ಮುಂದೆ ಅನೇಕ ದಿನಗಳವೆರೆಗೆ ಪ್ರತಿಭಟನೆ ಮಾಡಿದರು. ಸರ್ವೋಚ್ಚ ನ್ಯಾಯಾಲಯ ಮಧ್ಯೆ ಪ್ರವೇಶಿಸಬೇಕಾಗಿ ಬಂದು, ಲೆಫ್ಟಿನೆಂಟ್ ಗವರ್ನರ್‌ರು ದೆಹಲಿ ಸರ್ಕಾರದ ಕಾರ್ಯನಿರ್ವಹಣೆಯಲ್ಲಿ ಪದೇ ಪದೇ ತಲೆ ಹಾಕದ ಹಾಗೆ ತಾಕೀತು ಮಾಡಿತು.

ಇತ್ತೀಚೆಗೆ ಮೋದಿ ಸರ್ಕಾರ ಮತ್ತೆ ದೆಹಲಿಯ ಸರ್ಕಾರದ ಆಡಳಿತದಲ್ಲಿ ಲೆಫ್ಟಿನೆಂಟ್ ಗವರ್ನರ್ ತಲೆ ಹಾಕಲು ಅಧಿಕಾರ ನೀಡಿ, ಎರಡನೇ ಬಾರಿಗೆ ಹೆಚ್ಚು ಬಹುಮತದಿಂದ ಆಯ್ಕೆಯಾಗಿ ಬಂದಿರುವ ಕೇಜ್ರಿವಾಲ್ ಸರ್ಕಾರಕ್ಕೆ ತೊಡರುಗಾಲು ಹಾಕಲು ಅವಕಾಶ ಮಾಡಿಕೊಡುವ ಅವೈಜ್ಞಾನಿಕ ಕಾಯ್ದೆಗಳನ್ನು ರೂಪಿಸಿದ್ದಾರೆ. ಸರ್ಕಾರದ ಮಂತ್ರಿಮಂಡಲವಾಗಲಿ, ಮಂತ್ರಿಗಳೇ ಆಗಲಿ ಯಾವುದೇ ತೀರ್ಮಾನ ಮಾಡುವ ಮೊದಲು ಲೆಫ್ಟಿನೆಂಟ್ ಗವರ್ನರ್‌ರೊಡನೆ ಸಮಾಲೋಚನೆ ನಡೆಸಿ ಒಪ್ಪಿಗೆ ಪಡೆಯಬೇಕು ಎಂಬ ಬರ್ಬರ ಕಾನೂನು ರಚಿಸಲಾಗಿದೆ. ಪ್ರಜೆಗಳ ಭವಿಷ್ಯವನ್ನು ನಿರ್ಧರಿಸುವವರು ಚುನಾಯಿತ ಪ್ರತಿನಿಧಿಗಳಾಗಿರಬೇಕೇ ಹೊರತು ಕೇಂದ್ರ ಸರ್ಕಾರದಿಂದ ನೇಮಕಗೊಂಡ ಲೆಫ್ಟಿನೆಂಟ್ ಗವರ್ನರ್ ಅಲ್ಲ. ಇದೇ ರೀತಿಯ ಅನೇಕ ಪ್ರತಿಬಂಧಕಗಳನ್ನು ಹಾಕಿ ಚುನಾಯಿತ ಪ್ರತಿನಿಧಿಗಳ ಅಭಿಪ್ರಾಯಗಳಿಗಿಂತ ಮೋದಿ ಸರ್ಕಾರದ ಆಯ್ಕೆಯ ಲೆಫ್ಟಿನೆಂಟ್ ಗವರ್ನರ್ ಅಭಿಪ್ರಾಯಗಳಿಗೇ ದೆಹಲಿ ಸರ್ಕಾರ ಮಾನ್ಯತೆ ಕೊಡಬೇಕೆಂದರೆ ಇದು ಪ್ರಜಾಸತ್ತೆಯ ಅವಹೇಳನವಲ್ಲದೇ ಬೇರೇನೂ ಅಲ್ಲ.

ಮತ್ತೆ ದೆಹಲಿ ಸರ್ಕಾರ ತನ್ನ ಸ್ವಾಯತ್ತತೆಯನ್ನು ಉಳಿಸಿಕೊಳ್ಳಲು ಲೆಫ್ಟಿನೆಂಟ್ ಗವರ್ನರ್ ಮತ್ತು ಮೋದಿ ಸರ್ಕಾರದ ವಿರುದ್ಧ ಕಾನೂನು ಸಮರ ಆರಂಭಿಸುವುದು ಅನಿವಾರ್ಯವೆನಿಸಿದೆ.

ಮೂರನೆಯದು ಪುದುಚೇರಿಯ ರಾಜಕೀಯದಲ್ಲಿ ಬಿಜೆಪಿ ಸರ್ಕಾರದಿಂದ ನೇಮಕರಾದ ರಾಜ್ಯಪಾಲರ ಹಸ್ತಕ್ಷೇಪ.

ಹಲವು ವರ್ಷಗಳ ಕಾಲ ರಾಜ್ಯಪಾಲರಾಗಿದ್ದ ಕಿರಣ ಬೇಡಿಯವರು ಅಧಿಕಾರ ವಹಿಸಿಕೊಂಡ ದಿನದಿಂದಲೂ ಕಾಂಗ್ರೆಸ್ ಡಿಎಂಕೆ ಮೈತ್ರಿ ಸರ್ಕಾರದ ವಿರುದ್ಧ ಸಮರ ಸಾರಿದರು. ಈ ಮೈತ್ರಿ ಸರ್ಕಾರದ ಅಧಿಕಾರಗಳನ್ನು ನೇರವಾಗಿ ಸಂಪರ್ಕಿಸುವ ಕೆಟ್ಟ ಸಂಪ್ರದಾಯವನ್ನು ಹುಟ್ಟುಹಾಕಿದರು. ಮುಖ್ಯಮಂತ್ರಿಗಳ ವಿರುದ್ಧ ಸಮರ ಸಾರಿದರು. ಪಕ್ಷದ ಸದಸ್ಯರ ಬಲವನ್ನು ಕುಗ್ಗಿಸಿ ಸರ್ಕಾರ ಬೀಳುವಂತೆ ಮಾಡಲು ಪ್ರಯತ್ನಿಸಿದರು. ಡಿಪಾಸಿಟ್ ಕಳೆದುಕೊಂಡು ಹೀನಾಯವಾಗಿ ಸೋತಿದ್ದ ಬಿಜೆಪಿಯ ಮೂವರನ್ನು ರಾಜ್ಯಪಾಲರು ನಾಮಕರಣ ಸದಸ್ಯರನ್ನಾಗಿ ಶಾಸನಸಭೆಗೆ ನೇಮಿಸಿದರು. ಅವಿಶ್ವಾಸ ನಿರ್ಣಯ ತರುವ ಮೂಲಕ ಶಾಸನಸಭೆಯಲ್ಲಿ ಬಹುಮತ ಕಳೆದುಕೊಳ್ಳುವಂತೆ ಮಾಡಿದರು. ಕೇಂದ್ರ ಸರ್ಕಾರ ಇದ್ದ ರಾಜ್ಯಪಾಲರನ್ನು ಕಿತ್ತುಹಾಕಿ ಗೌರ್‍ನರ್ ರೂಲ್‌ಅನ್ನು ಹೇರಿ ಹೊಸ ಗೌರ್‍ನರ್‌ಅನ್ನು ನೇಮಿಸಿತು. ಈ ರೀತಿಯಲ್ಲಿ ಮೋದಿ ಸರ್ಕಾರ ಅಧಿಕಾರದಲ್ಲಿದ್ದ ಕಾಂಗ್ರೆಸ್, ಡಿಎಂಕೆ ಸಂಯುಕ್ತ ಸರ್ಕಾರದ ಪತನಕ್ಕೆ ಸಂಚುಹೂಡಿ ಅದರಲ್ಲಿಯೂ ಫಲಾನುಭವಿಗಳಾದರು.

ಕೇಂದ್ರ ಸರ್ಕಾರ ಧೋರಣೆ ಏನು ಎಂಬುದನ್ನು ಪುದುಚೇರಿ ಪ್ರಕರಣದಿಂದ ನಾವು ತಿಳಿಯಬಹುದು. ತನ್ನ ವಿರೋಧ ಪಕ್ಷ ಸುಭದ್ರವಾಗಿ ಸರ್ಕಾರ ನಡೆಸುತ್ತಿದ್ದ ರಾಜ್ಯದಲ್ಲಿ, ಆ ಪಕ್ಷದ ಶಾಸಕರಲ್ಲಿ ಒಡಕುಉಂಟು ಮಾಡಿ, ಆ ಸರ್ಕಾರವನ್ನು ಅವಿಶ್ವಾಸ ನಿರ್ಣಯದ ಮೂಲಕ ಉರುಳಿಸಿ, ವಜಾಮಾಡಿ ಗೌರ್‍ನರ್ ರೂಲ್ ಎಂಬ ಹಿಂಬಾಗಿಲಿನ ಮೂಲಕ ತೆಕ್ಕೆಗೆ ತೆಗೆದುಕೊಂಡು, ಮುಂದೆ ಬಿಜೆಪಿ ಸರ್ಕಾರವನ್ನು ಅಸ್ತಿತ್ವಕ್ಕೆ ತರುವುದು ಮೋದಿ ಸರ್ಕಾರದ ನೀತಿಯಾಗಿದೆ.

ಬೇರೆ ಪಕ್ಷಗಳ ಹಿಡಿತದಲ್ಲಿರುವ ರಾಜ್ಯಗಳನ್ನು ಬಿಜೆಪಿ ರಾಜ್ಯವನ್ನಾಗಿ ಪರಿವರ್ತಿಸಲು ಸಂಚು ಮಾಡುವುದರಲ್ಲಿ ಮೋದಿ ಸರ್ಕಾರ ಎತ್ತಿದ ಕೈ. ಈ ಪ್ರವೃತ್ತಿಯನ್ನು ತಡೆಗಟ್ಟಲು ಎಲ್ಲ ರಾಜಕೀಯ ಪಕ್ಷಗಳೂ ಒಗ್ಗೂಡಿ ಹೋರಾಟ ನಡೆಸಬೇಕು. ಪ್ರಜಾಪ್ರಭುತ್ವದಲ್ಲಿ ನಂಬಿಕೆಯುಳ್ಳ ಎಲ್ಲರೂ ಈ ಹೋರಾಟದಲ್ಲಿ ಕೂಡಿಕೊಳ್ಳಬೇಕು.


ಇದನ್ನೂ ಓದಿ: ಎನ್‌ಸಿಟಿ ದೆಹಲಿ ತಿದ್ದುಪಡಿ ಬಿಲ್: ಬೇರೆ ರಾಜ್ಯಗಳ ಬಾಗಿಲಿಗೂ ಕೇಂದ್ರೀಕರಣದ ಭೂತ ವಕ್ಕರಿಸುವ ಮುನ್ಸೂಚನೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...