Homeಅಂಕಣಗಳುನೂರರ ನೋಟ: ಪ್ರಜಾಪ್ರಭುತ್ವದ ಕಗ್ಗೊಲೆಯ ಮೂರು ಪ್ರಕರಣಗಳು

ನೂರರ ನೋಟ: ಪ್ರಜಾಪ್ರಭುತ್ವದ ಕಗ್ಗೊಲೆಯ ಮೂರು ಪ್ರಕರಣಗಳು

- Advertisement -
- Advertisement -

ಮೋದಿ ಸರ್ಕಾರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯ ಕೆಲಸ ಅವ್ಯಾಹತವಾಗಿ ನಡೆಯುತ್ತಿದೆ. ಇದಕ್ಕೆ ಸಾಕ್ಷಿ (1) ಕಾಶ್ಮೀರಕ್ಕೆ ಇನ್ನೂ statehood ಕೊಡದೆ ಇರುವುದು (2) ದೆಹಲಿಯಲ್ಲಿ ಅಧಿಕಾರ ಚುನಾಯಿತ ಸರ್ಕಾರದ ಕೈಯಲ್ಲಿರುವುದನ್ನು ಸಹಿಸದೆ ಕೇಂದ್ರ ಸರ್ಕಾರದಿಂದ ನೇಮಕರಾದ ಚುನಾಯಿತರಲ್ಲದ ಲೆಫ್ಟಿನೆಂಟ್ ಗವರ್ನರ್‌ರಿಗೆ ಅಸಂವಿಧಾನ ರೀತ್ಯಾ ಚುನಾಯಿತ ಸರ್ಕಾರದ ಮೇಲೆ ದಬ್ಬಾಳಿಕೆ ನಡೆಸುವ ಶಾಸನ ಜಾರಿಗೆ ತಂದಿರುವುದು (3) ಪುದುಚೇರಿಯಲ್ಲಿ ಕಾಂಗ್ರೆಸ್ ಮತ್ತು ಡಿಎಂಕೆ ಜಂಟಿ ಸರ್ಕಾರ ಅನೇಕ ವರ್ಷಗಳಿಂದ ಆಡಳಿತ ನಡೆಸುತ್ತಿತ್ತು. ಬಿಜೆಪಿ ಕೇಂದ್ರ ಸರ್ಕಾರ ತಾನು ನೇಮಿಸಿದ ರಾಜ್ಯಪಾಲರ ಮೂಲಕ ಪುದುಚೇರಿ ಚುನಾಯಿತ ಸರ್ಕಾರವನ್ನು ಕಿತ್ತೆಸೆಯಲು ಅಸಂವಿಧಾನಕಾರಿ ಷಡ್ಯಂತ್ರಗಳನ್ನು ರಚಿಸಿ ಆ ಸರ್ಕಾರವನ್ನು ಕೆಳಗಿಳಿಸಿ ಗೌರ್‍ನರ್ ರೂಲ್ ಜಾರಿಗೆ ತಂದಿರುವುದು.

ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಅಧಿಕಾರವನ್ನು ಕಿತ್ತುಹಾಕಿ ಮೋದಿ ಸರ್ಕಾರ ಕಾಶ್ಮೀರವನ್ನು ಮೂರು ಪ್ರಾಂತ್ಯಗಳಾಗಿ ಒಡೆದು ಗೌರ್‍ನರ್ ಕೈಗೆ ಅಧಿಕಾರ ನೀಡಿ ಒಂದೆರಡು ವರ್ಷ ಕಳೆದರೂ, ಕಾಶ್ಮೀರಕ್ಕೆ ಇನ್ನೂ statehood ಕೊಟ್ಟಿಲ್ಲ. ಚುನಾವಣೆ ನಡೆಸಿಲ್ಲ. ಚುನಾಯಿತ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿಲ್ಲ. 13.2.2021ರಂದು ಕೇಂದ್ರ ಸರ್ಕಾರದ ಗೃಹಮಂತ್ರಿಗಳು ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪುನರ್ರಚನೆಯ ಮಸೂದೆ ಮಂಡಿಸಿದಾಗ ಗೃಹ ಸಚಿವ ಷಾ ಅವರು ಜಮ್ಮು ಕಾಶ್ಮೀರಕ್ಕೆ statehoodನ್ನು ಸರಿಯಾದ ಸಮಯದಲ್ಲಿ ನೀಡಲಾಗುವುದು ಎಂದು ಉತ್ತರಿಸಿದರು. ಅದರರ್ಥ ಸದ್ಯಕ್ಕಂತೂ statehood ಘೋಷಣೆ ಮಾಡುವುದಿಲ್ಲ ನಮಗೆ ಸಮಯ ಸರಿಯೆನಿಸಿದಾಗ statehood ದಯಪಾಲಿಸುವುದು ಎಂದು ಅರ್ಥೈಸಬೇಕಾದೀತು.

PC :The Federal News

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 371ನೆ ವಿಧಿಯನ್ನು ಮೋದಿ ಸರ್ಕಾರ ರದ್ದುಪಡಿಸಿದ ರೀತಿಯೇ ವಿಚಿತ್ರವಾಗಿತ್ತು. ಸರ್ಕಾರ ಈ ತಿದ್ದುಪಡಿ ತಂದು ಅದಕ್ಕೆ ರಾಷ್ಟ್ರಪತಿಯವರ ಸಹಿ ಹಾಕಿಸುವ ಮುನ್ನ ಪಾರ್ಲಿಮೆಂಟಿನ ಮುಂದೆ ಈ ಪ್ರಸ್ತಾಪ ಇಡಬೇಕಾಗಿತ್ತು. ಕಾಶ್ಮೀರದಲ್ಲಿ ಅಸ್ತಿತ್ವದಲ್ಲಿದ್ದ ಸರ್ಕಾರವನ್ನು ಆಯ್ಕೆಗೊಂಡ ಶಾಸನ ಸಭೆಯ ಸದಸ್ಯರನ್ನು ಈ ತಿದ್ದುಪಡಿಯ ಬಗೆಗೆ ಚರ್ಚೆ ಮಾಡಲು ಅವಕಾಶ ಕಲ್ಪಿಸಬೇಕಾಗಿತ್ತು. Referendum ಮುಖಾಂತರ ಜನರ ಸಮ್ಮತಿ ಪಡೆಯಬೇಕಾಗಿತ್ತು. ಈ ಮಾರ್ಗ ಬಿಟ್ಟು ಮೋದಿ ಸರ್ಕಾರ 50 ಸಾವಿರ ಸೈನಿಕರನ್ನು ಜಮ್ಮು ಕಾಶ್ಮೀರಕ್ಕೆ ಕಳಿಸಿ ಜನ ಬೆಚ್ಚಿ ಬೀಳುವಂತೆ ಮಾಡಿತು. ವಿವಿಧ ರಾಜಕೀಯ ಪಕ್ಷಗಳ ನಾಯಕರನ್ನು ಗೃಹಬಂಧನದಲ್ಲಿ ಇಡಲಾಯಿತು. ಸರ್ಕಾರದ ಧೋರಣೆಯನ್ನು ಪ್ರಶ್ನಿಸಿದ ಪತ್ರಿಕೆ ಸಂಪಾದಕರು, ಗೌರವಯುತ ನಾಗರಿಕರು ಇವರನ್ನೆಲ್ಲ ಬಂಧಿಸಲಾಯಿತು. ಕಾಶ್ಮೀರದಲ್ಲಿ ಏನು ನಡೆಯುತ್ತಿದೆ ಎಂಬುದು ಭಾರತದ ಇತರ ಪ್ರಾಂತ್ಯದವರಿಗೆ, ವಿಶ್ವಕ್ಕೆ ತಿಳಿಯದಂತೆ ಮಾಡಲು ಎಲ್ಲ ಸುದ್ದಿವಾಹಕ ಯಂತ್ರಸಾಧನಗಳನ್ನು ಸ್ಥಗಿತಗೊಳಿಸಲಾಯಿತು. ಭಾರತದ ಅವಿಭಾಜ್ಯ ಅಂಗವಾಗಿರುವ ಒಂದು ರಾಜ್ಯವನ್ನು ಈ ರೀತಿ ನಡೆಸಿಕೊಂಡಿದ್ದು ಪ್ರಜಾಪ್ರಭುತ್ವದ ಕಗ್ಗೊಲೆಯಲ್ಲವೇ?

ಎರಡು ವರ್ಷಗಳೆ ಕಳೆದು ಹೋಗಿದ್ದರೂ ಇನ್ನೂ ಜಮ್ಮು ಕಾಶ್ಮೀರ ರಾಜ್ಯಕ್ಕೆ ಸ್ವಾಯತ್ತತೆ ನೀಡದಿರುವುದು statehood ನೀಡದಿರುವುದು ಪ್ರಜಾಪ್ರಭುತ್ವದ ಬೆನ್ನಲುಬನ್ನೇ ಮುರಿಯುವ ಒಂದು ಹುನ್ನಾರ.

ಎರಡನೆಯ ಪ್ರಜಾಪ್ರಭುತ್ವದಕಗ್ಗೊಲೆಯ ಕೆಲಸ ನಡೆಸಿರುವುದು ರಾಜಧಾನಿ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲರ ಸರ್ಕಾರ ಅಧಿಕ ಬಹುಮತದಿಂದ ಅಧಿಕಾರಕ್ಕೆ ಬಂದಿತ್ತು. ಈ ಸರ್ಕಾರದ ಅಧಿಕಾರವನ್ನು ಮೊಟಕುಗೊಳಿಸಲು ಮೋದಿ ಸರ್ಕಾರ ಮೊದಲಿನಿಂದಲೂ ಹವಣಿಸುತ್ತಿತ್ತು. ಕೇಂದ್ರ ಸರ್ಕಾರದಿಂದ ನೇಮಕಗೊಂಡಿರುವ ಲೆಫ್ಟಿನೆಂಟ್ ಗವರ್ನರ್‌ಗೂ, ಮುಖ್ಯಮಂತ್ರಿ ಕೇಜ್ರಿವಾಲರಿಗೂ ಈ ವಿಷಯದಲ್ಲಿ ದೊಡ್ಡ ಹೋರಾಟವೇ ನಡೆದುಹೋಯಿತು. ಮುಖ್ಯಮಂತ್ರಿ ಕೇಜ್ರಿವಾಲ್‌ರವರು ಲೆಫ್ಟಿನೆಂಟ್ ಗವರ್ನರ್ ಕಚೇರಿಯ ಮುಂದೆ ಅನೇಕ ದಿನಗಳವೆರೆಗೆ ಪ್ರತಿಭಟನೆ ಮಾಡಿದರು. ಸರ್ವೋಚ್ಚ ನ್ಯಾಯಾಲಯ ಮಧ್ಯೆ ಪ್ರವೇಶಿಸಬೇಕಾಗಿ ಬಂದು, ಲೆಫ್ಟಿನೆಂಟ್ ಗವರ್ನರ್‌ರು ದೆಹಲಿ ಸರ್ಕಾರದ ಕಾರ್ಯನಿರ್ವಹಣೆಯಲ್ಲಿ ಪದೇ ಪದೇ ತಲೆ ಹಾಕದ ಹಾಗೆ ತಾಕೀತು ಮಾಡಿತು.

ಇತ್ತೀಚೆಗೆ ಮೋದಿ ಸರ್ಕಾರ ಮತ್ತೆ ದೆಹಲಿಯ ಸರ್ಕಾರದ ಆಡಳಿತದಲ್ಲಿ ಲೆಫ್ಟಿನೆಂಟ್ ಗವರ್ನರ್ ತಲೆ ಹಾಕಲು ಅಧಿಕಾರ ನೀಡಿ, ಎರಡನೇ ಬಾರಿಗೆ ಹೆಚ್ಚು ಬಹುಮತದಿಂದ ಆಯ್ಕೆಯಾಗಿ ಬಂದಿರುವ ಕೇಜ್ರಿವಾಲ್ ಸರ್ಕಾರಕ್ಕೆ ತೊಡರುಗಾಲು ಹಾಕಲು ಅವಕಾಶ ಮಾಡಿಕೊಡುವ ಅವೈಜ್ಞಾನಿಕ ಕಾಯ್ದೆಗಳನ್ನು ರೂಪಿಸಿದ್ದಾರೆ. ಸರ್ಕಾರದ ಮಂತ್ರಿಮಂಡಲವಾಗಲಿ, ಮಂತ್ರಿಗಳೇ ಆಗಲಿ ಯಾವುದೇ ತೀರ್ಮಾನ ಮಾಡುವ ಮೊದಲು ಲೆಫ್ಟಿನೆಂಟ್ ಗವರ್ನರ್‌ರೊಡನೆ ಸಮಾಲೋಚನೆ ನಡೆಸಿ ಒಪ್ಪಿಗೆ ಪಡೆಯಬೇಕು ಎಂಬ ಬರ್ಬರ ಕಾನೂನು ರಚಿಸಲಾಗಿದೆ. ಪ್ರಜೆಗಳ ಭವಿಷ್ಯವನ್ನು ನಿರ್ಧರಿಸುವವರು ಚುನಾಯಿತ ಪ್ರತಿನಿಧಿಗಳಾಗಿರಬೇಕೇ ಹೊರತು ಕೇಂದ್ರ ಸರ್ಕಾರದಿಂದ ನೇಮಕಗೊಂಡ ಲೆಫ್ಟಿನೆಂಟ್ ಗವರ್ನರ್ ಅಲ್ಲ. ಇದೇ ರೀತಿಯ ಅನೇಕ ಪ್ರತಿಬಂಧಕಗಳನ್ನು ಹಾಕಿ ಚುನಾಯಿತ ಪ್ರತಿನಿಧಿಗಳ ಅಭಿಪ್ರಾಯಗಳಿಗಿಂತ ಮೋದಿ ಸರ್ಕಾರದ ಆಯ್ಕೆಯ ಲೆಫ್ಟಿನೆಂಟ್ ಗವರ್ನರ್ ಅಭಿಪ್ರಾಯಗಳಿಗೇ ದೆಹಲಿ ಸರ್ಕಾರ ಮಾನ್ಯತೆ ಕೊಡಬೇಕೆಂದರೆ ಇದು ಪ್ರಜಾಸತ್ತೆಯ ಅವಹೇಳನವಲ್ಲದೇ ಬೇರೇನೂ ಅಲ್ಲ.

ಮತ್ತೆ ದೆಹಲಿ ಸರ್ಕಾರ ತನ್ನ ಸ್ವಾಯತ್ತತೆಯನ್ನು ಉಳಿಸಿಕೊಳ್ಳಲು ಲೆಫ್ಟಿನೆಂಟ್ ಗವರ್ನರ್ ಮತ್ತು ಮೋದಿ ಸರ್ಕಾರದ ವಿರುದ್ಧ ಕಾನೂನು ಸಮರ ಆರಂಭಿಸುವುದು ಅನಿವಾರ್ಯವೆನಿಸಿದೆ.

ಮೂರನೆಯದು ಪುದುಚೇರಿಯ ರಾಜಕೀಯದಲ್ಲಿ ಬಿಜೆಪಿ ಸರ್ಕಾರದಿಂದ ನೇಮಕರಾದ ರಾಜ್ಯಪಾಲರ ಹಸ್ತಕ್ಷೇಪ.

ಹಲವು ವರ್ಷಗಳ ಕಾಲ ರಾಜ್ಯಪಾಲರಾಗಿದ್ದ ಕಿರಣ ಬೇಡಿಯವರು ಅಧಿಕಾರ ವಹಿಸಿಕೊಂಡ ದಿನದಿಂದಲೂ ಕಾಂಗ್ರೆಸ್ ಡಿಎಂಕೆ ಮೈತ್ರಿ ಸರ್ಕಾರದ ವಿರುದ್ಧ ಸಮರ ಸಾರಿದರು. ಈ ಮೈತ್ರಿ ಸರ್ಕಾರದ ಅಧಿಕಾರಗಳನ್ನು ನೇರವಾಗಿ ಸಂಪರ್ಕಿಸುವ ಕೆಟ್ಟ ಸಂಪ್ರದಾಯವನ್ನು ಹುಟ್ಟುಹಾಕಿದರು. ಮುಖ್ಯಮಂತ್ರಿಗಳ ವಿರುದ್ಧ ಸಮರ ಸಾರಿದರು. ಪಕ್ಷದ ಸದಸ್ಯರ ಬಲವನ್ನು ಕುಗ್ಗಿಸಿ ಸರ್ಕಾರ ಬೀಳುವಂತೆ ಮಾಡಲು ಪ್ರಯತ್ನಿಸಿದರು. ಡಿಪಾಸಿಟ್ ಕಳೆದುಕೊಂಡು ಹೀನಾಯವಾಗಿ ಸೋತಿದ್ದ ಬಿಜೆಪಿಯ ಮೂವರನ್ನು ರಾಜ್ಯಪಾಲರು ನಾಮಕರಣ ಸದಸ್ಯರನ್ನಾಗಿ ಶಾಸನಸಭೆಗೆ ನೇಮಿಸಿದರು. ಅವಿಶ್ವಾಸ ನಿರ್ಣಯ ತರುವ ಮೂಲಕ ಶಾಸನಸಭೆಯಲ್ಲಿ ಬಹುಮತ ಕಳೆದುಕೊಳ್ಳುವಂತೆ ಮಾಡಿದರು. ಕೇಂದ್ರ ಸರ್ಕಾರ ಇದ್ದ ರಾಜ್ಯಪಾಲರನ್ನು ಕಿತ್ತುಹಾಕಿ ಗೌರ್‍ನರ್ ರೂಲ್‌ಅನ್ನು ಹೇರಿ ಹೊಸ ಗೌರ್‍ನರ್‌ಅನ್ನು ನೇಮಿಸಿತು. ಈ ರೀತಿಯಲ್ಲಿ ಮೋದಿ ಸರ್ಕಾರ ಅಧಿಕಾರದಲ್ಲಿದ್ದ ಕಾಂಗ್ರೆಸ್, ಡಿಎಂಕೆ ಸಂಯುಕ್ತ ಸರ್ಕಾರದ ಪತನಕ್ಕೆ ಸಂಚುಹೂಡಿ ಅದರಲ್ಲಿಯೂ ಫಲಾನುಭವಿಗಳಾದರು.

ಕೇಂದ್ರ ಸರ್ಕಾರ ಧೋರಣೆ ಏನು ಎಂಬುದನ್ನು ಪುದುಚೇರಿ ಪ್ರಕರಣದಿಂದ ನಾವು ತಿಳಿಯಬಹುದು. ತನ್ನ ವಿರೋಧ ಪಕ್ಷ ಸುಭದ್ರವಾಗಿ ಸರ್ಕಾರ ನಡೆಸುತ್ತಿದ್ದ ರಾಜ್ಯದಲ್ಲಿ, ಆ ಪಕ್ಷದ ಶಾಸಕರಲ್ಲಿ ಒಡಕುಉಂಟು ಮಾಡಿ, ಆ ಸರ್ಕಾರವನ್ನು ಅವಿಶ್ವಾಸ ನಿರ್ಣಯದ ಮೂಲಕ ಉರುಳಿಸಿ, ವಜಾಮಾಡಿ ಗೌರ್‍ನರ್ ರೂಲ್ ಎಂಬ ಹಿಂಬಾಗಿಲಿನ ಮೂಲಕ ತೆಕ್ಕೆಗೆ ತೆಗೆದುಕೊಂಡು, ಮುಂದೆ ಬಿಜೆಪಿ ಸರ್ಕಾರವನ್ನು ಅಸ್ತಿತ್ವಕ್ಕೆ ತರುವುದು ಮೋದಿ ಸರ್ಕಾರದ ನೀತಿಯಾಗಿದೆ.

ಬೇರೆ ಪಕ್ಷಗಳ ಹಿಡಿತದಲ್ಲಿರುವ ರಾಜ್ಯಗಳನ್ನು ಬಿಜೆಪಿ ರಾಜ್ಯವನ್ನಾಗಿ ಪರಿವರ್ತಿಸಲು ಸಂಚು ಮಾಡುವುದರಲ್ಲಿ ಮೋದಿ ಸರ್ಕಾರ ಎತ್ತಿದ ಕೈ. ಈ ಪ್ರವೃತ್ತಿಯನ್ನು ತಡೆಗಟ್ಟಲು ಎಲ್ಲ ರಾಜಕೀಯ ಪಕ್ಷಗಳೂ ಒಗ್ಗೂಡಿ ಹೋರಾಟ ನಡೆಸಬೇಕು. ಪ್ರಜಾಪ್ರಭುತ್ವದಲ್ಲಿ ನಂಬಿಕೆಯುಳ್ಳ ಎಲ್ಲರೂ ಈ ಹೋರಾಟದಲ್ಲಿ ಕೂಡಿಕೊಳ್ಳಬೇಕು.


ಇದನ್ನೂ ಓದಿ: ಎನ್‌ಸಿಟಿ ದೆಹಲಿ ತಿದ್ದುಪಡಿ ಬಿಲ್: ಬೇರೆ ರಾಜ್ಯಗಳ ಬಾಗಿಲಿಗೂ ಕೇಂದ್ರೀಕರಣದ ಭೂತ ವಕ್ಕರಿಸುವ ಮುನ್ಸೂಚನೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...