Homeನಿಜವೋ ಸುಳ್ಳೋಸಾವರ್ಕರ್‌ & ದಲಿತರು ಕುರಿತಂತೆ ಪೋಸ್ಟ್‌ ಕಾರ್ಡ್ ಹರಡಿದ ಮೂರು ಸುಳ್ಳುಗಳು & ವಾಸ್ತವಗಳು

ಸಾವರ್ಕರ್‌ & ದಲಿತರು ಕುರಿತಂತೆ ಪೋಸ್ಟ್‌ ಕಾರ್ಡ್ ಹರಡಿದ ಮೂರು ಸುಳ್ಳುಗಳು & ವಾಸ್ತವಗಳು

ಸಾವರ್ಕರ್‌ ಅವರ ವಿಚಾರ ಕರ್ನಾಟಕದಲ್ಲಿ ಚರ್ಚೆಗೆ ಬರುತ್ತಿದ್ದಂತೆ, ಈಗಾಗಲೇ ಹಲವಾರು ಸಾರಿ ಸುಳ್ಳು ಸುದ್ದಿಗಳನ್ನು ಪ್ರಕಟಿಸಿದ ಆರೋಪಕ್ಕೊಳಗಾಗಿರುವ ಪೋಸ್ಟ್‌ ಕಾರ್ಡ್‌ ನವರಿಂದ ಸಾವರ್ಕರ್‌ ಅವರು ದಲಿತರ ಪರ ಕೆಲಸ ಮಾಡಿದ್ದರು ಎಂದು ಪ್ರಕಟವಾಗಿದೆ. ಆ ಕುರಿತು ಫ್ಯಾಕ್ಟ್‌ ಚೆಕ್‌

- Advertisement -
- Advertisement -

ಮೇ 28 ವಿ.ಡಿ.ಸಾವರ್ಕರ್‌ ಜನ್ಮದಿನ. ಅದಕ್ಕೂ ಮೊದಲು ಮೇ 27ರಂದು ಕರ್ನಾಟಕ ಸರ್ಕಾರವು ಬೆಂಗಳೂರಿನ ಯಲಹಂಕದ ಮೇಲ್ಸೇತುವೆ ಸಾವರ್ಕರ್‌ ಹೆಸರಿಡಲು ತೀರ್ಮಾನಿಸಿತು. ಈ ಕುರಿತು ಸಾಕಷ್ಟು ವಿರೋಧಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಆ ಮೇಲ್ಸೇತುವೆ ಉದ್ಘಾಟನಾ ಕಾರ್ಯಕ್ರಮವನ್ನೇ ಮುಂದೂಡಿತು.

ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಗತಿಪರ ಮತ್ತು ಕನ್ನಡಪರ ಸಂಘಟನೆಗಳು ಮೇಲ್ಸೇತುವೆಗೆ ಸಾವರ್ಕರ್‌ ಹೆಸರಿಡುವುದಕ್ಕೆ ವ್ಯಾಪಕ ಆಕ್ಷೇಪ ವ್ಯಕ್ತಪಡಿಸಿದ್ದರು. ಬಿಜೆಪಿ ಪಕ್ಷ, ಸಚಿವ ಸಿ.ಟಿ.ರವಿ, ಸುರೇಶ್‌ ಕುಮಾರ್‌ ಸೇರಿದಂತೆ ಮುಂತಾದವರು ಸಾವರ್ಕರ್‌ ಹೆಸರಿಡುವುದನ್ನು ಸ್ವಾಗತಿಸಿ ವಾದ ಮಂಡಿಸಿದ್ದರು.

ಇಂತಹ ಸಂದರ್ಭದಲ್ಲಿ ಪೋಸ್ಟ್‌ ಕಾರ್ಡ್‌ ಕನ್ನಡ ಎನ್ನುವ ಬಲಪಂಥೀಯ ವಿಚಾರವುಳ್ಳ ಫೇಸ್‌ಬುಕ್‌ ಪುಟದಲ್ಲಿ ಸಾವರ್ಕರ್‌ ದಲಿತಪ್ರೇಮಿ ಎನ್ನುವ ಪೋಸ್ಟ್‌ ಒಂದನ್ನು ಹಾಕಲಾಯಿತು.

Posted by Postcard ಕನ್ನಡ on Wednesday, May 27, 2020

 

“ಅದರಲ್ಲಿ ವೀರ ಸಾವರ್ಕರ್‌ ದಲಿತರನ್ನೂ ಒಳಗೊಂಡಂತೆ ಸಮಾಜದ ಎಲ್ಲ ವರ್ಗ, ಪಂಥ, ಜಾತಿಯವರಿಗೂ ಮುಕ್ತವಾಗಿರುವ ಪತಿತಪಾವನ ದೇವಸ್ಥಾನ ಕಟ್ಟಿದರು. ಅಸ್ಪೃಶ್ಯರನ್ನು ಒಳಗೊಂಡು ಸಾರ್ವಜನಿಕ ಗಣೇಶೋತ್ಸವ ಪ್ರಾರಂಭಿಸಿದರು. ಸಂಪೂರ್ಣವಾಗಿ ದಲಿತರಿಂದಲೇ ನಡೆಯುವ ಹೊಟೇಲನ್ನು ಮೊಟ್ಟಮೊದಲ ಬಾರಿಗೆ ತೆರೆದರು. ಆದರು ಕಾಂಗ್ರೆಸ್‌ ಸಾವರ್ಕರ್‌ರನ್ನು ವಿರೋಧಿಸುತ್ತದೆ ಎಂದರೆ, ಕಾಂಗ್ರೆಸ್‌ ದಲಿತರ ಪರವೋ ವಿರುದ್ಧವೋ ನೀವೇ ನಿರ್ಧರಿಸಿ” ಎಂದು ಬರೆಯಲಾಗಿತ್ತು.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಫ್ಯಾಕ್ಟ್‌ಚೆಕ್‌ ನಡೆಸಲಾಯಿತು.

ಸಾರ್ವಜನಿಕ ಗಣೇಶೋತ್ಸವ

1905ರಲ್ಲಿ ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ಪ್ರಾರಂಭ ಮಾಡಿದ್ದು ಬಾಲ ಗಂಗಾಧರ ತಿಲಕರು. ಅದರಲ್ಲಿ ದಲಿತರು ಭಾಗವಹಿಸಬಹುದಾಗಿತ್ತೇ? ಅದೇ ಮಹಾರಾಷ್ಟ್ರದ ನಾಸಿಕ್‌ನ ಕಾಳಾರಾಮ್ ದೇವಸ್ಥಾನದ ಪ್ರವೇಶಕ್ಕಾಗಿ 1930ರಲ್ಲಿ ಅಂಬೇಡ್ಕರ್ ಸತ್ಯಾಗ್ರಹ ನಡೆಸಿದಾಗ ಏನಾಯಿತೆಂಬುದು ಗೊತ್ತಿರುವ ವಿಷಯವೇ ಅಲ್ಲವೇ? ಅಂಬೇಡ್ಕರ್‌ ಸೇರಿದಂತೆ ಬಹಳಷ್ಟು ದಲಿತರ ಮೇಲೆ ಸವರ್ಣಿಯರು ದಾಳಿ ಮಾಡಿದ್ದರು. ಹೀಗಿರುವಾಗ ಗಣೇಶೋತ್ಸವಗಳಲ್ಲಿ ದಲಿತರು ಭಾಗವಹಿಸುತ್ತಿದ್ದರೆಂಬುದು ಹಸಿಸುಳ್ಳು….

ಪತಿತಪಾವನ ದೇವಾಲಯ

ಪೋಸ್ಟ್‌ ಕಾರ್ಡ್‌ ಈ ದೇವಾಲಯವನ್ನು ಯಾವ ಊರಿನಲ್ಲಿ, ಯಾವಾಗ ಕಟ್ಟಿಸಿದರು ಎಂಬುದನ್ನು ಉಲ್ಲೇಖಸಿಲ್ಲ.  ಈ ಹಿಂದೂ ದೇವಾಲಯವನ್ನು ಶ್ರೀಮನ್ ಭಗೋಜಿಶೆತ್ ಕೀರ್ ಎಂಬುವವರು 1931ರಲ್ಲಿ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಕಟ್ಟಿಸಿದರೆಂದು ವಿಕಿಪಿಡೀಯ ಸೇರಿದಂತೆ ಎಲ್ಲಾ ಕಡೆ ಹೇಳಲಾಗುತ್ತದೆ.

ಈ ಕುರಿತು www.patitpavanmandir.org ನಲ್ಲಿ ಒಂದು ಲೇಖನ ಮಾತ್ರ ಲಭ್ಯವಿದೆ. ಅದರಲ್ಲಿ ಅಂಬೇಡ್ಕರ್‌ರವರ ದೇವಸ್ಥಾನ ಪ್ರವೇಶ ಹೋರಾಟಗಳಿಗೆ ಸಾವರ್ಕರ್‌ ಬೆಂಬಲ ನೀಡಿದ್ದರು ಎಂದೆಲ್ಲಾ ಸುಳ್ಳುಗಳನ್ನು ಬರೆಯಲಾಗಿದೆ. ಈ ಮೊದಲೇ ಹೇಳುವಂತೆ ದಲಿತರಿಗಾಗಿಯೇ ದೇವಸ್ಥಾನ ಕಟ್ಟಿಸುವ ಕಾಲವಿದ್ದರೆ ಕಾಳಾರಾಮ್ ದೇವಸ್ಥಾನದ ಪ್ರವೇಶಕ್ಕಾಗಿ ಅಂಬೇಡ್ಕರ್‌ ಮತ್ತು ದಲಿತರ ಮೇಲೆ ಹಲ್ಲೆ ನಡೆಸಿದ್ದು ಏಕೆ?

ದಲಿತರಿಂದಲೇ ನಡೆಯುವ ಹೋಟೆಲ್‌

‌ಅಂಬೇಡ್ಕರ್, ತಿಲಕ್ ಮತ್ತು ಸಾವರ್ಕರ್ – ಈ ಮೂರೂ ಜನರ ಜೀವನ ಚರಿತ್ರೆ ಯನ್ನು ಬರೆದದ್ದು ಧನಂಜಯ್ ಕೀರ್. ಆ ಮೂವರ ಬದುಕಿನ ಮಾಹಿತಿಗಳ ಬಗ್ಗೆ ಕೀರ್ ಬರಹವನ್ನೇ ಮೂಲ ಆಕರವನ್ನಾಗಿ ಎಲ್ಲೆಡೆ ಬಳಸಿಕೊಳ್ಳಲಾಗುತ್ತದೆ. ಅದರಲ್ಲೆಲ್ಲೂ ಸಾವರ್ಕರರು ’ಸಂಪೂರ್ಣವಾಗಿ ದಲಿತರೇ ನಡೆಸುವ ಹೋಟೆಲ್ ಇರಲಿ, ಬ್ರಾಹ್ಮಣರ ಹೋಟೆಲ್ ಪ್ರಾರಂಭಿಸಿದ” ಪ್ರಸಂಗವಿಲ್ಲ… ವಾಸ್ತವವಾಗಿ ಇಂಥಾ ರಚನಾತ್ಮಕ ಕೆಲಸಗಳನ್ನು ಸಂಘಟನಾತ್ಮಕವಾಗಿಯೋ, ವೈಯಕ್ತಿಕವಾಗಿಯೋ ಹಿಂದೂ ಮಹಾ ಸಭಾ ಕೈಗೆತ್ತಿಕೊಂಡು ಸಮಯ ಹಾಳುಮಾಡುವುದನ್ನು ಅವರು ವಿರೋಧಿಸುತ್ತಿದ್ದರು..

ಈ ಕುರಿತು ಸಾವರ್ಕರ್‌‌ರವರ ಬದುಕು ಬರಹಗಳ ಬಗ್ಗೆ ಅಧ್ಯಯನ ಮಾಡಿರುವ ಕನ್ನಡದ ಚಿಂತಕರಾದ ಶಿವಸುಂದರ್‌ರವರು “ಒಂದೂ ಬಲವಾದ ಹಿಂದೂ ಸಮಾಜ ಕಟ್ಟಲೋಸುಗ ದಲಿತರನ್ನು ಒಳಗೊಳ್ಳಬೇಕೆಂದು ಸಾವರ್ಕರ್‌ ಪ್ರತಿಪಾದಿಸುತ್ತಿದ್ದರು…. ಅದಕ್ಕಾಗಿ ಜಾತಿ ವ್ಯವಸ್ಥೆಯನ್ನೂ ಆಗಾಗ ಟೀಕಿಸುತ್ತಿದ್ದರು… ಆದರೆ ಹಿಂದೂ ಮಹಾ ಸಭಾದ ಒಳಗಡೆ ಎಂದಿಗೂ ಒಬ್ಬ ದಲಿತನನ್ನು ಒಳಗೊಳ್ಳಲಿಲ್ಲ. ಒಂದು ಅಂತರ್ಜಾತಿ ಮದುವೆಗೂ ಪ್ರೋತ್ಸಾಹ ಕೊಡಲಿಲ್ಲ” ಎಂದು ಹೇಳುತ್ತಾರೆ.

ಒಟ್ಟಾರೆಯಾಗಿ ಕಾಂಗ್ರೆಸ್‌ ಅನ್ನು ಟೀಕಿಸುವ ಭರದಲ್ಲಿ ಪೋಸ್ಟ್‌ ಕಾರ್ಡ್‌ ದಲಿತರ ಕುರಿತಾಗಿ ಮೂರು ಸುಳ್ಳುಗಳನ್ನು ಹರಡಿದೆ. ಅವು ಯಾವುವು ವಾಸ್ತವವಲ್ಲ ಎಂಬುದು ಈ ಮೇಲಿನ ನಿದರ್ಶನಗಳಿಂದ ಸಾಬೀತಾಗುತ್ತದೆ.


ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ


Also Read :  Karnataka government drops naming of flyover after “Veer” Savarkar

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...