Homeನಿಜವೋ ಸುಳ್ಳೋಸಾವರ್ಕರ್‌ & ದಲಿತರು ಕುರಿತಂತೆ ಪೋಸ್ಟ್‌ ಕಾರ್ಡ್ ಹರಡಿದ ಮೂರು ಸುಳ್ಳುಗಳು & ವಾಸ್ತವಗಳು

ಸಾವರ್ಕರ್‌ & ದಲಿತರು ಕುರಿತಂತೆ ಪೋಸ್ಟ್‌ ಕಾರ್ಡ್ ಹರಡಿದ ಮೂರು ಸುಳ್ಳುಗಳು & ವಾಸ್ತವಗಳು

ಸಾವರ್ಕರ್‌ ಅವರ ವಿಚಾರ ಕರ್ನಾಟಕದಲ್ಲಿ ಚರ್ಚೆಗೆ ಬರುತ್ತಿದ್ದಂತೆ, ಈಗಾಗಲೇ ಹಲವಾರು ಸಾರಿ ಸುಳ್ಳು ಸುದ್ದಿಗಳನ್ನು ಪ್ರಕಟಿಸಿದ ಆರೋಪಕ್ಕೊಳಗಾಗಿರುವ ಪೋಸ್ಟ್‌ ಕಾರ್ಡ್‌ ನವರಿಂದ ಸಾವರ್ಕರ್‌ ಅವರು ದಲಿತರ ಪರ ಕೆಲಸ ಮಾಡಿದ್ದರು ಎಂದು ಪ್ರಕಟವಾಗಿದೆ. ಆ ಕುರಿತು ಫ್ಯಾಕ್ಟ್‌ ಚೆಕ್‌

- Advertisement -
- Advertisement -

ಮೇ 28 ವಿ.ಡಿ.ಸಾವರ್ಕರ್‌ ಜನ್ಮದಿನ. ಅದಕ್ಕೂ ಮೊದಲು ಮೇ 27ರಂದು ಕರ್ನಾಟಕ ಸರ್ಕಾರವು ಬೆಂಗಳೂರಿನ ಯಲಹಂಕದ ಮೇಲ್ಸೇತುವೆ ಸಾವರ್ಕರ್‌ ಹೆಸರಿಡಲು ತೀರ್ಮಾನಿಸಿತು. ಈ ಕುರಿತು ಸಾಕಷ್ಟು ವಿರೋಧಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಆ ಮೇಲ್ಸೇತುವೆ ಉದ್ಘಾಟನಾ ಕಾರ್ಯಕ್ರಮವನ್ನೇ ಮುಂದೂಡಿತು.

ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಗತಿಪರ ಮತ್ತು ಕನ್ನಡಪರ ಸಂಘಟನೆಗಳು ಮೇಲ್ಸೇತುವೆಗೆ ಸಾವರ್ಕರ್‌ ಹೆಸರಿಡುವುದಕ್ಕೆ ವ್ಯಾಪಕ ಆಕ್ಷೇಪ ವ್ಯಕ್ತಪಡಿಸಿದ್ದರು. ಬಿಜೆಪಿ ಪಕ್ಷ, ಸಚಿವ ಸಿ.ಟಿ.ರವಿ, ಸುರೇಶ್‌ ಕುಮಾರ್‌ ಸೇರಿದಂತೆ ಮುಂತಾದವರು ಸಾವರ್ಕರ್‌ ಹೆಸರಿಡುವುದನ್ನು ಸ್ವಾಗತಿಸಿ ವಾದ ಮಂಡಿಸಿದ್ದರು.

ಇಂತಹ ಸಂದರ್ಭದಲ್ಲಿ ಪೋಸ್ಟ್‌ ಕಾರ್ಡ್‌ ಕನ್ನಡ ಎನ್ನುವ ಬಲಪಂಥೀಯ ವಿಚಾರವುಳ್ಳ ಫೇಸ್‌ಬುಕ್‌ ಪುಟದಲ್ಲಿ ಸಾವರ್ಕರ್‌ ದಲಿತಪ್ರೇಮಿ ಎನ್ನುವ ಪೋಸ್ಟ್‌ ಒಂದನ್ನು ಹಾಕಲಾಯಿತು.

Posted by Postcard ಕನ್ನಡ on Wednesday, May 27, 2020

 

“ಅದರಲ್ಲಿ ವೀರ ಸಾವರ್ಕರ್‌ ದಲಿತರನ್ನೂ ಒಳಗೊಂಡಂತೆ ಸಮಾಜದ ಎಲ್ಲ ವರ್ಗ, ಪಂಥ, ಜಾತಿಯವರಿಗೂ ಮುಕ್ತವಾಗಿರುವ ಪತಿತಪಾವನ ದೇವಸ್ಥಾನ ಕಟ್ಟಿದರು. ಅಸ್ಪೃಶ್ಯರನ್ನು ಒಳಗೊಂಡು ಸಾರ್ವಜನಿಕ ಗಣೇಶೋತ್ಸವ ಪ್ರಾರಂಭಿಸಿದರು. ಸಂಪೂರ್ಣವಾಗಿ ದಲಿತರಿಂದಲೇ ನಡೆಯುವ ಹೊಟೇಲನ್ನು ಮೊಟ್ಟಮೊದಲ ಬಾರಿಗೆ ತೆರೆದರು. ಆದರು ಕಾಂಗ್ರೆಸ್‌ ಸಾವರ್ಕರ್‌ರನ್ನು ವಿರೋಧಿಸುತ್ತದೆ ಎಂದರೆ, ಕಾಂಗ್ರೆಸ್‌ ದಲಿತರ ಪರವೋ ವಿರುದ್ಧವೋ ನೀವೇ ನಿರ್ಧರಿಸಿ” ಎಂದು ಬರೆಯಲಾಗಿತ್ತು.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಫ್ಯಾಕ್ಟ್‌ಚೆಕ್‌ ನಡೆಸಲಾಯಿತು.

ಸಾರ್ವಜನಿಕ ಗಣೇಶೋತ್ಸವ

1905ರಲ್ಲಿ ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ಪ್ರಾರಂಭ ಮಾಡಿದ್ದು ಬಾಲ ಗಂಗಾಧರ ತಿಲಕರು. ಅದರಲ್ಲಿ ದಲಿತರು ಭಾಗವಹಿಸಬಹುದಾಗಿತ್ತೇ? ಅದೇ ಮಹಾರಾಷ್ಟ್ರದ ನಾಸಿಕ್‌ನ ಕಾಳಾರಾಮ್ ದೇವಸ್ಥಾನದ ಪ್ರವೇಶಕ್ಕಾಗಿ 1930ರಲ್ಲಿ ಅಂಬೇಡ್ಕರ್ ಸತ್ಯಾಗ್ರಹ ನಡೆಸಿದಾಗ ಏನಾಯಿತೆಂಬುದು ಗೊತ್ತಿರುವ ವಿಷಯವೇ ಅಲ್ಲವೇ? ಅಂಬೇಡ್ಕರ್‌ ಸೇರಿದಂತೆ ಬಹಳಷ್ಟು ದಲಿತರ ಮೇಲೆ ಸವರ್ಣಿಯರು ದಾಳಿ ಮಾಡಿದ್ದರು. ಹೀಗಿರುವಾಗ ಗಣೇಶೋತ್ಸವಗಳಲ್ಲಿ ದಲಿತರು ಭಾಗವಹಿಸುತ್ತಿದ್ದರೆಂಬುದು ಹಸಿಸುಳ್ಳು….

ಪತಿತಪಾವನ ದೇವಾಲಯ

ಪೋಸ್ಟ್‌ ಕಾರ್ಡ್‌ ಈ ದೇವಾಲಯವನ್ನು ಯಾವ ಊರಿನಲ್ಲಿ, ಯಾವಾಗ ಕಟ್ಟಿಸಿದರು ಎಂಬುದನ್ನು ಉಲ್ಲೇಖಸಿಲ್ಲ.  ಈ ಹಿಂದೂ ದೇವಾಲಯವನ್ನು ಶ್ರೀಮನ್ ಭಗೋಜಿಶೆತ್ ಕೀರ್ ಎಂಬುವವರು 1931ರಲ್ಲಿ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಕಟ್ಟಿಸಿದರೆಂದು ವಿಕಿಪಿಡೀಯ ಸೇರಿದಂತೆ ಎಲ್ಲಾ ಕಡೆ ಹೇಳಲಾಗುತ್ತದೆ.

ಈ ಕುರಿತು www.patitpavanmandir.org ನಲ್ಲಿ ಒಂದು ಲೇಖನ ಮಾತ್ರ ಲಭ್ಯವಿದೆ. ಅದರಲ್ಲಿ ಅಂಬೇಡ್ಕರ್‌ರವರ ದೇವಸ್ಥಾನ ಪ್ರವೇಶ ಹೋರಾಟಗಳಿಗೆ ಸಾವರ್ಕರ್‌ ಬೆಂಬಲ ನೀಡಿದ್ದರು ಎಂದೆಲ್ಲಾ ಸುಳ್ಳುಗಳನ್ನು ಬರೆಯಲಾಗಿದೆ. ಈ ಮೊದಲೇ ಹೇಳುವಂತೆ ದಲಿತರಿಗಾಗಿಯೇ ದೇವಸ್ಥಾನ ಕಟ್ಟಿಸುವ ಕಾಲವಿದ್ದರೆ ಕಾಳಾರಾಮ್ ದೇವಸ್ಥಾನದ ಪ್ರವೇಶಕ್ಕಾಗಿ ಅಂಬೇಡ್ಕರ್‌ ಮತ್ತು ದಲಿತರ ಮೇಲೆ ಹಲ್ಲೆ ನಡೆಸಿದ್ದು ಏಕೆ?

ದಲಿತರಿಂದಲೇ ನಡೆಯುವ ಹೋಟೆಲ್‌

‌ಅಂಬೇಡ್ಕರ್, ತಿಲಕ್ ಮತ್ತು ಸಾವರ್ಕರ್ – ಈ ಮೂರೂ ಜನರ ಜೀವನ ಚರಿತ್ರೆ ಯನ್ನು ಬರೆದದ್ದು ಧನಂಜಯ್ ಕೀರ್. ಆ ಮೂವರ ಬದುಕಿನ ಮಾಹಿತಿಗಳ ಬಗ್ಗೆ ಕೀರ್ ಬರಹವನ್ನೇ ಮೂಲ ಆಕರವನ್ನಾಗಿ ಎಲ್ಲೆಡೆ ಬಳಸಿಕೊಳ್ಳಲಾಗುತ್ತದೆ. ಅದರಲ್ಲೆಲ್ಲೂ ಸಾವರ್ಕರರು ’ಸಂಪೂರ್ಣವಾಗಿ ದಲಿತರೇ ನಡೆಸುವ ಹೋಟೆಲ್ ಇರಲಿ, ಬ್ರಾಹ್ಮಣರ ಹೋಟೆಲ್ ಪ್ರಾರಂಭಿಸಿದ” ಪ್ರಸಂಗವಿಲ್ಲ… ವಾಸ್ತವವಾಗಿ ಇಂಥಾ ರಚನಾತ್ಮಕ ಕೆಲಸಗಳನ್ನು ಸಂಘಟನಾತ್ಮಕವಾಗಿಯೋ, ವೈಯಕ್ತಿಕವಾಗಿಯೋ ಹಿಂದೂ ಮಹಾ ಸಭಾ ಕೈಗೆತ್ತಿಕೊಂಡು ಸಮಯ ಹಾಳುಮಾಡುವುದನ್ನು ಅವರು ವಿರೋಧಿಸುತ್ತಿದ್ದರು..

ಈ ಕುರಿತು ಸಾವರ್ಕರ್‌‌ರವರ ಬದುಕು ಬರಹಗಳ ಬಗ್ಗೆ ಅಧ್ಯಯನ ಮಾಡಿರುವ ಕನ್ನಡದ ಚಿಂತಕರಾದ ಶಿವಸುಂದರ್‌ರವರು “ಒಂದೂ ಬಲವಾದ ಹಿಂದೂ ಸಮಾಜ ಕಟ್ಟಲೋಸುಗ ದಲಿತರನ್ನು ಒಳಗೊಳ್ಳಬೇಕೆಂದು ಸಾವರ್ಕರ್‌ ಪ್ರತಿಪಾದಿಸುತ್ತಿದ್ದರು…. ಅದಕ್ಕಾಗಿ ಜಾತಿ ವ್ಯವಸ್ಥೆಯನ್ನೂ ಆಗಾಗ ಟೀಕಿಸುತ್ತಿದ್ದರು… ಆದರೆ ಹಿಂದೂ ಮಹಾ ಸಭಾದ ಒಳಗಡೆ ಎಂದಿಗೂ ಒಬ್ಬ ದಲಿತನನ್ನು ಒಳಗೊಳ್ಳಲಿಲ್ಲ. ಒಂದು ಅಂತರ್ಜಾತಿ ಮದುವೆಗೂ ಪ್ರೋತ್ಸಾಹ ಕೊಡಲಿಲ್ಲ” ಎಂದು ಹೇಳುತ್ತಾರೆ.

ಒಟ್ಟಾರೆಯಾಗಿ ಕಾಂಗ್ರೆಸ್‌ ಅನ್ನು ಟೀಕಿಸುವ ಭರದಲ್ಲಿ ಪೋಸ್ಟ್‌ ಕಾರ್ಡ್‌ ದಲಿತರ ಕುರಿತಾಗಿ ಮೂರು ಸುಳ್ಳುಗಳನ್ನು ಹರಡಿದೆ. ಅವು ಯಾವುವು ವಾಸ್ತವವಲ್ಲ ಎಂಬುದು ಈ ಮೇಲಿನ ನಿದರ್ಶನಗಳಿಂದ ಸಾಬೀತಾಗುತ್ತದೆ.


ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ


Also Read :  Karnataka government drops naming of flyover after “Veer” Savarkar

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...