Homeಕರೋನಾ ತಲ್ಲಣಕೆಲಸಕ್ಕೆ ಸೇರಿ 3 ತಿಂಗಳಾದರೂ ದಾದಿಯರಿಗೆ ಸಂಬಳ ಕೊಡದ ಬಿಎಂಸಿ!

ಕೆಲಸಕ್ಕೆ ಸೇರಿ 3 ತಿಂಗಳಾದರೂ ದಾದಿಯರಿಗೆ ಸಂಬಳ ಕೊಡದ ಬಿಎಂಸಿ!

ಏಪ್ರಿಲ್-ಮೇ ತಿಂಗಳಲ್ಲಿ ಬೃಹಮ್‌ಮುಂಬೈ ಮುನ್ಸಿಪಲ್‌ ಕಾರ್ಪೊರೇಶನ್ ಈ ದಾದಿಯರನ್ನು ವಿಶೇಷ ನೇಮಕಾತಿ ಅಡಿಯಲ್ಲಿ ನೇಮಕ ಮಾಡಿತ್ತು.

- Advertisement -
- Advertisement -

ಮುಂಬೈ ಮಹಾನಗರದಲ್ಲಿ ಕೊರೊನಾ ವೈರಸ್ ವಿರುದ್ಧದ ಹೋರಾಟವನ್ನು ಬಲಪಡಿಸಲು ಹೊಸದಾಗಿ ನೇಮಕಗೊಂಡ 209 ದಾದಿಯರಿಗೆ ಮುಂಬೈ ನಾಗರಿಕ ಸಂಸ್ಥೆಯಾದ ಬೃಹನ್‌‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಸಂಬಳ ಹಾಗೂ ವಿಶೇಷ ದೈನಂದಿನ ಭತ್ಯೆಯನ್ನು ನೀಡಿಲ್ಲ ಎಂದು ಕಾರ್ಮಿಕ ಸಂಘಟನೆ ಆರೋಪಿಸಿದೆ.

ನಗರದಲ್ಲಿ ಕೊರೊನಾ ವೈರಸ್ ಹರಡಲು ಪ್ರಾರಂಭವಾದ ಏಪ್ರಿಲ್-ಮೇ ತಿಂಗಳಲ್ಲಿ ಬಿಎಂಸಿ ಈ ದಾದಿಯರನ್ನು ವಿಶೇಷ ನೇಮಕಾತಿ ಅಡಿಯಲ್ಲಿ ನೇಮಕ ಮಾಡಿದೆ ಎಂದು ಮುನ್ಸಿಪಲ್ ಮಜ್ದೂರ್ ಯೂನಿಯನ್ (ಎಂಎಂಯು) ತಿಳಿಸಿದೆ.

ಆದಾಗ್ಯೂ, ಕಳೆದ ಮೂರು ತಿಂಗಳುಗಳಿಂದ ಬಿಎಂಸಿ ಅವರಿಗೆ ಸಂಬಳ ಹಾಗೂ ದೈನಂದಿನ 300 ರೂ. ವಿಶೇಷ ಭತ್ಯೆ ನೀಡಿಲ್ಲ ಎಂದು ಎಂಎಂಯು ಹೇಳಿದೆ.

ರೋಸ್ಟರ್ (ನೇಮಕಾತಿ) ಪರಿಶೀಲನೆ ನಡೆಯುತ್ತಿರುವ ಪ್ರಕ್ರಿಯೆಯಿಂದಾಗಿ ವೇತನ ವಿತರಣೆ ವಿಳಂಬವಾಗಿದೆ. ಆದರೆ ದಾದಿಯರಿಗೆ ಶೀಘ್ರದಲ್ಲೇ ಅವರ ವೇತನವನ್ನು ನೀಡಲಾಗುವುದು ಎಂದು ಬಿಎಂಸಿ ಆರೋಗ್ಯ ಇಲಾಖೆ ಅಧಿಕಾರಿ ಭರವಸೆ ನೀಡಿದ್ದಾರೆ.

“ನಾನು ಮೇ ಮೊದಲ ವಾರದಲ್ಲಿ ಬಿಎಂಸಿಯ ಕರ್ತವ್ಯಕ್ಕೆ ಸೇರಿಕೊಂಡೆ. ಅಂದಿನಿಂದ ನಾನು ಕೊರೊನಾ ಸೌಲಭ್ಯದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಲ್ಲದೆ ಬಿಎಂಸಿ ಆಹಾರ ಮತ್ತು ವಸತಿ ವ್ಯವಸ್ಥೆ ಮಾಡಿದ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದೇನೆ, ಆದರೆ ನನಗೆ ಸಂಬಳ ಅಥವಾ 300 ರೂ. ದಿನದ ವಿಶೇಷ ಭತ್ಯೆ ಇನ್ನು ಸಿಕ್ಕಿಲ್ಲ” ಎಂದು ದಾದಿಯೊಬ್ಬರು ಹೇಳಿದ್ದಾಗಿ ನ್ಯೂಸ್ ಕ್ಲಿಕ್ ವರದಿ ಮಾಡಿದೆ.

ಅವರು ಬಿಎಂಸಿಗೆ ಸೇರುವ ಮೊದಲು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಮುನ್ಸಿಪಾಲಿಟಿಯು ಶಾಶ್ವತ ಆಧಾರದ ಮೇಲೆ ದಾದಿಯರನ್ನು ನೇಮಿಸಲು ಜಾಹೀರಾತುಗಳನ್ನು ನೀಡಿದ್ದರಿಂದ ಉದ್ಯೋಗ ಬದಲಿಸಿದ್ದಾರೆ ಎನ್ನಲಾಗಿದೆ.

ಆದರೆ ಪ್ರಸ್ತುತ ಎದುರಿಸುತ್ತಿರುವ ಆರ್ಥಿಕ ತೊಂದರೆಯಿಂದಾಗಿ ಈ ನಿರ್ಧಾರಕ್ಕೆ ಮಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತಿದ್ದಾರೆ. “ಹಣಕಾಸಿನ ಹೊಣೆಗಾರಿಕೆಗಳನ್ನು ಹೊಂದಿರುವಾಗ, ಮೂರು ತಿಂಗಳವರೆಗೆ ಸಂಬಳವಿಲ್ಲದೆ ಬದುಕುವುದು ಕಷ್ಟ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಪುರಸಭೆ ಆಯುಕ್ತ ಇಕ್ಬಾಲ್ ಸಿಂಗ್ ಚಾಹಲ್ ಅವರಿಗೆ ಜುಲೈ 25 ರಂದು ಬರೆದ ಪತ್ರದಲ್ಲಿ, ಹೊಸದಾಗಿ ನೇಮಕಗೊಂಡಿರುವ ಈ 209 ದಾದಿಯರಿಗೆ ತಕ್ಷಣ ಸಂಬಳ ಮತ್ತು ಭತ್ಯೆಯನ್ನು ನೀಡಬೇಕೆಂದು ಎಂಎಂಯು ಒತ್ತಾಯಿಸಿದೆ.

ಅವರು ಕರ್ತವ್ಯಕ್ಕೆ ಸೇರಿದ ದಿನಾಂಕದಿಂದ ಬಿಎಂಸಿ ನಡೆಸುವ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಳನ್ನು ಪರಿಗಣಿಸುವಂತೆ ಯೂನಿಯನ್ ಪಾಲಿಕೆಯನ್ನು ಕೇಳಿದೆ.

ಈ ಎಲ್ಲ ದಾದಿಯರಿಗೆ ಬಿಎಂಸಿಯ ನರ್ಸಿಂಗ್ ಕಾಲೇಜಿನಲ್ಲಿ ತರಬೇತಿ ನೀಡಲಾಗಿದೆ. ಏಪ್ರಿಲ್-ಮೇ ತಿಂಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳು ತೀವ್ರವಾಗಿ ಏರಿಕೆಯಾಗಲು ಪ್ರಾರಂಭವಾದಾಗ ಅವರನ್ನು ತಕ್ಷಣ ಸೇರಲು ತಿಳಿಸಲಾಗಿದೆ ಎಂದು ಎಂಎಂಯು ಕಾರ್ಯದರ್ಶಿ ಪ್ರದೀಪ್ ನರ್ಕರ್ ಹೇಳಿದ್ದಾರೆ.

“ಹೆಚ್ಚಿನ ಎಲ್ಲಾ ದಾದಿಯರು ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದರು. ಅವರು ತಮ್ಮ ಸೇವೆಗಳನ್ನು ತುರ್ತಾಗಿ ಅಗತ್ಯವಿರುವ ಬಿಎಂಸಿಗೆ ಸೇರಲು ತಮ್ಮ ಉದ್ಯೋಗವನ್ನು ತೊರೆದರು. ಆದರೆ ಈಗ ಅವರು ಸಂಬಳ ಮತ್ತು ಭತ್ಯೆಗಳಿಂದ ವಂಚಿತರಾಗಿದ್ದಾರೆ, ಇದರಿಂದಾಗಿ ಅವರಿಗೆ ಬದುಕುಳಿಯುವುದು ಕಷ್ಟಕರವಾಗಿದೆ” ಎಂದು ಅವರು ಹೇಳಿದರು.


ಓದಿ: ಕಾರ್ಮಿಕ ಕಾನೂನು ತಿದ್ದುಪಡಿಗೆ ವಿರೋಧ: ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆಗೆ ನಿರ್ಧಾರ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...