Homeನಿಜವೋ ಸುಳ್ಳೋಸಾವರ್ಕರ್‌ & ದಲಿತರು ಕುರಿತಂತೆ ಪೋಸ್ಟ್‌ ಕಾರ್ಡ್ ಹರಡಿದ ಮೂರು ಸುಳ್ಳುಗಳು & ವಾಸ್ತವಗಳು

ಸಾವರ್ಕರ್‌ & ದಲಿತರು ಕುರಿತಂತೆ ಪೋಸ್ಟ್‌ ಕಾರ್ಡ್ ಹರಡಿದ ಮೂರು ಸುಳ್ಳುಗಳು & ವಾಸ್ತವಗಳು

ಸಾವರ್ಕರ್‌ ಅವರ ವಿಚಾರ ಕರ್ನಾಟಕದಲ್ಲಿ ಚರ್ಚೆಗೆ ಬರುತ್ತಿದ್ದಂತೆ, ಈಗಾಗಲೇ ಹಲವಾರು ಸಾರಿ ಸುಳ್ಳು ಸುದ್ದಿಗಳನ್ನು ಪ್ರಕಟಿಸಿದ ಆರೋಪಕ್ಕೊಳಗಾಗಿರುವ ಪೋಸ್ಟ್‌ ಕಾರ್ಡ್‌ ನವರಿಂದ ಸಾವರ್ಕರ್‌ ಅವರು ದಲಿತರ ಪರ ಕೆಲಸ ಮಾಡಿದ್ದರು ಎಂದು ಪ್ರಕಟವಾಗಿದೆ. ಆ ಕುರಿತು ಫ್ಯಾಕ್ಟ್‌ ಚೆಕ್‌

- Advertisement -
- Advertisement -

ಮೇ 28 ವಿ.ಡಿ.ಸಾವರ್ಕರ್‌ ಜನ್ಮದಿನ. ಅದಕ್ಕೂ ಮೊದಲು ಮೇ 27ರಂದು ಕರ್ನಾಟಕ ಸರ್ಕಾರವು ಬೆಂಗಳೂರಿನ ಯಲಹಂಕದ ಮೇಲ್ಸೇತುವೆ ಸಾವರ್ಕರ್‌ ಹೆಸರಿಡಲು ತೀರ್ಮಾನಿಸಿತು. ಈ ಕುರಿತು ಸಾಕಷ್ಟು ವಿರೋಧಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಆ ಮೇಲ್ಸೇತುವೆ ಉದ್ಘಾಟನಾ ಕಾರ್ಯಕ್ರಮವನ್ನೇ ಮುಂದೂಡಿತು.

ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಗತಿಪರ ಮತ್ತು ಕನ್ನಡಪರ ಸಂಘಟನೆಗಳು ಮೇಲ್ಸೇತುವೆಗೆ ಸಾವರ್ಕರ್‌ ಹೆಸರಿಡುವುದಕ್ಕೆ ವ್ಯಾಪಕ ಆಕ್ಷೇಪ ವ್ಯಕ್ತಪಡಿಸಿದ್ದರು. ಬಿಜೆಪಿ ಪಕ್ಷ, ಸಚಿವ ಸಿ.ಟಿ.ರವಿ, ಸುರೇಶ್‌ ಕುಮಾರ್‌ ಸೇರಿದಂತೆ ಮುಂತಾದವರು ಸಾವರ್ಕರ್‌ ಹೆಸರಿಡುವುದನ್ನು ಸ್ವಾಗತಿಸಿ ವಾದ ಮಂಡಿಸಿದ್ದರು.

ಇಂತಹ ಸಂದರ್ಭದಲ್ಲಿ ಪೋಸ್ಟ್‌ ಕಾರ್ಡ್‌ ಕನ್ನಡ ಎನ್ನುವ ಬಲಪಂಥೀಯ ವಿಚಾರವುಳ್ಳ ಫೇಸ್‌ಬುಕ್‌ ಪುಟದಲ್ಲಿ ಸಾವರ್ಕರ್‌ ದಲಿತಪ್ರೇಮಿ ಎನ್ನುವ ಪೋಸ್ಟ್‌ ಒಂದನ್ನು ಹಾಕಲಾಯಿತು.

Posted by Postcard ಕನ್ನಡ on Wednesday, May 27, 2020

 

“ಅದರಲ್ಲಿ ವೀರ ಸಾವರ್ಕರ್‌ ದಲಿತರನ್ನೂ ಒಳಗೊಂಡಂತೆ ಸಮಾಜದ ಎಲ್ಲ ವರ್ಗ, ಪಂಥ, ಜಾತಿಯವರಿಗೂ ಮುಕ್ತವಾಗಿರುವ ಪತಿತಪಾವನ ದೇವಸ್ಥಾನ ಕಟ್ಟಿದರು. ಅಸ್ಪೃಶ್ಯರನ್ನು ಒಳಗೊಂಡು ಸಾರ್ವಜನಿಕ ಗಣೇಶೋತ್ಸವ ಪ್ರಾರಂಭಿಸಿದರು. ಸಂಪೂರ್ಣವಾಗಿ ದಲಿತರಿಂದಲೇ ನಡೆಯುವ ಹೊಟೇಲನ್ನು ಮೊಟ್ಟಮೊದಲ ಬಾರಿಗೆ ತೆರೆದರು. ಆದರು ಕಾಂಗ್ರೆಸ್‌ ಸಾವರ್ಕರ್‌ರನ್ನು ವಿರೋಧಿಸುತ್ತದೆ ಎಂದರೆ, ಕಾಂಗ್ರೆಸ್‌ ದಲಿತರ ಪರವೋ ವಿರುದ್ಧವೋ ನೀವೇ ನಿರ್ಧರಿಸಿ” ಎಂದು ಬರೆಯಲಾಗಿತ್ತು.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಫ್ಯಾಕ್ಟ್‌ಚೆಕ್‌ ನಡೆಸಲಾಯಿತು.

ಸಾರ್ವಜನಿಕ ಗಣೇಶೋತ್ಸವ

1905ರಲ್ಲಿ ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ಪ್ರಾರಂಭ ಮಾಡಿದ್ದು ಬಾಲ ಗಂಗಾಧರ ತಿಲಕರು. ಅದರಲ್ಲಿ ದಲಿತರು ಭಾಗವಹಿಸಬಹುದಾಗಿತ್ತೇ? ಅದೇ ಮಹಾರಾಷ್ಟ್ರದ ನಾಸಿಕ್‌ನ ಕಾಳಾರಾಮ್ ದೇವಸ್ಥಾನದ ಪ್ರವೇಶಕ್ಕಾಗಿ 1930ರಲ್ಲಿ ಅಂಬೇಡ್ಕರ್ ಸತ್ಯಾಗ್ರಹ ನಡೆಸಿದಾಗ ಏನಾಯಿತೆಂಬುದು ಗೊತ್ತಿರುವ ವಿಷಯವೇ ಅಲ್ಲವೇ? ಅಂಬೇಡ್ಕರ್‌ ಸೇರಿದಂತೆ ಬಹಳಷ್ಟು ದಲಿತರ ಮೇಲೆ ಸವರ್ಣಿಯರು ದಾಳಿ ಮಾಡಿದ್ದರು. ಹೀಗಿರುವಾಗ ಗಣೇಶೋತ್ಸವಗಳಲ್ಲಿ ದಲಿತರು ಭಾಗವಹಿಸುತ್ತಿದ್ದರೆಂಬುದು ಹಸಿಸುಳ್ಳು….

ಪತಿತಪಾವನ ದೇವಾಲಯ

ಪೋಸ್ಟ್‌ ಕಾರ್ಡ್‌ ಈ ದೇವಾಲಯವನ್ನು ಯಾವ ಊರಿನಲ್ಲಿ, ಯಾವಾಗ ಕಟ್ಟಿಸಿದರು ಎಂಬುದನ್ನು ಉಲ್ಲೇಖಸಿಲ್ಲ.  ಈ ಹಿಂದೂ ದೇವಾಲಯವನ್ನು ಶ್ರೀಮನ್ ಭಗೋಜಿಶೆತ್ ಕೀರ್ ಎಂಬುವವರು 1931ರಲ್ಲಿ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಕಟ್ಟಿಸಿದರೆಂದು ವಿಕಿಪಿಡೀಯ ಸೇರಿದಂತೆ ಎಲ್ಲಾ ಕಡೆ ಹೇಳಲಾಗುತ್ತದೆ.

ಈ ಕುರಿತು www.patitpavanmandir.org ನಲ್ಲಿ ಒಂದು ಲೇಖನ ಮಾತ್ರ ಲಭ್ಯವಿದೆ. ಅದರಲ್ಲಿ ಅಂಬೇಡ್ಕರ್‌ರವರ ದೇವಸ್ಥಾನ ಪ್ರವೇಶ ಹೋರಾಟಗಳಿಗೆ ಸಾವರ್ಕರ್‌ ಬೆಂಬಲ ನೀಡಿದ್ದರು ಎಂದೆಲ್ಲಾ ಸುಳ್ಳುಗಳನ್ನು ಬರೆಯಲಾಗಿದೆ. ಈ ಮೊದಲೇ ಹೇಳುವಂತೆ ದಲಿತರಿಗಾಗಿಯೇ ದೇವಸ್ಥಾನ ಕಟ್ಟಿಸುವ ಕಾಲವಿದ್ದರೆ ಕಾಳಾರಾಮ್ ದೇವಸ್ಥಾನದ ಪ್ರವೇಶಕ್ಕಾಗಿ ಅಂಬೇಡ್ಕರ್‌ ಮತ್ತು ದಲಿತರ ಮೇಲೆ ಹಲ್ಲೆ ನಡೆಸಿದ್ದು ಏಕೆ?

ದಲಿತರಿಂದಲೇ ನಡೆಯುವ ಹೋಟೆಲ್‌

‌ಅಂಬೇಡ್ಕರ್, ತಿಲಕ್ ಮತ್ತು ಸಾವರ್ಕರ್ – ಈ ಮೂರೂ ಜನರ ಜೀವನ ಚರಿತ್ರೆ ಯನ್ನು ಬರೆದದ್ದು ಧನಂಜಯ್ ಕೀರ್. ಆ ಮೂವರ ಬದುಕಿನ ಮಾಹಿತಿಗಳ ಬಗ್ಗೆ ಕೀರ್ ಬರಹವನ್ನೇ ಮೂಲ ಆಕರವನ್ನಾಗಿ ಎಲ್ಲೆಡೆ ಬಳಸಿಕೊಳ್ಳಲಾಗುತ್ತದೆ. ಅದರಲ್ಲೆಲ್ಲೂ ಸಾವರ್ಕರರು ’ಸಂಪೂರ್ಣವಾಗಿ ದಲಿತರೇ ನಡೆಸುವ ಹೋಟೆಲ್ ಇರಲಿ, ಬ್ರಾಹ್ಮಣರ ಹೋಟೆಲ್ ಪ್ರಾರಂಭಿಸಿದ” ಪ್ರಸಂಗವಿಲ್ಲ… ವಾಸ್ತವವಾಗಿ ಇಂಥಾ ರಚನಾತ್ಮಕ ಕೆಲಸಗಳನ್ನು ಸಂಘಟನಾತ್ಮಕವಾಗಿಯೋ, ವೈಯಕ್ತಿಕವಾಗಿಯೋ ಹಿಂದೂ ಮಹಾ ಸಭಾ ಕೈಗೆತ್ತಿಕೊಂಡು ಸಮಯ ಹಾಳುಮಾಡುವುದನ್ನು ಅವರು ವಿರೋಧಿಸುತ್ತಿದ್ದರು..

ಈ ಕುರಿತು ಸಾವರ್ಕರ್‌‌ರವರ ಬದುಕು ಬರಹಗಳ ಬಗ್ಗೆ ಅಧ್ಯಯನ ಮಾಡಿರುವ ಕನ್ನಡದ ಚಿಂತಕರಾದ ಶಿವಸುಂದರ್‌ರವರು “ಒಂದೂ ಬಲವಾದ ಹಿಂದೂ ಸಮಾಜ ಕಟ್ಟಲೋಸುಗ ದಲಿತರನ್ನು ಒಳಗೊಳ್ಳಬೇಕೆಂದು ಸಾವರ್ಕರ್‌ ಪ್ರತಿಪಾದಿಸುತ್ತಿದ್ದರು…. ಅದಕ್ಕಾಗಿ ಜಾತಿ ವ್ಯವಸ್ಥೆಯನ್ನೂ ಆಗಾಗ ಟೀಕಿಸುತ್ತಿದ್ದರು… ಆದರೆ ಹಿಂದೂ ಮಹಾ ಸಭಾದ ಒಳಗಡೆ ಎಂದಿಗೂ ಒಬ್ಬ ದಲಿತನನ್ನು ಒಳಗೊಳ್ಳಲಿಲ್ಲ. ಒಂದು ಅಂತರ್ಜಾತಿ ಮದುವೆಗೂ ಪ್ರೋತ್ಸಾಹ ಕೊಡಲಿಲ್ಲ” ಎಂದು ಹೇಳುತ್ತಾರೆ.

ಒಟ್ಟಾರೆಯಾಗಿ ಕಾಂಗ್ರೆಸ್‌ ಅನ್ನು ಟೀಕಿಸುವ ಭರದಲ್ಲಿ ಪೋಸ್ಟ್‌ ಕಾರ್ಡ್‌ ದಲಿತರ ಕುರಿತಾಗಿ ಮೂರು ಸುಳ್ಳುಗಳನ್ನು ಹರಡಿದೆ. ಅವು ಯಾವುವು ವಾಸ್ತವವಲ್ಲ ಎಂಬುದು ಈ ಮೇಲಿನ ನಿದರ್ಶನಗಳಿಂದ ಸಾಬೀತಾಗುತ್ತದೆ.


ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ


Also Read :  Karnataka government drops naming of flyover after “Veer” Savarkar

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...