Homeಮುಖಪುಟಪ.ಬಂಗಾಳದ 15 ಕಡೆ ಕಚ್ಚಾ ಬಾಂಬ್ ಸ್ಫೋಟ, ಮಗು ಸೇರಿ ಮೂವರ ಸ್ಥಿತಿ ಗಂಭೀರ

ಪ.ಬಂಗಾಳದ 15 ಕಡೆ ಕಚ್ಚಾ ಬಾಂಬ್ ಸ್ಫೋಟ, ಮಗು ಸೇರಿ ಮೂವರ ಸ್ಥಿತಿ ಗಂಭೀರ

- Advertisement -
- Advertisement -

ಪಶ್ಚಿಮ ಬಂಗಾಳದ ಉತ್ತರ 24 ಪರಗಣಗಳ ಭಟ್ಪಾರಾದ ಜಗತ್‌ದಾಲ್ ಪ್ರದೇಶದಲ್ಲಿ ಬುಧವಾರ ತಡರಾತ್ರಿ ಕಚ್ಚಾ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಮಗು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯು ಜಗತ್‌ದಾಲ್‌ನ ಗಾಲಿ ನಂ. 17ರಲ್ಲಿ ನಡೆದಿದ್ದು, ಈ ಸ್ಥಳವು ಬರಾಕ್‌ಪುರ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಅವರ ನಿವಾಸಕ್ಕೆ ಹತ್ತಿರದಲ್ಲಿದೆ. ಹೀಗಾಗಿ ತೃಣಮೂಲ ಕಾಂಗ್ರೆಸ್ ಗೂಂಡಾಗಳು ತಮ್ಮ ಕಚೇರಿ-ನಿವಾಸ ‘ಮಜ್ದೂರ್ ಭವನ್’ ಬಳಿ ಒಂದು ಡಜನ್‌ಗಿಂತಲೂ ಅಧಿಕ ಬಾಂಬ್‌ಗಳನ್ನು ಎಸೆದಿದ್ದಾರೆ ಎಂದು ಸಿಂಗ್ ಆರೋಪಿಸಿದ್ದಾರೆ.

ಪೊಲೀಸರ ಪ್ರಕಾರ, ಕೆಲವು ಅಪರಿಚಿತ ವ್ಯಕ್ತಿಗಳು ಗಾಲಿ ನಂ. 17ರಲ್ಲಿ ಕಚ್ಚಾ ಬಾಂಬ್‌ಗ‌ಳನ್ನು ಎಸೆದಿದ್ದಾರೆ. ಇದು ಭಟ್ಪರಾ ಪುರಸಭೆಯ 18ನೇ ವಾರ್ಡ್‌ನ ವ್ಯಾಪ್ತಿಗೆ ಬರುತ್ತದೆ. ನಗರದ 15 ಸ್ಥಳಗಳಲ್ಲಿ ಬಾಂಬ್‌ಗಳನ್ನು ಎಸೆಯಲಾಗಿದೆ. ಈ ಆರೋಪಿಗಳು ವಿವಿಧ ಸ್ಥಳಗಳಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಸಹ ಮುರಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಪುದುಚೇರಿ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಮಾಜಿ ಸಿಎಂ ನಾರಾಯಣಸಾಮಿ ಹೆಸರಿಲ್ಲ

ಘಟನಾ ಸ್ಥಳಕ್ಕೆ ಜಗತ್‌ದಾಲ್ ಪೊಲೀಸರು ಸ್ಥಳಕ್ಕೆ ಆಗಮಿಸಿದರೂ ಕೋಪಗೊಂಡ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಸ್ಥಳದಲ್ಲಿಯೇ ಇರುವಾಗಲೂ ಕಿಡಿಗೇಡಿಗಳು ಒಂದು ಬಾಂಬ್ ಎಸೆದಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಮಗು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ ಎಂದು ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಎಪಿ ಚೌಧರಿ ಮಾಹಿತಿ ನೀಡಿದ್ದಾರೆ.

 

“ಅಪರಾಧಿಗಳು ಶಸ್ತ್ರಾಸ್ತ್ರಗಳೊಂದಿಗೆ ತಿರುಗಾಡುತ್ತಿದ್ದಾರೆ ಎಂದು ನಾವು ಪೊಲೀಸರಿಗೆ ಮಾಹಿತಿ ನೀಡುತ್ತಿದ್ದೇವೆ. ಆದರೂ ಪೊಲೀಸರು ಏನೂ ಮಾಡುತ್ತಿಲ್ಲ. ಸುಮಾರು 15 ಸ್ಥಳಗಳಲ್ಲಿ ಬಾಂಬ್‌ಗಳನ್ನು ಎಸೆಯಲಾಗಿದೆ. ಪೊಲೀಸರು ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು, ಮೂರು ಮಂದಿ ಮತ್ತು ಅವರ ಸಹಚರರು ಮುರಿದಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ, ನಾವು ಚುನಾವಣಾ ಆಯೋಗಕ್ಕೂ ದೂರು ನೀಡುತ್ತೇವೆ “ಎಂದು ಅರ್ಜುನ್ ಸಿಂಗ್ ಹೇಳಿದ್ದಾರೆ.

ದಾಳಿಯ ಬಗ್ಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಬಂಗಾಳ ಬಿಜೆಪಿ ಮುಖಂಡ ಮುಕುಲ್ ರಾಯ್ ಮತ್ತು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಹೇಳಿದ್ದಾರೆ.

ಆದರೆ, ಕಚ್ಚಾ ಬಾಂಬ್ ಸ್ಫೋಟದಲ್ಲಿ ಯಾರು ಭಾಗಿಯಾಗಿದ್ದಾರೆ ಮತ್ತು ದಾಳಿಯ ಹಿಂದಿನ ಉದ್ದೇಶವೂ ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ 294 ಸದಸ್ಯರ ರಾಜ್ಯ ವಿಧಾನಸಭೆಗೆ ಮಾರ್ಚ್ 27 ರಿಂದ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೇ 2 ರಂದು ಮತ ಎಣಿಕೆ ನಡೆಯಲಿದೆ.


ಇದನ್ನೂ ಓದಿ: ಲಾಭವನ್ನು ಖಾಸಗೀಕರಿಸಿ, ನಷ್ಟವನ್ನು ರಾಷ್ಟ್ರೀಕರಣ ಮಾಡಲಾಗುತ್ತಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...