Homeನಿಜವೋ ಸುಳ್ಳೋಸಾವರ್ಕರ್‌ & ದಲಿತರು ಕುರಿತಂತೆ ಪೋಸ್ಟ್‌ ಕಾರ್ಡ್ ಹರಡಿದ ಮೂರು ಸುಳ್ಳುಗಳು & ವಾಸ್ತವಗಳು

ಸಾವರ್ಕರ್‌ & ದಲಿತರು ಕುರಿತಂತೆ ಪೋಸ್ಟ್‌ ಕಾರ್ಡ್ ಹರಡಿದ ಮೂರು ಸುಳ್ಳುಗಳು & ವಾಸ್ತವಗಳು

ಸಾವರ್ಕರ್‌ ಅವರ ವಿಚಾರ ಕರ್ನಾಟಕದಲ್ಲಿ ಚರ್ಚೆಗೆ ಬರುತ್ತಿದ್ದಂತೆ, ಈಗಾಗಲೇ ಹಲವಾರು ಸಾರಿ ಸುಳ್ಳು ಸುದ್ದಿಗಳನ್ನು ಪ್ರಕಟಿಸಿದ ಆರೋಪಕ್ಕೊಳಗಾಗಿರುವ ಪೋಸ್ಟ್‌ ಕಾರ್ಡ್‌ ನವರಿಂದ ಸಾವರ್ಕರ್‌ ಅವರು ದಲಿತರ ಪರ ಕೆಲಸ ಮಾಡಿದ್ದರು ಎಂದು ಪ್ರಕಟವಾಗಿದೆ. ಆ ಕುರಿತು ಫ್ಯಾಕ್ಟ್‌ ಚೆಕ್‌

- Advertisement -
- Advertisement -

ಮೇ 28 ವಿ.ಡಿ.ಸಾವರ್ಕರ್‌ ಜನ್ಮದಿನ. ಅದಕ್ಕೂ ಮೊದಲು ಮೇ 27ರಂದು ಕರ್ನಾಟಕ ಸರ್ಕಾರವು ಬೆಂಗಳೂರಿನ ಯಲಹಂಕದ ಮೇಲ್ಸೇತುವೆ ಸಾವರ್ಕರ್‌ ಹೆಸರಿಡಲು ತೀರ್ಮಾನಿಸಿತು. ಈ ಕುರಿತು ಸಾಕಷ್ಟು ವಿರೋಧಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಆ ಮೇಲ್ಸೇತುವೆ ಉದ್ಘಾಟನಾ ಕಾರ್ಯಕ್ರಮವನ್ನೇ ಮುಂದೂಡಿತು.

ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಗತಿಪರ ಮತ್ತು ಕನ್ನಡಪರ ಸಂಘಟನೆಗಳು ಮೇಲ್ಸೇತುವೆಗೆ ಸಾವರ್ಕರ್‌ ಹೆಸರಿಡುವುದಕ್ಕೆ ವ್ಯಾಪಕ ಆಕ್ಷೇಪ ವ್ಯಕ್ತಪಡಿಸಿದ್ದರು. ಬಿಜೆಪಿ ಪಕ್ಷ, ಸಚಿವ ಸಿ.ಟಿ.ರವಿ, ಸುರೇಶ್‌ ಕುಮಾರ್‌ ಸೇರಿದಂತೆ ಮುಂತಾದವರು ಸಾವರ್ಕರ್‌ ಹೆಸರಿಡುವುದನ್ನು ಸ್ವಾಗತಿಸಿ ವಾದ ಮಂಡಿಸಿದ್ದರು.

ಇಂತಹ ಸಂದರ್ಭದಲ್ಲಿ ಪೋಸ್ಟ್‌ ಕಾರ್ಡ್‌ ಕನ್ನಡ ಎನ್ನುವ ಬಲಪಂಥೀಯ ವಿಚಾರವುಳ್ಳ ಫೇಸ್‌ಬುಕ್‌ ಪುಟದಲ್ಲಿ ಸಾವರ್ಕರ್‌ ದಲಿತಪ್ರೇಮಿ ಎನ್ನುವ ಪೋಸ್ಟ್‌ ಒಂದನ್ನು ಹಾಕಲಾಯಿತು.

Posted by Postcard ಕನ್ನಡ on Wednesday, May 27, 2020

 

“ಅದರಲ್ಲಿ ವೀರ ಸಾವರ್ಕರ್‌ ದಲಿತರನ್ನೂ ಒಳಗೊಂಡಂತೆ ಸಮಾಜದ ಎಲ್ಲ ವರ್ಗ, ಪಂಥ, ಜಾತಿಯವರಿಗೂ ಮುಕ್ತವಾಗಿರುವ ಪತಿತಪಾವನ ದೇವಸ್ಥಾನ ಕಟ್ಟಿದರು. ಅಸ್ಪೃಶ್ಯರನ್ನು ಒಳಗೊಂಡು ಸಾರ್ವಜನಿಕ ಗಣೇಶೋತ್ಸವ ಪ್ರಾರಂಭಿಸಿದರು. ಸಂಪೂರ್ಣವಾಗಿ ದಲಿತರಿಂದಲೇ ನಡೆಯುವ ಹೊಟೇಲನ್ನು ಮೊಟ್ಟಮೊದಲ ಬಾರಿಗೆ ತೆರೆದರು. ಆದರು ಕಾಂಗ್ರೆಸ್‌ ಸಾವರ್ಕರ್‌ರನ್ನು ವಿರೋಧಿಸುತ್ತದೆ ಎಂದರೆ, ಕಾಂಗ್ರೆಸ್‌ ದಲಿತರ ಪರವೋ ವಿರುದ್ಧವೋ ನೀವೇ ನಿರ್ಧರಿಸಿ” ಎಂದು ಬರೆಯಲಾಗಿತ್ತು.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಫ್ಯಾಕ್ಟ್‌ಚೆಕ್‌ ನಡೆಸಲಾಯಿತು.

ಸಾರ್ವಜನಿಕ ಗಣೇಶೋತ್ಸವ

1905ರಲ್ಲಿ ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ಪ್ರಾರಂಭ ಮಾಡಿದ್ದು ಬಾಲ ಗಂಗಾಧರ ತಿಲಕರು. ಅದರಲ್ಲಿ ದಲಿತರು ಭಾಗವಹಿಸಬಹುದಾಗಿತ್ತೇ? ಅದೇ ಮಹಾರಾಷ್ಟ್ರದ ನಾಸಿಕ್‌ನ ಕಾಳಾರಾಮ್ ದೇವಸ್ಥಾನದ ಪ್ರವೇಶಕ್ಕಾಗಿ 1930ರಲ್ಲಿ ಅಂಬೇಡ್ಕರ್ ಸತ್ಯಾಗ್ರಹ ನಡೆಸಿದಾಗ ಏನಾಯಿತೆಂಬುದು ಗೊತ್ತಿರುವ ವಿಷಯವೇ ಅಲ್ಲವೇ? ಅಂಬೇಡ್ಕರ್‌ ಸೇರಿದಂತೆ ಬಹಳಷ್ಟು ದಲಿತರ ಮೇಲೆ ಸವರ್ಣಿಯರು ದಾಳಿ ಮಾಡಿದ್ದರು. ಹೀಗಿರುವಾಗ ಗಣೇಶೋತ್ಸವಗಳಲ್ಲಿ ದಲಿತರು ಭಾಗವಹಿಸುತ್ತಿದ್ದರೆಂಬುದು ಹಸಿಸುಳ್ಳು….

ಪತಿತಪಾವನ ದೇವಾಲಯ

ಪೋಸ್ಟ್‌ ಕಾರ್ಡ್‌ ಈ ದೇವಾಲಯವನ್ನು ಯಾವ ಊರಿನಲ್ಲಿ, ಯಾವಾಗ ಕಟ್ಟಿಸಿದರು ಎಂಬುದನ್ನು ಉಲ್ಲೇಖಸಿಲ್ಲ.  ಈ ಹಿಂದೂ ದೇವಾಲಯವನ್ನು ಶ್ರೀಮನ್ ಭಗೋಜಿಶೆತ್ ಕೀರ್ ಎಂಬುವವರು 1931ರಲ್ಲಿ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಕಟ್ಟಿಸಿದರೆಂದು ವಿಕಿಪಿಡೀಯ ಸೇರಿದಂತೆ ಎಲ್ಲಾ ಕಡೆ ಹೇಳಲಾಗುತ್ತದೆ.

ಈ ಕುರಿತು www.patitpavanmandir.org ನಲ್ಲಿ ಒಂದು ಲೇಖನ ಮಾತ್ರ ಲಭ್ಯವಿದೆ. ಅದರಲ್ಲಿ ಅಂಬೇಡ್ಕರ್‌ರವರ ದೇವಸ್ಥಾನ ಪ್ರವೇಶ ಹೋರಾಟಗಳಿಗೆ ಸಾವರ್ಕರ್‌ ಬೆಂಬಲ ನೀಡಿದ್ದರು ಎಂದೆಲ್ಲಾ ಸುಳ್ಳುಗಳನ್ನು ಬರೆಯಲಾಗಿದೆ. ಈ ಮೊದಲೇ ಹೇಳುವಂತೆ ದಲಿತರಿಗಾಗಿಯೇ ದೇವಸ್ಥಾನ ಕಟ್ಟಿಸುವ ಕಾಲವಿದ್ದರೆ ಕಾಳಾರಾಮ್ ದೇವಸ್ಥಾನದ ಪ್ರವೇಶಕ್ಕಾಗಿ ಅಂಬೇಡ್ಕರ್‌ ಮತ್ತು ದಲಿತರ ಮೇಲೆ ಹಲ್ಲೆ ನಡೆಸಿದ್ದು ಏಕೆ?

ದಲಿತರಿಂದಲೇ ನಡೆಯುವ ಹೋಟೆಲ್‌

‌ಅಂಬೇಡ್ಕರ್, ತಿಲಕ್ ಮತ್ತು ಸಾವರ್ಕರ್ – ಈ ಮೂರೂ ಜನರ ಜೀವನ ಚರಿತ್ರೆ ಯನ್ನು ಬರೆದದ್ದು ಧನಂಜಯ್ ಕೀರ್. ಆ ಮೂವರ ಬದುಕಿನ ಮಾಹಿತಿಗಳ ಬಗ್ಗೆ ಕೀರ್ ಬರಹವನ್ನೇ ಮೂಲ ಆಕರವನ್ನಾಗಿ ಎಲ್ಲೆಡೆ ಬಳಸಿಕೊಳ್ಳಲಾಗುತ್ತದೆ. ಅದರಲ್ಲೆಲ್ಲೂ ಸಾವರ್ಕರರು ’ಸಂಪೂರ್ಣವಾಗಿ ದಲಿತರೇ ನಡೆಸುವ ಹೋಟೆಲ್ ಇರಲಿ, ಬ್ರಾಹ್ಮಣರ ಹೋಟೆಲ್ ಪ್ರಾರಂಭಿಸಿದ” ಪ್ರಸಂಗವಿಲ್ಲ… ವಾಸ್ತವವಾಗಿ ಇಂಥಾ ರಚನಾತ್ಮಕ ಕೆಲಸಗಳನ್ನು ಸಂಘಟನಾತ್ಮಕವಾಗಿಯೋ, ವೈಯಕ್ತಿಕವಾಗಿಯೋ ಹಿಂದೂ ಮಹಾ ಸಭಾ ಕೈಗೆತ್ತಿಕೊಂಡು ಸಮಯ ಹಾಳುಮಾಡುವುದನ್ನು ಅವರು ವಿರೋಧಿಸುತ್ತಿದ್ದರು..

ಈ ಕುರಿತು ಸಾವರ್ಕರ್‌‌ರವರ ಬದುಕು ಬರಹಗಳ ಬಗ್ಗೆ ಅಧ್ಯಯನ ಮಾಡಿರುವ ಕನ್ನಡದ ಚಿಂತಕರಾದ ಶಿವಸುಂದರ್‌ರವರು “ಒಂದೂ ಬಲವಾದ ಹಿಂದೂ ಸಮಾಜ ಕಟ್ಟಲೋಸುಗ ದಲಿತರನ್ನು ಒಳಗೊಳ್ಳಬೇಕೆಂದು ಸಾವರ್ಕರ್‌ ಪ್ರತಿಪಾದಿಸುತ್ತಿದ್ದರು…. ಅದಕ್ಕಾಗಿ ಜಾತಿ ವ್ಯವಸ್ಥೆಯನ್ನೂ ಆಗಾಗ ಟೀಕಿಸುತ್ತಿದ್ದರು… ಆದರೆ ಹಿಂದೂ ಮಹಾ ಸಭಾದ ಒಳಗಡೆ ಎಂದಿಗೂ ಒಬ್ಬ ದಲಿತನನ್ನು ಒಳಗೊಳ್ಳಲಿಲ್ಲ. ಒಂದು ಅಂತರ್ಜಾತಿ ಮದುವೆಗೂ ಪ್ರೋತ್ಸಾಹ ಕೊಡಲಿಲ್ಲ” ಎಂದು ಹೇಳುತ್ತಾರೆ.

ಒಟ್ಟಾರೆಯಾಗಿ ಕಾಂಗ್ರೆಸ್‌ ಅನ್ನು ಟೀಕಿಸುವ ಭರದಲ್ಲಿ ಪೋಸ್ಟ್‌ ಕಾರ್ಡ್‌ ದಲಿತರ ಕುರಿತಾಗಿ ಮೂರು ಸುಳ್ಳುಗಳನ್ನು ಹರಡಿದೆ. ಅವು ಯಾವುವು ವಾಸ್ತವವಲ್ಲ ಎಂಬುದು ಈ ಮೇಲಿನ ನಿದರ್ಶನಗಳಿಂದ ಸಾಬೀತಾಗುತ್ತದೆ.


ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ


Also Read :  Karnataka government drops naming of flyover after “Veer” Savarkar

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...