Homeಕರೋನಾ ತಲ್ಲಣಕೆಲಸಕ್ಕೆ ಸೇರಿ 3 ತಿಂಗಳಾದರೂ ದಾದಿಯರಿಗೆ ಸಂಬಳ ಕೊಡದ ಬಿಎಂಸಿ!

ಕೆಲಸಕ್ಕೆ ಸೇರಿ 3 ತಿಂಗಳಾದರೂ ದಾದಿಯರಿಗೆ ಸಂಬಳ ಕೊಡದ ಬಿಎಂಸಿ!

ಏಪ್ರಿಲ್-ಮೇ ತಿಂಗಳಲ್ಲಿ ಬೃಹಮ್‌ಮುಂಬೈ ಮುನ್ಸಿಪಲ್‌ ಕಾರ್ಪೊರೇಶನ್ ಈ ದಾದಿಯರನ್ನು ವಿಶೇಷ ನೇಮಕಾತಿ ಅಡಿಯಲ್ಲಿ ನೇಮಕ ಮಾಡಿತ್ತು.

- Advertisement -
- Advertisement -

ಮುಂಬೈ ಮಹಾನಗರದಲ್ಲಿ ಕೊರೊನಾ ವೈರಸ್ ವಿರುದ್ಧದ ಹೋರಾಟವನ್ನು ಬಲಪಡಿಸಲು ಹೊಸದಾಗಿ ನೇಮಕಗೊಂಡ 209 ದಾದಿಯರಿಗೆ ಮುಂಬೈ ನಾಗರಿಕ ಸಂಸ್ಥೆಯಾದ ಬೃಹನ್‌‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಸಂಬಳ ಹಾಗೂ ವಿಶೇಷ ದೈನಂದಿನ ಭತ್ಯೆಯನ್ನು ನೀಡಿಲ್ಲ ಎಂದು ಕಾರ್ಮಿಕ ಸಂಘಟನೆ ಆರೋಪಿಸಿದೆ.

ನಗರದಲ್ಲಿ ಕೊರೊನಾ ವೈರಸ್ ಹರಡಲು ಪ್ರಾರಂಭವಾದ ಏಪ್ರಿಲ್-ಮೇ ತಿಂಗಳಲ್ಲಿ ಬಿಎಂಸಿ ಈ ದಾದಿಯರನ್ನು ವಿಶೇಷ ನೇಮಕಾತಿ ಅಡಿಯಲ್ಲಿ ನೇಮಕ ಮಾಡಿದೆ ಎಂದು ಮುನ್ಸಿಪಲ್ ಮಜ್ದೂರ್ ಯೂನಿಯನ್ (ಎಂಎಂಯು) ತಿಳಿಸಿದೆ.

ಆದಾಗ್ಯೂ, ಕಳೆದ ಮೂರು ತಿಂಗಳುಗಳಿಂದ ಬಿಎಂಸಿ ಅವರಿಗೆ ಸಂಬಳ ಹಾಗೂ ದೈನಂದಿನ 300 ರೂ. ವಿಶೇಷ ಭತ್ಯೆ ನೀಡಿಲ್ಲ ಎಂದು ಎಂಎಂಯು ಹೇಳಿದೆ.

ರೋಸ್ಟರ್ (ನೇಮಕಾತಿ) ಪರಿಶೀಲನೆ ನಡೆಯುತ್ತಿರುವ ಪ್ರಕ್ರಿಯೆಯಿಂದಾಗಿ ವೇತನ ವಿತರಣೆ ವಿಳಂಬವಾಗಿದೆ. ಆದರೆ ದಾದಿಯರಿಗೆ ಶೀಘ್ರದಲ್ಲೇ ಅವರ ವೇತನವನ್ನು ನೀಡಲಾಗುವುದು ಎಂದು ಬಿಎಂಸಿ ಆರೋಗ್ಯ ಇಲಾಖೆ ಅಧಿಕಾರಿ ಭರವಸೆ ನೀಡಿದ್ದಾರೆ.

“ನಾನು ಮೇ ಮೊದಲ ವಾರದಲ್ಲಿ ಬಿಎಂಸಿಯ ಕರ್ತವ್ಯಕ್ಕೆ ಸೇರಿಕೊಂಡೆ. ಅಂದಿನಿಂದ ನಾನು ಕೊರೊನಾ ಸೌಲಭ್ಯದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಲ್ಲದೆ ಬಿಎಂಸಿ ಆಹಾರ ಮತ್ತು ವಸತಿ ವ್ಯವಸ್ಥೆ ಮಾಡಿದ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದೇನೆ, ಆದರೆ ನನಗೆ ಸಂಬಳ ಅಥವಾ 300 ರೂ. ದಿನದ ವಿಶೇಷ ಭತ್ಯೆ ಇನ್ನು ಸಿಕ್ಕಿಲ್ಲ” ಎಂದು ದಾದಿಯೊಬ್ಬರು ಹೇಳಿದ್ದಾಗಿ ನ್ಯೂಸ್ ಕ್ಲಿಕ್ ವರದಿ ಮಾಡಿದೆ.

ಅವರು ಬಿಎಂಸಿಗೆ ಸೇರುವ ಮೊದಲು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಮುನ್ಸಿಪಾಲಿಟಿಯು ಶಾಶ್ವತ ಆಧಾರದ ಮೇಲೆ ದಾದಿಯರನ್ನು ನೇಮಿಸಲು ಜಾಹೀರಾತುಗಳನ್ನು ನೀಡಿದ್ದರಿಂದ ಉದ್ಯೋಗ ಬದಲಿಸಿದ್ದಾರೆ ಎನ್ನಲಾಗಿದೆ.

ಆದರೆ ಪ್ರಸ್ತುತ ಎದುರಿಸುತ್ತಿರುವ ಆರ್ಥಿಕ ತೊಂದರೆಯಿಂದಾಗಿ ಈ ನಿರ್ಧಾರಕ್ಕೆ ಮಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತಿದ್ದಾರೆ. “ಹಣಕಾಸಿನ ಹೊಣೆಗಾರಿಕೆಗಳನ್ನು ಹೊಂದಿರುವಾಗ, ಮೂರು ತಿಂಗಳವರೆಗೆ ಸಂಬಳವಿಲ್ಲದೆ ಬದುಕುವುದು ಕಷ್ಟ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಪುರಸಭೆ ಆಯುಕ್ತ ಇಕ್ಬಾಲ್ ಸಿಂಗ್ ಚಾಹಲ್ ಅವರಿಗೆ ಜುಲೈ 25 ರಂದು ಬರೆದ ಪತ್ರದಲ್ಲಿ, ಹೊಸದಾಗಿ ನೇಮಕಗೊಂಡಿರುವ ಈ 209 ದಾದಿಯರಿಗೆ ತಕ್ಷಣ ಸಂಬಳ ಮತ್ತು ಭತ್ಯೆಯನ್ನು ನೀಡಬೇಕೆಂದು ಎಂಎಂಯು ಒತ್ತಾಯಿಸಿದೆ.

ಅವರು ಕರ್ತವ್ಯಕ್ಕೆ ಸೇರಿದ ದಿನಾಂಕದಿಂದ ಬಿಎಂಸಿ ನಡೆಸುವ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಳನ್ನು ಪರಿಗಣಿಸುವಂತೆ ಯೂನಿಯನ್ ಪಾಲಿಕೆಯನ್ನು ಕೇಳಿದೆ.

ಈ ಎಲ್ಲ ದಾದಿಯರಿಗೆ ಬಿಎಂಸಿಯ ನರ್ಸಿಂಗ್ ಕಾಲೇಜಿನಲ್ಲಿ ತರಬೇತಿ ನೀಡಲಾಗಿದೆ. ಏಪ್ರಿಲ್-ಮೇ ತಿಂಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳು ತೀವ್ರವಾಗಿ ಏರಿಕೆಯಾಗಲು ಪ್ರಾರಂಭವಾದಾಗ ಅವರನ್ನು ತಕ್ಷಣ ಸೇರಲು ತಿಳಿಸಲಾಗಿದೆ ಎಂದು ಎಂಎಂಯು ಕಾರ್ಯದರ್ಶಿ ಪ್ರದೀಪ್ ನರ್ಕರ್ ಹೇಳಿದ್ದಾರೆ.

“ಹೆಚ್ಚಿನ ಎಲ್ಲಾ ದಾದಿಯರು ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದರು. ಅವರು ತಮ್ಮ ಸೇವೆಗಳನ್ನು ತುರ್ತಾಗಿ ಅಗತ್ಯವಿರುವ ಬಿಎಂಸಿಗೆ ಸೇರಲು ತಮ್ಮ ಉದ್ಯೋಗವನ್ನು ತೊರೆದರು. ಆದರೆ ಈಗ ಅವರು ಸಂಬಳ ಮತ್ತು ಭತ್ಯೆಗಳಿಂದ ವಂಚಿತರಾಗಿದ್ದಾರೆ, ಇದರಿಂದಾಗಿ ಅವರಿಗೆ ಬದುಕುಳಿಯುವುದು ಕಷ್ಟಕರವಾಗಿದೆ” ಎಂದು ಅವರು ಹೇಳಿದರು.


ಓದಿ: ಕಾರ್ಮಿಕ ಕಾನೂನು ತಿದ್ದುಪಡಿಗೆ ವಿರೋಧ: ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆಗೆ ನಿರ್ಧಾರ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...