Homeಕರೋನಾ ತಲ್ಲಣಕೆಲಸಕ್ಕೆ ಸೇರಿ 3 ತಿಂಗಳಾದರೂ ದಾದಿಯರಿಗೆ ಸಂಬಳ ಕೊಡದ ಬಿಎಂಸಿ!

ಕೆಲಸಕ್ಕೆ ಸೇರಿ 3 ತಿಂಗಳಾದರೂ ದಾದಿಯರಿಗೆ ಸಂಬಳ ಕೊಡದ ಬಿಎಂಸಿ!

ಏಪ್ರಿಲ್-ಮೇ ತಿಂಗಳಲ್ಲಿ ಬೃಹಮ್‌ಮುಂಬೈ ಮುನ್ಸಿಪಲ್‌ ಕಾರ್ಪೊರೇಶನ್ ಈ ದಾದಿಯರನ್ನು ವಿಶೇಷ ನೇಮಕಾತಿ ಅಡಿಯಲ್ಲಿ ನೇಮಕ ಮಾಡಿತ್ತು.

- Advertisement -
- Advertisement -

ಮುಂಬೈ ಮಹಾನಗರದಲ್ಲಿ ಕೊರೊನಾ ವೈರಸ್ ವಿರುದ್ಧದ ಹೋರಾಟವನ್ನು ಬಲಪಡಿಸಲು ಹೊಸದಾಗಿ ನೇಮಕಗೊಂಡ 209 ದಾದಿಯರಿಗೆ ಮುಂಬೈ ನಾಗರಿಕ ಸಂಸ್ಥೆಯಾದ ಬೃಹನ್‌‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಸಂಬಳ ಹಾಗೂ ವಿಶೇಷ ದೈನಂದಿನ ಭತ್ಯೆಯನ್ನು ನೀಡಿಲ್ಲ ಎಂದು ಕಾರ್ಮಿಕ ಸಂಘಟನೆ ಆರೋಪಿಸಿದೆ.

ನಗರದಲ್ಲಿ ಕೊರೊನಾ ವೈರಸ್ ಹರಡಲು ಪ್ರಾರಂಭವಾದ ಏಪ್ರಿಲ್-ಮೇ ತಿಂಗಳಲ್ಲಿ ಬಿಎಂಸಿ ಈ ದಾದಿಯರನ್ನು ವಿಶೇಷ ನೇಮಕಾತಿ ಅಡಿಯಲ್ಲಿ ನೇಮಕ ಮಾಡಿದೆ ಎಂದು ಮುನ್ಸಿಪಲ್ ಮಜ್ದೂರ್ ಯೂನಿಯನ್ (ಎಂಎಂಯು) ತಿಳಿಸಿದೆ.

ಆದಾಗ್ಯೂ, ಕಳೆದ ಮೂರು ತಿಂಗಳುಗಳಿಂದ ಬಿಎಂಸಿ ಅವರಿಗೆ ಸಂಬಳ ಹಾಗೂ ದೈನಂದಿನ 300 ರೂ. ವಿಶೇಷ ಭತ್ಯೆ ನೀಡಿಲ್ಲ ಎಂದು ಎಂಎಂಯು ಹೇಳಿದೆ.

ರೋಸ್ಟರ್ (ನೇಮಕಾತಿ) ಪರಿಶೀಲನೆ ನಡೆಯುತ್ತಿರುವ ಪ್ರಕ್ರಿಯೆಯಿಂದಾಗಿ ವೇತನ ವಿತರಣೆ ವಿಳಂಬವಾಗಿದೆ. ಆದರೆ ದಾದಿಯರಿಗೆ ಶೀಘ್ರದಲ್ಲೇ ಅವರ ವೇತನವನ್ನು ನೀಡಲಾಗುವುದು ಎಂದು ಬಿಎಂಸಿ ಆರೋಗ್ಯ ಇಲಾಖೆ ಅಧಿಕಾರಿ ಭರವಸೆ ನೀಡಿದ್ದಾರೆ.

“ನಾನು ಮೇ ಮೊದಲ ವಾರದಲ್ಲಿ ಬಿಎಂಸಿಯ ಕರ್ತವ್ಯಕ್ಕೆ ಸೇರಿಕೊಂಡೆ. ಅಂದಿನಿಂದ ನಾನು ಕೊರೊನಾ ಸೌಲಭ್ಯದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಲ್ಲದೆ ಬಿಎಂಸಿ ಆಹಾರ ಮತ್ತು ವಸತಿ ವ್ಯವಸ್ಥೆ ಮಾಡಿದ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದೇನೆ, ಆದರೆ ನನಗೆ ಸಂಬಳ ಅಥವಾ 300 ರೂ. ದಿನದ ವಿಶೇಷ ಭತ್ಯೆ ಇನ್ನು ಸಿಕ್ಕಿಲ್ಲ” ಎಂದು ದಾದಿಯೊಬ್ಬರು ಹೇಳಿದ್ದಾಗಿ ನ್ಯೂಸ್ ಕ್ಲಿಕ್ ವರದಿ ಮಾಡಿದೆ.

ಅವರು ಬಿಎಂಸಿಗೆ ಸೇರುವ ಮೊದಲು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಮುನ್ಸಿಪಾಲಿಟಿಯು ಶಾಶ್ವತ ಆಧಾರದ ಮೇಲೆ ದಾದಿಯರನ್ನು ನೇಮಿಸಲು ಜಾಹೀರಾತುಗಳನ್ನು ನೀಡಿದ್ದರಿಂದ ಉದ್ಯೋಗ ಬದಲಿಸಿದ್ದಾರೆ ಎನ್ನಲಾಗಿದೆ.

ಆದರೆ ಪ್ರಸ್ತುತ ಎದುರಿಸುತ್ತಿರುವ ಆರ್ಥಿಕ ತೊಂದರೆಯಿಂದಾಗಿ ಈ ನಿರ್ಧಾರಕ್ಕೆ ಮಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತಿದ್ದಾರೆ. “ಹಣಕಾಸಿನ ಹೊಣೆಗಾರಿಕೆಗಳನ್ನು ಹೊಂದಿರುವಾಗ, ಮೂರು ತಿಂಗಳವರೆಗೆ ಸಂಬಳವಿಲ್ಲದೆ ಬದುಕುವುದು ಕಷ್ಟ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಪುರಸಭೆ ಆಯುಕ್ತ ಇಕ್ಬಾಲ್ ಸಿಂಗ್ ಚಾಹಲ್ ಅವರಿಗೆ ಜುಲೈ 25 ರಂದು ಬರೆದ ಪತ್ರದಲ್ಲಿ, ಹೊಸದಾಗಿ ನೇಮಕಗೊಂಡಿರುವ ಈ 209 ದಾದಿಯರಿಗೆ ತಕ್ಷಣ ಸಂಬಳ ಮತ್ತು ಭತ್ಯೆಯನ್ನು ನೀಡಬೇಕೆಂದು ಎಂಎಂಯು ಒತ್ತಾಯಿಸಿದೆ.

ಅವರು ಕರ್ತವ್ಯಕ್ಕೆ ಸೇರಿದ ದಿನಾಂಕದಿಂದ ಬಿಎಂಸಿ ನಡೆಸುವ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಳನ್ನು ಪರಿಗಣಿಸುವಂತೆ ಯೂನಿಯನ್ ಪಾಲಿಕೆಯನ್ನು ಕೇಳಿದೆ.

ಈ ಎಲ್ಲ ದಾದಿಯರಿಗೆ ಬಿಎಂಸಿಯ ನರ್ಸಿಂಗ್ ಕಾಲೇಜಿನಲ್ಲಿ ತರಬೇತಿ ನೀಡಲಾಗಿದೆ. ಏಪ್ರಿಲ್-ಮೇ ತಿಂಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳು ತೀವ್ರವಾಗಿ ಏರಿಕೆಯಾಗಲು ಪ್ರಾರಂಭವಾದಾಗ ಅವರನ್ನು ತಕ್ಷಣ ಸೇರಲು ತಿಳಿಸಲಾಗಿದೆ ಎಂದು ಎಂಎಂಯು ಕಾರ್ಯದರ್ಶಿ ಪ್ರದೀಪ್ ನರ್ಕರ್ ಹೇಳಿದ್ದಾರೆ.

“ಹೆಚ್ಚಿನ ಎಲ್ಲಾ ದಾದಿಯರು ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದರು. ಅವರು ತಮ್ಮ ಸೇವೆಗಳನ್ನು ತುರ್ತಾಗಿ ಅಗತ್ಯವಿರುವ ಬಿಎಂಸಿಗೆ ಸೇರಲು ತಮ್ಮ ಉದ್ಯೋಗವನ್ನು ತೊರೆದರು. ಆದರೆ ಈಗ ಅವರು ಸಂಬಳ ಮತ್ತು ಭತ್ಯೆಗಳಿಂದ ವಂಚಿತರಾಗಿದ್ದಾರೆ, ಇದರಿಂದಾಗಿ ಅವರಿಗೆ ಬದುಕುಳಿಯುವುದು ಕಷ್ಟಕರವಾಗಿದೆ” ಎಂದು ಅವರು ಹೇಳಿದರು.


ಓದಿ: ಕಾರ್ಮಿಕ ಕಾನೂನು ತಿದ್ದುಪಡಿಗೆ ವಿರೋಧ: ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆಗೆ ನಿರ್ಧಾರ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...