Homeಮುಖಪುಟಜಮ್ಮ-ಕಾಶ್ಮೀರ: ಪೊಲೀಸ್‌ ಠಾಣೆ ಮೇಲೆ ಹಿಂಸಾತ್ಮಕ ದಾಳಿ; ಮೂವರು ಲೆಫ್ಟಿನೆಂಟ್ ಕರ್ನಲ್‌ಗಳು ಸೇರಿ 16 ಸೈನಿಕರ...

ಜಮ್ಮ-ಕಾಶ್ಮೀರ: ಪೊಲೀಸ್‌ ಠಾಣೆ ಮೇಲೆ ಹಿಂಸಾತ್ಮಕ ದಾಳಿ; ಮೂವರು ಲೆಫ್ಟಿನೆಂಟ್ ಕರ್ನಲ್‌ಗಳು ಸೇರಿ 16 ಸೈನಿಕರ ವಿರುದ್ಧ ಎಫ್ಐಆರ್‌

- Advertisement -
- Advertisement -

ಕುಪ್ವಾರ ಪೊಲೀಸ್ ಠಾಣೆಯ ಮೇಲೆ ಹಿಂಸಾತ್ಮಕ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಸೇನಾ ಲೆಫ್ಟಿನೆಂಟ್ ಕರ್ನಲ್‌ಗಳು ಸೇರಿ ಒಟ್ಟು 16 ಸೈನಿಕರ ವಿರುದ್ಧ ಕೊಲೆ ಯತ್ನ ಮತ್ತು ಡಕಾಯಿತಿ ಸೇರಿದಂತೆ ವಿವಿಧ ಸೆಕ್ಸನ್‌ಗಳಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಮಂಗಳವಾರ ಪೊಲೀಸರು ಕುಪ್ವಾರ ಜಿಲ್ಲೆಯ ಬಟ್ಪೋರ ಎಂಬಲ್ಲಿ ಟೆರಿಟೋರಿಯಲ್‌ ಸೇನೆಯ ಸೈನಿಕರೊಬ್ಬರ ಮನೆಯ ಮೇಲೆ ಮಾದಕವಸ್ತು ಪ್ರಕರಣವೊಂದರ ತನಿಖೆ ಭಾಗವಾಗಿ ದಾಳಿ ನಡೆಸಿದ್ದರು. ಇದರಿಂದ ಆಕ್ರೋಶಗೊಂಡ ಸೈನಿಕರು ಅದೇ ದಿನ ರಾತ್ರಿ ಸುಮಾರು 9.40ಕ್ಕೆ ಠಾಣೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಟೆರಿಟೋರಿಯಲ್ ಆರ್ಮಿಯ ಶಸ್ತ್ರಸಜ್ಜಿತ ಮತ್ತು ಸಮವಸ್ತ್ರಧಾರಿ ಸಿಬ್ಬಂದಿಗಳ ಗುಂಪು, ಸೇನೆಯ ಹಿರಿಯ ಅಧಿಕಾರಿಗಳ ಜೊತೆಯಲ್ಲಿ ಪೊಲೀಸ್ ಠಾಣೆಗೆ ದಾಳಿ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಪ್ರಾದೇಶಿಕ ಸೇನೆಯು ಭಾರತೀಯ ಸೇನೆಗೆ ಬೆಂಬಲ ಒದಗಿಸುವ ಅರೆಕಾಲಿಕ ಸ್ವಯಂಸೇವಕರನ್ನು ಒಳಗೊಂಡಿರುವ ಮಿಲಿಟರಿ ಮೀಸಲು ಪಡೆಯಾಗಿದೆ.

ಸೇನಾ ಲೆಫ್ಟಿನೆಂಟ್ ಕರ್ನಲ್ ಅಂಕಿತ್ ಸೂದ್, ರಾಜೀವ್ ಚೌಹಾಣ್ ಮತ್ತು ನಿಖಿಲ್ ನೇತೃತ್ವದ ಸಶಸ್ತ್ರ ಗುಂಪು ಪೊಲೀಸ್ ಠಾಣೆಯ ಆವರಣಕ್ಕೆ ಬಲವಂತವಾಗಿ ಪ್ರವೇಶಿಸಿ ಅಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಪೊಲೀಸ್ ಅಧಿಕಾರಿಗಳಾದ ರಯೀಸ್ ಖಾನ್, ಇಮ್ತಿಯಾಜ್ ಮಲಿಕ್ ಮತ್ತು ಕಾನ್‌ಸ್ಟೆಬಲ್‌ಗಳಾದ ಸಲೀಮ್ ಮುಷ್ತಾಕ್, ಜಹೂರ್ ಅಹ್ಮದ್ ಗಾಯಗೊಂಡಿದ್ದಾರೆ. ಗಾಯಗೊಂಡ ಪೊಲೀಸ್ ಅಧಿಕಾರಿಗಳಿಂದ ಮೊಬೈಲ್ ಫೋನ್‌ಗಳನ್ನು ಸೇನಾ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ ಮತ್ತು ಸ್ಥಳದಿಂದ ಪರಾರಿಯಾಗುವ ಮೊದಲು ಪೊಲೀಸ್ ಪೇದೆ ಗುಲಾಂ ರಸೂಲ್‌ ಅವರನ್ನು ಅಪಹರಿಸಿದ್ದಾರೆ ಎಂದು ಎಫ್ಐಆರ್‌ನಲ್ಲಿ ಆರೋಪಿಸಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಗಳ ತ್ವರಿತ ಕಾರ್ಯಾಚರಣೆಯು ಪೊಲೀಸ್ ಸಿಬ್ಬಂದಿಯನ್ನು ರಕ್ಷಿಸಲು ಮತ್ತು ಅಪರಾಧಿಗಳ ವಿರುದ್ಧ ಕಾನೂನು ಕ್ರಮವನ್ನು ಪ್ರಾರಂಭಿಸಲು ಸಹಾಯ ಮಾಡಿದೆ. ಆರೋಪಿ ಸೇನಾ ಸಿಬ್ಬಂದಿಗಳ ವಿರುದ್ಧ ಸೆಕ್ಸನ್‌ 186(ಸಾರ್ವಜನಿಕ ಕಾರ್ಯಗಳನ್ನು ನಿರ್ವಹಿಸುವಲ್ಲಿ ಸಾರ್ವಜನಿಕ ಸೇವಕರಿಗೆ ಅಡ್ಡಿಪಡಿಸುವುದು), 332 (ಸಾರ್ವಜನಿಕ ಸೇವಕರನ್ನು ಅವರ ಕರ್ತವ್ಯದಿಂದ ತಡೆಯಲು ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು), 307(ಕೊಲೆಯ ಯತ್ನ), 342 ಮತ್ತು 147 (ಗಲಭೆಗೆ ಶಿಕ್ಷೆ), 392 (ದರೋಡೆಗೆ ಶಿಕ್ಷೆ), 397 ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಸನ್‌ಗಳಡಿಯಲ್ಲಿ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಘಟನೆಯ ತನಿಖೆಯನ್ನು ಕುಪ್ವಾರ ಉಪ ಪೊಲೀಸ್ ವರಿಷ್ಠಾಧಿಕಾರಿ ನಡೆಸುತ್ತಿದ್ದಾರೆ. ಘಟನೆ ಬೆನ್ನಲ್ಲಿ ಪ್ರತಿಕ್ರಿಯಿಸಿದ್ದ ಶ್ರೀನಗರ ಮೂಲದ ರಕ್ಷಣಾ ವಕ್ತಾರರು ಘಟನೆಯನ್ನು ತಣ್ಣಗಾಗಿಸಲು ಪ್ರಯತ್ನಿಸಿದ್ದು,  ಪೊಲೀಸರು ಮತ್ತು ಸೇನಾ ಸಿಬ್ಬಂದಿಗಳ ಘರ್ಷಣೆಯ ಸುದ್ದಿ ಸುಳ್ಳು ಎಂದು ಹೇಳಿದ್ದರು. ಕಾರ್ಯಾಚರಣೆಯ ವಿಷಯದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಪ್ರಾದೇಶಿಕ ಸೇನಾ ಘಟಕದ ನಡುವಿನ ಸಣ್ಣ ಭಿನ್ನಾಭಿಪ್ರಾಯಗಳನ್ನು ಸೌಹಾರ್ದಯುತವಾಗಿ ಪರಿಹರಿಸಲಾಗಿದೆ ಎಂದು ಹೇಳಿದ್ದರು.

ಇದನ್ನು ಓದಿ: ಮತದಾರರನ್ನು ಇವಿಎಂ ಬಳಿ ತೆರಳಲೇ ಬಿಡುತ್ತಿರಲಿಲ್ಲ! ಬೀಡ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮದ ಆರೋಪ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...