Homeಅಂಕಣಗಳುನೂರರ ನೋಟ: ಪ್ರಜಾಪ್ರಭುತ್ವದ ಕಗ್ಗೊಲೆಯ ಮೂರು ಪ್ರಕರಣಗಳು

ನೂರರ ನೋಟ: ಪ್ರಜಾಪ್ರಭುತ್ವದ ಕಗ್ಗೊಲೆಯ ಮೂರು ಪ್ರಕರಣಗಳು

- Advertisement -
- Advertisement -

ಮೋದಿ ಸರ್ಕಾರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯ ಕೆಲಸ ಅವ್ಯಾಹತವಾಗಿ ನಡೆಯುತ್ತಿದೆ. ಇದಕ್ಕೆ ಸಾಕ್ಷಿ (1) ಕಾಶ್ಮೀರಕ್ಕೆ ಇನ್ನೂ statehood ಕೊಡದೆ ಇರುವುದು (2) ದೆಹಲಿಯಲ್ಲಿ ಅಧಿಕಾರ ಚುನಾಯಿತ ಸರ್ಕಾರದ ಕೈಯಲ್ಲಿರುವುದನ್ನು ಸಹಿಸದೆ ಕೇಂದ್ರ ಸರ್ಕಾರದಿಂದ ನೇಮಕರಾದ ಚುನಾಯಿತರಲ್ಲದ ಲೆಫ್ಟಿನೆಂಟ್ ಗವರ್ನರ್‌ರಿಗೆ ಅಸಂವಿಧಾನ ರೀತ್ಯಾ ಚುನಾಯಿತ ಸರ್ಕಾರದ ಮೇಲೆ ದಬ್ಬಾಳಿಕೆ ನಡೆಸುವ ಶಾಸನ ಜಾರಿಗೆ ತಂದಿರುವುದು (3) ಪುದುಚೇರಿಯಲ್ಲಿ ಕಾಂಗ್ರೆಸ್ ಮತ್ತು ಡಿಎಂಕೆ ಜಂಟಿ ಸರ್ಕಾರ ಅನೇಕ ವರ್ಷಗಳಿಂದ ಆಡಳಿತ ನಡೆಸುತ್ತಿತ್ತು. ಬಿಜೆಪಿ ಕೇಂದ್ರ ಸರ್ಕಾರ ತಾನು ನೇಮಿಸಿದ ರಾಜ್ಯಪಾಲರ ಮೂಲಕ ಪುದುಚೇರಿ ಚುನಾಯಿತ ಸರ್ಕಾರವನ್ನು ಕಿತ್ತೆಸೆಯಲು ಅಸಂವಿಧಾನಕಾರಿ ಷಡ್ಯಂತ್ರಗಳನ್ನು ರಚಿಸಿ ಆ ಸರ್ಕಾರವನ್ನು ಕೆಳಗಿಳಿಸಿ ಗೌರ್‍ನರ್ ರೂಲ್ ಜಾರಿಗೆ ತಂದಿರುವುದು.

ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಅಧಿಕಾರವನ್ನು ಕಿತ್ತುಹಾಕಿ ಮೋದಿ ಸರ್ಕಾರ ಕಾಶ್ಮೀರವನ್ನು ಮೂರು ಪ್ರಾಂತ್ಯಗಳಾಗಿ ಒಡೆದು ಗೌರ್‍ನರ್ ಕೈಗೆ ಅಧಿಕಾರ ನೀಡಿ ಒಂದೆರಡು ವರ್ಷ ಕಳೆದರೂ, ಕಾಶ್ಮೀರಕ್ಕೆ ಇನ್ನೂ statehood ಕೊಟ್ಟಿಲ್ಲ. ಚುನಾವಣೆ ನಡೆಸಿಲ್ಲ. ಚುನಾಯಿತ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿಲ್ಲ. 13.2.2021ರಂದು ಕೇಂದ್ರ ಸರ್ಕಾರದ ಗೃಹಮಂತ್ರಿಗಳು ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪುನರ್ರಚನೆಯ ಮಸೂದೆ ಮಂಡಿಸಿದಾಗ ಗೃಹ ಸಚಿವ ಷಾ ಅವರು ಜಮ್ಮು ಕಾಶ್ಮೀರಕ್ಕೆ statehoodನ್ನು ಸರಿಯಾದ ಸಮಯದಲ್ಲಿ ನೀಡಲಾಗುವುದು ಎಂದು ಉತ್ತರಿಸಿದರು. ಅದರರ್ಥ ಸದ್ಯಕ್ಕಂತೂ statehood ಘೋಷಣೆ ಮಾಡುವುದಿಲ್ಲ ನಮಗೆ ಸಮಯ ಸರಿಯೆನಿಸಿದಾಗ statehood ದಯಪಾಲಿಸುವುದು ಎಂದು ಅರ್ಥೈಸಬೇಕಾದೀತು.

PC :The Federal News

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 371ನೆ ವಿಧಿಯನ್ನು ಮೋದಿ ಸರ್ಕಾರ ರದ್ದುಪಡಿಸಿದ ರೀತಿಯೇ ವಿಚಿತ್ರವಾಗಿತ್ತು. ಸರ್ಕಾರ ಈ ತಿದ್ದುಪಡಿ ತಂದು ಅದಕ್ಕೆ ರಾಷ್ಟ್ರಪತಿಯವರ ಸಹಿ ಹಾಕಿಸುವ ಮುನ್ನ ಪಾರ್ಲಿಮೆಂಟಿನ ಮುಂದೆ ಈ ಪ್ರಸ್ತಾಪ ಇಡಬೇಕಾಗಿತ್ತು. ಕಾಶ್ಮೀರದಲ್ಲಿ ಅಸ್ತಿತ್ವದಲ್ಲಿದ್ದ ಸರ್ಕಾರವನ್ನು ಆಯ್ಕೆಗೊಂಡ ಶಾಸನ ಸಭೆಯ ಸದಸ್ಯರನ್ನು ಈ ತಿದ್ದುಪಡಿಯ ಬಗೆಗೆ ಚರ್ಚೆ ಮಾಡಲು ಅವಕಾಶ ಕಲ್ಪಿಸಬೇಕಾಗಿತ್ತು. Referendum ಮುಖಾಂತರ ಜನರ ಸಮ್ಮತಿ ಪಡೆಯಬೇಕಾಗಿತ್ತು. ಈ ಮಾರ್ಗ ಬಿಟ್ಟು ಮೋದಿ ಸರ್ಕಾರ 50 ಸಾವಿರ ಸೈನಿಕರನ್ನು ಜಮ್ಮು ಕಾಶ್ಮೀರಕ್ಕೆ ಕಳಿಸಿ ಜನ ಬೆಚ್ಚಿ ಬೀಳುವಂತೆ ಮಾಡಿತು. ವಿವಿಧ ರಾಜಕೀಯ ಪಕ್ಷಗಳ ನಾಯಕರನ್ನು ಗೃಹಬಂಧನದಲ್ಲಿ ಇಡಲಾಯಿತು. ಸರ್ಕಾರದ ಧೋರಣೆಯನ್ನು ಪ್ರಶ್ನಿಸಿದ ಪತ್ರಿಕೆ ಸಂಪಾದಕರು, ಗೌರವಯುತ ನಾಗರಿಕರು ಇವರನ್ನೆಲ್ಲ ಬಂಧಿಸಲಾಯಿತು. ಕಾಶ್ಮೀರದಲ್ಲಿ ಏನು ನಡೆಯುತ್ತಿದೆ ಎಂಬುದು ಭಾರತದ ಇತರ ಪ್ರಾಂತ್ಯದವರಿಗೆ, ವಿಶ್ವಕ್ಕೆ ತಿಳಿಯದಂತೆ ಮಾಡಲು ಎಲ್ಲ ಸುದ್ದಿವಾಹಕ ಯಂತ್ರಸಾಧನಗಳನ್ನು ಸ್ಥಗಿತಗೊಳಿಸಲಾಯಿತು. ಭಾರತದ ಅವಿಭಾಜ್ಯ ಅಂಗವಾಗಿರುವ ಒಂದು ರಾಜ್ಯವನ್ನು ಈ ರೀತಿ ನಡೆಸಿಕೊಂಡಿದ್ದು ಪ್ರಜಾಪ್ರಭುತ್ವದ ಕಗ್ಗೊಲೆಯಲ್ಲವೇ?

ಎರಡು ವರ್ಷಗಳೆ ಕಳೆದು ಹೋಗಿದ್ದರೂ ಇನ್ನೂ ಜಮ್ಮು ಕಾಶ್ಮೀರ ರಾಜ್ಯಕ್ಕೆ ಸ್ವಾಯತ್ತತೆ ನೀಡದಿರುವುದು statehood ನೀಡದಿರುವುದು ಪ್ರಜಾಪ್ರಭುತ್ವದ ಬೆನ್ನಲುಬನ್ನೇ ಮುರಿಯುವ ಒಂದು ಹುನ್ನಾರ.

ಎರಡನೆಯ ಪ್ರಜಾಪ್ರಭುತ್ವದಕಗ್ಗೊಲೆಯ ಕೆಲಸ ನಡೆಸಿರುವುದು ರಾಜಧಾನಿ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲರ ಸರ್ಕಾರ ಅಧಿಕ ಬಹುಮತದಿಂದ ಅಧಿಕಾರಕ್ಕೆ ಬಂದಿತ್ತು. ಈ ಸರ್ಕಾರದ ಅಧಿಕಾರವನ್ನು ಮೊಟಕುಗೊಳಿಸಲು ಮೋದಿ ಸರ್ಕಾರ ಮೊದಲಿನಿಂದಲೂ ಹವಣಿಸುತ್ತಿತ್ತು. ಕೇಂದ್ರ ಸರ್ಕಾರದಿಂದ ನೇಮಕಗೊಂಡಿರುವ ಲೆಫ್ಟಿನೆಂಟ್ ಗವರ್ನರ್‌ಗೂ, ಮುಖ್ಯಮಂತ್ರಿ ಕೇಜ್ರಿವಾಲರಿಗೂ ಈ ವಿಷಯದಲ್ಲಿ ದೊಡ್ಡ ಹೋರಾಟವೇ ನಡೆದುಹೋಯಿತು. ಮುಖ್ಯಮಂತ್ರಿ ಕೇಜ್ರಿವಾಲ್‌ರವರು ಲೆಫ್ಟಿನೆಂಟ್ ಗವರ್ನರ್ ಕಚೇರಿಯ ಮುಂದೆ ಅನೇಕ ದಿನಗಳವೆರೆಗೆ ಪ್ರತಿಭಟನೆ ಮಾಡಿದರು. ಸರ್ವೋಚ್ಚ ನ್ಯಾಯಾಲಯ ಮಧ್ಯೆ ಪ್ರವೇಶಿಸಬೇಕಾಗಿ ಬಂದು, ಲೆಫ್ಟಿನೆಂಟ್ ಗವರ್ನರ್‌ರು ದೆಹಲಿ ಸರ್ಕಾರದ ಕಾರ್ಯನಿರ್ವಹಣೆಯಲ್ಲಿ ಪದೇ ಪದೇ ತಲೆ ಹಾಕದ ಹಾಗೆ ತಾಕೀತು ಮಾಡಿತು.

ಇತ್ತೀಚೆಗೆ ಮೋದಿ ಸರ್ಕಾರ ಮತ್ತೆ ದೆಹಲಿಯ ಸರ್ಕಾರದ ಆಡಳಿತದಲ್ಲಿ ಲೆಫ್ಟಿನೆಂಟ್ ಗವರ್ನರ್ ತಲೆ ಹಾಕಲು ಅಧಿಕಾರ ನೀಡಿ, ಎರಡನೇ ಬಾರಿಗೆ ಹೆಚ್ಚು ಬಹುಮತದಿಂದ ಆಯ್ಕೆಯಾಗಿ ಬಂದಿರುವ ಕೇಜ್ರಿವಾಲ್ ಸರ್ಕಾರಕ್ಕೆ ತೊಡರುಗಾಲು ಹಾಕಲು ಅವಕಾಶ ಮಾಡಿಕೊಡುವ ಅವೈಜ್ಞಾನಿಕ ಕಾಯ್ದೆಗಳನ್ನು ರೂಪಿಸಿದ್ದಾರೆ. ಸರ್ಕಾರದ ಮಂತ್ರಿಮಂಡಲವಾಗಲಿ, ಮಂತ್ರಿಗಳೇ ಆಗಲಿ ಯಾವುದೇ ತೀರ್ಮಾನ ಮಾಡುವ ಮೊದಲು ಲೆಫ್ಟಿನೆಂಟ್ ಗವರ್ನರ್‌ರೊಡನೆ ಸಮಾಲೋಚನೆ ನಡೆಸಿ ಒಪ್ಪಿಗೆ ಪಡೆಯಬೇಕು ಎಂಬ ಬರ್ಬರ ಕಾನೂನು ರಚಿಸಲಾಗಿದೆ. ಪ್ರಜೆಗಳ ಭವಿಷ್ಯವನ್ನು ನಿರ್ಧರಿಸುವವರು ಚುನಾಯಿತ ಪ್ರತಿನಿಧಿಗಳಾಗಿರಬೇಕೇ ಹೊರತು ಕೇಂದ್ರ ಸರ್ಕಾರದಿಂದ ನೇಮಕಗೊಂಡ ಲೆಫ್ಟಿನೆಂಟ್ ಗವರ್ನರ್ ಅಲ್ಲ. ಇದೇ ರೀತಿಯ ಅನೇಕ ಪ್ರತಿಬಂಧಕಗಳನ್ನು ಹಾಕಿ ಚುನಾಯಿತ ಪ್ರತಿನಿಧಿಗಳ ಅಭಿಪ್ರಾಯಗಳಿಗಿಂತ ಮೋದಿ ಸರ್ಕಾರದ ಆಯ್ಕೆಯ ಲೆಫ್ಟಿನೆಂಟ್ ಗವರ್ನರ್ ಅಭಿಪ್ರಾಯಗಳಿಗೇ ದೆಹಲಿ ಸರ್ಕಾರ ಮಾನ್ಯತೆ ಕೊಡಬೇಕೆಂದರೆ ಇದು ಪ್ರಜಾಸತ್ತೆಯ ಅವಹೇಳನವಲ್ಲದೇ ಬೇರೇನೂ ಅಲ್ಲ.

ಮತ್ತೆ ದೆಹಲಿ ಸರ್ಕಾರ ತನ್ನ ಸ್ವಾಯತ್ತತೆಯನ್ನು ಉಳಿಸಿಕೊಳ್ಳಲು ಲೆಫ್ಟಿನೆಂಟ್ ಗವರ್ನರ್ ಮತ್ತು ಮೋದಿ ಸರ್ಕಾರದ ವಿರುದ್ಧ ಕಾನೂನು ಸಮರ ಆರಂಭಿಸುವುದು ಅನಿವಾರ್ಯವೆನಿಸಿದೆ.

ಮೂರನೆಯದು ಪುದುಚೇರಿಯ ರಾಜಕೀಯದಲ್ಲಿ ಬಿಜೆಪಿ ಸರ್ಕಾರದಿಂದ ನೇಮಕರಾದ ರಾಜ್ಯಪಾಲರ ಹಸ್ತಕ್ಷೇಪ.

ಹಲವು ವರ್ಷಗಳ ಕಾಲ ರಾಜ್ಯಪಾಲರಾಗಿದ್ದ ಕಿರಣ ಬೇಡಿಯವರು ಅಧಿಕಾರ ವಹಿಸಿಕೊಂಡ ದಿನದಿಂದಲೂ ಕಾಂಗ್ರೆಸ್ ಡಿಎಂಕೆ ಮೈತ್ರಿ ಸರ್ಕಾರದ ವಿರುದ್ಧ ಸಮರ ಸಾರಿದರು. ಈ ಮೈತ್ರಿ ಸರ್ಕಾರದ ಅಧಿಕಾರಗಳನ್ನು ನೇರವಾಗಿ ಸಂಪರ್ಕಿಸುವ ಕೆಟ್ಟ ಸಂಪ್ರದಾಯವನ್ನು ಹುಟ್ಟುಹಾಕಿದರು. ಮುಖ್ಯಮಂತ್ರಿಗಳ ವಿರುದ್ಧ ಸಮರ ಸಾರಿದರು. ಪಕ್ಷದ ಸದಸ್ಯರ ಬಲವನ್ನು ಕುಗ್ಗಿಸಿ ಸರ್ಕಾರ ಬೀಳುವಂತೆ ಮಾಡಲು ಪ್ರಯತ್ನಿಸಿದರು. ಡಿಪಾಸಿಟ್ ಕಳೆದುಕೊಂಡು ಹೀನಾಯವಾಗಿ ಸೋತಿದ್ದ ಬಿಜೆಪಿಯ ಮೂವರನ್ನು ರಾಜ್ಯಪಾಲರು ನಾಮಕರಣ ಸದಸ್ಯರನ್ನಾಗಿ ಶಾಸನಸಭೆಗೆ ನೇಮಿಸಿದರು. ಅವಿಶ್ವಾಸ ನಿರ್ಣಯ ತರುವ ಮೂಲಕ ಶಾಸನಸಭೆಯಲ್ಲಿ ಬಹುಮತ ಕಳೆದುಕೊಳ್ಳುವಂತೆ ಮಾಡಿದರು. ಕೇಂದ್ರ ಸರ್ಕಾರ ಇದ್ದ ರಾಜ್ಯಪಾಲರನ್ನು ಕಿತ್ತುಹಾಕಿ ಗೌರ್‍ನರ್ ರೂಲ್‌ಅನ್ನು ಹೇರಿ ಹೊಸ ಗೌರ್‍ನರ್‌ಅನ್ನು ನೇಮಿಸಿತು. ಈ ರೀತಿಯಲ್ಲಿ ಮೋದಿ ಸರ್ಕಾರ ಅಧಿಕಾರದಲ್ಲಿದ್ದ ಕಾಂಗ್ರೆಸ್, ಡಿಎಂಕೆ ಸಂಯುಕ್ತ ಸರ್ಕಾರದ ಪತನಕ್ಕೆ ಸಂಚುಹೂಡಿ ಅದರಲ್ಲಿಯೂ ಫಲಾನುಭವಿಗಳಾದರು.

ಕೇಂದ್ರ ಸರ್ಕಾರ ಧೋರಣೆ ಏನು ಎಂಬುದನ್ನು ಪುದುಚೇರಿ ಪ್ರಕರಣದಿಂದ ನಾವು ತಿಳಿಯಬಹುದು. ತನ್ನ ವಿರೋಧ ಪಕ್ಷ ಸುಭದ್ರವಾಗಿ ಸರ್ಕಾರ ನಡೆಸುತ್ತಿದ್ದ ರಾಜ್ಯದಲ್ಲಿ, ಆ ಪಕ್ಷದ ಶಾಸಕರಲ್ಲಿ ಒಡಕುಉಂಟು ಮಾಡಿ, ಆ ಸರ್ಕಾರವನ್ನು ಅವಿಶ್ವಾಸ ನಿರ್ಣಯದ ಮೂಲಕ ಉರುಳಿಸಿ, ವಜಾಮಾಡಿ ಗೌರ್‍ನರ್ ರೂಲ್ ಎಂಬ ಹಿಂಬಾಗಿಲಿನ ಮೂಲಕ ತೆಕ್ಕೆಗೆ ತೆಗೆದುಕೊಂಡು, ಮುಂದೆ ಬಿಜೆಪಿ ಸರ್ಕಾರವನ್ನು ಅಸ್ತಿತ್ವಕ್ಕೆ ತರುವುದು ಮೋದಿ ಸರ್ಕಾರದ ನೀತಿಯಾಗಿದೆ.

ಬೇರೆ ಪಕ್ಷಗಳ ಹಿಡಿತದಲ್ಲಿರುವ ರಾಜ್ಯಗಳನ್ನು ಬಿಜೆಪಿ ರಾಜ್ಯವನ್ನಾಗಿ ಪರಿವರ್ತಿಸಲು ಸಂಚು ಮಾಡುವುದರಲ್ಲಿ ಮೋದಿ ಸರ್ಕಾರ ಎತ್ತಿದ ಕೈ. ಈ ಪ್ರವೃತ್ತಿಯನ್ನು ತಡೆಗಟ್ಟಲು ಎಲ್ಲ ರಾಜಕೀಯ ಪಕ್ಷಗಳೂ ಒಗ್ಗೂಡಿ ಹೋರಾಟ ನಡೆಸಬೇಕು. ಪ್ರಜಾಪ್ರಭುತ್ವದಲ್ಲಿ ನಂಬಿಕೆಯುಳ್ಳ ಎಲ್ಲರೂ ಈ ಹೋರಾಟದಲ್ಲಿ ಕೂಡಿಕೊಳ್ಳಬೇಕು.


ಇದನ್ನೂ ಓದಿ: ಎನ್‌ಸಿಟಿ ದೆಹಲಿ ತಿದ್ದುಪಡಿ ಬಿಲ್: ಬೇರೆ ರಾಜ್ಯಗಳ ಬಾಗಿಲಿಗೂ ಕೇಂದ್ರೀಕರಣದ ಭೂತ ವಕ್ಕರಿಸುವ ಮುನ್ಸೂಚನೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...