Homeನಿಜವೋ ಸುಳ್ಳೋಸಾವರ್ಕರ್‌ & ದಲಿತರು ಕುರಿತಂತೆ ಪೋಸ್ಟ್‌ ಕಾರ್ಡ್ ಹರಡಿದ ಮೂರು ಸುಳ್ಳುಗಳು & ವಾಸ್ತವಗಳು

ಸಾವರ್ಕರ್‌ & ದಲಿತರು ಕುರಿತಂತೆ ಪೋಸ್ಟ್‌ ಕಾರ್ಡ್ ಹರಡಿದ ಮೂರು ಸುಳ್ಳುಗಳು & ವಾಸ್ತವಗಳು

ಸಾವರ್ಕರ್‌ ಅವರ ವಿಚಾರ ಕರ್ನಾಟಕದಲ್ಲಿ ಚರ್ಚೆಗೆ ಬರುತ್ತಿದ್ದಂತೆ, ಈಗಾಗಲೇ ಹಲವಾರು ಸಾರಿ ಸುಳ್ಳು ಸುದ್ದಿಗಳನ್ನು ಪ್ರಕಟಿಸಿದ ಆರೋಪಕ್ಕೊಳಗಾಗಿರುವ ಪೋಸ್ಟ್‌ ಕಾರ್ಡ್‌ ನವರಿಂದ ಸಾವರ್ಕರ್‌ ಅವರು ದಲಿತರ ಪರ ಕೆಲಸ ಮಾಡಿದ್ದರು ಎಂದು ಪ್ರಕಟವಾಗಿದೆ. ಆ ಕುರಿತು ಫ್ಯಾಕ್ಟ್‌ ಚೆಕ್‌

- Advertisement -
- Advertisement -

ಮೇ 28 ವಿ.ಡಿ.ಸಾವರ್ಕರ್‌ ಜನ್ಮದಿನ. ಅದಕ್ಕೂ ಮೊದಲು ಮೇ 27ರಂದು ಕರ್ನಾಟಕ ಸರ್ಕಾರವು ಬೆಂಗಳೂರಿನ ಯಲಹಂಕದ ಮೇಲ್ಸೇತುವೆ ಸಾವರ್ಕರ್‌ ಹೆಸರಿಡಲು ತೀರ್ಮಾನಿಸಿತು. ಈ ಕುರಿತು ಸಾಕಷ್ಟು ವಿರೋಧಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಆ ಮೇಲ್ಸೇತುವೆ ಉದ್ಘಾಟನಾ ಕಾರ್ಯಕ್ರಮವನ್ನೇ ಮುಂದೂಡಿತು.

ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಗತಿಪರ ಮತ್ತು ಕನ್ನಡಪರ ಸಂಘಟನೆಗಳು ಮೇಲ್ಸೇತುವೆಗೆ ಸಾವರ್ಕರ್‌ ಹೆಸರಿಡುವುದಕ್ಕೆ ವ್ಯಾಪಕ ಆಕ್ಷೇಪ ವ್ಯಕ್ತಪಡಿಸಿದ್ದರು. ಬಿಜೆಪಿ ಪಕ್ಷ, ಸಚಿವ ಸಿ.ಟಿ.ರವಿ, ಸುರೇಶ್‌ ಕುಮಾರ್‌ ಸೇರಿದಂತೆ ಮುಂತಾದವರು ಸಾವರ್ಕರ್‌ ಹೆಸರಿಡುವುದನ್ನು ಸ್ವಾಗತಿಸಿ ವಾದ ಮಂಡಿಸಿದ್ದರು.

ಇಂತಹ ಸಂದರ್ಭದಲ್ಲಿ ಪೋಸ್ಟ್‌ ಕಾರ್ಡ್‌ ಕನ್ನಡ ಎನ್ನುವ ಬಲಪಂಥೀಯ ವಿಚಾರವುಳ್ಳ ಫೇಸ್‌ಬುಕ್‌ ಪುಟದಲ್ಲಿ ಸಾವರ್ಕರ್‌ ದಲಿತಪ್ರೇಮಿ ಎನ್ನುವ ಪೋಸ್ಟ್‌ ಒಂದನ್ನು ಹಾಕಲಾಯಿತು.

Posted by Postcard ಕನ್ನಡ on Wednesday, May 27, 2020

 

“ಅದರಲ್ಲಿ ವೀರ ಸಾವರ್ಕರ್‌ ದಲಿತರನ್ನೂ ಒಳಗೊಂಡಂತೆ ಸಮಾಜದ ಎಲ್ಲ ವರ್ಗ, ಪಂಥ, ಜಾತಿಯವರಿಗೂ ಮುಕ್ತವಾಗಿರುವ ಪತಿತಪಾವನ ದೇವಸ್ಥಾನ ಕಟ್ಟಿದರು. ಅಸ್ಪೃಶ್ಯರನ್ನು ಒಳಗೊಂಡು ಸಾರ್ವಜನಿಕ ಗಣೇಶೋತ್ಸವ ಪ್ರಾರಂಭಿಸಿದರು. ಸಂಪೂರ್ಣವಾಗಿ ದಲಿತರಿಂದಲೇ ನಡೆಯುವ ಹೊಟೇಲನ್ನು ಮೊಟ್ಟಮೊದಲ ಬಾರಿಗೆ ತೆರೆದರು. ಆದರು ಕಾಂಗ್ರೆಸ್‌ ಸಾವರ್ಕರ್‌ರನ್ನು ವಿರೋಧಿಸುತ್ತದೆ ಎಂದರೆ, ಕಾಂಗ್ರೆಸ್‌ ದಲಿತರ ಪರವೋ ವಿರುದ್ಧವೋ ನೀವೇ ನಿರ್ಧರಿಸಿ” ಎಂದು ಬರೆಯಲಾಗಿತ್ತು.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಫ್ಯಾಕ್ಟ್‌ಚೆಕ್‌ ನಡೆಸಲಾಯಿತು.

ಸಾರ್ವಜನಿಕ ಗಣೇಶೋತ್ಸವ

1905ರಲ್ಲಿ ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ಪ್ರಾರಂಭ ಮಾಡಿದ್ದು ಬಾಲ ಗಂಗಾಧರ ತಿಲಕರು. ಅದರಲ್ಲಿ ದಲಿತರು ಭಾಗವಹಿಸಬಹುದಾಗಿತ್ತೇ? ಅದೇ ಮಹಾರಾಷ್ಟ್ರದ ನಾಸಿಕ್‌ನ ಕಾಳಾರಾಮ್ ದೇವಸ್ಥಾನದ ಪ್ರವೇಶಕ್ಕಾಗಿ 1930ರಲ್ಲಿ ಅಂಬೇಡ್ಕರ್ ಸತ್ಯಾಗ್ರಹ ನಡೆಸಿದಾಗ ಏನಾಯಿತೆಂಬುದು ಗೊತ್ತಿರುವ ವಿಷಯವೇ ಅಲ್ಲವೇ? ಅಂಬೇಡ್ಕರ್‌ ಸೇರಿದಂತೆ ಬಹಳಷ್ಟು ದಲಿತರ ಮೇಲೆ ಸವರ್ಣಿಯರು ದಾಳಿ ಮಾಡಿದ್ದರು. ಹೀಗಿರುವಾಗ ಗಣೇಶೋತ್ಸವಗಳಲ್ಲಿ ದಲಿತರು ಭಾಗವಹಿಸುತ್ತಿದ್ದರೆಂಬುದು ಹಸಿಸುಳ್ಳು….

ಪತಿತಪಾವನ ದೇವಾಲಯ

ಪೋಸ್ಟ್‌ ಕಾರ್ಡ್‌ ಈ ದೇವಾಲಯವನ್ನು ಯಾವ ಊರಿನಲ್ಲಿ, ಯಾವಾಗ ಕಟ್ಟಿಸಿದರು ಎಂಬುದನ್ನು ಉಲ್ಲೇಖಸಿಲ್ಲ.  ಈ ಹಿಂದೂ ದೇವಾಲಯವನ್ನು ಶ್ರೀಮನ್ ಭಗೋಜಿಶೆತ್ ಕೀರ್ ಎಂಬುವವರು 1931ರಲ್ಲಿ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಕಟ್ಟಿಸಿದರೆಂದು ವಿಕಿಪಿಡೀಯ ಸೇರಿದಂತೆ ಎಲ್ಲಾ ಕಡೆ ಹೇಳಲಾಗುತ್ತದೆ.

ಈ ಕುರಿತು www.patitpavanmandir.org ನಲ್ಲಿ ಒಂದು ಲೇಖನ ಮಾತ್ರ ಲಭ್ಯವಿದೆ. ಅದರಲ್ಲಿ ಅಂಬೇಡ್ಕರ್‌ರವರ ದೇವಸ್ಥಾನ ಪ್ರವೇಶ ಹೋರಾಟಗಳಿಗೆ ಸಾವರ್ಕರ್‌ ಬೆಂಬಲ ನೀಡಿದ್ದರು ಎಂದೆಲ್ಲಾ ಸುಳ್ಳುಗಳನ್ನು ಬರೆಯಲಾಗಿದೆ. ಈ ಮೊದಲೇ ಹೇಳುವಂತೆ ದಲಿತರಿಗಾಗಿಯೇ ದೇವಸ್ಥಾನ ಕಟ್ಟಿಸುವ ಕಾಲವಿದ್ದರೆ ಕಾಳಾರಾಮ್ ದೇವಸ್ಥಾನದ ಪ್ರವೇಶಕ್ಕಾಗಿ ಅಂಬೇಡ್ಕರ್‌ ಮತ್ತು ದಲಿತರ ಮೇಲೆ ಹಲ್ಲೆ ನಡೆಸಿದ್ದು ಏಕೆ?

ದಲಿತರಿಂದಲೇ ನಡೆಯುವ ಹೋಟೆಲ್‌

‌ಅಂಬೇಡ್ಕರ್, ತಿಲಕ್ ಮತ್ತು ಸಾವರ್ಕರ್ – ಈ ಮೂರೂ ಜನರ ಜೀವನ ಚರಿತ್ರೆ ಯನ್ನು ಬರೆದದ್ದು ಧನಂಜಯ್ ಕೀರ್. ಆ ಮೂವರ ಬದುಕಿನ ಮಾಹಿತಿಗಳ ಬಗ್ಗೆ ಕೀರ್ ಬರಹವನ್ನೇ ಮೂಲ ಆಕರವನ್ನಾಗಿ ಎಲ್ಲೆಡೆ ಬಳಸಿಕೊಳ್ಳಲಾಗುತ್ತದೆ. ಅದರಲ್ಲೆಲ್ಲೂ ಸಾವರ್ಕರರು ’ಸಂಪೂರ್ಣವಾಗಿ ದಲಿತರೇ ನಡೆಸುವ ಹೋಟೆಲ್ ಇರಲಿ, ಬ್ರಾಹ್ಮಣರ ಹೋಟೆಲ್ ಪ್ರಾರಂಭಿಸಿದ” ಪ್ರಸಂಗವಿಲ್ಲ… ವಾಸ್ತವವಾಗಿ ಇಂಥಾ ರಚನಾತ್ಮಕ ಕೆಲಸಗಳನ್ನು ಸಂಘಟನಾತ್ಮಕವಾಗಿಯೋ, ವೈಯಕ್ತಿಕವಾಗಿಯೋ ಹಿಂದೂ ಮಹಾ ಸಭಾ ಕೈಗೆತ್ತಿಕೊಂಡು ಸಮಯ ಹಾಳುಮಾಡುವುದನ್ನು ಅವರು ವಿರೋಧಿಸುತ್ತಿದ್ದರು..

ಈ ಕುರಿತು ಸಾವರ್ಕರ್‌‌ರವರ ಬದುಕು ಬರಹಗಳ ಬಗ್ಗೆ ಅಧ್ಯಯನ ಮಾಡಿರುವ ಕನ್ನಡದ ಚಿಂತಕರಾದ ಶಿವಸುಂದರ್‌ರವರು “ಒಂದೂ ಬಲವಾದ ಹಿಂದೂ ಸಮಾಜ ಕಟ್ಟಲೋಸುಗ ದಲಿತರನ್ನು ಒಳಗೊಳ್ಳಬೇಕೆಂದು ಸಾವರ್ಕರ್‌ ಪ್ರತಿಪಾದಿಸುತ್ತಿದ್ದರು…. ಅದಕ್ಕಾಗಿ ಜಾತಿ ವ್ಯವಸ್ಥೆಯನ್ನೂ ಆಗಾಗ ಟೀಕಿಸುತ್ತಿದ್ದರು… ಆದರೆ ಹಿಂದೂ ಮಹಾ ಸಭಾದ ಒಳಗಡೆ ಎಂದಿಗೂ ಒಬ್ಬ ದಲಿತನನ್ನು ಒಳಗೊಳ್ಳಲಿಲ್ಲ. ಒಂದು ಅಂತರ್ಜಾತಿ ಮದುವೆಗೂ ಪ್ರೋತ್ಸಾಹ ಕೊಡಲಿಲ್ಲ” ಎಂದು ಹೇಳುತ್ತಾರೆ.

ಒಟ್ಟಾರೆಯಾಗಿ ಕಾಂಗ್ರೆಸ್‌ ಅನ್ನು ಟೀಕಿಸುವ ಭರದಲ್ಲಿ ಪೋಸ್ಟ್‌ ಕಾರ್ಡ್‌ ದಲಿತರ ಕುರಿತಾಗಿ ಮೂರು ಸುಳ್ಳುಗಳನ್ನು ಹರಡಿದೆ. ಅವು ಯಾವುವು ವಾಸ್ತವವಲ್ಲ ಎಂಬುದು ಈ ಮೇಲಿನ ನಿದರ್ಶನಗಳಿಂದ ಸಾಬೀತಾಗುತ್ತದೆ.


ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ


Also Read :  Karnataka government drops naming of flyover after “Veer” Savarkar

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...