Homeಕರೋನಾ ತಲ್ಲಣಕೆಲಸಕ್ಕೆ ಸೇರಿ 3 ತಿಂಗಳಾದರೂ ದಾದಿಯರಿಗೆ ಸಂಬಳ ಕೊಡದ ಬಿಎಂಸಿ!

ಕೆಲಸಕ್ಕೆ ಸೇರಿ 3 ತಿಂಗಳಾದರೂ ದಾದಿಯರಿಗೆ ಸಂಬಳ ಕೊಡದ ಬಿಎಂಸಿ!

ಏಪ್ರಿಲ್-ಮೇ ತಿಂಗಳಲ್ಲಿ ಬೃಹಮ್‌ಮುಂಬೈ ಮುನ್ಸಿಪಲ್‌ ಕಾರ್ಪೊರೇಶನ್ ಈ ದಾದಿಯರನ್ನು ವಿಶೇಷ ನೇಮಕಾತಿ ಅಡಿಯಲ್ಲಿ ನೇಮಕ ಮಾಡಿತ್ತು.

- Advertisement -
- Advertisement -

ಮುಂಬೈ ಮಹಾನಗರದಲ್ಲಿ ಕೊರೊನಾ ವೈರಸ್ ವಿರುದ್ಧದ ಹೋರಾಟವನ್ನು ಬಲಪಡಿಸಲು ಹೊಸದಾಗಿ ನೇಮಕಗೊಂಡ 209 ದಾದಿಯರಿಗೆ ಮುಂಬೈ ನಾಗರಿಕ ಸಂಸ್ಥೆಯಾದ ಬೃಹನ್‌‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಸಂಬಳ ಹಾಗೂ ವಿಶೇಷ ದೈನಂದಿನ ಭತ್ಯೆಯನ್ನು ನೀಡಿಲ್ಲ ಎಂದು ಕಾರ್ಮಿಕ ಸಂಘಟನೆ ಆರೋಪಿಸಿದೆ.

ನಗರದಲ್ಲಿ ಕೊರೊನಾ ವೈರಸ್ ಹರಡಲು ಪ್ರಾರಂಭವಾದ ಏಪ್ರಿಲ್-ಮೇ ತಿಂಗಳಲ್ಲಿ ಬಿಎಂಸಿ ಈ ದಾದಿಯರನ್ನು ವಿಶೇಷ ನೇಮಕಾತಿ ಅಡಿಯಲ್ಲಿ ನೇಮಕ ಮಾಡಿದೆ ಎಂದು ಮುನ್ಸಿಪಲ್ ಮಜ್ದೂರ್ ಯೂನಿಯನ್ (ಎಂಎಂಯು) ತಿಳಿಸಿದೆ.

ಆದಾಗ್ಯೂ, ಕಳೆದ ಮೂರು ತಿಂಗಳುಗಳಿಂದ ಬಿಎಂಸಿ ಅವರಿಗೆ ಸಂಬಳ ಹಾಗೂ ದೈನಂದಿನ 300 ರೂ. ವಿಶೇಷ ಭತ್ಯೆ ನೀಡಿಲ್ಲ ಎಂದು ಎಂಎಂಯು ಹೇಳಿದೆ.

ರೋಸ್ಟರ್ (ನೇಮಕಾತಿ) ಪರಿಶೀಲನೆ ನಡೆಯುತ್ತಿರುವ ಪ್ರಕ್ರಿಯೆಯಿಂದಾಗಿ ವೇತನ ವಿತರಣೆ ವಿಳಂಬವಾಗಿದೆ. ಆದರೆ ದಾದಿಯರಿಗೆ ಶೀಘ್ರದಲ್ಲೇ ಅವರ ವೇತನವನ್ನು ನೀಡಲಾಗುವುದು ಎಂದು ಬಿಎಂಸಿ ಆರೋಗ್ಯ ಇಲಾಖೆ ಅಧಿಕಾರಿ ಭರವಸೆ ನೀಡಿದ್ದಾರೆ.

“ನಾನು ಮೇ ಮೊದಲ ವಾರದಲ್ಲಿ ಬಿಎಂಸಿಯ ಕರ್ತವ್ಯಕ್ಕೆ ಸೇರಿಕೊಂಡೆ. ಅಂದಿನಿಂದ ನಾನು ಕೊರೊನಾ ಸೌಲಭ್ಯದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಲ್ಲದೆ ಬಿಎಂಸಿ ಆಹಾರ ಮತ್ತು ವಸತಿ ವ್ಯವಸ್ಥೆ ಮಾಡಿದ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದೇನೆ, ಆದರೆ ನನಗೆ ಸಂಬಳ ಅಥವಾ 300 ರೂ. ದಿನದ ವಿಶೇಷ ಭತ್ಯೆ ಇನ್ನು ಸಿಕ್ಕಿಲ್ಲ” ಎಂದು ದಾದಿಯೊಬ್ಬರು ಹೇಳಿದ್ದಾಗಿ ನ್ಯೂಸ್ ಕ್ಲಿಕ್ ವರದಿ ಮಾಡಿದೆ.

ಅವರು ಬಿಎಂಸಿಗೆ ಸೇರುವ ಮೊದಲು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಮುನ್ಸಿಪಾಲಿಟಿಯು ಶಾಶ್ವತ ಆಧಾರದ ಮೇಲೆ ದಾದಿಯರನ್ನು ನೇಮಿಸಲು ಜಾಹೀರಾತುಗಳನ್ನು ನೀಡಿದ್ದರಿಂದ ಉದ್ಯೋಗ ಬದಲಿಸಿದ್ದಾರೆ ಎನ್ನಲಾಗಿದೆ.

ಆದರೆ ಪ್ರಸ್ತುತ ಎದುರಿಸುತ್ತಿರುವ ಆರ್ಥಿಕ ತೊಂದರೆಯಿಂದಾಗಿ ಈ ನಿರ್ಧಾರಕ್ಕೆ ಮಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತಿದ್ದಾರೆ. “ಹಣಕಾಸಿನ ಹೊಣೆಗಾರಿಕೆಗಳನ್ನು ಹೊಂದಿರುವಾಗ, ಮೂರು ತಿಂಗಳವರೆಗೆ ಸಂಬಳವಿಲ್ಲದೆ ಬದುಕುವುದು ಕಷ್ಟ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಪುರಸಭೆ ಆಯುಕ್ತ ಇಕ್ಬಾಲ್ ಸಿಂಗ್ ಚಾಹಲ್ ಅವರಿಗೆ ಜುಲೈ 25 ರಂದು ಬರೆದ ಪತ್ರದಲ್ಲಿ, ಹೊಸದಾಗಿ ನೇಮಕಗೊಂಡಿರುವ ಈ 209 ದಾದಿಯರಿಗೆ ತಕ್ಷಣ ಸಂಬಳ ಮತ್ತು ಭತ್ಯೆಯನ್ನು ನೀಡಬೇಕೆಂದು ಎಂಎಂಯು ಒತ್ತಾಯಿಸಿದೆ.

ಅವರು ಕರ್ತವ್ಯಕ್ಕೆ ಸೇರಿದ ದಿನಾಂಕದಿಂದ ಬಿಎಂಸಿ ನಡೆಸುವ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಳನ್ನು ಪರಿಗಣಿಸುವಂತೆ ಯೂನಿಯನ್ ಪಾಲಿಕೆಯನ್ನು ಕೇಳಿದೆ.

ಈ ಎಲ್ಲ ದಾದಿಯರಿಗೆ ಬಿಎಂಸಿಯ ನರ್ಸಿಂಗ್ ಕಾಲೇಜಿನಲ್ಲಿ ತರಬೇತಿ ನೀಡಲಾಗಿದೆ. ಏಪ್ರಿಲ್-ಮೇ ತಿಂಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳು ತೀವ್ರವಾಗಿ ಏರಿಕೆಯಾಗಲು ಪ್ರಾರಂಭವಾದಾಗ ಅವರನ್ನು ತಕ್ಷಣ ಸೇರಲು ತಿಳಿಸಲಾಗಿದೆ ಎಂದು ಎಂಎಂಯು ಕಾರ್ಯದರ್ಶಿ ಪ್ರದೀಪ್ ನರ್ಕರ್ ಹೇಳಿದ್ದಾರೆ.

“ಹೆಚ್ಚಿನ ಎಲ್ಲಾ ದಾದಿಯರು ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದರು. ಅವರು ತಮ್ಮ ಸೇವೆಗಳನ್ನು ತುರ್ತಾಗಿ ಅಗತ್ಯವಿರುವ ಬಿಎಂಸಿಗೆ ಸೇರಲು ತಮ್ಮ ಉದ್ಯೋಗವನ್ನು ತೊರೆದರು. ಆದರೆ ಈಗ ಅವರು ಸಂಬಳ ಮತ್ತು ಭತ್ಯೆಗಳಿಂದ ವಂಚಿತರಾಗಿದ್ದಾರೆ, ಇದರಿಂದಾಗಿ ಅವರಿಗೆ ಬದುಕುಳಿಯುವುದು ಕಷ್ಟಕರವಾಗಿದೆ” ಎಂದು ಅವರು ಹೇಳಿದರು.


ಓದಿ: ಕಾರ್ಮಿಕ ಕಾನೂನು ತಿದ್ದುಪಡಿಗೆ ವಿರೋಧ: ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆಗೆ ನಿರ್ಧಾರ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...