Homeನಿಜವೋ ಸುಳ್ಳೋಸಾವರ್ಕರ್‌ & ದಲಿತರು ಕುರಿತಂತೆ ಪೋಸ್ಟ್‌ ಕಾರ್ಡ್ ಹರಡಿದ ಮೂರು ಸುಳ್ಳುಗಳು & ವಾಸ್ತವಗಳು

ಸಾವರ್ಕರ್‌ & ದಲಿತರು ಕುರಿತಂತೆ ಪೋಸ್ಟ್‌ ಕಾರ್ಡ್ ಹರಡಿದ ಮೂರು ಸುಳ್ಳುಗಳು & ವಾಸ್ತವಗಳು

ಸಾವರ್ಕರ್‌ ಅವರ ವಿಚಾರ ಕರ್ನಾಟಕದಲ್ಲಿ ಚರ್ಚೆಗೆ ಬರುತ್ತಿದ್ದಂತೆ, ಈಗಾಗಲೇ ಹಲವಾರು ಸಾರಿ ಸುಳ್ಳು ಸುದ್ದಿಗಳನ್ನು ಪ್ರಕಟಿಸಿದ ಆರೋಪಕ್ಕೊಳಗಾಗಿರುವ ಪೋಸ್ಟ್‌ ಕಾರ್ಡ್‌ ನವರಿಂದ ಸಾವರ್ಕರ್‌ ಅವರು ದಲಿತರ ಪರ ಕೆಲಸ ಮಾಡಿದ್ದರು ಎಂದು ಪ್ರಕಟವಾಗಿದೆ. ಆ ಕುರಿತು ಫ್ಯಾಕ್ಟ್‌ ಚೆಕ್‌

- Advertisement -
- Advertisement -

ಮೇ 28 ವಿ.ಡಿ.ಸಾವರ್ಕರ್‌ ಜನ್ಮದಿನ. ಅದಕ್ಕೂ ಮೊದಲು ಮೇ 27ರಂದು ಕರ್ನಾಟಕ ಸರ್ಕಾರವು ಬೆಂಗಳೂರಿನ ಯಲಹಂಕದ ಮೇಲ್ಸೇತುವೆ ಸಾವರ್ಕರ್‌ ಹೆಸರಿಡಲು ತೀರ್ಮಾನಿಸಿತು. ಈ ಕುರಿತು ಸಾಕಷ್ಟು ವಿರೋಧಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಆ ಮೇಲ್ಸೇತುವೆ ಉದ್ಘಾಟನಾ ಕಾರ್ಯಕ್ರಮವನ್ನೇ ಮುಂದೂಡಿತು.

ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಗತಿಪರ ಮತ್ತು ಕನ್ನಡಪರ ಸಂಘಟನೆಗಳು ಮೇಲ್ಸೇತುವೆಗೆ ಸಾವರ್ಕರ್‌ ಹೆಸರಿಡುವುದಕ್ಕೆ ವ್ಯಾಪಕ ಆಕ್ಷೇಪ ವ್ಯಕ್ತಪಡಿಸಿದ್ದರು. ಬಿಜೆಪಿ ಪಕ್ಷ, ಸಚಿವ ಸಿ.ಟಿ.ರವಿ, ಸುರೇಶ್‌ ಕುಮಾರ್‌ ಸೇರಿದಂತೆ ಮುಂತಾದವರು ಸಾವರ್ಕರ್‌ ಹೆಸರಿಡುವುದನ್ನು ಸ್ವಾಗತಿಸಿ ವಾದ ಮಂಡಿಸಿದ್ದರು.

ಇಂತಹ ಸಂದರ್ಭದಲ್ಲಿ ಪೋಸ್ಟ್‌ ಕಾರ್ಡ್‌ ಕನ್ನಡ ಎನ್ನುವ ಬಲಪಂಥೀಯ ವಿಚಾರವುಳ್ಳ ಫೇಸ್‌ಬುಕ್‌ ಪುಟದಲ್ಲಿ ಸಾವರ್ಕರ್‌ ದಲಿತಪ್ರೇಮಿ ಎನ್ನುವ ಪೋಸ್ಟ್‌ ಒಂದನ್ನು ಹಾಕಲಾಯಿತು.

Posted by Postcard ಕನ್ನಡ on Wednesday, May 27, 2020

 

“ಅದರಲ್ಲಿ ವೀರ ಸಾವರ್ಕರ್‌ ದಲಿತರನ್ನೂ ಒಳಗೊಂಡಂತೆ ಸಮಾಜದ ಎಲ್ಲ ವರ್ಗ, ಪಂಥ, ಜಾತಿಯವರಿಗೂ ಮುಕ್ತವಾಗಿರುವ ಪತಿತಪಾವನ ದೇವಸ್ಥಾನ ಕಟ್ಟಿದರು. ಅಸ್ಪೃಶ್ಯರನ್ನು ಒಳಗೊಂಡು ಸಾರ್ವಜನಿಕ ಗಣೇಶೋತ್ಸವ ಪ್ರಾರಂಭಿಸಿದರು. ಸಂಪೂರ್ಣವಾಗಿ ದಲಿತರಿಂದಲೇ ನಡೆಯುವ ಹೊಟೇಲನ್ನು ಮೊಟ್ಟಮೊದಲ ಬಾರಿಗೆ ತೆರೆದರು. ಆದರು ಕಾಂಗ್ರೆಸ್‌ ಸಾವರ್ಕರ್‌ರನ್ನು ವಿರೋಧಿಸುತ್ತದೆ ಎಂದರೆ, ಕಾಂಗ್ರೆಸ್‌ ದಲಿತರ ಪರವೋ ವಿರುದ್ಧವೋ ನೀವೇ ನಿರ್ಧರಿಸಿ” ಎಂದು ಬರೆಯಲಾಗಿತ್ತು.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಫ್ಯಾಕ್ಟ್‌ಚೆಕ್‌ ನಡೆಸಲಾಯಿತು.

ಸಾರ್ವಜನಿಕ ಗಣೇಶೋತ್ಸವ

1905ರಲ್ಲಿ ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ಪ್ರಾರಂಭ ಮಾಡಿದ್ದು ಬಾಲ ಗಂಗಾಧರ ತಿಲಕರು. ಅದರಲ್ಲಿ ದಲಿತರು ಭಾಗವಹಿಸಬಹುದಾಗಿತ್ತೇ? ಅದೇ ಮಹಾರಾಷ್ಟ್ರದ ನಾಸಿಕ್‌ನ ಕಾಳಾರಾಮ್ ದೇವಸ್ಥಾನದ ಪ್ರವೇಶಕ್ಕಾಗಿ 1930ರಲ್ಲಿ ಅಂಬೇಡ್ಕರ್ ಸತ್ಯಾಗ್ರಹ ನಡೆಸಿದಾಗ ಏನಾಯಿತೆಂಬುದು ಗೊತ್ತಿರುವ ವಿಷಯವೇ ಅಲ್ಲವೇ? ಅಂಬೇಡ್ಕರ್‌ ಸೇರಿದಂತೆ ಬಹಳಷ್ಟು ದಲಿತರ ಮೇಲೆ ಸವರ್ಣಿಯರು ದಾಳಿ ಮಾಡಿದ್ದರು. ಹೀಗಿರುವಾಗ ಗಣೇಶೋತ್ಸವಗಳಲ್ಲಿ ದಲಿತರು ಭಾಗವಹಿಸುತ್ತಿದ್ದರೆಂಬುದು ಹಸಿಸುಳ್ಳು….

ಪತಿತಪಾವನ ದೇವಾಲಯ

ಪೋಸ್ಟ್‌ ಕಾರ್ಡ್‌ ಈ ದೇವಾಲಯವನ್ನು ಯಾವ ಊರಿನಲ್ಲಿ, ಯಾವಾಗ ಕಟ್ಟಿಸಿದರು ಎಂಬುದನ್ನು ಉಲ್ಲೇಖಸಿಲ್ಲ.  ಈ ಹಿಂದೂ ದೇವಾಲಯವನ್ನು ಶ್ರೀಮನ್ ಭಗೋಜಿಶೆತ್ ಕೀರ್ ಎಂಬುವವರು 1931ರಲ್ಲಿ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಕಟ್ಟಿಸಿದರೆಂದು ವಿಕಿಪಿಡೀಯ ಸೇರಿದಂತೆ ಎಲ್ಲಾ ಕಡೆ ಹೇಳಲಾಗುತ್ತದೆ.

ಈ ಕುರಿತು www.patitpavanmandir.org ನಲ್ಲಿ ಒಂದು ಲೇಖನ ಮಾತ್ರ ಲಭ್ಯವಿದೆ. ಅದರಲ್ಲಿ ಅಂಬೇಡ್ಕರ್‌ರವರ ದೇವಸ್ಥಾನ ಪ್ರವೇಶ ಹೋರಾಟಗಳಿಗೆ ಸಾವರ್ಕರ್‌ ಬೆಂಬಲ ನೀಡಿದ್ದರು ಎಂದೆಲ್ಲಾ ಸುಳ್ಳುಗಳನ್ನು ಬರೆಯಲಾಗಿದೆ. ಈ ಮೊದಲೇ ಹೇಳುವಂತೆ ದಲಿತರಿಗಾಗಿಯೇ ದೇವಸ್ಥಾನ ಕಟ್ಟಿಸುವ ಕಾಲವಿದ್ದರೆ ಕಾಳಾರಾಮ್ ದೇವಸ್ಥಾನದ ಪ್ರವೇಶಕ್ಕಾಗಿ ಅಂಬೇಡ್ಕರ್‌ ಮತ್ತು ದಲಿತರ ಮೇಲೆ ಹಲ್ಲೆ ನಡೆಸಿದ್ದು ಏಕೆ?

ದಲಿತರಿಂದಲೇ ನಡೆಯುವ ಹೋಟೆಲ್‌

‌ಅಂಬೇಡ್ಕರ್, ತಿಲಕ್ ಮತ್ತು ಸಾವರ್ಕರ್ – ಈ ಮೂರೂ ಜನರ ಜೀವನ ಚರಿತ್ರೆ ಯನ್ನು ಬರೆದದ್ದು ಧನಂಜಯ್ ಕೀರ್. ಆ ಮೂವರ ಬದುಕಿನ ಮಾಹಿತಿಗಳ ಬಗ್ಗೆ ಕೀರ್ ಬರಹವನ್ನೇ ಮೂಲ ಆಕರವನ್ನಾಗಿ ಎಲ್ಲೆಡೆ ಬಳಸಿಕೊಳ್ಳಲಾಗುತ್ತದೆ. ಅದರಲ್ಲೆಲ್ಲೂ ಸಾವರ್ಕರರು ’ಸಂಪೂರ್ಣವಾಗಿ ದಲಿತರೇ ನಡೆಸುವ ಹೋಟೆಲ್ ಇರಲಿ, ಬ್ರಾಹ್ಮಣರ ಹೋಟೆಲ್ ಪ್ರಾರಂಭಿಸಿದ” ಪ್ರಸಂಗವಿಲ್ಲ… ವಾಸ್ತವವಾಗಿ ಇಂಥಾ ರಚನಾತ್ಮಕ ಕೆಲಸಗಳನ್ನು ಸಂಘಟನಾತ್ಮಕವಾಗಿಯೋ, ವೈಯಕ್ತಿಕವಾಗಿಯೋ ಹಿಂದೂ ಮಹಾ ಸಭಾ ಕೈಗೆತ್ತಿಕೊಂಡು ಸಮಯ ಹಾಳುಮಾಡುವುದನ್ನು ಅವರು ವಿರೋಧಿಸುತ್ತಿದ್ದರು..

ಈ ಕುರಿತು ಸಾವರ್ಕರ್‌‌ರವರ ಬದುಕು ಬರಹಗಳ ಬಗ್ಗೆ ಅಧ್ಯಯನ ಮಾಡಿರುವ ಕನ್ನಡದ ಚಿಂತಕರಾದ ಶಿವಸುಂದರ್‌ರವರು “ಒಂದೂ ಬಲವಾದ ಹಿಂದೂ ಸಮಾಜ ಕಟ್ಟಲೋಸುಗ ದಲಿತರನ್ನು ಒಳಗೊಳ್ಳಬೇಕೆಂದು ಸಾವರ್ಕರ್‌ ಪ್ರತಿಪಾದಿಸುತ್ತಿದ್ದರು…. ಅದಕ್ಕಾಗಿ ಜಾತಿ ವ್ಯವಸ್ಥೆಯನ್ನೂ ಆಗಾಗ ಟೀಕಿಸುತ್ತಿದ್ದರು… ಆದರೆ ಹಿಂದೂ ಮಹಾ ಸಭಾದ ಒಳಗಡೆ ಎಂದಿಗೂ ಒಬ್ಬ ದಲಿತನನ್ನು ಒಳಗೊಳ್ಳಲಿಲ್ಲ. ಒಂದು ಅಂತರ್ಜಾತಿ ಮದುವೆಗೂ ಪ್ರೋತ್ಸಾಹ ಕೊಡಲಿಲ್ಲ” ಎಂದು ಹೇಳುತ್ತಾರೆ.

ಒಟ್ಟಾರೆಯಾಗಿ ಕಾಂಗ್ರೆಸ್‌ ಅನ್ನು ಟೀಕಿಸುವ ಭರದಲ್ಲಿ ಪೋಸ್ಟ್‌ ಕಾರ್ಡ್‌ ದಲಿತರ ಕುರಿತಾಗಿ ಮೂರು ಸುಳ್ಳುಗಳನ್ನು ಹರಡಿದೆ. ಅವು ಯಾವುವು ವಾಸ್ತವವಲ್ಲ ಎಂಬುದು ಈ ಮೇಲಿನ ನಿದರ್ಶನಗಳಿಂದ ಸಾಬೀತಾಗುತ್ತದೆ.


ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ


Also Read :  Karnataka government drops naming of flyover after “Veer” Savarkar

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...