ಇಂಫಾಲ್ ಪೂರ್ವ ಜಿಲ್ಲೆಯ ಮತದಾನ ಕೇಂದ್ರದ ಬಳಿ ಗುಂಡಿನ ದಾಳಿ ನಡೆಸಿದ ಮೂವರನ್ನು ಮಣಿಪುರ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಬಂಧಿತ ಮೂವರು ವ್ಯಕ್ತಿಗಳು ಶುಕ್ರವಾರ ಇಂಫಾಲ್ ಪೂರ್ವ ಜಿಲ್ಲೆಯ ಮೊಯಿರಂಗ್ಯಾಂಪು ಸಾಜೆಬ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದು, ಘಟನೆಯಲ್ಲಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
The Desperate Bigots will try everything.. But its YOU ..who can stop them .. its YOU .. who can bring the Change . Vote to #SaveDemocracySaveIndia #justasking pic.twitter.com/byMoqS0weF
— Prakash Raj (@prakashraaj) April 20, 2024
ಗುಂಡಿನ ಘಟನೆಯ ನಂತರ ಮೂವರು ದುಷ್ಕರ್ಮಿಗಳು ವಾಹನದ ಮೂಲಕ ಸ್ಥಳದಿಂದ ಪರಾರಿಯಾಗಿದ್ದರು. ಶುಕ್ರವಾರ ಸಂಜೆ ಘಟನಾ ಸ್ಥಳದಿಂದ 5 ಕಿಮೀ ದೂರದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಆರೋಪಿಗಳ ಬಳಿಯಿದ್ದ ಒಂದು 0.32 ಪಿಸ್ತೂಲ್, ಮದ್ದುಗುಂಡುಗಳು ಹಾಗೂ 15 ಲಕ್ಷ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಣಿಪುರದಲ್ಲಿ ನಿನ್ನೆ ಮತದಾನದ ವೇಳೆ, ಶಸ್ತ್ರಸಜ್ಜಿತ ಗುಂಪು ಮತದಾರರನ್ನು ತಮ್ಮ ಮನೆಗಳಿಂದ ಹೊರಗೆ ಬರದಂತೆ ಬೆದರಿಕೆ ಹಾಕುವುದು, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು (ಇವಿಎಂ) ಹಾನಿಗೊಳಿಸಿರುವ ನಾಲ್ಕು ಘಟನೆಗಳು, ಸಶಸ್ತ್ರ ಗುಂಪಿನಿಂದ ನಕಲಿ ಮತದಾನದ ಆರೋಪಗಳು ಮತ್ತು ಒಂದು ಗುಂಡಿನ ದಾಳಿಯ ಘಟನೆ ವರದಿಯಾಗಿದೆ.
ಇಂಫಾಲ್ ಪಶ್ಚಿಮದ ಖೈಡೆಮ್ನಲ್ಲಿರುವ ಮತಗಟ್ಟೆಯ ಬಳಿ ಸುಮಾರು 100 ಜನರ ಪರವಾಗಿ ಸಶಸ್ತ್ರ ಗುಂಪೊಂದು ನಕಲಿ ಮತ ಚಲಾಯಿಸಿದೆ ಎಂಬ ಆರೋಪ ಕೇಳಿ ಬಂದಿದೆ. ಇದೇ ಗುಂಪು ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ಒಡೆದು ಹಾಕಿವೆ ಎಂದು ವರದಿಯಾಗಿದೆ.
ಇಂಫಾಲ್ ಪೂರ್ವ ಜಿಲ್ಲೆಯ ಮೊಯಿರಂಗ್ಯಾಂಪು ಸಾಜೆಬ್ನಲ್ಲಿ ನಡೆದ ಗುಂಡಿನ ದಾಳಿಯ 25 ಸೆಕೆಂಡ್ಗಳ ವಿಡಿಯೋ ನಿನ್ನೆ ವೈರಲ್ ಆಗಿತ್ತು. ಈ ವಿಡಿಯೋ ಹಂಚಿಕೊಂಡಿದ್ದ ಎಕ್ಸ್ ಬಳಕೆದಾರರು “ಇಂಫಾಲದಲ್ಲಿ ಅಮಿತ್ ಶಾ ಚುನಾವಣಾ ಪ್ರಚಾರದ ಪರಿಣಾಮ; ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಎಲ್ಲಿದೆ? ಅರಂಬಾಯಿ ತೆಂಗೋಲ್ ಭಾರತೀಯ ಸಂವಿಧಾನದ ಕಾನೂನಿಗೆ ಮೇಲಿದೆಯೇ? ಎಂದು ಬರೆದುಕೊಂಡಿದ್ದರು.
ಇದನ್ನೂ ಓದಿ : ಪ್ರತ್ಯೇಕ ರಾಜ್ಯದ ಬೇಡಿಕೆ: ನಾಗಾಲ್ಯಾಂಡ್ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ