Homeಅಂಕಣಗಳುನೂರರ ನೋಟ: ಪ್ರಜಾಪ್ರಭುತ್ವದ ಕಗ್ಗೊಲೆಯ ಮೂರು ಪ್ರಕರಣಗಳು

ನೂರರ ನೋಟ: ಪ್ರಜಾಪ್ರಭುತ್ವದ ಕಗ್ಗೊಲೆಯ ಮೂರು ಪ್ರಕರಣಗಳು

- Advertisement -
- Advertisement -

ಮೋದಿ ಸರ್ಕಾರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯ ಕೆಲಸ ಅವ್ಯಾಹತವಾಗಿ ನಡೆಯುತ್ತಿದೆ. ಇದಕ್ಕೆ ಸಾಕ್ಷಿ (1) ಕಾಶ್ಮೀರಕ್ಕೆ ಇನ್ನೂ statehood ಕೊಡದೆ ಇರುವುದು (2) ದೆಹಲಿಯಲ್ಲಿ ಅಧಿಕಾರ ಚುನಾಯಿತ ಸರ್ಕಾರದ ಕೈಯಲ್ಲಿರುವುದನ್ನು ಸಹಿಸದೆ ಕೇಂದ್ರ ಸರ್ಕಾರದಿಂದ ನೇಮಕರಾದ ಚುನಾಯಿತರಲ್ಲದ ಲೆಫ್ಟಿನೆಂಟ್ ಗವರ್ನರ್‌ರಿಗೆ ಅಸಂವಿಧಾನ ರೀತ್ಯಾ ಚುನಾಯಿತ ಸರ್ಕಾರದ ಮೇಲೆ ದಬ್ಬಾಳಿಕೆ ನಡೆಸುವ ಶಾಸನ ಜಾರಿಗೆ ತಂದಿರುವುದು (3) ಪುದುಚೇರಿಯಲ್ಲಿ ಕಾಂಗ್ರೆಸ್ ಮತ್ತು ಡಿಎಂಕೆ ಜಂಟಿ ಸರ್ಕಾರ ಅನೇಕ ವರ್ಷಗಳಿಂದ ಆಡಳಿತ ನಡೆಸುತ್ತಿತ್ತು. ಬಿಜೆಪಿ ಕೇಂದ್ರ ಸರ್ಕಾರ ತಾನು ನೇಮಿಸಿದ ರಾಜ್ಯಪಾಲರ ಮೂಲಕ ಪುದುಚೇರಿ ಚುನಾಯಿತ ಸರ್ಕಾರವನ್ನು ಕಿತ್ತೆಸೆಯಲು ಅಸಂವಿಧಾನಕಾರಿ ಷಡ್ಯಂತ್ರಗಳನ್ನು ರಚಿಸಿ ಆ ಸರ್ಕಾರವನ್ನು ಕೆಳಗಿಳಿಸಿ ಗೌರ್‍ನರ್ ರೂಲ್ ಜಾರಿಗೆ ತಂದಿರುವುದು.

ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಅಧಿಕಾರವನ್ನು ಕಿತ್ತುಹಾಕಿ ಮೋದಿ ಸರ್ಕಾರ ಕಾಶ್ಮೀರವನ್ನು ಮೂರು ಪ್ರಾಂತ್ಯಗಳಾಗಿ ಒಡೆದು ಗೌರ್‍ನರ್ ಕೈಗೆ ಅಧಿಕಾರ ನೀಡಿ ಒಂದೆರಡು ವರ್ಷ ಕಳೆದರೂ, ಕಾಶ್ಮೀರಕ್ಕೆ ಇನ್ನೂ statehood ಕೊಟ್ಟಿಲ್ಲ. ಚುನಾವಣೆ ನಡೆಸಿಲ್ಲ. ಚುನಾಯಿತ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿಲ್ಲ. 13.2.2021ರಂದು ಕೇಂದ್ರ ಸರ್ಕಾರದ ಗೃಹಮಂತ್ರಿಗಳು ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪುನರ್ರಚನೆಯ ಮಸೂದೆ ಮಂಡಿಸಿದಾಗ ಗೃಹ ಸಚಿವ ಷಾ ಅವರು ಜಮ್ಮು ಕಾಶ್ಮೀರಕ್ಕೆ statehoodನ್ನು ಸರಿಯಾದ ಸಮಯದಲ್ಲಿ ನೀಡಲಾಗುವುದು ಎಂದು ಉತ್ತರಿಸಿದರು. ಅದರರ್ಥ ಸದ್ಯಕ್ಕಂತೂ statehood ಘೋಷಣೆ ಮಾಡುವುದಿಲ್ಲ ನಮಗೆ ಸಮಯ ಸರಿಯೆನಿಸಿದಾಗ statehood ದಯಪಾಲಿಸುವುದು ಎಂದು ಅರ್ಥೈಸಬೇಕಾದೀತು.

PC :The Federal News

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 371ನೆ ವಿಧಿಯನ್ನು ಮೋದಿ ಸರ್ಕಾರ ರದ್ದುಪಡಿಸಿದ ರೀತಿಯೇ ವಿಚಿತ್ರವಾಗಿತ್ತು. ಸರ್ಕಾರ ಈ ತಿದ್ದುಪಡಿ ತಂದು ಅದಕ್ಕೆ ರಾಷ್ಟ್ರಪತಿಯವರ ಸಹಿ ಹಾಕಿಸುವ ಮುನ್ನ ಪಾರ್ಲಿಮೆಂಟಿನ ಮುಂದೆ ಈ ಪ್ರಸ್ತಾಪ ಇಡಬೇಕಾಗಿತ್ತು. ಕಾಶ್ಮೀರದಲ್ಲಿ ಅಸ್ತಿತ್ವದಲ್ಲಿದ್ದ ಸರ್ಕಾರವನ್ನು ಆಯ್ಕೆಗೊಂಡ ಶಾಸನ ಸಭೆಯ ಸದಸ್ಯರನ್ನು ಈ ತಿದ್ದುಪಡಿಯ ಬಗೆಗೆ ಚರ್ಚೆ ಮಾಡಲು ಅವಕಾಶ ಕಲ್ಪಿಸಬೇಕಾಗಿತ್ತು. Referendum ಮುಖಾಂತರ ಜನರ ಸಮ್ಮತಿ ಪಡೆಯಬೇಕಾಗಿತ್ತು. ಈ ಮಾರ್ಗ ಬಿಟ್ಟು ಮೋದಿ ಸರ್ಕಾರ 50 ಸಾವಿರ ಸೈನಿಕರನ್ನು ಜಮ್ಮು ಕಾಶ್ಮೀರಕ್ಕೆ ಕಳಿಸಿ ಜನ ಬೆಚ್ಚಿ ಬೀಳುವಂತೆ ಮಾಡಿತು. ವಿವಿಧ ರಾಜಕೀಯ ಪಕ್ಷಗಳ ನಾಯಕರನ್ನು ಗೃಹಬಂಧನದಲ್ಲಿ ಇಡಲಾಯಿತು. ಸರ್ಕಾರದ ಧೋರಣೆಯನ್ನು ಪ್ರಶ್ನಿಸಿದ ಪತ್ರಿಕೆ ಸಂಪಾದಕರು, ಗೌರವಯುತ ನಾಗರಿಕರು ಇವರನ್ನೆಲ್ಲ ಬಂಧಿಸಲಾಯಿತು. ಕಾಶ್ಮೀರದಲ್ಲಿ ಏನು ನಡೆಯುತ್ತಿದೆ ಎಂಬುದು ಭಾರತದ ಇತರ ಪ್ರಾಂತ್ಯದವರಿಗೆ, ವಿಶ್ವಕ್ಕೆ ತಿಳಿಯದಂತೆ ಮಾಡಲು ಎಲ್ಲ ಸುದ್ದಿವಾಹಕ ಯಂತ್ರಸಾಧನಗಳನ್ನು ಸ್ಥಗಿತಗೊಳಿಸಲಾಯಿತು. ಭಾರತದ ಅವಿಭಾಜ್ಯ ಅಂಗವಾಗಿರುವ ಒಂದು ರಾಜ್ಯವನ್ನು ಈ ರೀತಿ ನಡೆಸಿಕೊಂಡಿದ್ದು ಪ್ರಜಾಪ್ರಭುತ್ವದ ಕಗ್ಗೊಲೆಯಲ್ಲವೇ?

ಎರಡು ವರ್ಷಗಳೆ ಕಳೆದು ಹೋಗಿದ್ದರೂ ಇನ್ನೂ ಜಮ್ಮು ಕಾಶ್ಮೀರ ರಾಜ್ಯಕ್ಕೆ ಸ್ವಾಯತ್ತತೆ ನೀಡದಿರುವುದು statehood ನೀಡದಿರುವುದು ಪ್ರಜಾಪ್ರಭುತ್ವದ ಬೆನ್ನಲುಬನ್ನೇ ಮುರಿಯುವ ಒಂದು ಹುನ್ನಾರ.

ಎರಡನೆಯ ಪ್ರಜಾಪ್ರಭುತ್ವದಕಗ್ಗೊಲೆಯ ಕೆಲಸ ನಡೆಸಿರುವುದು ರಾಜಧಾನಿ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲರ ಸರ್ಕಾರ ಅಧಿಕ ಬಹುಮತದಿಂದ ಅಧಿಕಾರಕ್ಕೆ ಬಂದಿತ್ತು. ಈ ಸರ್ಕಾರದ ಅಧಿಕಾರವನ್ನು ಮೊಟಕುಗೊಳಿಸಲು ಮೋದಿ ಸರ್ಕಾರ ಮೊದಲಿನಿಂದಲೂ ಹವಣಿಸುತ್ತಿತ್ತು. ಕೇಂದ್ರ ಸರ್ಕಾರದಿಂದ ನೇಮಕಗೊಂಡಿರುವ ಲೆಫ್ಟಿನೆಂಟ್ ಗವರ್ನರ್‌ಗೂ, ಮುಖ್ಯಮಂತ್ರಿ ಕೇಜ್ರಿವಾಲರಿಗೂ ಈ ವಿಷಯದಲ್ಲಿ ದೊಡ್ಡ ಹೋರಾಟವೇ ನಡೆದುಹೋಯಿತು. ಮುಖ್ಯಮಂತ್ರಿ ಕೇಜ್ರಿವಾಲ್‌ರವರು ಲೆಫ್ಟಿನೆಂಟ್ ಗವರ್ನರ್ ಕಚೇರಿಯ ಮುಂದೆ ಅನೇಕ ದಿನಗಳವೆರೆಗೆ ಪ್ರತಿಭಟನೆ ಮಾಡಿದರು. ಸರ್ವೋಚ್ಚ ನ್ಯಾಯಾಲಯ ಮಧ್ಯೆ ಪ್ರವೇಶಿಸಬೇಕಾಗಿ ಬಂದು, ಲೆಫ್ಟಿನೆಂಟ್ ಗವರ್ನರ್‌ರು ದೆಹಲಿ ಸರ್ಕಾರದ ಕಾರ್ಯನಿರ್ವಹಣೆಯಲ್ಲಿ ಪದೇ ಪದೇ ತಲೆ ಹಾಕದ ಹಾಗೆ ತಾಕೀತು ಮಾಡಿತು.

ಇತ್ತೀಚೆಗೆ ಮೋದಿ ಸರ್ಕಾರ ಮತ್ತೆ ದೆಹಲಿಯ ಸರ್ಕಾರದ ಆಡಳಿತದಲ್ಲಿ ಲೆಫ್ಟಿನೆಂಟ್ ಗವರ್ನರ್ ತಲೆ ಹಾಕಲು ಅಧಿಕಾರ ನೀಡಿ, ಎರಡನೇ ಬಾರಿಗೆ ಹೆಚ್ಚು ಬಹುಮತದಿಂದ ಆಯ್ಕೆಯಾಗಿ ಬಂದಿರುವ ಕೇಜ್ರಿವಾಲ್ ಸರ್ಕಾರಕ್ಕೆ ತೊಡರುಗಾಲು ಹಾಕಲು ಅವಕಾಶ ಮಾಡಿಕೊಡುವ ಅವೈಜ್ಞಾನಿಕ ಕಾಯ್ದೆಗಳನ್ನು ರೂಪಿಸಿದ್ದಾರೆ. ಸರ್ಕಾರದ ಮಂತ್ರಿಮಂಡಲವಾಗಲಿ, ಮಂತ್ರಿಗಳೇ ಆಗಲಿ ಯಾವುದೇ ತೀರ್ಮಾನ ಮಾಡುವ ಮೊದಲು ಲೆಫ್ಟಿನೆಂಟ್ ಗವರ್ನರ್‌ರೊಡನೆ ಸಮಾಲೋಚನೆ ನಡೆಸಿ ಒಪ್ಪಿಗೆ ಪಡೆಯಬೇಕು ಎಂಬ ಬರ್ಬರ ಕಾನೂನು ರಚಿಸಲಾಗಿದೆ. ಪ್ರಜೆಗಳ ಭವಿಷ್ಯವನ್ನು ನಿರ್ಧರಿಸುವವರು ಚುನಾಯಿತ ಪ್ರತಿನಿಧಿಗಳಾಗಿರಬೇಕೇ ಹೊರತು ಕೇಂದ್ರ ಸರ್ಕಾರದಿಂದ ನೇಮಕಗೊಂಡ ಲೆಫ್ಟಿನೆಂಟ್ ಗವರ್ನರ್ ಅಲ್ಲ. ಇದೇ ರೀತಿಯ ಅನೇಕ ಪ್ರತಿಬಂಧಕಗಳನ್ನು ಹಾಕಿ ಚುನಾಯಿತ ಪ್ರತಿನಿಧಿಗಳ ಅಭಿಪ್ರಾಯಗಳಿಗಿಂತ ಮೋದಿ ಸರ್ಕಾರದ ಆಯ್ಕೆಯ ಲೆಫ್ಟಿನೆಂಟ್ ಗವರ್ನರ್ ಅಭಿಪ್ರಾಯಗಳಿಗೇ ದೆಹಲಿ ಸರ್ಕಾರ ಮಾನ್ಯತೆ ಕೊಡಬೇಕೆಂದರೆ ಇದು ಪ್ರಜಾಸತ್ತೆಯ ಅವಹೇಳನವಲ್ಲದೇ ಬೇರೇನೂ ಅಲ್ಲ.

ಮತ್ತೆ ದೆಹಲಿ ಸರ್ಕಾರ ತನ್ನ ಸ್ವಾಯತ್ತತೆಯನ್ನು ಉಳಿಸಿಕೊಳ್ಳಲು ಲೆಫ್ಟಿನೆಂಟ್ ಗವರ್ನರ್ ಮತ್ತು ಮೋದಿ ಸರ್ಕಾರದ ವಿರುದ್ಧ ಕಾನೂನು ಸಮರ ಆರಂಭಿಸುವುದು ಅನಿವಾರ್ಯವೆನಿಸಿದೆ.

ಮೂರನೆಯದು ಪುದುಚೇರಿಯ ರಾಜಕೀಯದಲ್ಲಿ ಬಿಜೆಪಿ ಸರ್ಕಾರದಿಂದ ನೇಮಕರಾದ ರಾಜ್ಯಪಾಲರ ಹಸ್ತಕ್ಷೇಪ.

ಹಲವು ವರ್ಷಗಳ ಕಾಲ ರಾಜ್ಯಪಾಲರಾಗಿದ್ದ ಕಿರಣ ಬೇಡಿಯವರು ಅಧಿಕಾರ ವಹಿಸಿಕೊಂಡ ದಿನದಿಂದಲೂ ಕಾಂಗ್ರೆಸ್ ಡಿಎಂಕೆ ಮೈತ್ರಿ ಸರ್ಕಾರದ ವಿರುದ್ಧ ಸಮರ ಸಾರಿದರು. ಈ ಮೈತ್ರಿ ಸರ್ಕಾರದ ಅಧಿಕಾರಗಳನ್ನು ನೇರವಾಗಿ ಸಂಪರ್ಕಿಸುವ ಕೆಟ್ಟ ಸಂಪ್ರದಾಯವನ್ನು ಹುಟ್ಟುಹಾಕಿದರು. ಮುಖ್ಯಮಂತ್ರಿಗಳ ವಿರುದ್ಧ ಸಮರ ಸಾರಿದರು. ಪಕ್ಷದ ಸದಸ್ಯರ ಬಲವನ್ನು ಕುಗ್ಗಿಸಿ ಸರ್ಕಾರ ಬೀಳುವಂತೆ ಮಾಡಲು ಪ್ರಯತ್ನಿಸಿದರು. ಡಿಪಾಸಿಟ್ ಕಳೆದುಕೊಂಡು ಹೀನಾಯವಾಗಿ ಸೋತಿದ್ದ ಬಿಜೆಪಿಯ ಮೂವರನ್ನು ರಾಜ್ಯಪಾಲರು ನಾಮಕರಣ ಸದಸ್ಯರನ್ನಾಗಿ ಶಾಸನಸಭೆಗೆ ನೇಮಿಸಿದರು. ಅವಿಶ್ವಾಸ ನಿರ್ಣಯ ತರುವ ಮೂಲಕ ಶಾಸನಸಭೆಯಲ್ಲಿ ಬಹುಮತ ಕಳೆದುಕೊಳ್ಳುವಂತೆ ಮಾಡಿದರು. ಕೇಂದ್ರ ಸರ್ಕಾರ ಇದ್ದ ರಾಜ್ಯಪಾಲರನ್ನು ಕಿತ್ತುಹಾಕಿ ಗೌರ್‍ನರ್ ರೂಲ್‌ಅನ್ನು ಹೇರಿ ಹೊಸ ಗೌರ್‍ನರ್‌ಅನ್ನು ನೇಮಿಸಿತು. ಈ ರೀತಿಯಲ್ಲಿ ಮೋದಿ ಸರ್ಕಾರ ಅಧಿಕಾರದಲ್ಲಿದ್ದ ಕಾಂಗ್ರೆಸ್, ಡಿಎಂಕೆ ಸಂಯುಕ್ತ ಸರ್ಕಾರದ ಪತನಕ್ಕೆ ಸಂಚುಹೂಡಿ ಅದರಲ್ಲಿಯೂ ಫಲಾನುಭವಿಗಳಾದರು.

ಕೇಂದ್ರ ಸರ್ಕಾರ ಧೋರಣೆ ಏನು ಎಂಬುದನ್ನು ಪುದುಚೇರಿ ಪ್ರಕರಣದಿಂದ ನಾವು ತಿಳಿಯಬಹುದು. ತನ್ನ ವಿರೋಧ ಪಕ್ಷ ಸುಭದ್ರವಾಗಿ ಸರ್ಕಾರ ನಡೆಸುತ್ತಿದ್ದ ರಾಜ್ಯದಲ್ಲಿ, ಆ ಪಕ್ಷದ ಶಾಸಕರಲ್ಲಿ ಒಡಕುಉಂಟು ಮಾಡಿ, ಆ ಸರ್ಕಾರವನ್ನು ಅವಿಶ್ವಾಸ ನಿರ್ಣಯದ ಮೂಲಕ ಉರುಳಿಸಿ, ವಜಾಮಾಡಿ ಗೌರ್‍ನರ್ ರೂಲ್ ಎಂಬ ಹಿಂಬಾಗಿಲಿನ ಮೂಲಕ ತೆಕ್ಕೆಗೆ ತೆಗೆದುಕೊಂಡು, ಮುಂದೆ ಬಿಜೆಪಿ ಸರ್ಕಾರವನ್ನು ಅಸ್ತಿತ್ವಕ್ಕೆ ತರುವುದು ಮೋದಿ ಸರ್ಕಾರದ ನೀತಿಯಾಗಿದೆ.

ಬೇರೆ ಪಕ್ಷಗಳ ಹಿಡಿತದಲ್ಲಿರುವ ರಾಜ್ಯಗಳನ್ನು ಬಿಜೆಪಿ ರಾಜ್ಯವನ್ನಾಗಿ ಪರಿವರ್ತಿಸಲು ಸಂಚು ಮಾಡುವುದರಲ್ಲಿ ಮೋದಿ ಸರ್ಕಾರ ಎತ್ತಿದ ಕೈ. ಈ ಪ್ರವೃತ್ತಿಯನ್ನು ತಡೆಗಟ್ಟಲು ಎಲ್ಲ ರಾಜಕೀಯ ಪಕ್ಷಗಳೂ ಒಗ್ಗೂಡಿ ಹೋರಾಟ ನಡೆಸಬೇಕು. ಪ್ರಜಾಪ್ರಭುತ್ವದಲ್ಲಿ ನಂಬಿಕೆಯುಳ್ಳ ಎಲ್ಲರೂ ಈ ಹೋರಾಟದಲ್ಲಿ ಕೂಡಿಕೊಳ್ಳಬೇಕು.


ಇದನ್ನೂ ಓದಿ: ಎನ್‌ಸಿಟಿ ದೆಹಲಿ ತಿದ್ದುಪಡಿ ಬಿಲ್: ಬೇರೆ ರಾಜ್ಯಗಳ ಬಾಗಿಲಿಗೂ ಕೇಂದ್ರೀಕರಣದ ಭೂತ ವಕ್ಕರಿಸುವ ಮುನ್ಸೂಚನೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...