HomeಮುಖಪುಟMSMEಗಳಿಗೆ ಮೂರುಲಕ್ಷ ಕೋಟಿ, MSMEಗಳನ್ನ ಉಳಿಸುತ್ತಾ?

MSMEಗಳಿಗೆ ಮೂರುಲಕ್ಷ ಕೋಟಿ, MSMEಗಳನ್ನ ಉಳಿಸುತ್ತಾ?

- Advertisement -
- Advertisement -

ಪ್ರಧಾನಿಯವರ ಕೊರೊನಾ ಪ್ಯಾಕೇಜ್ ಆದ ಇಪ್ಪತ್ತು ಲಕ್ಷ ಕೋಟಿಗಳಲ್ಲಿ ಸಣ್ಣ, ಅತಿಸಣ್ಣ ಮತ್ತು ಮದ್ಯಮ ಗಾತ್ರದ ಉದ್ದಿಮೆಗಳಿಗೆ (MSME – micro, small and medium enterprise) ಕೊಟ್ಟಿರುವ ಪ್ಯಾಕೇಜ್ ಈಗ ಬಹುಚರ್ಚಿತ ವಿಷಯವಾಗಿದೆ. ಕೆಲವರು ಈ ಪ್ಯಾಕೇಜ್ ಒಂದು ಗೇಮ್ ಚೇಂಜರ್ ಎಂದು ಹೇಳುತ್ತಿದ್ದರೆ, ಇನ್ನು ಹಲವರು ಈ ಪ್ಯಾಕೇಜ್ ವಾಸ್ತವದಲ್ಲಿ ಉಂಟುಮಾಡುವ ಪರಿಣಾಮ ನಗಣ್ಯ ಎಂದು ಹೇಳುತ್ತಿದ್ದಾರೆ.

ಈ MSMEಪ್ಯಾಕೇಜ್ ಬಗ್ಗೆ ಇಷ್ಟೊಂದು ಚರ್ಚೆ ಯಾಕೆ ನಡೀತಿದೆ? ನಿಜಕ್ಕೂ ಈ MSMEಗಳು ದೇಶದ ಎಕಾನಮಿಯೊಳಗೆ ಅಷ್ಟೊಂದು ಮುಖ್ಯಾನ? ಕೆಲ ಅಂಕಿಅಂಶಗಳನ್ನ ನೋಡಿದ್ರೆ ಇವುಗಳ ಪ್ರಾಮುಖ್ಯತೆ ಎಷ್ಟು ಅಂತ ನಮಗೆ ತಿಳಿಯುತ್ತೆ. ಇಂಡಿಯಾದಲ್ಲಿ ಒಟ್ಟು 6.3 ಕೋಟಿ MSMEಗಳು ಇವೆ. ಅವುಗಳು ಸೃಷ್ಟಿಮಾಡಿರುವ ಒಟ್ಟು ನೇರ ಉದ್ಯೋಗಗಳು ಬರೋಬ್ಬರಿ ಹನ್ನೊಂದು ಕೋಟಿಗಳಷ್ಟು. ಈ ದೇಶದ ಒಟ್ಟು ಜಿಡಿಪಿಯಲ್ಲಿ 30% ರಷ್ಟು ಅಂದ್ರೆ 60 ಲಕ್ಷ ಕೋಟಿಗಳಿಗಿಂತ ಹೆಚ್ಚು ಈ MSMEಗಳಿಂದನೇ ಬರುತ್ತೆ. ಈ ದೇಶದ ಒಟ್ಟು ತಯಾರಿಕೆಯಲ್ಲಿ (manufacturing) 45% ರಷ್ಟು MSMEಗಳೇ ಮಾಡುತ್ವೆ. ಹಾಗೂ ದೇಶದಿಂದ ಆಗುವ ಒಟ್ಟು ರಫ್ತಿನಲ್ಲಿ 50% ನಷ್ಟು MSMEಗಳಿಂದಲೇ ಆಗುತ್ತೆ.

ಈ ಮೇಲಿನ ಅಂಕಿಅಂಶಗಳು MSMEಗಳು ಈ ದೇಶದ ಎಕಾನಮಿಯ ಆರೋಗ್ಯಕ್ಕೆ ಎಷ್ಟು ಮುಖ್ಯ ಅಂತ ಯಾರಿಗೇ ಆದ್ರೂ ಸುಲಭವಾಗಿ ಗೊತ್ತಾಗುತ್ತೆ. ಅದರಲ್ಲೂ ಈ ದೇಶದ ವರ್ಕ್ ಫೋರ್ಸಿನ ಶೇಖಡಾ ಇಪ್ಪತ್ತರಷ್ಟು ಮಂದಿ MSMEಗಳಲ್ಲೇ ಕೆಲಸ ಮಾಡ್ತಿದಾರೆ ಅಂದರೆ ಉದ್ಯೋಗ ಸೃಷ್ಟಿಯಲ್ಲಿ ಇವುಗಳ ಮಹತ್ವ ಎಂಥದು ಅಂತ ಅರಿವಾಗುತ್ತೆ. ಆದರೆ, ಬಹುತೇಕ MSMEಗಳ ಅತಿಮುಖ್ಯವಾದ ಪ್ರಾಬ್ಲಮ್ ಏನು ಅಂದ್ರೆ ಶೇಕಡಾ ತೊಂಬತ್ತರಷ್ಟು MSMEಗಳು ಅತ್ಯಂತ ಕಡಿಮೆ ಹೆಚ್ಚುವರಿ ನಗದಿನ ಲಭ್ಯತೆಯಲ್ಲಿಯೇ ಉದ್ಯಮ ನಿರ್ವಹಣೆ ಮಾಡಬೇಕಾದ ಸ್ಥಿತಿಯಲ್ಲಿವೆ. ಹಾಗಾಗಿ, ಇವುಗಳಿಗೆ ನಗದಿನ ಹರಿವು ಸ್ವಲ್ಪ ಕಡಿಮೆಯಾದರೂ workkng capital ಇಲ್ಲದಂತಾಗಿ ಈ MSMEಗಳು ಸಂಕಷ್ಟಕ್ಕೆ ಸಿಲುಕುತ್ತವೆ.

ನಮಗೆ ತಿಳಿದಿರುವಂತೆ ದೇಶದ ಕಡೆಯ ಎರಡು ತ್ರೈಮಾಸಿಕಗಳಲ್ಲಿ ಜಿಡಿಪಿಯ ಬೆಳವಣಿಗೆ ಶೇ.5 ಮತ್ತು ಶೇ.4.5 ಕ್ಕಿಳಿದಿತ್ತು. ಅದಕ್ಕೆ ಮುಖ್ಯ ಕಾರಣ ಮಾರುಕಟ್ಟೆಯಲ್ಲುಂಟಾದ ಬೇಡಿಕೆಯ ಕೊರತೆ. ಅಂದರೆ ಜನಗಳ ಕೈಯಲ್ಲಿ ಹಣವಿಲ್ಲದ ಕಾರಣ ಅವರ ಕೊಳ್ಳುವ ಶಕ್ತಿ ಕಡಿಮೆಯಾಗಿದ್ದು. ಇದರ ಹೊಡೆತ ಅತಿ ಬೇಗನೆ ಬಿದ್ದಿದ್ದೇ ಈ MSMEಗಳಿಗೆ ಮತ್ತು ಅದರಿಂದಾಗಿಯೇ ಅನೇಕವು ಮುಚ್ಚುವ ಸ್ಥಿತಿಗೆ ಬಂದಿದ್ದವು. ಆದರೆ, ಈಗ ಕೊರೋನಾ ಲಾಕ್‍ಡೌನಿಂದಾಗಿ ಕೋಟ್ಯಂತರ ಜನ ಕೆಲಸ ಕಳೆದುಕೊಂಡಿದ್ದು ಅವರ ಕೊಳ್ಳುವ ಶಕ್ತಿ ಶೂನ್ಯವಾಗಿದೆ. ಇದರಿಂದಾಗಿ ಅತಿ ಹೆಚ್ಚು ಮತ್ತು ಅತಿ ಶೀಘ್ರವಾಗಿ ಹೊಡೆತ ತಿನ್ನುತ್ತಿರುವುದು MSMEಗಳೇ. ತಾತ್ಕಾಲಿಕವಾಗಿಯಾದರೂ ಅತಿ ಹೆಚ್ಚು ಉದ್ಯೋಗ ನಷ್ಟವಾಗಿರುವುದೂ ಕೂಡ MSMEಗಳಲ್ಲಿಯೇ.

ಈ ಎಲ್ಲ ಹಿನ್ನೆಲೆಯಲ್ಲಿ ಕೇಂದ್ರಸರ್ಕಾರ ಈ MSMEಗಳ ಪುನಶ್ಚೇತನಕ್ಕೆಂದೇ ಪ್ಯಾಕೇಜ್ ಘೋಷಣೆ ಮಾಡಿದೆ. ಈ ಪ್ಯಾಕೇಜು ಒಟ್ಟಾರೆಯಾಗಿ MSMEಗಳಿಗೆ ಸುಲಭವಾಗಿ ಸಾಲಕೊಡುವ ಯೋಜನೆಯಾಗಿದ್ದು ಇದರಲ್ಲಿ ನಾಲ್ಕೈದು ಅಂಶಗಳಿದ್ದರೂ ಅವುಗಳಲ್ಲಿ ಅತಿದೊಡ್ಡ ಪ್ಯಾಕೇಜಿನ ಪರಿಣಾಮದ ಬಗ್ಗೆ ಇಲ್ಲಿ ಚರ್ಚಿಸೋಣ. ಅದು ನೂರು ಕೋಟಿಯ ತನಕ ಟರ್ನೋವರ್ ಇರುವ MSMEಗಳಿಗೆ ಮೂರುಲಕ್ಷ ಕೋಟಿಗಳಷ್ಟು ಸಾಲವನ್ನು ಪ್ರಕಟಿಸಿರುವ ಪ್ಯಾಕೇಜ್. ಈ ಸಾಲ ತೆಗೆದುಕೊಂಡರೆ ಒಂದು ವರ್ಷದವರೆಗೆ moratorium ಅಂದರೆ ಅಸಲು ಮತ್ತು ಬಡ್ಡಿಯನ್ನು ಕಟ್ಟುವಂತಿಲ್ಲ. ನಾಲ್ಕು ವರ್ಷಗಳ ಅವಧಿ ಇರುತ್ತದೆ.

ಇಲ್ಲಿ ಮುಖ್ಯ ಅಂಶವೆಂದರೆ ಈ ಸಾಲಕ್ಕೆ ಮತ್ತು ಇದರ ಮೇಲಿನ ಬಡ್ಡಿ ಗೆ ಸರ್ಕಾರವೇ ಸಂಪೂರ್ಣ ಗ್ಯಾರಂಟಿ ಕೊಡುತ್ತದೆ. ಇದರಿಂದಾಗಿ ಬ್ಯಾಂಕುಗಳು ಸುಲಭವಾಗಿ ಸಾಲ ಕೊಡುತ್ತವೆ ಮತ್ತು ಈ ಕ್ರಮದಿಂದಾಗಿ ಸುಮಾರು 45 ಲಕ್ಷ MSMEಗಳಿಗೆ ಈ ರೀತಿಯ ಅಡಮಾನ ಕೇಳದ ಸಾಲ ಸಿಗಲಿದೆ. ಅದೇ ರೀತಿ ಈಗಾಗಲೇ ಸಾಲದ ಸುಳಿಯಲ್ಲಿರುವ MSMEಗಳಿಗೆ 20000 ಕೋಟಿ ರೂಗಳ ಸಾಲ ನೀಡುವ ವ್ಯವಸ್ಥೆ ಮಾಡಲಾಗಿದ್ದು ಅದಕ್ಕೆ ಸರ್ಕಾರ 4000 ಕೋಟಿ ರೂಗಳಷ್ಟು ಗ್ಯಾರಂಟಿ ನೀಡಲಿದೆ. ಇದರಿಂದ ಒಟ್ಟು ಎರಡು ಲಕ್ಷ MSMEಗಳಿಗೆ ಸಹಾಯವಾಗಲಿದೆ.

ಇದರ ಉದ್ದೇಶ: ಇದು ಅಡಮಾನರಹಿತ ಸಾಲವಾಗಿರುವುದರಿಂದ MSMEಗಳು ಈ ಸಾಲವನ್ನು ತೆಗೆದುಕೊಳ್ಳುತ್ತವೆ. ಈ ಹಣವನ್ನು ಬೇಕಾದ ಕಚ್ಚಾವಸ್ತು ಖರೀದಿಗೆ, ಉತ್ಪಾದನಾ ಸಾಮಥ್ರ್ಯ ಹೆಚ್ಚಿಸುವಿಕೆಗೆ ಮತ್ತು ಸಿಬ್ಬಂದಿಗಳಿಗೆ ಮೂರ್ನಾಲ್ಕು ತಿಂಗಳ ವೇತನ ಕೊಡಲು ಬಳಸುತ್ತವೆ. ಇದರಿಂದ ಈ MSMEಗಳು ತಡೆರಹಿತ ಉತ್ಪಾದನೆ ಮಾಡುವಂತಾಗಿ ಇಡೀ ಈ ವಲಯವು ಮತ್ತಷ್ಟು ಉದ್ಯೋಗವನ್ನೂ ಸೃಷ್ಟಿಸಿ ದೇಶದ ಎಕಾನಮಿ ಮತ್ತೆ ಪುಟಿದೇಳಲು ಸಹಾಯವಾಗುತ್ತದೆ ಎಂಬುದು.

ಆದರೆ ಇಲ್ಲಿ ಸರ್ಕಾರ ಅರ್ಥ ಮಾಡಿಕೊಳ್ಳದಂತೆ ನಟಿಸುತ್ತಿರುವ ಬಹುಮುಖ್ಯ ಅಂಶವೊಂದಿದೆ. ಕೊರೋನಾಕ್ಕೂ ಮೊದಲು ಈ ದೇಶದ ಆರ್ಥಿಕತೆ ತಗ್ಗಿದ್ದು ಜನರ ಕೊಳ್ಳುವ ಶಕ್ತಿ ಕಡಿಮೆಯಾಗಿದ್ದರಿಂದ. ಅದು MSMEಗಳ ಮೇಲೂ ಭಾರೀ ನಕಾರಾತ್ಮಕ ಪರಿಣಾಮ ಬೀರಿತ್ತು. ಈಗ ಕೊರೊನಾ ಅಟ್ಯಾಕ್ ನಂತರವಂತೂ ಜನರ ಕೊಳ್ಳುವ ಶಕ್ತಿ ಪಾತಾಳಕ್ಕಿಳಿದಿದೆ. ಇಂಥಾ ಸನ್ನಿವೇಶದಲ್ಲಿ MSMEಗಳು ಸಾಲ ತೆಗೆದುಕೊಂಡು ಉತ್ಪಾದನೆ ಮಾಡಿದರೂ ಕೂಡ ಆ ಉತ್ಪನ್ನಗಳನ್ನು ಕೊಳ್ಳುವವರಿಲ್ಲದೆ ಆ ಸಾಲವೆಲ್ಲ ಮತ್ತಷ್ಟು NPA ಆಗುವುದಲ್ಲದೆ ಈ MSMEಗಳು ಮತ್ತೆ ಏಳಲಾರದಂತೆ ಮುಗಿದುಹೋಗುವ ಸಾಧ್ಯತೆಗಳಿವೆ.

ಇದರಿಂದಾಗಿಯೇ ಈ MSMEಗಳ ಹಲವು ಪ್ರಮುಖ ಉದ್ದಿಮೆದಾರರು ನಮಗೆ ಈ ಸಾಲಕ್ಕಿಂತ ಸಿಬ್ಬಂದಿಗಳ ಕನಿಷ್ಟ ಮೂರು ತಿಂಗಳ ವೇತನಕ್ಕೆ ಮತ್ತು ಕಚ್ಚಾ ವಸ್ತು ಖರೀದಿಗೆ ಸರ್ಕಾರ ಫ್ರೀಯಾಗಿ ಹಣಕೊಟ್ಟಿದ್ದರೆ ಅದು ನಿಜಕ್ಕೂ ಅತ್ಯುತ್ತಮ ಕ್ರಮವಾಗುತ್ತಿತ್ತು ಎಂದಿದ್ದಾರೆ. ಆಗ ಅದು ಒಂದೇ ಸಲ ಉತ್ಪಾದನೆ ಮತ್ತು ಬೇಡಿಕೆ ಎರಡನ್ನೂ ಹೆಚ್ಚಿಸುತ್ತಿತ್ತು ಎಂಬ ಕಾರಣಕ್ಕೆ. ಒಟ್ಟಿನಲ್ಲಿ ಸರ್ಕಾರ MSMEಗಳಿಗೆ ಅಡಮಾನ ರಹಿತ ಸಾಲ ಕೊಡಲು ವ್ಯವಸ್ಥೆ ಮಾಡುವುದು MSMEಗಳಿಗೆ ಒಳ್ಳೆಯ ಉತ್ತೇಜನಾ ಕ್ರಮವೇ ಆದರೂ ಕೂಡ ಆ ಕ್ರಮ ಫಲಪ್ರದವಾಗಬೇಕಾದರೆ ಸರ್ಕಾರ ಜನರ ಕೈಗೆ ನೇರ ಮತ್ತು ಪರೋಕ್ಷ ಕ್ರಮಗಳ ಮೂಲಕ ನಗದು ಸಿಗುವಂತೆ ಮಾಡಬೇಕಿದೆ.
ಈಗಾಗಲೇ ತುಂಬಾ ವಿಳಂಬವಾಗಿದ್ದರೂ, ಈಗಲಾದರೂ ಜನರಿಗೆ ನಗದು ಸಿಗುವಂತ ಕ್ರಮಗಳನ್ನ ತೆಗೆದುಕೊಂಡರೆ ಮಾತ್ರ MSMEಗಳಿಗೆ ಅಡಮಾನ ರಹಿತ ಸಾಲ ಕೊಡುವ ಈ ಕ್ರಮ ನಿರಿಕ್ಷಿತ ಫಲ ಕೊಡುವ ಸಾಧ್ಯತೆಯಿದೆ ಅಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...