HomeಮುಖಪುಟMSMEಗಳಿಗೆ ಮೂರುಲಕ್ಷ ಕೋಟಿ, MSMEಗಳನ್ನ ಉಳಿಸುತ್ತಾ?

MSMEಗಳಿಗೆ ಮೂರುಲಕ್ಷ ಕೋಟಿ, MSMEಗಳನ್ನ ಉಳಿಸುತ್ತಾ?

- Advertisement -
- Advertisement -

ಪ್ರಧಾನಿಯವರ ಕೊರೊನಾ ಪ್ಯಾಕೇಜ್ ಆದ ಇಪ್ಪತ್ತು ಲಕ್ಷ ಕೋಟಿಗಳಲ್ಲಿ ಸಣ್ಣ, ಅತಿಸಣ್ಣ ಮತ್ತು ಮದ್ಯಮ ಗಾತ್ರದ ಉದ್ದಿಮೆಗಳಿಗೆ (MSME – micro, small and medium enterprise) ಕೊಟ್ಟಿರುವ ಪ್ಯಾಕೇಜ್ ಈಗ ಬಹುಚರ್ಚಿತ ವಿಷಯವಾಗಿದೆ. ಕೆಲವರು ಈ ಪ್ಯಾಕೇಜ್ ಒಂದು ಗೇಮ್ ಚೇಂಜರ್ ಎಂದು ಹೇಳುತ್ತಿದ್ದರೆ, ಇನ್ನು ಹಲವರು ಈ ಪ್ಯಾಕೇಜ್ ವಾಸ್ತವದಲ್ಲಿ ಉಂಟುಮಾಡುವ ಪರಿಣಾಮ ನಗಣ್ಯ ಎಂದು ಹೇಳುತ್ತಿದ್ದಾರೆ.

ಈ MSMEಪ್ಯಾಕೇಜ್ ಬಗ್ಗೆ ಇಷ್ಟೊಂದು ಚರ್ಚೆ ಯಾಕೆ ನಡೀತಿದೆ? ನಿಜಕ್ಕೂ ಈ MSMEಗಳು ದೇಶದ ಎಕಾನಮಿಯೊಳಗೆ ಅಷ್ಟೊಂದು ಮುಖ್ಯಾನ? ಕೆಲ ಅಂಕಿಅಂಶಗಳನ್ನ ನೋಡಿದ್ರೆ ಇವುಗಳ ಪ್ರಾಮುಖ್ಯತೆ ಎಷ್ಟು ಅಂತ ನಮಗೆ ತಿಳಿಯುತ್ತೆ. ಇಂಡಿಯಾದಲ್ಲಿ ಒಟ್ಟು 6.3 ಕೋಟಿ MSMEಗಳು ಇವೆ. ಅವುಗಳು ಸೃಷ್ಟಿಮಾಡಿರುವ ಒಟ್ಟು ನೇರ ಉದ್ಯೋಗಗಳು ಬರೋಬ್ಬರಿ ಹನ್ನೊಂದು ಕೋಟಿಗಳಷ್ಟು. ಈ ದೇಶದ ಒಟ್ಟು ಜಿಡಿಪಿಯಲ್ಲಿ 30% ರಷ್ಟು ಅಂದ್ರೆ 60 ಲಕ್ಷ ಕೋಟಿಗಳಿಗಿಂತ ಹೆಚ್ಚು ಈ MSMEಗಳಿಂದನೇ ಬರುತ್ತೆ. ಈ ದೇಶದ ಒಟ್ಟು ತಯಾರಿಕೆಯಲ್ಲಿ (manufacturing) 45% ರಷ್ಟು MSMEಗಳೇ ಮಾಡುತ್ವೆ. ಹಾಗೂ ದೇಶದಿಂದ ಆಗುವ ಒಟ್ಟು ರಫ್ತಿನಲ್ಲಿ 50% ನಷ್ಟು MSMEಗಳಿಂದಲೇ ಆಗುತ್ತೆ.

ಈ ಮೇಲಿನ ಅಂಕಿಅಂಶಗಳು MSMEಗಳು ಈ ದೇಶದ ಎಕಾನಮಿಯ ಆರೋಗ್ಯಕ್ಕೆ ಎಷ್ಟು ಮುಖ್ಯ ಅಂತ ಯಾರಿಗೇ ಆದ್ರೂ ಸುಲಭವಾಗಿ ಗೊತ್ತಾಗುತ್ತೆ. ಅದರಲ್ಲೂ ಈ ದೇಶದ ವರ್ಕ್ ಫೋರ್ಸಿನ ಶೇಖಡಾ ಇಪ್ಪತ್ತರಷ್ಟು ಮಂದಿ MSMEಗಳಲ್ಲೇ ಕೆಲಸ ಮಾಡ್ತಿದಾರೆ ಅಂದರೆ ಉದ್ಯೋಗ ಸೃಷ್ಟಿಯಲ್ಲಿ ಇವುಗಳ ಮಹತ್ವ ಎಂಥದು ಅಂತ ಅರಿವಾಗುತ್ತೆ. ಆದರೆ, ಬಹುತೇಕ MSMEಗಳ ಅತಿಮುಖ್ಯವಾದ ಪ್ರಾಬ್ಲಮ್ ಏನು ಅಂದ್ರೆ ಶೇಕಡಾ ತೊಂಬತ್ತರಷ್ಟು MSMEಗಳು ಅತ್ಯಂತ ಕಡಿಮೆ ಹೆಚ್ಚುವರಿ ನಗದಿನ ಲಭ್ಯತೆಯಲ್ಲಿಯೇ ಉದ್ಯಮ ನಿರ್ವಹಣೆ ಮಾಡಬೇಕಾದ ಸ್ಥಿತಿಯಲ್ಲಿವೆ. ಹಾಗಾಗಿ, ಇವುಗಳಿಗೆ ನಗದಿನ ಹರಿವು ಸ್ವಲ್ಪ ಕಡಿಮೆಯಾದರೂ workkng capital ಇಲ್ಲದಂತಾಗಿ ಈ MSMEಗಳು ಸಂಕಷ್ಟಕ್ಕೆ ಸಿಲುಕುತ್ತವೆ.

ನಮಗೆ ತಿಳಿದಿರುವಂತೆ ದೇಶದ ಕಡೆಯ ಎರಡು ತ್ರೈಮಾಸಿಕಗಳಲ್ಲಿ ಜಿಡಿಪಿಯ ಬೆಳವಣಿಗೆ ಶೇ.5 ಮತ್ತು ಶೇ.4.5 ಕ್ಕಿಳಿದಿತ್ತು. ಅದಕ್ಕೆ ಮುಖ್ಯ ಕಾರಣ ಮಾರುಕಟ್ಟೆಯಲ್ಲುಂಟಾದ ಬೇಡಿಕೆಯ ಕೊರತೆ. ಅಂದರೆ ಜನಗಳ ಕೈಯಲ್ಲಿ ಹಣವಿಲ್ಲದ ಕಾರಣ ಅವರ ಕೊಳ್ಳುವ ಶಕ್ತಿ ಕಡಿಮೆಯಾಗಿದ್ದು. ಇದರ ಹೊಡೆತ ಅತಿ ಬೇಗನೆ ಬಿದ್ದಿದ್ದೇ ಈ MSMEಗಳಿಗೆ ಮತ್ತು ಅದರಿಂದಾಗಿಯೇ ಅನೇಕವು ಮುಚ್ಚುವ ಸ್ಥಿತಿಗೆ ಬಂದಿದ್ದವು. ಆದರೆ, ಈಗ ಕೊರೋನಾ ಲಾಕ್‍ಡೌನಿಂದಾಗಿ ಕೋಟ್ಯಂತರ ಜನ ಕೆಲಸ ಕಳೆದುಕೊಂಡಿದ್ದು ಅವರ ಕೊಳ್ಳುವ ಶಕ್ತಿ ಶೂನ್ಯವಾಗಿದೆ. ಇದರಿಂದಾಗಿ ಅತಿ ಹೆಚ್ಚು ಮತ್ತು ಅತಿ ಶೀಘ್ರವಾಗಿ ಹೊಡೆತ ತಿನ್ನುತ್ತಿರುವುದು MSMEಗಳೇ. ತಾತ್ಕಾಲಿಕವಾಗಿಯಾದರೂ ಅತಿ ಹೆಚ್ಚು ಉದ್ಯೋಗ ನಷ್ಟವಾಗಿರುವುದೂ ಕೂಡ MSMEಗಳಲ್ಲಿಯೇ.

ಈ ಎಲ್ಲ ಹಿನ್ನೆಲೆಯಲ್ಲಿ ಕೇಂದ್ರಸರ್ಕಾರ ಈ MSMEಗಳ ಪುನಶ್ಚೇತನಕ್ಕೆಂದೇ ಪ್ಯಾಕೇಜ್ ಘೋಷಣೆ ಮಾಡಿದೆ. ಈ ಪ್ಯಾಕೇಜು ಒಟ್ಟಾರೆಯಾಗಿ MSMEಗಳಿಗೆ ಸುಲಭವಾಗಿ ಸಾಲಕೊಡುವ ಯೋಜನೆಯಾಗಿದ್ದು ಇದರಲ್ಲಿ ನಾಲ್ಕೈದು ಅಂಶಗಳಿದ್ದರೂ ಅವುಗಳಲ್ಲಿ ಅತಿದೊಡ್ಡ ಪ್ಯಾಕೇಜಿನ ಪರಿಣಾಮದ ಬಗ್ಗೆ ಇಲ್ಲಿ ಚರ್ಚಿಸೋಣ. ಅದು ನೂರು ಕೋಟಿಯ ತನಕ ಟರ್ನೋವರ್ ಇರುವ MSMEಗಳಿಗೆ ಮೂರುಲಕ್ಷ ಕೋಟಿಗಳಷ್ಟು ಸಾಲವನ್ನು ಪ್ರಕಟಿಸಿರುವ ಪ್ಯಾಕೇಜ್. ಈ ಸಾಲ ತೆಗೆದುಕೊಂಡರೆ ಒಂದು ವರ್ಷದವರೆಗೆ moratorium ಅಂದರೆ ಅಸಲು ಮತ್ತು ಬಡ್ಡಿಯನ್ನು ಕಟ್ಟುವಂತಿಲ್ಲ. ನಾಲ್ಕು ವರ್ಷಗಳ ಅವಧಿ ಇರುತ್ತದೆ.

ಇಲ್ಲಿ ಮುಖ್ಯ ಅಂಶವೆಂದರೆ ಈ ಸಾಲಕ್ಕೆ ಮತ್ತು ಇದರ ಮೇಲಿನ ಬಡ್ಡಿ ಗೆ ಸರ್ಕಾರವೇ ಸಂಪೂರ್ಣ ಗ್ಯಾರಂಟಿ ಕೊಡುತ್ತದೆ. ಇದರಿಂದಾಗಿ ಬ್ಯಾಂಕುಗಳು ಸುಲಭವಾಗಿ ಸಾಲ ಕೊಡುತ್ತವೆ ಮತ್ತು ಈ ಕ್ರಮದಿಂದಾಗಿ ಸುಮಾರು 45 ಲಕ್ಷ MSMEಗಳಿಗೆ ಈ ರೀತಿಯ ಅಡಮಾನ ಕೇಳದ ಸಾಲ ಸಿಗಲಿದೆ. ಅದೇ ರೀತಿ ಈಗಾಗಲೇ ಸಾಲದ ಸುಳಿಯಲ್ಲಿರುವ MSMEಗಳಿಗೆ 20000 ಕೋಟಿ ರೂಗಳ ಸಾಲ ನೀಡುವ ವ್ಯವಸ್ಥೆ ಮಾಡಲಾಗಿದ್ದು ಅದಕ್ಕೆ ಸರ್ಕಾರ 4000 ಕೋಟಿ ರೂಗಳಷ್ಟು ಗ್ಯಾರಂಟಿ ನೀಡಲಿದೆ. ಇದರಿಂದ ಒಟ್ಟು ಎರಡು ಲಕ್ಷ MSMEಗಳಿಗೆ ಸಹಾಯವಾಗಲಿದೆ.

ಇದರ ಉದ್ದೇಶ: ಇದು ಅಡಮಾನರಹಿತ ಸಾಲವಾಗಿರುವುದರಿಂದ MSMEಗಳು ಈ ಸಾಲವನ್ನು ತೆಗೆದುಕೊಳ್ಳುತ್ತವೆ. ಈ ಹಣವನ್ನು ಬೇಕಾದ ಕಚ್ಚಾವಸ್ತು ಖರೀದಿಗೆ, ಉತ್ಪಾದನಾ ಸಾಮಥ್ರ್ಯ ಹೆಚ್ಚಿಸುವಿಕೆಗೆ ಮತ್ತು ಸಿಬ್ಬಂದಿಗಳಿಗೆ ಮೂರ್ನಾಲ್ಕು ತಿಂಗಳ ವೇತನ ಕೊಡಲು ಬಳಸುತ್ತವೆ. ಇದರಿಂದ ಈ MSMEಗಳು ತಡೆರಹಿತ ಉತ್ಪಾದನೆ ಮಾಡುವಂತಾಗಿ ಇಡೀ ಈ ವಲಯವು ಮತ್ತಷ್ಟು ಉದ್ಯೋಗವನ್ನೂ ಸೃಷ್ಟಿಸಿ ದೇಶದ ಎಕಾನಮಿ ಮತ್ತೆ ಪುಟಿದೇಳಲು ಸಹಾಯವಾಗುತ್ತದೆ ಎಂಬುದು.

ಆದರೆ ಇಲ್ಲಿ ಸರ್ಕಾರ ಅರ್ಥ ಮಾಡಿಕೊಳ್ಳದಂತೆ ನಟಿಸುತ್ತಿರುವ ಬಹುಮುಖ್ಯ ಅಂಶವೊಂದಿದೆ. ಕೊರೋನಾಕ್ಕೂ ಮೊದಲು ಈ ದೇಶದ ಆರ್ಥಿಕತೆ ತಗ್ಗಿದ್ದು ಜನರ ಕೊಳ್ಳುವ ಶಕ್ತಿ ಕಡಿಮೆಯಾಗಿದ್ದರಿಂದ. ಅದು MSMEಗಳ ಮೇಲೂ ಭಾರೀ ನಕಾರಾತ್ಮಕ ಪರಿಣಾಮ ಬೀರಿತ್ತು. ಈಗ ಕೊರೊನಾ ಅಟ್ಯಾಕ್ ನಂತರವಂತೂ ಜನರ ಕೊಳ್ಳುವ ಶಕ್ತಿ ಪಾತಾಳಕ್ಕಿಳಿದಿದೆ. ಇಂಥಾ ಸನ್ನಿವೇಶದಲ್ಲಿ MSMEಗಳು ಸಾಲ ತೆಗೆದುಕೊಂಡು ಉತ್ಪಾದನೆ ಮಾಡಿದರೂ ಕೂಡ ಆ ಉತ್ಪನ್ನಗಳನ್ನು ಕೊಳ್ಳುವವರಿಲ್ಲದೆ ಆ ಸಾಲವೆಲ್ಲ ಮತ್ತಷ್ಟು NPA ಆಗುವುದಲ್ಲದೆ ಈ MSMEಗಳು ಮತ್ತೆ ಏಳಲಾರದಂತೆ ಮುಗಿದುಹೋಗುವ ಸಾಧ್ಯತೆಗಳಿವೆ.

ಇದರಿಂದಾಗಿಯೇ ಈ MSMEಗಳ ಹಲವು ಪ್ರಮುಖ ಉದ್ದಿಮೆದಾರರು ನಮಗೆ ಈ ಸಾಲಕ್ಕಿಂತ ಸಿಬ್ಬಂದಿಗಳ ಕನಿಷ್ಟ ಮೂರು ತಿಂಗಳ ವೇತನಕ್ಕೆ ಮತ್ತು ಕಚ್ಚಾ ವಸ್ತು ಖರೀದಿಗೆ ಸರ್ಕಾರ ಫ್ರೀಯಾಗಿ ಹಣಕೊಟ್ಟಿದ್ದರೆ ಅದು ನಿಜಕ್ಕೂ ಅತ್ಯುತ್ತಮ ಕ್ರಮವಾಗುತ್ತಿತ್ತು ಎಂದಿದ್ದಾರೆ. ಆಗ ಅದು ಒಂದೇ ಸಲ ಉತ್ಪಾದನೆ ಮತ್ತು ಬೇಡಿಕೆ ಎರಡನ್ನೂ ಹೆಚ್ಚಿಸುತ್ತಿತ್ತು ಎಂಬ ಕಾರಣಕ್ಕೆ. ಒಟ್ಟಿನಲ್ಲಿ ಸರ್ಕಾರ MSMEಗಳಿಗೆ ಅಡಮಾನ ರಹಿತ ಸಾಲ ಕೊಡಲು ವ್ಯವಸ್ಥೆ ಮಾಡುವುದು MSMEಗಳಿಗೆ ಒಳ್ಳೆಯ ಉತ್ತೇಜನಾ ಕ್ರಮವೇ ಆದರೂ ಕೂಡ ಆ ಕ್ರಮ ಫಲಪ್ರದವಾಗಬೇಕಾದರೆ ಸರ್ಕಾರ ಜನರ ಕೈಗೆ ನೇರ ಮತ್ತು ಪರೋಕ್ಷ ಕ್ರಮಗಳ ಮೂಲಕ ನಗದು ಸಿಗುವಂತೆ ಮಾಡಬೇಕಿದೆ.
ಈಗಾಗಲೇ ತುಂಬಾ ವಿಳಂಬವಾಗಿದ್ದರೂ, ಈಗಲಾದರೂ ಜನರಿಗೆ ನಗದು ಸಿಗುವಂತ ಕ್ರಮಗಳನ್ನ ತೆಗೆದುಕೊಂಡರೆ ಮಾತ್ರ MSMEಗಳಿಗೆ ಅಡಮಾನ ರಹಿತ ಸಾಲ ಕೊಡುವ ಈ ಕ್ರಮ ನಿರಿಕ್ಷಿತ ಫಲ ಕೊಡುವ ಸಾಧ್ಯತೆಯಿದೆ ಅಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...