Homeಅಂಕಣಗಳುನೂರರ ನೋಟ: ಪ್ರಜಾಪ್ರಭುತ್ವದ ಕಗ್ಗೊಲೆಯ ಮೂರು ಪ್ರಕರಣಗಳು

ನೂರರ ನೋಟ: ಪ್ರಜಾಪ್ರಭುತ್ವದ ಕಗ್ಗೊಲೆಯ ಮೂರು ಪ್ರಕರಣಗಳು

- Advertisement -
- Advertisement -

ಮೋದಿ ಸರ್ಕಾರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯ ಕೆಲಸ ಅವ್ಯಾಹತವಾಗಿ ನಡೆಯುತ್ತಿದೆ. ಇದಕ್ಕೆ ಸಾಕ್ಷಿ (1) ಕಾಶ್ಮೀರಕ್ಕೆ ಇನ್ನೂ statehood ಕೊಡದೆ ಇರುವುದು (2) ದೆಹಲಿಯಲ್ಲಿ ಅಧಿಕಾರ ಚುನಾಯಿತ ಸರ್ಕಾರದ ಕೈಯಲ್ಲಿರುವುದನ್ನು ಸಹಿಸದೆ ಕೇಂದ್ರ ಸರ್ಕಾರದಿಂದ ನೇಮಕರಾದ ಚುನಾಯಿತರಲ್ಲದ ಲೆಫ್ಟಿನೆಂಟ್ ಗವರ್ನರ್‌ರಿಗೆ ಅಸಂವಿಧಾನ ರೀತ್ಯಾ ಚುನಾಯಿತ ಸರ್ಕಾರದ ಮೇಲೆ ದಬ್ಬಾಳಿಕೆ ನಡೆಸುವ ಶಾಸನ ಜಾರಿಗೆ ತಂದಿರುವುದು (3) ಪುದುಚೇರಿಯಲ್ಲಿ ಕಾಂಗ್ರೆಸ್ ಮತ್ತು ಡಿಎಂಕೆ ಜಂಟಿ ಸರ್ಕಾರ ಅನೇಕ ವರ್ಷಗಳಿಂದ ಆಡಳಿತ ನಡೆಸುತ್ತಿತ್ತು. ಬಿಜೆಪಿ ಕೇಂದ್ರ ಸರ್ಕಾರ ತಾನು ನೇಮಿಸಿದ ರಾಜ್ಯಪಾಲರ ಮೂಲಕ ಪುದುಚೇರಿ ಚುನಾಯಿತ ಸರ್ಕಾರವನ್ನು ಕಿತ್ತೆಸೆಯಲು ಅಸಂವಿಧಾನಕಾರಿ ಷಡ್ಯಂತ್ರಗಳನ್ನು ರಚಿಸಿ ಆ ಸರ್ಕಾರವನ್ನು ಕೆಳಗಿಳಿಸಿ ಗೌರ್‍ನರ್ ರೂಲ್ ಜಾರಿಗೆ ತಂದಿರುವುದು.

ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಅಧಿಕಾರವನ್ನು ಕಿತ್ತುಹಾಕಿ ಮೋದಿ ಸರ್ಕಾರ ಕಾಶ್ಮೀರವನ್ನು ಮೂರು ಪ್ರಾಂತ್ಯಗಳಾಗಿ ಒಡೆದು ಗೌರ್‍ನರ್ ಕೈಗೆ ಅಧಿಕಾರ ನೀಡಿ ಒಂದೆರಡು ವರ್ಷ ಕಳೆದರೂ, ಕಾಶ್ಮೀರಕ್ಕೆ ಇನ್ನೂ statehood ಕೊಟ್ಟಿಲ್ಲ. ಚುನಾವಣೆ ನಡೆಸಿಲ್ಲ. ಚುನಾಯಿತ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿಲ್ಲ. 13.2.2021ರಂದು ಕೇಂದ್ರ ಸರ್ಕಾರದ ಗೃಹಮಂತ್ರಿಗಳು ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪುನರ್ರಚನೆಯ ಮಸೂದೆ ಮಂಡಿಸಿದಾಗ ಗೃಹ ಸಚಿವ ಷಾ ಅವರು ಜಮ್ಮು ಕಾಶ್ಮೀರಕ್ಕೆ statehoodನ್ನು ಸರಿಯಾದ ಸಮಯದಲ್ಲಿ ನೀಡಲಾಗುವುದು ಎಂದು ಉತ್ತರಿಸಿದರು. ಅದರರ್ಥ ಸದ್ಯಕ್ಕಂತೂ statehood ಘೋಷಣೆ ಮಾಡುವುದಿಲ್ಲ ನಮಗೆ ಸಮಯ ಸರಿಯೆನಿಸಿದಾಗ statehood ದಯಪಾಲಿಸುವುದು ಎಂದು ಅರ್ಥೈಸಬೇಕಾದೀತು.

PC :The Federal News

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 371ನೆ ವಿಧಿಯನ್ನು ಮೋದಿ ಸರ್ಕಾರ ರದ್ದುಪಡಿಸಿದ ರೀತಿಯೇ ವಿಚಿತ್ರವಾಗಿತ್ತು. ಸರ್ಕಾರ ಈ ತಿದ್ದುಪಡಿ ತಂದು ಅದಕ್ಕೆ ರಾಷ್ಟ್ರಪತಿಯವರ ಸಹಿ ಹಾಕಿಸುವ ಮುನ್ನ ಪಾರ್ಲಿಮೆಂಟಿನ ಮುಂದೆ ಈ ಪ್ರಸ್ತಾಪ ಇಡಬೇಕಾಗಿತ್ತು. ಕಾಶ್ಮೀರದಲ್ಲಿ ಅಸ್ತಿತ್ವದಲ್ಲಿದ್ದ ಸರ್ಕಾರವನ್ನು ಆಯ್ಕೆಗೊಂಡ ಶಾಸನ ಸಭೆಯ ಸದಸ್ಯರನ್ನು ಈ ತಿದ್ದುಪಡಿಯ ಬಗೆಗೆ ಚರ್ಚೆ ಮಾಡಲು ಅವಕಾಶ ಕಲ್ಪಿಸಬೇಕಾಗಿತ್ತು. Referendum ಮುಖಾಂತರ ಜನರ ಸಮ್ಮತಿ ಪಡೆಯಬೇಕಾಗಿತ್ತು. ಈ ಮಾರ್ಗ ಬಿಟ್ಟು ಮೋದಿ ಸರ್ಕಾರ 50 ಸಾವಿರ ಸೈನಿಕರನ್ನು ಜಮ್ಮು ಕಾಶ್ಮೀರಕ್ಕೆ ಕಳಿಸಿ ಜನ ಬೆಚ್ಚಿ ಬೀಳುವಂತೆ ಮಾಡಿತು. ವಿವಿಧ ರಾಜಕೀಯ ಪಕ್ಷಗಳ ನಾಯಕರನ್ನು ಗೃಹಬಂಧನದಲ್ಲಿ ಇಡಲಾಯಿತು. ಸರ್ಕಾರದ ಧೋರಣೆಯನ್ನು ಪ್ರಶ್ನಿಸಿದ ಪತ್ರಿಕೆ ಸಂಪಾದಕರು, ಗೌರವಯುತ ನಾಗರಿಕರು ಇವರನ್ನೆಲ್ಲ ಬಂಧಿಸಲಾಯಿತು. ಕಾಶ್ಮೀರದಲ್ಲಿ ಏನು ನಡೆಯುತ್ತಿದೆ ಎಂಬುದು ಭಾರತದ ಇತರ ಪ್ರಾಂತ್ಯದವರಿಗೆ, ವಿಶ್ವಕ್ಕೆ ತಿಳಿಯದಂತೆ ಮಾಡಲು ಎಲ್ಲ ಸುದ್ದಿವಾಹಕ ಯಂತ್ರಸಾಧನಗಳನ್ನು ಸ್ಥಗಿತಗೊಳಿಸಲಾಯಿತು. ಭಾರತದ ಅವಿಭಾಜ್ಯ ಅಂಗವಾಗಿರುವ ಒಂದು ರಾಜ್ಯವನ್ನು ಈ ರೀತಿ ನಡೆಸಿಕೊಂಡಿದ್ದು ಪ್ರಜಾಪ್ರಭುತ್ವದ ಕಗ್ಗೊಲೆಯಲ್ಲವೇ?

ಎರಡು ವರ್ಷಗಳೆ ಕಳೆದು ಹೋಗಿದ್ದರೂ ಇನ್ನೂ ಜಮ್ಮು ಕಾಶ್ಮೀರ ರಾಜ್ಯಕ್ಕೆ ಸ್ವಾಯತ್ತತೆ ನೀಡದಿರುವುದು statehood ನೀಡದಿರುವುದು ಪ್ರಜಾಪ್ರಭುತ್ವದ ಬೆನ್ನಲುಬನ್ನೇ ಮುರಿಯುವ ಒಂದು ಹುನ್ನಾರ.

ಎರಡನೆಯ ಪ್ರಜಾಪ್ರಭುತ್ವದಕಗ್ಗೊಲೆಯ ಕೆಲಸ ನಡೆಸಿರುವುದು ರಾಜಧಾನಿ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲರ ಸರ್ಕಾರ ಅಧಿಕ ಬಹುಮತದಿಂದ ಅಧಿಕಾರಕ್ಕೆ ಬಂದಿತ್ತು. ಈ ಸರ್ಕಾರದ ಅಧಿಕಾರವನ್ನು ಮೊಟಕುಗೊಳಿಸಲು ಮೋದಿ ಸರ್ಕಾರ ಮೊದಲಿನಿಂದಲೂ ಹವಣಿಸುತ್ತಿತ್ತು. ಕೇಂದ್ರ ಸರ್ಕಾರದಿಂದ ನೇಮಕಗೊಂಡಿರುವ ಲೆಫ್ಟಿನೆಂಟ್ ಗವರ್ನರ್‌ಗೂ, ಮುಖ್ಯಮಂತ್ರಿ ಕೇಜ್ರಿವಾಲರಿಗೂ ಈ ವಿಷಯದಲ್ಲಿ ದೊಡ್ಡ ಹೋರಾಟವೇ ನಡೆದುಹೋಯಿತು. ಮುಖ್ಯಮಂತ್ರಿ ಕೇಜ್ರಿವಾಲ್‌ರವರು ಲೆಫ್ಟಿನೆಂಟ್ ಗವರ್ನರ್ ಕಚೇರಿಯ ಮುಂದೆ ಅನೇಕ ದಿನಗಳವೆರೆಗೆ ಪ್ರತಿಭಟನೆ ಮಾಡಿದರು. ಸರ್ವೋಚ್ಚ ನ್ಯಾಯಾಲಯ ಮಧ್ಯೆ ಪ್ರವೇಶಿಸಬೇಕಾಗಿ ಬಂದು, ಲೆಫ್ಟಿನೆಂಟ್ ಗವರ್ನರ್‌ರು ದೆಹಲಿ ಸರ್ಕಾರದ ಕಾರ್ಯನಿರ್ವಹಣೆಯಲ್ಲಿ ಪದೇ ಪದೇ ತಲೆ ಹಾಕದ ಹಾಗೆ ತಾಕೀತು ಮಾಡಿತು.

ಇತ್ತೀಚೆಗೆ ಮೋದಿ ಸರ್ಕಾರ ಮತ್ತೆ ದೆಹಲಿಯ ಸರ್ಕಾರದ ಆಡಳಿತದಲ್ಲಿ ಲೆಫ್ಟಿನೆಂಟ್ ಗವರ್ನರ್ ತಲೆ ಹಾಕಲು ಅಧಿಕಾರ ನೀಡಿ, ಎರಡನೇ ಬಾರಿಗೆ ಹೆಚ್ಚು ಬಹುಮತದಿಂದ ಆಯ್ಕೆಯಾಗಿ ಬಂದಿರುವ ಕೇಜ್ರಿವಾಲ್ ಸರ್ಕಾರಕ್ಕೆ ತೊಡರುಗಾಲು ಹಾಕಲು ಅವಕಾಶ ಮಾಡಿಕೊಡುವ ಅವೈಜ್ಞಾನಿಕ ಕಾಯ್ದೆಗಳನ್ನು ರೂಪಿಸಿದ್ದಾರೆ. ಸರ್ಕಾರದ ಮಂತ್ರಿಮಂಡಲವಾಗಲಿ, ಮಂತ್ರಿಗಳೇ ಆಗಲಿ ಯಾವುದೇ ತೀರ್ಮಾನ ಮಾಡುವ ಮೊದಲು ಲೆಫ್ಟಿನೆಂಟ್ ಗವರ್ನರ್‌ರೊಡನೆ ಸಮಾಲೋಚನೆ ನಡೆಸಿ ಒಪ್ಪಿಗೆ ಪಡೆಯಬೇಕು ಎಂಬ ಬರ್ಬರ ಕಾನೂನು ರಚಿಸಲಾಗಿದೆ. ಪ್ರಜೆಗಳ ಭವಿಷ್ಯವನ್ನು ನಿರ್ಧರಿಸುವವರು ಚುನಾಯಿತ ಪ್ರತಿನಿಧಿಗಳಾಗಿರಬೇಕೇ ಹೊರತು ಕೇಂದ್ರ ಸರ್ಕಾರದಿಂದ ನೇಮಕಗೊಂಡ ಲೆಫ್ಟಿನೆಂಟ್ ಗವರ್ನರ್ ಅಲ್ಲ. ಇದೇ ರೀತಿಯ ಅನೇಕ ಪ್ರತಿಬಂಧಕಗಳನ್ನು ಹಾಕಿ ಚುನಾಯಿತ ಪ್ರತಿನಿಧಿಗಳ ಅಭಿಪ್ರಾಯಗಳಿಗಿಂತ ಮೋದಿ ಸರ್ಕಾರದ ಆಯ್ಕೆಯ ಲೆಫ್ಟಿನೆಂಟ್ ಗವರ್ನರ್ ಅಭಿಪ್ರಾಯಗಳಿಗೇ ದೆಹಲಿ ಸರ್ಕಾರ ಮಾನ್ಯತೆ ಕೊಡಬೇಕೆಂದರೆ ಇದು ಪ್ರಜಾಸತ್ತೆಯ ಅವಹೇಳನವಲ್ಲದೇ ಬೇರೇನೂ ಅಲ್ಲ.

ಮತ್ತೆ ದೆಹಲಿ ಸರ್ಕಾರ ತನ್ನ ಸ್ವಾಯತ್ತತೆಯನ್ನು ಉಳಿಸಿಕೊಳ್ಳಲು ಲೆಫ್ಟಿನೆಂಟ್ ಗವರ್ನರ್ ಮತ್ತು ಮೋದಿ ಸರ್ಕಾರದ ವಿರುದ್ಧ ಕಾನೂನು ಸಮರ ಆರಂಭಿಸುವುದು ಅನಿವಾರ್ಯವೆನಿಸಿದೆ.

ಮೂರನೆಯದು ಪುದುಚೇರಿಯ ರಾಜಕೀಯದಲ್ಲಿ ಬಿಜೆಪಿ ಸರ್ಕಾರದಿಂದ ನೇಮಕರಾದ ರಾಜ್ಯಪಾಲರ ಹಸ್ತಕ್ಷೇಪ.

ಹಲವು ವರ್ಷಗಳ ಕಾಲ ರಾಜ್ಯಪಾಲರಾಗಿದ್ದ ಕಿರಣ ಬೇಡಿಯವರು ಅಧಿಕಾರ ವಹಿಸಿಕೊಂಡ ದಿನದಿಂದಲೂ ಕಾಂಗ್ರೆಸ್ ಡಿಎಂಕೆ ಮೈತ್ರಿ ಸರ್ಕಾರದ ವಿರುದ್ಧ ಸಮರ ಸಾರಿದರು. ಈ ಮೈತ್ರಿ ಸರ್ಕಾರದ ಅಧಿಕಾರಗಳನ್ನು ನೇರವಾಗಿ ಸಂಪರ್ಕಿಸುವ ಕೆಟ್ಟ ಸಂಪ್ರದಾಯವನ್ನು ಹುಟ್ಟುಹಾಕಿದರು. ಮುಖ್ಯಮಂತ್ರಿಗಳ ವಿರುದ್ಧ ಸಮರ ಸಾರಿದರು. ಪಕ್ಷದ ಸದಸ್ಯರ ಬಲವನ್ನು ಕುಗ್ಗಿಸಿ ಸರ್ಕಾರ ಬೀಳುವಂತೆ ಮಾಡಲು ಪ್ರಯತ್ನಿಸಿದರು. ಡಿಪಾಸಿಟ್ ಕಳೆದುಕೊಂಡು ಹೀನಾಯವಾಗಿ ಸೋತಿದ್ದ ಬಿಜೆಪಿಯ ಮೂವರನ್ನು ರಾಜ್ಯಪಾಲರು ನಾಮಕರಣ ಸದಸ್ಯರನ್ನಾಗಿ ಶಾಸನಸಭೆಗೆ ನೇಮಿಸಿದರು. ಅವಿಶ್ವಾಸ ನಿರ್ಣಯ ತರುವ ಮೂಲಕ ಶಾಸನಸಭೆಯಲ್ಲಿ ಬಹುಮತ ಕಳೆದುಕೊಳ್ಳುವಂತೆ ಮಾಡಿದರು. ಕೇಂದ್ರ ಸರ್ಕಾರ ಇದ್ದ ರಾಜ್ಯಪಾಲರನ್ನು ಕಿತ್ತುಹಾಕಿ ಗೌರ್‍ನರ್ ರೂಲ್‌ಅನ್ನು ಹೇರಿ ಹೊಸ ಗೌರ್‍ನರ್‌ಅನ್ನು ನೇಮಿಸಿತು. ಈ ರೀತಿಯಲ್ಲಿ ಮೋದಿ ಸರ್ಕಾರ ಅಧಿಕಾರದಲ್ಲಿದ್ದ ಕಾಂಗ್ರೆಸ್, ಡಿಎಂಕೆ ಸಂಯುಕ್ತ ಸರ್ಕಾರದ ಪತನಕ್ಕೆ ಸಂಚುಹೂಡಿ ಅದರಲ್ಲಿಯೂ ಫಲಾನುಭವಿಗಳಾದರು.

ಕೇಂದ್ರ ಸರ್ಕಾರ ಧೋರಣೆ ಏನು ಎಂಬುದನ್ನು ಪುದುಚೇರಿ ಪ್ರಕರಣದಿಂದ ನಾವು ತಿಳಿಯಬಹುದು. ತನ್ನ ವಿರೋಧ ಪಕ್ಷ ಸುಭದ್ರವಾಗಿ ಸರ್ಕಾರ ನಡೆಸುತ್ತಿದ್ದ ರಾಜ್ಯದಲ್ಲಿ, ಆ ಪಕ್ಷದ ಶಾಸಕರಲ್ಲಿ ಒಡಕುಉಂಟು ಮಾಡಿ, ಆ ಸರ್ಕಾರವನ್ನು ಅವಿಶ್ವಾಸ ನಿರ್ಣಯದ ಮೂಲಕ ಉರುಳಿಸಿ, ವಜಾಮಾಡಿ ಗೌರ್‍ನರ್ ರೂಲ್ ಎಂಬ ಹಿಂಬಾಗಿಲಿನ ಮೂಲಕ ತೆಕ್ಕೆಗೆ ತೆಗೆದುಕೊಂಡು, ಮುಂದೆ ಬಿಜೆಪಿ ಸರ್ಕಾರವನ್ನು ಅಸ್ತಿತ್ವಕ್ಕೆ ತರುವುದು ಮೋದಿ ಸರ್ಕಾರದ ನೀತಿಯಾಗಿದೆ.

ಬೇರೆ ಪಕ್ಷಗಳ ಹಿಡಿತದಲ್ಲಿರುವ ರಾಜ್ಯಗಳನ್ನು ಬಿಜೆಪಿ ರಾಜ್ಯವನ್ನಾಗಿ ಪರಿವರ್ತಿಸಲು ಸಂಚು ಮಾಡುವುದರಲ್ಲಿ ಮೋದಿ ಸರ್ಕಾರ ಎತ್ತಿದ ಕೈ. ಈ ಪ್ರವೃತ್ತಿಯನ್ನು ತಡೆಗಟ್ಟಲು ಎಲ್ಲ ರಾಜಕೀಯ ಪಕ್ಷಗಳೂ ಒಗ್ಗೂಡಿ ಹೋರಾಟ ನಡೆಸಬೇಕು. ಪ್ರಜಾಪ್ರಭುತ್ವದಲ್ಲಿ ನಂಬಿಕೆಯುಳ್ಳ ಎಲ್ಲರೂ ಈ ಹೋರಾಟದಲ್ಲಿ ಕೂಡಿಕೊಳ್ಳಬೇಕು.


ಇದನ್ನೂ ಓದಿ: ಎನ್‌ಸಿಟಿ ದೆಹಲಿ ತಿದ್ದುಪಡಿ ಬಿಲ್: ಬೇರೆ ರಾಜ್ಯಗಳ ಬಾಗಿಲಿಗೂ ಕೇಂದ್ರೀಕರಣದ ಭೂತ ವಕ್ಕರಿಸುವ ಮುನ್ಸೂಚನೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...